Homeಎಂಟರ್ತೈನ್ಮೆಂಟ್ರಾಜ್ - ಎಂದೂ ಮಾಸದ ನೆನಪು: ಭವಾನಿ ಕ್ಯಾಮರಾ ಕಣ್ಣಲ್ಲಿ ರಾಜ್!

ರಾಜ್ – ಎಂದೂ ಮಾಸದ ನೆನಪು: ಭವಾನಿ ಕ್ಯಾಮರಾ ಕಣ್ಣಲ್ಲಿ ರಾಜ್!

- Advertisement -
- Advertisement -

ವರನಟ ಡಾ.ರಾಜಕುಮಾರ್ ಅಗಲಿ ಇಂದಿಗೆ ಹದಿನಾಲ್ಕು ವರ್ಷ. ಏಕೀಕರಣದ ನಂತರ ಕನ್ನಡ ನಾಡು-ನುಡಿಯ ಬಗ್ಗೆ ಕನ್ನಡಿಗರಲ್ಲಿ ಒಲವು ಮೂಡಿಸಿದ ಸಾಂಸ್ಕೃತಿಕ ವ್ಯಕ್ತಿತ್ವ ರಾಜ್. ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾಯಣ ಅವರು ರಾಜ್ ಅವರ ಆತ್ಮೀಯರೊಲ್ಲಬ್ಬರು. ತಾವು ಕಂಡ ನಟನನ್ನು ಅಪರೂಪದ ಸಂದರ್ಭಗಳೊಂದಿಗೆ ಅವರಿಲ್ಲಿ ಸ್ಮರಿಸಿಕೊಂಡಿದ್ದಾರೆ.

ನಾನು ರಾಜ್‌ರ ನೂರಾರು ಫೋಟೋಗಳನ್ನು ಸೆರೆಹಿಡಿದ್ದೇನೆ. ಸೂಕ್ಷ್ಮವಾಗಿ ಗಮನಿಸಿ ನೋಡಿದರೆ, ಪ್ರತೀ ಚಿತ್ರದಲ್ಲೂ ಅವರಲ್ಲಿನ ಸರಳತೆ ಕಾಣಿಸುತ್ತದೆ. ನಾನು ಹತ್ತಾರು ವರ್ಷಗಳ ಕಾಲ ಕಂಡಂತೆ ಸೆಟ್‌ನಲ್ಲೂ ಅವರು ಎಲ್ಲರೊಂದಿಗೂ ಸರಳವಾಗಿ ಬೆರೆಯುತ್ತಿದ್ದರು. ಸಹಕಲಾವಿದರೊಂದಿಗೆ ಅವರದು ಉತ್ತಮ ಬಾಂಧವ್ಯ. ಹಿರಿಯರನ್ನು ಗೌರವಿಸುತ್ತಿದ್ದ ರಾಜ್, ಕಿರಿಯರಿಗೆ ಸಲಹೆ – ಸೂಚನೆ ಕೊಡುತ್ತಿದ್ದರು. ಕ್ಯಾಮರಾ ಎದುರು ಕೂಡ ಅವರು ಅಷ್ಟೇ ಸಂಯಮಿ. ಟೇಕ್ ಹೆಚ್ಚಾದರೆ ಒಂದಿಷ್ಟೂ ಬೇಸರಿಸಿಕೊಳ್ಳದೆ ಮತ್ತೊಂದು ಟೇಕ್‌ಗೆ ರೆಡಿಯಾಗುತ್ತಿದ್ದರು. ತಪ್ಪನ್ನು ಒಪ್ಪಿಕೊಳ್ಳುವ ಗುಣ ಅವರದು. ಸನ್ನಿವೇಶ ಮತ್ತಷ್ಟು ಚೆನ್ನಾಗಿ ಮೂಡಿಬರಬೇಕೆಂದು ನಿರ್ದೇಶಕರ ಸಲಹೆಯನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸುತ್ತಿದ್ದರು. ಅವರು ನಿರ್ದೇಶಕರಿಗೆ ಎದುರಾಡಿದ್ದನ್ನು ನಾನಂತೂ ಒಮ್ಮೆಯೂ ನೋಡಿಲ್ಲ. ಶೂಟಿಂಗ್ ಬಿಡುವಿನ ವೇಳೆಯಲ್ಲಿ ನಾನು ಕೊಡುತ್ತಿದ್ದ ತೊಂದರೆಗೂ ಅವರು ಬೇಸರ ಮಾಡಿಕೊಂಡವರಲ್ಲ. ಒಳ್ಳೆಯ ಮೂಡ್‌ನ ನಿರೀಕ್ಷೆಯಲ್ಲಿರುವ ಛಾಯಾಗ್ರಾಹಕನಿಗೆ ಮತ್ತೇನು ಬೇಕು ಹೇಳಿ?

ಕೂಸು ಮರಿ

ನಾನು ನೋಡಿದಂತೆ ರಾಜ್ ಮತ್ತು ಚಿತ್ರಸಾಹಿತಿ ಚಿ.ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು? ರಾಜ್‌ರನ್ನು ಹತ್ತಿರದಿಂದ ಒಡನಾಡಿದ್ದರಿಂದ ಅವರ ಇಮೇಜ್‌ಗೆ ಸರಿಹೊಂದುವಂತೆ ಬರೆಯಲು ಉದಯಶಂಕರ್ ಅವರಿಗೆ ಸಾಧ್ಯವಾಗಿರಬಹುದು. ರಾಜ್ ಸಿನಿಮಾಗಳ ಚಿತ್ರೀಕರಣಗಳಿಗೆ ಹೋದ ಬಹಳಷ್ಟು ಸಂದರ್ಭಗಳಲ್ಲಿ ಚಿ.ಉದಯಶಂಕರ್ ಅವರನ್ನು ಭೇಟಿಯಾಗಿದ್ದೇನೆ. ಸಾಕಷ್ಟು ಬಾರಿ ಅವರು ನನ್ನ ಕ್ಯಾಮರಾಗೆ ರೂಪದರ್ಶಿಯಾಗಿದ್ದಾರೆ.

ನಂದಿಬೆಟ್ಟದಲ್ಲೊಮ್ಮೆ ರಾಜ್ ಮತ್ತು ಉದಯಶಂಕರ್ ಜೋಡಿಯ ಚಿತ್ರ ತೆಗೆದದ್ದು ನನಗೆ ಬಹುವಾಗಿ ಕಾಡುತ್ತದೆ. ರಾಜ್‌ರ ಚಿತ್ರವೊಂದಕ್ಕೆ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಚಿ.ಉದಯಶಂಕರ್ ಕೂಡ ಸೆಟ್‌ನಲ್ಲಿದ್ದರು. ನಾನಲ್ಲಿಗೆ ಹೋದಾಗ ಇಬ್ಬರೂ ಸನ್ನಿವೇಶವೊಂದರ ಬಗ್ಗೆ ಚರ್ಚಿಸುತ್ತಿದ್ದರೆಂದು ಕಾಣುತ್ತದೆ. ಅವರ ಗಂಭೀರ ಮಾತುಕತೆ ಮುಗಿಯುತ್ತಿದ್ದಂತೆ ನಾನಲ್ಲಿಗೆ ಹೋದೆ. ಅಪರೂಪದ ಪೋಸ್ ಬೇಕೆಂದಾಗ, ಉತ್ಸಾಹಿ ರಾಜ್ ಕ್ಷಣಕಾಲ ಯೋಚಿಸಿದರು.ಉದಯಶಂಕರ್‌ರನ್ನು ಕೂಸು ಮರಿ ಮಾಡಿದರೆ ಹೇಗೆ?’ ಎಂದು ಕೇಳಿದ ರಾಜ್, ಅದಕ್ಕೆ ಸಜ್ಜಾದರು. ಚಿ.ಉದಯಶಂಕರ್ ನಗುತ್ತಲೇ ರಾಜ್ ಬೆನ್ನೇರಿದರು. ಸ್ಥೂಲಕಾಯದ ಅವರನ್ನು ಹೊರುತ್ತಲೇ ರಾಜ್ ಒಂದೆಡೆ ಕೊಂಚ ವಾಲಿದರು. ಆಕಸ್ಮಾತ್ ಇಬ್ಬರೂ ಬಿದ್ದರೇನು ಗತಿ ಎಂದು ನನಗೆ ಗಾಬರಿಯಾಯ್ತು. ಯಾಕಾದರೂ ಭಿನ್ನ ಪೋಸ್ ಕೊಡಿ ಎಂದು ಕೇಳಿದೆನೋ ಎಂದು ಪರಿತಪಿಸಿದೆ. ಹಾಗೇನೂ ಆಗಲಿಲ್ಲ. ರಾಜ್ ತಮ್ಮ ಸ್ನೇಹಿತನನ್ನು ಕೂಸು ಮರಿ ಮಾಡುವ ಅಪರೂಪದ ಪೋಸ್ ನನ್ನ ಕ್ಯಾಮರಾಗೆ ದಕ್ಕಿತು. ಮುಂದೆ ಈ ಫೋಟೋ ನೋಡಿ ಅವರಿಬ್ಬರೂ ತುಂಬಾ ಖುಷಿಪಟ್ಟಿದ್ದರು.

ರಾಜ್ ನೃತ್ಯಕ್ಕೆ ಮನಸೋತ ಹನುಮ!

ನಂದಿಬೆಟ್ಟದಲ್ಲಿ ರಾಜ್ ಸಿನಿಮಾಗೆ ಚಿತ್ರೀಕರಣ ನಡೆಯಲಿದೆ ಎನ್ನುವ ವಿಷಯ ಕಿವಿಗೆ ಬಿದ್ದಿತ್ತು. ಯಾವ ಸಿನಿಮಾ ಎನ್ನುವ ಕುತೂಹಲದಿಂದಲೇ ಹೋಗಿದ್ದೆ. ಸೆಟ್‌ಗೆ ಹೋಗುತ್ತಿದ್ದಂತೆ ನೃತ್ಯ ನಿರ್ದೇಶಕ ಉಡುಪಿ ಜಯರಾಂ ಎದುರಾದರು. `ಓ, ನೀವು ಬಂದ್ಬಿಟ್ರಾ, ಇನ್ನು ಅಣ್ಣಾವ್ರು ನಮಗೆ ಸಿಗೋಲ್ಲ ಬಿಡಿ..’ ಎಂದು ನಗುತ್ತಲೇ ನನ್ನನ್ನು ಸ್ವಾಗತಿಸಿದರು. ಅವರೊಂದಿಗೆ ಲೋಕಾಭಿರಾಮವಾಗಿ ಮಾತನಾಡುತ್ತಿರುವಾಗ ನಿರ್ದೇಶಕ ಗೀತಪ್ರಿಯ ಅವರ ಪದಾರ್ಪಣೆಯಾಯ್ತು. ರಾಜ್ ಅಭಿನಯದ `ಭೂಪತಿ ರಂಗ’ ಸಿನಿಮಾ ಹಾಡಿನ ಚಿತ್ರೀಕರಣ ಎನ್ನುವುದು ಗೊತ್ತಾಯಿತು. ಕೊಂಚ ಹೊತ್ತಿನಲ್ಲಿಯೇ ಶಾಟ್‌ಗೆ ಸಿದ್ಧರಾಗಿ ರಾಜ್ ನನ್ನೆಡೆ ಕೈಬೀಸುತ್ತಾ ಬಂದರು.
ತಮಿಳಿನಲ್ಲಿ ಆಗ ಹೆಸರು ಮಾಡಿದ್ದ ಉದಯ ಚಂದ್ರಿಕಾ ಈ ಚಿತ್ರದ ನಾಯಕಿ. ರಾಜ್ – ಉದಯ ಚಂದ್ರಿಕಾ ಜೋಡಿಯ `ಓಹೋ ಮುದ್ದಿನ ಮಲ್ಲಿಗೆ..’ ಯುಗಳ ಗೀತೆಗೆ ಅಂದು ಚಿತ್ರೀಕರಣ ನಡೆದದ್ದು. ಮಧ್ಯಾಹ್ನದಿಂದ ಸಂಜೆ ನಾಲ್ಕರವರೆಗೆ ಸತತವಾಗಿ ಚಿತ್ರೀಕರಣ ನಡೆಸಿದರು. ಕೊನೆಯಲ್ಲೊಂದು ತಮಾಷೆ ನಡೆಯಿತು. ಆಗ ನಂದಿ ಬೆಟ್ಟದಲ್ಲಿ ಕೋತಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ರಾಜ್ ಮುಂದಿನ ಶಾಟ್‌ಗೆಂದು ಕ್ಯಾಮರಾ ಎದುರು ಬರುತ್ತಿದ್ದಂತೆ ಕೋತಿಯೊಂದು ಅವರ ಬಳಿ ಓಡಿಬಂತು. ಚಿತ್ರತಂಡದ ಹುಡುಗರು ಓಡಿಸಿದರೂ ಅದು ಹೋಗಲೊಲ್ಲದು. ತಮ್ಮ ಕಾಲ ಬಳಿಯೇ ಸುಳಿದಾಡುತ್ತಿದ್ದ ಕೋತಿಯನ್ನು ರಾಜ್ ಪ್ರೀತಿಯಿಂದ ಮಾತನಾಡಿಸತೊಡಗಿದರು. ಕ್ಯಾಮರಾಮನ್ ಪಿ.ಎಸ್.ಪ್ರಕಾಶ್ ತಮ್ಮ ಕ್ಯಾಮರಾ ಆಫ್ ಮಾಡಿ ನಗುತ್ತಾ ಕುಳಿತರು. ನಾನು ಕ್ಯಾಮರಾ ಎತ್ತಿಕೊಂಡು ಅಲ್ಲಿಗೆ ಓಡಿದೆ. ಕೋತಿ ಎದುರು ರಾಜ್ ನೃತ್ಯದ ಬಂಗಿಯಲ್ಲಿ ಕೊಟ್ಟ ಪೋಸುಗಳನ್ನು ಕ್ಲಿಕ್ಕಿಸಿಕೊಂಡೆ. ಹೀಗೆ, ರಾಜ್ ಅವರೊಂದಿಗಿನ ಒಡನಾಟ ನನ್ನ ಬದುಕಿನ ಮಧುರ ನೆನಪುಗಳಾಗಿ ಉಳಿದಿವೆ.

ನಿರೂಪಣೆ: ಶಶಿಧರ ಚಿತ್ರದುರ್ಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...