Homeಕರ್ನಾಟಕರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ನಾಳೆ ಅತೃಪ್ತ ಶಾಸಕರಿಗೆ ಈ ವಿಧಾನಸಭೆಯ ಅವಧಿಯಲ್ಲಿ ಚುನಾವಣೆಗೆ ನಿಲ್ಲದಂತೆ ಅನರ್ಹತೆ ಘೋಷಿಸಲಿರುವ ಸ್ಪೀಕರ್

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್ ಪಕ್ಷ ತ್ಯಜಿಸಿ ಇಷ್ಟು ದಿನ ಮುಂಬೈನಲ್ಲಿ ಬೀಡುಬಿಟ್ಟಿದ್ದ ಶಾಸಕರಿಗೆ ನಾಳೆ (ಜುಲೈ25) ಈ ವಿಧಾನಸಭಾ ಅವಧಿಪೂರ್ತಿಯ ಅನರ್ಹತೆ ಶಿಕ್ಷೆ ಕಾದು ಕೂತಿದೆ. ಈ ಸರ್ಕಾರ ಬಿದ್ದಿದ್ದಕ್ಕೆ ಸಂತಸವಾಗಿದೆ ಎಂದವರಿಗೆ ನಾಳೆ ಬಿಗ್ ಶಾಕ್ ಕಾದಿರುವುದಂತೂ ಸತ್ಯ.

ಈ ಕುರಿತು ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ರವರು ಇಂದು ಸುಳಿವು ನೀಡಿದ್ದಾರೆ. ಫೇಸ್ ಬುಕ್ ನಲ್ಲಿ “ನನ್ನ ತೀರ್ಪು ತಪ್ಪು ಆಗಿದ್ದಲ್ಲಿ ಕ್ಷಮಿಸಿ,. ಸರಿಯಾಗಿದ್ದರೆ ಅನುಭವಿಸಬೇಕಾಗುತ್ತದೆ. ನನ್ನನ್ನು ನಂಬಿರುವ ಎಲ್ಲಾ ಕರ್ನಾಟಕ ಜನತೆಗೆ ಕೃತಜ್ಞತೆಗಳು” ಎಂದು ಸ್ಪೀಕರ್ ರವರು ಒಂದು ಗಂಟೆಯ ಹಿಂದೆಯಷ್ಟೇ ಬರೆದುಕೊಂಡಿದ್ದಾರೆ.

ನಾನು ಗೌರಿ.ಕಾಂ ಸಿಕ್ಕ ಖಚಿತ ಮಾಹಿತಿಗಳ ಪ್ರಕಾರ 17ಜನ ಶಾಸಕರಿಗೂ ನಾಳೆ ಬೆಳಿಗ್ಗೆಯೇ ಅನರ್ಹತೆಯ ಶಿಕ್ಷೆ ಘೋಷಣೆಯಾಗುತ್ತದೆ. ಅದು ಕೂಡ ಈ ವಿಧಾಸಭಾ ಅವಧಿಪೂರ್ತಿ ಅವರನ್ನು ಅನರ್ಹರನ್ನಾಗಿ ಮಾಡಲಾಗುತ್ತದೆ. ಅಂದರೆ ಈ ವಿಧಾನಸಭೆಯ ಅವಧಿ ಮುಗಿಯುವ 2023ರವರೆಗೂ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಈ ಮಟ್ಟದ ದೊಡ್ಡ ಶಿಕ್ಷೆ ನಾಳೆ ಘೋಷಣೆಯಾಗುವುದಷ್ಟೇ ಬಾಕಿ ಉಳಿದಿದೆ.

ಕಾಂಗ್ರೆಸ್ ನಿಂದ 13 ಜನ ಮತ್ತು ಜೆಡಿಎಸ್ ನಿಂದ 03 ಜನ ಶಾಸಕರಿಗೆ ನಾಳೆ ಶಿಕ್ಷೆಯಾಗುವುದು ನಿಕ್ಕಿಯಾಗಿದೆ.

ನಾಳೆ ಅನರ್ಹತೆ ಘೋಷಿಸಿ, ಕಚೇರಿ ವ್ಯವಹಾರ ಎಲ್ಲಾ ಮುಗಿಸಿದ ನಂತರ ನಾಳಿದ್ದು ಸ್ಪೀಕರ್ ರವರು ಬಹಿರಂಗ ಪತ್ರಿಕಾ ಗೋಷ್ಟಿ ನಡೆಸಿ ತಮ್ಮ ರಾಜೀನಾಮೆಯನ್ನು ಸಹ ಘೋಷಿಸಲಿದ್ದಾರೆ. ಅನರ್ಹರಿಗೆ ಸರಿಯಾಗಿ ಬುದ್ದಿ ಕಲಿಸಿಯೇ ತಾನು ಸ್ಪೀಕರ್ ಸ್ಥಾನದಿಂದ ನಿರ್ಗಮಿಸಬೇಕೆಂದು ಸ್ಪೀಕರ್ ದೃಢಸಂಕಲ್ಪ ಮಾಡಿದ್ದಾರೆ.

ಪಕ್ಷಾಂತರ ಮಾಡಲು ಹೊರಟವರಿಗೆ ತಕ್ಕ ಶಾಸ್ತಿಯಾಯಿತು ಎಂಬ ಭಾವನೆ ಜನರಲ್ಲಿ ಮೂಡುವಂತೆ ಮಾಡುವುದು, ಆ ಮೂಲಕ ಶಾಸಕರಿಗೆ ಕಠಿಣ ಎಚ್ಚರಿಕೆ ನೀಡುವುದು ರಮೇಶ್ ಕುಮಾರ್ ರವರ ಗುರಿಯಾಗಿದೆ. ಆದರೆ ಸ್ಫೀಕರ್ ಅವರ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗುವ ಅವಕಾಶ ಅನರ್ಹಗೊಂಡ ಶಾಸಕರಿಗೆ ಇದ್ದೇ ಇದೆ. ಅದೇನೇ ಆದರೂ ಸಾರ್ವಜನಿಕವಾಗಿ ಒಂದು ಸಂದೇಶ ಹೋಗುವಮಟ್ಟಿಗಂತೂ ಇದರ ಪರಿಣಾಮ ಇರಲಿದೆ.

ಅಂತೂ ಸರ್ಕಾರ ಬಿದ್ದಾಯಿತು. ನಾಳೆ ಅನರ್ಹತೆಯೂ ಘೋಷಣೆಯಾಗಿ ರಾಜ್ಯ ರಾಜ್ಯಕಾರಣ ಒಂದು ಹಂತಕ್ಕೆ ಬಂದು ನಿಲ್ಲಲಿದೆ.

.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

    • ಕೆಳಗಿನ ಬ್ಯಾಂಕ್ ಖಾತೆಯ ಮೂಲಕವೂ ಹಣ ಸಂದಾಯ ಮಾಡಬಹುದು)

      Account Name: Gauri Media Trust

      Account No.: 510101006500878

      Bank: Corporation bank

      Branch: Srinivasa nagara/Srinagara, Bengaluru

      IFSC Code: CORP0000215

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...