Homeಕರ್ನಾಟಕರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ನಾಳೆ ಅತೃಪ್ತ ಶಾಸಕರಿಗೆ ಈ ವಿಧಾನಸಭೆಯ ಅವಧಿಯಲ್ಲಿ ಚುನಾವಣೆಗೆ ನಿಲ್ಲದಂತೆ ಅನರ್ಹತೆ ಘೋಷಿಸಲಿರುವ ಸ್ಪೀಕರ್

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್ ಪಕ್ಷ ತ್ಯಜಿಸಿ ಇಷ್ಟು ದಿನ ಮುಂಬೈನಲ್ಲಿ ಬೀಡುಬಿಟ್ಟಿದ್ದ ಶಾಸಕರಿಗೆ ನಾಳೆ (ಜುಲೈ25) ಈ ವಿಧಾನಸಭಾ ಅವಧಿಪೂರ್ತಿಯ ಅನರ್ಹತೆ ಶಿಕ್ಷೆ ಕಾದು ಕೂತಿದೆ. ಈ ಸರ್ಕಾರ ಬಿದ್ದಿದ್ದಕ್ಕೆ ಸಂತಸವಾಗಿದೆ ಎಂದವರಿಗೆ ನಾಳೆ ಬಿಗ್ ಶಾಕ್ ಕಾದಿರುವುದಂತೂ ಸತ್ಯ.

ಈ ಕುರಿತು ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ರವರು ಇಂದು ಸುಳಿವು ನೀಡಿದ್ದಾರೆ. ಫೇಸ್ ಬುಕ್ ನಲ್ಲಿ “ನನ್ನ ತೀರ್ಪು ತಪ್ಪು ಆಗಿದ್ದಲ್ಲಿ ಕ್ಷಮಿಸಿ,. ಸರಿಯಾಗಿದ್ದರೆ ಅನುಭವಿಸಬೇಕಾಗುತ್ತದೆ. ನನ್ನನ್ನು ನಂಬಿರುವ ಎಲ್ಲಾ ಕರ್ನಾಟಕ ಜನತೆಗೆ ಕೃತಜ್ಞತೆಗಳು” ಎಂದು ಸ್ಪೀಕರ್ ರವರು ಒಂದು ಗಂಟೆಯ ಹಿಂದೆಯಷ್ಟೇ ಬರೆದುಕೊಂಡಿದ್ದಾರೆ.

ನಾನು ಗೌರಿ.ಕಾಂ ಸಿಕ್ಕ ಖಚಿತ ಮಾಹಿತಿಗಳ ಪ್ರಕಾರ 17ಜನ ಶಾಸಕರಿಗೂ ನಾಳೆ ಬೆಳಿಗ್ಗೆಯೇ ಅನರ್ಹತೆಯ ಶಿಕ್ಷೆ ಘೋಷಣೆಯಾಗುತ್ತದೆ. ಅದು ಕೂಡ ಈ ವಿಧಾಸಭಾ ಅವಧಿಪೂರ್ತಿ ಅವರನ್ನು ಅನರ್ಹರನ್ನಾಗಿ ಮಾಡಲಾಗುತ್ತದೆ. ಅಂದರೆ ಈ ವಿಧಾನಸಭೆಯ ಅವಧಿ ಮುಗಿಯುವ 2023ರವರೆಗೂ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಈ ಮಟ್ಟದ ದೊಡ್ಡ ಶಿಕ್ಷೆ ನಾಳೆ ಘೋಷಣೆಯಾಗುವುದಷ್ಟೇ ಬಾಕಿ ಉಳಿದಿದೆ.

ಕಾಂಗ್ರೆಸ್ ನಿಂದ 13 ಜನ ಮತ್ತು ಜೆಡಿಎಸ್ ನಿಂದ 03 ಜನ ಶಾಸಕರಿಗೆ ನಾಳೆ ಶಿಕ್ಷೆಯಾಗುವುದು ನಿಕ್ಕಿಯಾಗಿದೆ.

ನಾಳೆ ಅನರ್ಹತೆ ಘೋಷಿಸಿ, ಕಚೇರಿ ವ್ಯವಹಾರ ಎಲ್ಲಾ ಮುಗಿಸಿದ ನಂತರ ನಾಳಿದ್ದು ಸ್ಪೀಕರ್ ರವರು ಬಹಿರಂಗ ಪತ್ರಿಕಾ ಗೋಷ್ಟಿ ನಡೆಸಿ ತಮ್ಮ ರಾಜೀನಾಮೆಯನ್ನು ಸಹ ಘೋಷಿಸಲಿದ್ದಾರೆ. ಅನರ್ಹರಿಗೆ ಸರಿಯಾಗಿ ಬುದ್ದಿ ಕಲಿಸಿಯೇ ತಾನು ಸ್ಪೀಕರ್ ಸ್ಥಾನದಿಂದ ನಿರ್ಗಮಿಸಬೇಕೆಂದು ಸ್ಪೀಕರ್ ದೃಢಸಂಕಲ್ಪ ಮಾಡಿದ್ದಾರೆ.

ಪಕ್ಷಾಂತರ ಮಾಡಲು ಹೊರಟವರಿಗೆ ತಕ್ಕ ಶಾಸ್ತಿಯಾಯಿತು ಎಂಬ ಭಾವನೆ ಜನರಲ್ಲಿ ಮೂಡುವಂತೆ ಮಾಡುವುದು, ಆ ಮೂಲಕ ಶಾಸಕರಿಗೆ ಕಠಿಣ ಎಚ್ಚರಿಕೆ ನೀಡುವುದು ರಮೇಶ್ ಕುಮಾರ್ ರವರ ಗುರಿಯಾಗಿದೆ. ಆದರೆ ಸ್ಫೀಕರ್ ಅವರ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗುವ ಅವಕಾಶ ಅನರ್ಹಗೊಂಡ ಶಾಸಕರಿಗೆ ಇದ್ದೇ ಇದೆ. ಅದೇನೇ ಆದರೂ ಸಾರ್ವಜನಿಕವಾಗಿ ಒಂದು ಸಂದೇಶ ಹೋಗುವಮಟ್ಟಿಗಂತೂ ಇದರ ಪರಿಣಾಮ ಇರಲಿದೆ.

ಅಂತೂ ಸರ್ಕಾರ ಬಿದ್ದಾಯಿತು. ನಾಳೆ ಅನರ್ಹತೆಯೂ ಘೋಷಣೆಯಾಗಿ ರಾಜ್ಯ ರಾಜ್ಯಕಾರಣ ಒಂದು ಹಂತಕ್ಕೆ ಬಂದು ನಿಲ್ಲಲಿದೆ.

.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

    • ಕೆಳಗಿನ ಬ್ಯಾಂಕ್ ಖಾತೆಯ ಮೂಲಕವೂ ಹಣ ಸಂದಾಯ ಮಾಡಬಹುದು)

      Account Name: Gauri Media Trust

      Account No.: 510101006500878

      Bank: Corporation bank

      Branch: Srinivasa nagara/Srinagara, Bengaluru

      IFSC Code: CORP0000215

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...