Homeಅಂಕಣಗಳುರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

ರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

- Advertisement -
- Advertisement -

ಕುಮಾರಸ್ವಾಮಿಯವರ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಸಂಯುಕ್ತ ಸರ್ಕಾರ ದಕ್ಷತೆಯಿಂದ ನಡೆಯಬೇಕೆಂಬುದು ನಮ್ಮೆಲ್ಲರ ಬಯಕೆ. ಎರಡೂ ಪಕ್ಷಗಳು ಕ್ಯಾತೆ ತೆಗೆದು ಬೀದಿ ಹಗರಣ ಮಾಡುವುದನ್ನು ಕೂಡಲೆ ಬಂದ್ ಮಾಡಬೇಕು. ಪ್ರಣಾಳಿಕೆಗಳ ಅನುಷ್ಠಾನ ಸಮಿತಿ ಹಾಗೂ ಸಮನ್ವಯ ಸಮಿತಿಗಳು ಅನುಷ್ಠಾನಕ್ಕೆ ಬಂದಿವೆ. ಈ ಎರಡು ಸಮಿತಿಗಳು ಕಾಲಕಾಲಕ್ಕೆ ಸಭೆ ಸೇರಿ ಮುಖ್ಯಮಂತ್ರಿಯವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಯಾವುದೇ ಕಾರಣಕ್ಕೆ ಶಾಸಕರಾಗಲಿ, ಮಂತ್ರಿಗಳಾಗಲಿ, ಪುಢಾರಿಗಳಾಗಲಿ ಸುದ್ದಿ ಮಾಧ್ಯಮ ಮತ್ತು ದೃಶ್ಯ ಮಾಧ್ಯಮಗಳಿಗೆ ದೂರುಕೊಡುವ ಹೇಳಿಕೆಗಳನ್ನು ನೀಡಬಾರದು. ಸಂಯುಕ್ತ ಸರ್ಕಾರದಲ್ಲಿ ತಪ್ಪುಗಳಾದಾಗ ಈ ಸಮಿತಿಗಳು ಮುಖ್ಯಮಂತ್ರಿಯವರನ್ನು ಕರೆದು ಕೂರಿಸಿಕೊಂಡು ಸೌಹಾರ್ದದಿಂದ ತಪ್ಪನ್ನು ಸರಿಪಡಿಸುವ ಕೆಲಸ ಆಗಬೇಕು.
ಈ ಸಂಯುಕ್ತ ಸರ್ಕಾರ ಆದರ್ಶ ರೀತಿಯಲ್ಲಿ ನಡೆಯಬೇಕು. ಉಭಯ ಪಕ್ಷಗಳಲ್ಲಿರುವ ಕಳಂಕಿತ ಶಾಸಕರಿಗೆ ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡದಂತೆ ತಾಕೀತು ಮಾಡಬೇಕು. ಕ್ರಿಮಿನಲ್ ಕೇಸುಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಸಚಿವರಿಗೆ ತಪ್ಪುದಾರಿಗೆ ಹೋದರೆ, ಭ್ರಷ್ಟಾಚಾರದಲ್ಲಿ ತೊಡಗಿದರೆ ಅಧಿಕಾರಿಗಳನ್ನು ದಾರಿತಪ್ಪಿಸಿದರೆ, ಅವರಿಗೆ ಮಾಡಬಾರದ್ದನ್ನು ಮಾಡಲು ಯತ್ನಿಸಿದರೆ ಕೂಡಲೇ ಅಂತಹ ಕಳಂಕಿತರನ್ನು ಮಂತ್ರಿಮಂಡಲದಿಂದ ಹೊರದೂಡಲು ಹಿಂದು-ಮುಂದು ನೋಡಬಾರದು. ಆಗ ರಾಜ್ಯಾಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ ಮತ್ತು ಈ ಎರಡೂ ಸಂಸ್ಥೆಗಳ ಬಗೆಗೆ ಮತದಾರರು ಒಲವು ತೋರಿಸುತ್ತಾರೆ.
ಮಂತ್ರಿಗಳ, ಶಾಸಕರ ತಪ್ಪುಗಳನ್ನು ಮುಚ್ಚಿ ಹಾಕಲು ಸರ್ಕಾರ ತೊಡಗಿದರೆ ಈ ಸರ್ಕಾರದ ಬಗೆಗೆ ಜನ ತಿರಸ್ಕಾರ ಸೂಚಿಸುತ್ತಾರೆ ಮತ್ತು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ. ಇದು ಜ್ಞಾಪಕವಿರರಲಿ.
ಭಾರತೀಯ ಜನತಾ ಪಕ್ಷ ರಣಹದ್ದಿನಂತೆ ಕಾಯುತ್ತಿದೆ. ಸರ್ಕಾರದಲ್ಲಿ ಒಡಕು ಬಂದು ಛಿದ್ರವಾಗಿ ಬಿಡಲಿ ಎಂದು ಭಜನೆ ಮಾಡುತ್ತಿದ್ದಾರೆ. ಆ ರಣಹದ್ದುಗಳಿಗೆ ಆಹಾರವಾಗದಂತೆ ನಡೆÀದುಕೊಳ್ಳಿ. ನೀವು ಅಧಿಕಾರ ಕಳೆದುಕೊಳ್ಳುವುದಷ್ಟೇ ಆದರೆ ಪ್ರಜೆಗಳಿಗೆ ಅಷ್ಟೇನೂ ನಷ್ಟವಿಲ್ಲ. ಆದರೆ ನಿಮ್ಮ ಕಾರ್ಯವಿಧಾನದಿಂದ ಸಾರ್ವಜನಿಕರು ತಲೆತಗ್ಗಿಸಬೇಕಾಗುತ್ತದೆ. ಇದಕ್ಕೆ ಅವಕಾಶ ಕೊಡಬೇಡಿ.
ಮುಖ್ಯಮಂತ್ರಿಗಳಿಗೊಂದು ವಿನಂತಿ. ನೀವು ಯಾವುದೇ ಕಾರಣಕ್ಕೂ ನಿಮ್ಮ ಆಡಳಿತ ಕಳಂಕಿತವಾಗುವುದಕ್ಕೆ ಎಡೆ ಮಾಡಿಕೊಡಬೇಡಿ. ದುಷ್ಟ, ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಬೇಡಿ. ಲೋಕಾಯುಕ್ತರು, ಎಸಿಬಿ ಹಲವಾರು ಭ್ರಷ್ಟ ಅಧಿಕಾರಿಗಳು ನ್ಯಾಯಯುತರಾದವರಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವವರ ಮನೆಗಳ ಮೇಲೆ ದಾಳಿ ಮಾಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಅಧಿಕಾರಿಗಳ ಮೇಲೆ ಅಪರಾಧದ ಪಟ್ಟಿ ಸಿದ್ಧಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲು ಸರ್ಕಾರದ ಅನುಮತಿ ಕೇಳಿದ್ದಾರೆ. ಲೋಕಾಯುಕ್ತರ ಈ ಪಟ್ಟಿ ಸರ್ಕಾರಕ್ಕೆ ತಲುಪಿ ನಾಲ್ಕು ವರ್ಷಗಳೇ ಆಗಿದ್ದರೂ ಅವುಗಳನ್ನು ತಮ್ಮಲ್ಲೇ ಇಟ್ಟುಕೊಂಡು ಆ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಆ ಫೈಲುಗಳನ್ನು ತರಿಸಿ ಪರಾಂಬರಿಸಿ ಶೀಘ್ರದಲ್ಲೇ ಲೋಕಾಯುಕ್ತರಿಗೆ ಅವರ ಮೇಲೆ ಖಟ್ಲೆ ಹೂಡಬಹುದೆಂದು ಪತ್ರ ಬರೆಯಿರಿ. ಈ ಕೆಲಸ ಕೂಡಲೇ ನೀವು ಮಾಡಲಿಲ್ಲವಾದರೆ…? ನೀವೂ ಕೂಡ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದ್ದೀರಿ ಎಂಬ ಕಳಂಕ ಹೊರಬೇಕಾದೀತು.
ಎ.ಟಿ ರಾಮಸ್ವಾಮಿ ವರದಿಯನ್ನು ಸರ್ಕಾರ ಅಂಗೀಕರಿಸಿದ್ದರೂ ವರದಿಯಲ್ಲಿ ಉಲ್ಲೇಖಿತವಾಗಿರುವ ಯಾವ ಭೂಗಳ್ಳರಿಗೂ ಇದುವರೆಗೆ ಶಿಕ್ಷೆಯಾಗಿಲ್ಲ. ಈ ಭೂಗಳ್ಳರಲ್ಲಿ ಶಾಸಕರಿದ್ದಾರೆ. ಸರ್ಕಾರದ ಉನ್ನತಾಧಿಕಾರಿಗಳಿದ್ದಾರೆ, ಬಿಲ್ಡರ್‍ಗಳಿದ್ದಾರೆ, ರಿಯಲ್‍ಎಸ್ಟೇಟ್ ಮಾಫಿಯಾದವರಿದ್ದಾರೆ. ಈ ಹತ್ತು ವರ್ಷಗಳ ಕಾಲದಿಂದ ಅಧಿಕಾರದಲ್ಲಿದ್ದ ಯಾವ ಮಂತ್ರಿಯಾಗಲಿ, ಮುಖ್ಯಮಂತ್ರಿಯಾಗÀಲಿ ಈ ಹಗರಣಗಳನ್ನು ತೀವ್ರವಾಗಿ ಗಮನಿಸಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಎ.ಟಿ ರಾಮಸ್ವಾಮಿಯವರ ನೇತೃತ್ವದಲ್ಲಿ ನಾವು 39 ದಿನ ಸತತ ಧರಣಿ ನಡೆಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸಿದ್ದರಾಮಯ್ಯರನ್ನು ಒಪ್ಪಿಸಿದೆವು. ಅವರು ಅರೆಮನಸ್ಸಿನಿಂದ ನ್ಯಾಯಾಲಯ ಸ್ಥಾಪನೆ ಮಾಡಿಸಿ, ತಾವೇ ಅದರ ಉದ್ಘಾಟನೆಯನ್ನು ನೆರವೇರಿಸಿದರು. ಆದರೆ ಒಂದು ವರ್ಷಗಳ ಕಾಲ ನ್ಯಾಯಾಧೀಶರಿಗೆ ನೌಕರರಿಗೆ ಸಂಬಳವನ್ನೇ ನೀಡಲಿಲ್ಲ. ನ್ಯಾಯಾಲಯದ ಖರ್ಚಿಗೆ ಹಣ ಬಿಡುಗಡೆ ಮಾಡಲಿಲ್ಲ. ಅಷ್ಟೇ ಅಲ್ಲ, ಜಿಲ್ಲಾಧಿಕಾರಿಗಳು ಯಾವುದೇ ಕೇಸನ್ನು ಅವರ ಮುಂದೆ ಮಂಡಿಸಲಿಲ್ಲ. ಮೂರು ವರ್ಷದ ಅವಧಿಗೆ ನೇಮಕರಾದ ನ್ಯಾಯಾಧೀಶರು ಎರಡು ವರ್ಷಕಾಲ ನ್ಯಾಯಾಲಯವನ್ನು ನಡೆಸಲು ಸಾಧ್ಯವಾಯಿತು. ಈಗ ಈ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಅವಧಿ ಮುಗಿಯುತ್ತಾ ಬಂದಿದೆ. ಕುಮಾರಸ್ವಾಮಿಯವರು ಈ ಖಾಲಿಯಾಗುವ ಸ್ಥಾನಗಳಿಗೆ ದಕ್ಷರನ್ನು ಭರ್ತಿಮಾಡಿ ಎ.ಟಿ ರಾಮಸ್ವಾಮಿಯವರ ವರದಿಯಲ್ಲಿ ನಮೂದಾಗಿರುವ ಭೂಗಳ್ಳರ ವಿಚಾರಣೆಯನ್ನು ನಿಮ್ಮ ಅಧಿಕಾರದ ಅವಧಿಯಲ್ಲಿ ಮುಗಿಯಲು ಕ್ರಮ ಕೈಗೊಳ್ಳಬೇಕೆಂದು ಪ್ರಾರ್ಥನೆ.
ಭಾಜಪ ಸರ್ಕಾರ ನಡೆದಾಗ ವಿಶೇಷ ಜಿಲ್ಲಾಧಿಕಾರಿಗಳನ್ನು ಸರ್ಕಾರ ನೇಮಿಸಿತು. ಅವರೆಲ್ಲ ಬೆಂಗಳೂರು ನಗರ ಜಿಲ್ಲೆ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸರ್ಕಾರಕ್ಕೆ ಸೇರಿದ ಸುಮಾರು 40 ಸಾವಿರ ಎಕರೆ ಹುಲ್ಲುಗಾವಲು, ಕೆರೆ ಅಂಗಳ, ಗುಂಡುತೋಪು, ಖರಾಬ್ ಜಮೀನು ಕೊನೆಗೆ ಸ್ಮಶಾನಗಳನ್ನೂ ಹಂಚಿಬಿಟ್ಟರು. ಉಚ್ಛನ್ಯಾಯಾಲಯಕ್ಕೆ ವಿಶೇಷ ಜಿಲ್ಲಾಧಿಕಾರಿಗಳನ್ನು ಸೃಷ್ಟಿಸಿ ಅವರಿಗೆ ಜಿಲ್ಲಾಧಿಕಾರಿಗಳ ಅಧಿಕಾರ ನೀಡುವ ಅಧಿಕಾರವೇ ಇಲ್ಲ. ಅಲ್ಲದೆ ಕಾನೂನು ಮೀರಿ ನಡೆಯುವ ಈ ವಿಶೇಷ ಜಿಲ್ಲಾಧಿಕಾರಿಗಳು, cordoned the limelight in a prominent way. The frequency of their indulgence in passing arbitrary, whimsical and utracious orders have been passed ಎಂದು ಕರ್ನಾಟಕ ಉಚ್ಛನ್ಯಾಯಾಲಯ ತಿಳಿಸಿದೆ.
ಈಗ ಈ ವಿಶೇಷ ಜಿಲ್ಲಾಧಿಕಾರಿಗಳ ಹುದ್ದೆಗಳು ರದ್ದಾಗಿವೆ, ಅವರ ಸ್ಥಾನದಲ್ಲಿ ಇಬ್ಬರು ವಿಶೇಷ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಅವರು ಮಂದಗತಿಯಲ್ಲಿ ತೆರವು ಕಾರ್ಯ ನಡೆಸುತ್ತಿದ್ದಾರೆ. ಅವರಿಗೆ ಒಂದು ನಿರ್ದಿಷ್ಟ ಕಾಲಾವಧಿಯಲ್ಲಿ ಈ ಕೆಲಸ ಮುಗಿಸಬೇಕೆಂದು ಕುಮಾರಸ್ವಾಮಿಯವರು ಅವರಿಗೆ ಆಜ್ಞೆ ಮಾಡಬೇಕು. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಪದೇಪದೇ ವರ್ಗಾವಣೆ ಮಾಡುತ್ತಿರುವುದೂ, ಶನಿವಾರ ದಿನ ಮಾತ್ರ ತೆರವುಗೊಳಿಸುವ ಕೆಲಸ ನಡೆಯುತ್ತಿರುವುದೂ ಈ ಕೆಲಸ ಸುಸೂತ್ರವಾಗಿ ನಡೆಯದಿರಲು ಕಾರಣವಾಗಿದೆ. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಈ ಕೆಲಸ ಮುಗಿಸುವವರೆಗೂ ವರ್ಗ ಮಾಡದೆ ಬಿಟ್ಟರೆ ಕ್ಷಿಪ್ರವಾಗಿ ಗುರಿಮುಟ್ಟಬಹುದು ಎಂಬುದು ನನ್ನ ಅನಿಸಿಕೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...