Homeಕರ್ನಾಟಕರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ನಾಳೆ ಅತೃಪ್ತ ಶಾಸಕರಿಗೆ ಈ ವಿಧಾನಸಭೆಯ ಅವಧಿಯಲ್ಲಿ ಚುನಾವಣೆಗೆ ನಿಲ್ಲದಂತೆ ಅನರ್ಹತೆ ಘೋಷಿಸಲಿರುವ ಸ್ಪೀಕರ್

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್ ಪಕ್ಷ ತ್ಯಜಿಸಿ ಇಷ್ಟು ದಿನ ಮುಂಬೈನಲ್ಲಿ ಬೀಡುಬಿಟ್ಟಿದ್ದ ಶಾಸಕರಿಗೆ ನಾಳೆ (ಜುಲೈ25) ಈ ವಿಧಾನಸಭಾ ಅವಧಿಪೂರ್ತಿಯ ಅನರ್ಹತೆ ಶಿಕ್ಷೆ ಕಾದು ಕೂತಿದೆ. ಈ ಸರ್ಕಾರ ಬಿದ್ದಿದ್ದಕ್ಕೆ ಸಂತಸವಾಗಿದೆ ಎಂದವರಿಗೆ ನಾಳೆ ಬಿಗ್ ಶಾಕ್ ಕಾದಿರುವುದಂತೂ ಸತ್ಯ.

ಈ ಕುರಿತು ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ರವರು ಇಂದು ಸುಳಿವು ನೀಡಿದ್ದಾರೆ. ಫೇಸ್ ಬುಕ್ ನಲ್ಲಿ “ನನ್ನ ತೀರ್ಪು ತಪ್ಪು ಆಗಿದ್ದಲ್ಲಿ ಕ್ಷಮಿಸಿ,. ಸರಿಯಾಗಿದ್ದರೆ ಅನುಭವಿಸಬೇಕಾಗುತ್ತದೆ. ನನ್ನನ್ನು ನಂಬಿರುವ ಎಲ್ಲಾ ಕರ್ನಾಟಕ ಜನತೆಗೆ ಕೃತಜ್ಞತೆಗಳು” ಎಂದು ಸ್ಪೀಕರ್ ರವರು ಒಂದು ಗಂಟೆಯ ಹಿಂದೆಯಷ್ಟೇ ಬರೆದುಕೊಂಡಿದ್ದಾರೆ.

ನಾನು ಗೌರಿ.ಕಾಂ ಸಿಕ್ಕ ಖಚಿತ ಮಾಹಿತಿಗಳ ಪ್ರಕಾರ 17ಜನ ಶಾಸಕರಿಗೂ ನಾಳೆ ಬೆಳಿಗ್ಗೆಯೇ ಅನರ್ಹತೆಯ ಶಿಕ್ಷೆ ಘೋಷಣೆಯಾಗುತ್ತದೆ. ಅದು ಕೂಡ ಈ ವಿಧಾಸಭಾ ಅವಧಿಪೂರ್ತಿ ಅವರನ್ನು ಅನರ್ಹರನ್ನಾಗಿ ಮಾಡಲಾಗುತ್ತದೆ. ಅಂದರೆ ಈ ವಿಧಾನಸಭೆಯ ಅವಧಿ ಮುಗಿಯುವ 2023ರವರೆಗೂ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಈ ಮಟ್ಟದ ದೊಡ್ಡ ಶಿಕ್ಷೆ ನಾಳೆ ಘೋಷಣೆಯಾಗುವುದಷ್ಟೇ ಬಾಕಿ ಉಳಿದಿದೆ.

ಕಾಂಗ್ರೆಸ್ ನಿಂದ 13 ಜನ ಮತ್ತು ಜೆಡಿಎಸ್ ನಿಂದ 03 ಜನ ಶಾಸಕರಿಗೆ ನಾಳೆ ಶಿಕ್ಷೆಯಾಗುವುದು ನಿಕ್ಕಿಯಾಗಿದೆ.

ನಾಳೆ ಅನರ್ಹತೆ ಘೋಷಿಸಿ, ಕಚೇರಿ ವ್ಯವಹಾರ ಎಲ್ಲಾ ಮುಗಿಸಿದ ನಂತರ ನಾಳಿದ್ದು ಸ್ಪೀಕರ್ ರವರು ಬಹಿರಂಗ ಪತ್ರಿಕಾ ಗೋಷ್ಟಿ ನಡೆಸಿ ತಮ್ಮ ರಾಜೀನಾಮೆಯನ್ನು ಸಹ ಘೋಷಿಸಲಿದ್ದಾರೆ. ಅನರ್ಹರಿಗೆ ಸರಿಯಾಗಿ ಬುದ್ದಿ ಕಲಿಸಿಯೇ ತಾನು ಸ್ಪೀಕರ್ ಸ್ಥಾನದಿಂದ ನಿರ್ಗಮಿಸಬೇಕೆಂದು ಸ್ಪೀಕರ್ ದೃಢಸಂಕಲ್ಪ ಮಾಡಿದ್ದಾರೆ.

ಪಕ್ಷಾಂತರ ಮಾಡಲು ಹೊರಟವರಿಗೆ ತಕ್ಕ ಶಾಸ್ತಿಯಾಯಿತು ಎಂಬ ಭಾವನೆ ಜನರಲ್ಲಿ ಮೂಡುವಂತೆ ಮಾಡುವುದು, ಆ ಮೂಲಕ ಶಾಸಕರಿಗೆ ಕಠಿಣ ಎಚ್ಚರಿಕೆ ನೀಡುವುದು ರಮೇಶ್ ಕುಮಾರ್ ರವರ ಗುರಿಯಾಗಿದೆ. ಆದರೆ ಸ್ಫೀಕರ್ ಅವರ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗುವ ಅವಕಾಶ ಅನರ್ಹಗೊಂಡ ಶಾಸಕರಿಗೆ ಇದ್ದೇ ಇದೆ. ಅದೇನೇ ಆದರೂ ಸಾರ್ವಜನಿಕವಾಗಿ ಒಂದು ಸಂದೇಶ ಹೋಗುವಮಟ್ಟಿಗಂತೂ ಇದರ ಪರಿಣಾಮ ಇರಲಿದೆ.

ಅಂತೂ ಸರ್ಕಾರ ಬಿದ್ದಾಯಿತು. ನಾಳೆ ಅನರ್ಹತೆಯೂ ಘೋಷಣೆಯಾಗಿ ರಾಜ್ಯ ರಾಜ್ಯಕಾರಣ ಒಂದು ಹಂತಕ್ಕೆ ಬಂದು ನಿಲ್ಲಲಿದೆ.

.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

    • ಕೆಳಗಿನ ಬ್ಯಾಂಕ್ ಖಾತೆಯ ಮೂಲಕವೂ ಹಣ ಸಂದಾಯ ಮಾಡಬಹುದು)

      Account Name: Gauri Media Trust

      Account No.: 510101006500878

      Bank: Corporation bank

      Branch: Srinivasa nagara/Srinagara, Bengaluru

      IFSC Code: CORP0000215

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...