Homeಅಂಕಣಗಳುರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

ರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

- Advertisement -
- Advertisement -

ಕುಮಾರಸ್ವಾಮಿಯವರ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಸಂಯುಕ್ತ ಸರ್ಕಾರ ದಕ್ಷತೆಯಿಂದ ನಡೆಯಬೇಕೆಂಬುದು ನಮ್ಮೆಲ್ಲರ ಬಯಕೆ. ಎರಡೂ ಪಕ್ಷಗಳು ಕ್ಯಾತೆ ತೆಗೆದು ಬೀದಿ ಹಗರಣ ಮಾಡುವುದನ್ನು ಕೂಡಲೆ ಬಂದ್ ಮಾಡಬೇಕು. ಪ್ರಣಾಳಿಕೆಗಳ ಅನುಷ್ಠಾನ ಸಮಿತಿ ಹಾಗೂ ಸಮನ್ವಯ ಸಮಿತಿಗಳು ಅನುಷ್ಠಾನಕ್ಕೆ ಬಂದಿವೆ. ಈ ಎರಡು ಸಮಿತಿಗಳು ಕಾಲಕಾಲಕ್ಕೆ ಸಭೆ ಸೇರಿ ಮುಖ್ಯಮಂತ್ರಿಯವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಯಾವುದೇ ಕಾರಣಕ್ಕೆ ಶಾಸಕರಾಗಲಿ, ಮಂತ್ರಿಗಳಾಗಲಿ, ಪುಢಾರಿಗಳಾಗಲಿ ಸುದ್ದಿ ಮಾಧ್ಯಮ ಮತ್ತು ದೃಶ್ಯ ಮಾಧ್ಯಮಗಳಿಗೆ ದೂರುಕೊಡುವ ಹೇಳಿಕೆಗಳನ್ನು ನೀಡಬಾರದು. ಸಂಯುಕ್ತ ಸರ್ಕಾರದಲ್ಲಿ ತಪ್ಪುಗಳಾದಾಗ ಈ ಸಮಿತಿಗಳು ಮುಖ್ಯಮಂತ್ರಿಯವರನ್ನು ಕರೆದು ಕೂರಿಸಿಕೊಂಡು ಸೌಹಾರ್ದದಿಂದ ತಪ್ಪನ್ನು ಸರಿಪಡಿಸುವ ಕೆಲಸ ಆಗಬೇಕು.
ಈ ಸಂಯುಕ್ತ ಸರ್ಕಾರ ಆದರ್ಶ ರೀತಿಯಲ್ಲಿ ನಡೆಯಬೇಕು. ಉಭಯ ಪಕ್ಷಗಳಲ್ಲಿರುವ ಕಳಂಕಿತ ಶಾಸಕರಿಗೆ ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡದಂತೆ ತಾಕೀತು ಮಾಡಬೇಕು. ಕ್ರಿಮಿನಲ್ ಕೇಸುಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಸಚಿವರಿಗೆ ತಪ್ಪುದಾರಿಗೆ ಹೋದರೆ, ಭ್ರಷ್ಟಾಚಾರದಲ್ಲಿ ತೊಡಗಿದರೆ ಅಧಿಕಾರಿಗಳನ್ನು ದಾರಿತಪ್ಪಿಸಿದರೆ, ಅವರಿಗೆ ಮಾಡಬಾರದ್ದನ್ನು ಮಾಡಲು ಯತ್ನಿಸಿದರೆ ಕೂಡಲೇ ಅಂತಹ ಕಳಂಕಿತರನ್ನು ಮಂತ್ರಿಮಂಡಲದಿಂದ ಹೊರದೂಡಲು ಹಿಂದು-ಮುಂದು ನೋಡಬಾರದು. ಆಗ ರಾಜ್ಯಾಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ ಮತ್ತು ಈ ಎರಡೂ ಸಂಸ್ಥೆಗಳ ಬಗೆಗೆ ಮತದಾರರು ಒಲವು ತೋರಿಸುತ್ತಾರೆ.
ಮಂತ್ರಿಗಳ, ಶಾಸಕರ ತಪ್ಪುಗಳನ್ನು ಮುಚ್ಚಿ ಹಾಕಲು ಸರ್ಕಾರ ತೊಡಗಿದರೆ ಈ ಸರ್ಕಾರದ ಬಗೆಗೆ ಜನ ತಿರಸ್ಕಾರ ಸೂಚಿಸುತ್ತಾರೆ ಮತ್ತು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ. ಇದು ಜ್ಞಾಪಕವಿರರಲಿ.
ಭಾರತೀಯ ಜನತಾ ಪಕ್ಷ ರಣಹದ್ದಿನಂತೆ ಕಾಯುತ್ತಿದೆ. ಸರ್ಕಾರದಲ್ಲಿ ಒಡಕು ಬಂದು ಛಿದ್ರವಾಗಿ ಬಿಡಲಿ ಎಂದು ಭಜನೆ ಮಾಡುತ್ತಿದ್ದಾರೆ. ಆ ರಣಹದ್ದುಗಳಿಗೆ ಆಹಾರವಾಗದಂತೆ ನಡೆÀದುಕೊಳ್ಳಿ. ನೀವು ಅಧಿಕಾರ ಕಳೆದುಕೊಳ್ಳುವುದಷ್ಟೇ ಆದರೆ ಪ್ರಜೆಗಳಿಗೆ ಅಷ್ಟೇನೂ ನಷ್ಟವಿಲ್ಲ. ಆದರೆ ನಿಮ್ಮ ಕಾರ್ಯವಿಧಾನದಿಂದ ಸಾರ್ವಜನಿಕರು ತಲೆತಗ್ಗಿಸಬೇಕಾಗುತ್ತದೆ. ಇದಕ್ಕೆ ಅವಕಾಶ ಕೊಡಬೇಡಿ.
ಮುಖ್ಯಮಂತ್ರಿಗಳಿಗೊಂದು ವಿನಂತಿ. ನೀವು ಯಾವುದೇ ಕಾರಣಕ್ಕೂ ನಿಮ್ಮ ಆಡಳಿತ ಕಳಂಕಿತವಾಗುವುದಕ್ಕೆ ಎಡೆ ಮಾಡಿಕೊಡಬೇಡಿ. ದುಷ್ಟ, ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಬೇಡಿ. ಲೋಕಾಯುಕ್ತರು, ಎಸಿಬಿ ಹಲವಾರು ಭ್ರಷ್ಟ ಅಧಿಕಾರಿಗಳು ನ್ಯಾಯಯುತರಾದವರಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವವರ ಮನೆಗಳ ಮೇಲೆ ದಾಳಿ ಮಾಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಅಧಿಕಾರಿಗಳ ಮೇಲೆ ಅಪರಾಧದ ಪಟ್ಟಿ ಸಿದ್ಧಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲು ಸರ್ಕಾರದ ಅನುಮತಿ ಕೇಳಿದ್ದಾರೆ. ಲೋಕಾಯುಕ್ತರ ಈ ಪಟ್ಟಿ ಸರ್ಕಾರಕ್ಕೆ ತಲುಪಿ ನಾಲ್ಕು ವರ್ಷಗಳೇ ಆಗಿದ್ದರೂ ಅವುಗಳನ್ನು ತಮ್ಮಲ್ಲೇ ಇಟ್ಟುಕೊಂಡು ಆ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಆ ಫೈಲುಗಳನ್ನು ತರಿಸಿ ಪರಾಂಬರಿಸಿ ಶೀಘ್ರದಲ್ಲೇ ಲೋಕಾಯುಕ್ತರಿಗೆ ಅವರ ಮೇಲೆ ಖಟ್ಲೆ ಹೂಡಬಹುದೆಂದು ಪತ್ರ ಬರೆಯಿರಿ. ಈ ಕೆಲಸ ಕೂಡಲೇ ನೀವು ಮಾಡಲಿಲ್ಲವಾದರೆ…? ನೀವೂ ಕೂಡ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದ್ದೀರಿ ಎಂಬ ಕಳಂಕ ಹೊರಬೇಕಾದೀತು.
ಎ.ಟಿ ರಾಮಸ್ವಾಮಿ ವರದಿಯನ್ನು ಸರ್ಕಾರ ಅಂಗೀಕರಿಸಿದ್ದರೂ ವರದಿಯಲ್ಲಿ ಉಲ್ಲೇಖಿತವಾಗಿರುವ ಯಾವ ಭೂಗಳ್ಳರಿಗೂ ಇದುವರೆಗೆ ಶಿಕ್ಷೆಯಾಗಿಲ್ಲ. ಈ ಭೂಗಳ್ಳರಲ್ಲಿ ಶಾಸಕರಿದ್ದಾರೆ. ಸರ್ಕಾರದ ಉನ್ನತಾಧಿಕಾರಿಗಳಿದ್ದಾರೆ, ಬಿಲ್ಡರ್‍ಗಳಿದ್ದಾರೆ, ರಿಯಲ್‍ಎಸ್ಟೇಟ್ ಮಾಫಿಯಾದವರಿದ್ದಾರೆ. ಈ ಹತ್ತು ವರ್ಷಗಳ ಕಾಲದಿಂದ ಅಧಿಕಾರದಲ್ಲಿದ್ದ ಯಾವ ಮಂತ್ರಿಯಾಗಲಿ, ಮುಖ್ಯಮಂತ್ರಿಯಾಗÀಲಿ ಈ ಹಗರಣಗಳನ್ನು ತೀವ್ರವಾಗಿ ಗಮನಿಸಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಎ.ಟಿ ರಾಮಸ್ವಾಮಿಯವರ ನೇತೃತ್ವದಲ್ಲಿ ನಾವು 39 ದಿನ ಸತತ ಧರಣಿ ನಡೆಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸಿದ್ದರಾಮಯ್ಯರನ್ನು ಒಪ್ಪಿಸಿದೆವು. ಅವರು ಅರೆಮನಸ್ಸಿನಿಂದ ನ್ಯಾಯಾಲಯ ಸ್ಥಾಪನೆ ಮಾಡಿಸಿ, ತಾವೇ ಅದರ ಉದ್ಘಾಟನೆಯನ್ನು ನೆರವೇರಿಸಿದರು. ಆದರೆ ಒಂದು ವರ್ಷಗಳ ಕಾಲ ನ್ಯಾಯಾಧೀಶರಿಗೆ ನೌಕರರಿಗೆ ಸಂಬಳವನ್ನೇ ನೀಡಲಿಲ್ಲ. ನ್ಯಾಯಾಲಯದ ಖರ್ಚಿಗೆ ಹಣ ಬಿಡುಗಡೆ ಮಾಡಲಿಲ್ಲ. ಅಷ್ಟೇ ಅಲ್ಲ, ಜಿಲ್ಲಾಧಿಕಾರಿಗಳು ಯಾವುದೇ ಕೇಸನ್ನು ಅವರ ಮುಂದೆ ಮಂಡಿಸಲಿಲ್ಲ. ಮೂರು ವರ್ಷದ ಅವಧಿಗೆ ನೇಮಕರಾದ ನ್ಯಾಯಾಧೀಶರು ಎರಡು ವರ್ಷಕಾಲ ನ್ಯಾಯಾಲಯವನ್ನು ನಡೆಸಲು ಸಾಧ್ಯವಾಯಿತು. ಈಗ ಈ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಅವಧಿ ಮುಗಿಯುತ್ತಾ ಬಂದಿದೆ. ಕುಮಾರಸ್ವಾಮಿಯವರು ಈ ಖಾಲಿಯಾಗುವ ಸ್ಥಾನಗಳಿಗೆ ದಕ್ಷರನ್ನು ಭರ್ತಿಮಾಡಿ ಎ.ಟಿ ರಾಮಸ್ವಾಮಿಯವರ ವರದಿಯಲ್ಲಿ ನಮೂದಾಗಿರುವ ಭೂಗಳ್ಳರ ವಿಚಾರಣೆಯನ್ನು ನಿಮ್ಮ ಅಧಿಕಾರದ ಅವಧಿಯಲ್ಲಿ ಮುಗಿಯಲು ಕ್ರಮ ಕೈಗೊಳ್ಳಬೇಕೆಂದು ಪ್ರಾರ್ಥನೆ.
ಭಾಜಪ ಸರ್ಕಾರ ನಡೆದಾಗ ವಿಶೇಷ ಜಿಲ್ಲಾಧಿಕಾರಿಗಳನ್ನು ಸರ್ಕಾರ ನೇಮಿಸಿತು. ಅವರೆಲ್ಲ ಬೆಂಗಳೂರು ನಗರ ಜಿಲ್ಲೆ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸರ್ಕಾರಕ್ಕೆ ಸೇರಿದ ಸುಮಾರು 40 ಸಾವಿರ ಎಕರೆ ಹುಲ್ಲುಗಾವಲು, ಕೆರೆ ಅಂಗಳ, ಗುಂಡುತೋಪು, ಖರಾಬ್ ಜಮೀನು ಕೊನೆಗೆ ಸ್ಮಶಾನಗಳನ್ನೂ ಹಂಚಿಬಿಟ್ಟರು. ಉಚ್ಛನ್ಯಾಯಾಲಯಕ್ಕೆ ವಿಶೇಷ ಜಿಲ್ಲಾಧಿಕಾರಿಗಳನ್ನು ಸೃಷ್ಟಿಸಿ ಅವರಿಗೆ ಜಿಲ್ಲಾಧಿಕಾರಿಗಳ ಅಧಿಕಾರ ನೀಡುವ ಅಧಿಕಾರವೇ ಇಲ್ಲ. ಅಲ್ಲದೆ ಕಾನೂನು ಮೀರಿ ನಡೆಯುವ ಈ ವಿಶೇಷ ಜಿಲ್ಲಾಧಿಕಾರಿಗಳು, cordoned the limelight in a prominent way. The frequency of their indulgence in passing arbitrary, whimsical and utracious orders have been passed ಎಂದು ಕರ್ನಾಟಕ ಉಚ್ಛನ್ಯಾಯಾಲಯ ತಿಳಿಸಿದೆ.
ಈಗ ಈ ವಿಶೇಷ ಜಿಲ್ಲಾಧಿಕಾರಿಗಳ ಹುದ್ದೆಗಳು ರದ್ದಾಗಿವೆ, ಅವರ ಸ್ಥಾನದಲ್ಲಿ ಇಬ್ಬರು ವಿಶೇಷ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಅವರು ಮಂದಗತಿಯಲ್ಲಿ ತೆರವು ಕಾರ್ಯ ನಡೆಸುತ್ತಿದ್ದಾರೆ. ಅವರಿಗೆ ಒಂದು ನಿರ್ದಿಷ್ಟ ಕಾಲಾವಧಿಯಲ್ಲಿ ಈ ಕೆಲಸ ಮುಗಿಸಬೇಕೆಂದು ಕುಮಾರಸ್ವಾಮಿಯವರು ಅವರಿಗೆ ಆಜ್ಞೆ ಮಾಡಬೇಕು. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಪದೇಪದೇ ವರ್ಗಾವಣೆ ಮಾಡುತ್ತಿರುವುದೂ, ಶನಿವಾರ ದಿನ ಮಾತ್ರ ತೆರವುಗೊಳಿಸುವ ಕೆಲಸ ನಡೆಯುತ್ತಿರುವುದೂ ಈ ಕೆಲಸ ಸುಸೂತ್ರವಾಗಿ ನಡೆಯದಿರಲು ಕಾರಣವಾಗಿದೆ. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಈ ಕೆಲಸ ಮುಗಿಸುವವರೆಗೂ ವರ್ಗ ಮಾಡದೆ ಬಿಟ್ಟರೆ ಕ್ಷಿಪ್ರವಾಗಿ ಗುರಿಮುಟ್ಟಬಹುದು ಎಂಬುದು ನನ್ನ ಅನಿಸಿಕೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...