Homeಕರ್ನಾಟಕರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ನಾಳೆ ಅತೃಪ್ತ ಶಾಸಕರಿಗೆ ಈ ವಿಧಾನಸಭೆಯ ಅವಧಿಯಲ್ಲಿ ಚುನಾವಣೆಗೆ ನಿಲ್ಲದಂತೆ ಅನರ್ಹತೆ ಘೋಷಿಸಲಿರುವ ಸ್ಪೀಕರ್

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್ ಪಕ್ಷ ತ್ಯಜಿಸಿ ಇಷ್ಟು ದಿನ ಮುಂಬೈನಲ್ಲಿ ಬೀಡುಬಿಟ್ಟಿದ್ದ ಶಾಸಕರಿಗೆ ನಾಳೆ (ಜುಲೈ25) ಈ ವಿಧಾನಸಭಾ ಅವಧಿಪೂರ್ತಿಯ ಅನರ್ಹತೆ ಶಿಕ್ಷೆ ಕಾದು ಕೂತಿದೆ. ಈ ಸರ್ಕಾರ ಬಿದ್ದಿದ್ದಕ್ಕೆ ಸಂತಸವಾಗಿದೆ ಎಂದವರಿಗೆ ನಾಳೆ ಬಿಗ್ ಶಾಕ್ ಕಾದಿರುವುದಂತೂ ಸತ್ಯ.

ಈ ಕುರಿತು ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ರವರು ಇಂದು ಸುಳಿವು ನೀಡಿದ್ದಾರೆ. ಫೇಸ್ ಬುಕ್ ನಲ್ಲಿ “ನನ್ನ ತೀರ್ಪು ತಪ್ಪು ಆಗಿದ್ದಲ್ಲಿ ಕ್ಷಮಿಸಿ,. ಸರಿಯಾಗಿದ್ದರೆ ಅನುಭವಿಸಬೇಕಾಗುತ್ತದೆ. ನನ್ನನ್ನು ನಂಬಿರುವ ಎಲ್ಲಾ ಕರ್ನಾಟಕ ಜನತೆಗೆ ಕೃತಜ್ಞತೆಗಳು” ಎಂದು ಸ್ಪೀಕರ್ ರವರು ಒಂದು ಗಂಟೆಯ ಹಿಂದೆಯಷ್ಟೇ ಬರೆದುಕೊಂಡಿದ್ದಾರೆ.

ನಾನು ಗೌರಿ.ಕಾಂ ಸಿಕ್ಕ ಖಚಿತ ಮಾಹಿತಿಗಳ ಪ್ರಕಾರ 17ಜನ ಶಾಸಕರಿಗೂ ನಾಳೆ ಬೆಳಿಗ್ಗೆಯೇ ಅನರ್ಹತೆಯ ಶಿಕ್ಷೆ ಘೋಷಣೆಯಾಗುತ್ತದೆ. ಅದು ಕೂಡ ಈ ವಿಧಾಸಭಾ ಅವಧಿಪೂರ್ತಿ ಅವರನ್ನು ಅನರ್ಹರನ್ನಾಗಿ ಮಾಡಲಾಗುತ್ತದೆ. ಅಂದರೆ ಈ ವಿಧಾನಸಭೆಯ ಅವಧಿ ಮುಗಿಯುವ 2023ರವರೆಗೂ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಈ ಮಟ್ಟದ ದೊಡ್ಡ ಶಿಕ್ಷೆ ನಾಳೆ ಘೋಷಣೆಯಾಗುವುದಷ್ಟೇ ಬಾಕಿ ಉಳಿದಿದೆ.

ಕಾಂಗ್ರೆಸ್ ನಿಂದ 13 ಜನ ಮತ್ತು ಜೆಡಿಎಸ್ ನಿಂದ 03 ಜನ ಶಾಸಕರಿಗೆ ನಾಳೆ ಶಿಕ್ಷೆಯಾಗುವುದು ನಿಕ್ಕಿಯಾಗಿದೆ.

ನಾಳೆ ಅನರ್ಹತೆ ಘೋಷಿಸಿ, ಕಚೇರಿ ವ್ಯವಹಾರ ಎಲ್ಲಾ ಮುಗಿಸಿದ ನಂತರ ನಾಳಿದ್ದು ಸ್ಪೀಕರ್ ರವರು ಬಹಿರಂಗ ಪತ್ರಿಕಾ ಗೋಷ್ಟಿ ನಡೆಸಿ ತಮ್ಮ ರಾಜೀನಾಮೆಯನ್ನು ಸಹ ಘೋಷಿಸಲಿದ್ದಾರೆ. ಅನರ್ಹರಿಗೆ ಸರಿಯಾಗಿ ಬುದ್ದಿ ಕಲಿಸಿಯೇ ತಾನು ಸ್ಪೀಕರ್ ಸ್ಥಾನದಿಂದ ನಿರ್ಗಮಿಸಬೇಕೆಂದು ಸ್ಪೀಕರ್ ದೃಢಸಂಕಲ್ಪ ಮಾಡಿದ್ದಾರೆ.

ಪಕ್ಷಾಂತರ ಮಾಡಲು ಹೊರಟವರಿಗೆ ತಕ್ಕ ಶಾಸ್ತಿಯಾಯಿತು ಎಂಬ ಭಾವನೆ ಜನರಲ್ಲಿ ಮೂಡುವಂತೆ ಮಾಡುವುದು, ಆ ಮೂಲಕ ಶಾಸಕರಿಗೆ ಕಠಿಣ ಎಚ್ಚರಿಕೆ ನೀಡುವುದು ರಮೇಶ್ ಕುಮಾರ್ ರವರ ಗುರಿಯಾಗಿದೆ. ಆದರೆ ಸ್ಫೀಕರ್ ಅವರ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗುವ ಅವಕಾಶ ಅನರ್ಹಗೊಂಡ ಶಾಸಕರಿಗೆ ಇದ್ದೇ ಇದೆ. ಅದೇನೇ ಆದರೂ ಸಾರ್ವಜನಿಕವಾಗಿ ಒಂದು ಸಂದೇಶ ಹೋಗುವಮಟ್ಟಿಗಂತೂ ಇದರ ಪರಿಣಾಮ ಇರಲಿದೆ.

ಅಂತೂ ಸರ್ಕಾರ ಬಿದ್ದಾಯಿತು. ನಾಳೆ ಅನರ್ಹತೆಯೂ ಘೋಷಣೆಯಾಗಿ ರಾಜ್ಯ ರಾಜ್ಯಕಾರಣ ಒಂದು ಹಂತಕ್ಕೆ ಬಂದು ನಿಲ್ಲಲಿದೆ.

.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

    • ಕೆಳಗಿನ ಬ್ಯಾಂಕ್ ಖಾತೆಯ ಮೂಲಕವೂ ಹಣ ಸಂದಾಯ ಮಾಡಬಹುದು)

      Account Name: Gauri Media Trust

      Account No.: 510101006500878

      Bank: Corporation bank

      Branch: Srinivasa nagara/Srinagara, Bengaluru

      IFSC Code: CORP0000215

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...