Homeರಾಜಕೀಯರಾಫೇಲ್‌ನ ಜಡ್ಜ್ಮೆಂಟ್‌ನಲ್ಲಿ ತಪ್ಪು ನುಸುಳಿದೆ: ಕೇಂದ್ರ ಸರ್ಕಾರದಿಂದಲೇ ಅರ್ಜಿ ಸಲ್ಲಿಕೆ

ರಾಫೇಲ್‌ನ ಜಡ್ಜ್ಮೆಂಟ್‌ನಲ್ಲಿ ತಪ್ಪು ನುಸುಳಿದೆ: ಕೇಂದ್ರ ಸರ್ಕಾರದಿಂದಲೇ ಅರ್ಜಿ ಸಲ್ಲಿಕೆ

- Advertisement -
- Advertisement -

ಇದನ್ನು ತಮಾಷೆ ಎನ್ನುವುದೋ, ನಮ್ಮ ದೇಶ ತಲುಪಿರುವ ದುರಂತದ ಸ್ಥಿತಿ ಎನ್ನುವುದೋ ಹೇಳುವುದು ಕಷ್ಟ. ನಿನ್ನೆ ಸುಪ್ರೀಂಕೋರ್ಟಿನಲ್ಲಿ ರಾಫೇಲ್ ಡೀಲ್‌ಗೆ ಸಂಬಂಧಿಸಿದಂತೆ ‘ತಮಗೆ ವಿಜಯ, ಪ್ರತಿಪಕ್ಷ ಕ್ಷಮೆ ಕೇಳಬೇಕು’, ‘ಮೋದಿಗೆ ಕ್ಲೀನ್‌ಚಿಟ್’, ‘ರಾಫೇಲ್ ಡೀಲ್‌ನಲ್ಲಿ ಏನೂ ತಪ್ಪಿಲ್ಲ’ ಎಂದೆಲ್ಲಾ ಬಿಜೆಪಿ ಮತ್ತು ಅದರ ಪಟಾಲಂ ಹಾಗೂ ಗೋದಿ ಮೀಡಿಯಾಗಳು ಕೂಗಾಡಿದ್ದವು. ವಾಸ್ತವದಲ್ಲಿ ಕೋರ್ಟಿಗೆ ಹೋಗಿದ್ದದ್ದು ಪ್ರತಿಪಕ್ಷವಲ್ಲ; ಅವು ಜಂಟಿ ಸಂಸದೀಯ ಸಮಿತಿಯ ರಚನೆಗೆ ಒತ್ತಾಯಿಸಿದ್ದವು. ಸುಪ್ರೀಂಕೋರ್ಟ್ ಏನೂ ತಪ್ಪಾಗಿಲ್ಲ ಎಂದು ಹೇಳುವುದಕ್ಕಿಂತ ಹೆಚ್ಚಾಗಿ ತಾನು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಲೇ ಹೆಚ್ಚು ಒತ್ತು ಕೊಟ್ಟಿತ್ತು.

ಈಗ ನೋಡಿದರೆ, ‘ಆ ಜಡ್ಜ್ಮೆಂಟ್‌ನಲ್ಲಿ ತಪ್ಪು ನುಸುಳಿದೆ, ತಾನು ಸೀಲ್ ಮಾಡಿದ ಕವರ್‌ನಲ್ಲಿ ಹೇಳಿದ್ದ ವಾಕ್ಯಗಳ ಆಧಾರದಿಂದಲೇ ಈ ತಪ್ಪು ಆಗಿದೆ’ ಎಂದು ಸ್ವತಃ ಕೇಂದ್ರ ಸರ್ಕಾರವು ಇಂದು ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದೆ. ಇದೇಕೆ ನಡೆಯಿತು ಎಂಬುದನ್ನು ನೋಡೋಣ.

ಈ ಡೀಲ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟು ಹೇಳಿದ್ದು 3 ಅಂಶ.

1. ಬೆಲೆಯ ಕುರಿತು ತಾನೇನೂ ಹೇಳಲಾರೆ, ಅದು ಪರಿಣಿತರಿಗೆ ಬಿಟ್ಟಿದ್ದು.
2. ಆಫ್‌ಸೆಟ್ ಪಾರ್ಟ್ನರ್ (ಅಂದರೆ ಅನಿಲ್ ಅಂಬಾನಿಯನ್ನೇ ಡಸಾಲ್ಟ್ನವರು ತೆಗೆದುಕೊಂಡಿದ್ದು) ಆಯ್ದುಕೊಂಡಿದ್ದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ.
3. ನಿಯಮಗಳನ್ನು ಸರಿಯಾಗಿ ಪಾಲಿಸಿಯೇ ವ್ಯವಹಾರ ನಡೆದಿದೆ.

ಅಂದರೆ ಮೊದಲೆರಡು ವಿಚಾರಗಳಲ್ಲಿ ಸರಿ ತಪ್ಪು ಏನು ನಡೆದಿದೆ ಎಂದು ಕೋರ್ಟ್ ಏನೂ ಹೇಳಿಲ್ಲ; ಇದರಲ್ಲಿ ಮಧ್ಯಪ್ರವೇಶಿಸುವುದು ಆಗದು ಎಂದು ಹೇಳಿದೆ. ಆದರೆ, ನಿಯಮಗಳನ್ನು ಸರಿಯಾಗಿ ಪಾಲಿಸಲಾಗಿದೆ ಎಂಬ ಅಭಿಪ್ರಾಯಕ್ಕೆ ಬರಲು ಅದು ಮುಂದಿಟ್ಟ ಪ್ರಮುಖ ಅಂಶವೆಂದರೆ 25ನೇ ಪ್ಯಾರಾ.

ಅದರ ಪ್ರಕಾರ ಈ ವ್ಯವಹಾರದ ಕುರಿತು ಸಿಎಜಿ ಪರಿಶೀಲಿಸಿದೆ, ಅದನ್ನು ಸಂಸತ್ತಿನ ಲೆಕ್ಕಪತ್ರ ಸಮಿತಿಯು (ಪಿಎಸಿ) ಪರಿಶೀಲಿಸಿದೆ ಮತ್ತು ಪಾರ್ಲಿಮೆಂಟ್‌ನಲ್ಲಿ ಅದರ ಸಾರಾಂಶವು ಮಂಡನೆಯಾಗುವುದರ ಮೂಲಕ ಸಾರ್ವಜನಿಕರಿಗೂ ವಿಷಯ ತಿಳಿಯುತ್ತದೆ.

ಇದು ಹೊರಬಿದ್ದ ಕೂಡಲೇ ಸಂಸತ್ತಿನ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ರಾಹುಲ್‌ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದರು. ಅಂತಹದೊಂದು ವರದಿಯೇ ತಮ್ಮ ಸಮಿತಿಯ ಮುಂದೆ ಬಂದಿಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದ್ದರು.

ಅಷ್ಟೇ ಅಲ್ಲದೇ, ಸಿಎಜಿಯನ್ನು ಮತ್ತು ಸುಪ್ರೀಂಕೋರ್ಟಿಗೆ ಈ ಸುಳ್ಳು ಹೇಳಿದ ಅಟಾರ್ನಿ ಜನರಲ್‌ರನ್ನು ಸಮಿತಿಯ ಮುಂದೆ ಕರೆಸಲು, ಇತರ ಸದಸ್ಯರಿಗೂ ಕೇಳುತ್ತೇನೆ ಎಂದು ಖರ್ಗೆ ಗುಡುಗಿದ್ದರು. ಅಲ್ಲಿಗೆ ತಾವು ಸೀಲ್ಡ್ ಕವರ್‌ನಲ್ಲಿ ಸುಪ್ರೀಂಕೋರ್ಟಿಗೆ ಹೇಳಿದ್ದ ಸುಳ್ಳನ್ನು ಆದೇಶದಲ್ಲೂ ಕೋರ್ಟು ಬಿಚ್ಚಿಟ್ಟದ್ದರಿಂದ ಸಿಕ್ಕಿ ಹಾಕಿಕೊಂಡ ಕೇಂದ್ರ ಸರ್ಕಾರವು ಅಡಕತ್ತರಿಗೆ ಸಿಕ್ಕಿಬಿಟ್ಟಿತು. ಇನ್ನು ತಾನು ಪೂರ್ಣ ಸಿಕ್ಕಿಹಾಕಿಕೊಳ್ಳುತ್ತೇನೆ ಎಂದು ಅದಕ್ಕೆ ಗೊತ್ತಾಯಿತು.

ಹಾಗಾಗಿ ಇಂದು ಸ್ವತಃ ತಾನೇ ಅಫಿಡವಿಟ್ ಸಲ್ಲಿಸಿತು. ಅದರಲ್ಲಿ `ತಾನು ನೀಡಿದ ಮಾಹಿತಿಯಲ್ಲಿ ಇಂಗ್ಲಿಷಿನಲ್ಲಿ ವಿವರಿಸಿದ ವಾಕ್ಯಗಳಲ್ಲಿ ತಪ್ಪು ಅರ್ಥ ಉಂಟಾಗಿರಬಹುದು. ಸಾಮಾನ್ಯವಾಗಿ ಸಿಎಜಿ ವರದಿಯನ್ನು ಪಿಎಸಿ ಪರಿಶೀಲಿಸುತ್ತದೆ ಮತ್ತು ಸಾಮಾನ್ಯವಾಗಿ ಅದರ ಸಾರಾಂಶವು ಸಂಸತ್ತಿನಲ್ಲಿ ಮಂಡನೆಯಾಗುತ್ತದೆ ಎಂಬ ಅರ್ಥದಲ್ಲಿ ಹೇಳಿದ್ದೇ ಹೊರತು, ಈಗಾಗಲೇ ಸಲ್ಲಿಸಲಾಗಿದೆ ಎಂದಲ್ಲ’ ಎಂದು ಹೇಳಿಕೊಂಡಿದೆ.

ಅಂದರೆ ವಿಚಾರ ಸ್ಪಷ್ಟವಾಗಿದೆ. ಬಿಜೆಪಿ ಪಕ್ಷವು, ಈ ಡೀಲ್‌ನಲ್ಲಿ ನೇರವಾಗಿ ಭಾಗಿಯಾದ ನರೇಂದ್ರ ಮೋದಿಯವರನ್ನು ಬಚಾವು ಮಾಡಲು ಒಂದಾದ ಮೇಲೆ ಒಂದರಂತೆ ಸುಳ್ಳುಗಳನ್ನು ಹೇಳತೊಡಗಿದೆ. ಪ್ರತೀ ಸುಳ್ಳೂ ಅನುಮಾನಗಳನ್ನು ಗಟ್ಟಿ ಮಾಡಿದೆಯೇ ಹೊರತು ಎಲ್ಲಿಯೂ ಅನುಮಾನ ನಿವಾರಣೆಯಾಗುವಂತೆ ಆಗಿಲ್ಲ.

ಹೀಗಾಗಿ
1. ಸುದೀರ್ಘ ಇತಿಹಾಸವುಳ್ಳ ಎಚ್‌ಎಎಲ್‌ನಿಂದ ಕಿತ್ತುಕೊಂಡು ಅನಿಲ್ ಅಂಬಾನಿಗೆ ಕೊಟ್ಟಿದ್ದೇಕೆ?
2. ಅದನ್ನು ನೀಡಬೇಕಾಗಿ ಬಂದಿದ್ದು ಭಾರತದ ಪ್ರಧಾನಿಯ ಕೋರಿಕೆಯ ಮೇರೆಗೆ ಎಂಬ ಹೇಳಿಕೆಯು ಫ್ರಾನ್ಸ್ನಿಂದ ಬಂದಿದ್ದನ್ನು ನೀವು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದೇಕೆ?
3. ಮೂರು ಪಟ್ಟು ಹೆಚ್ಚು ಬೆಲೆಗೆ ಕೊಂಡುಕೊಳ್ಳುತ್ತಿರುವುದೇಕೆ?
4. ಹಿಂದೆ ಭಾರತದಲ್ಲೇ ತಂತ್ರಜ್ಞಾನವನ್ನೂ ಪಡೆದುಕೊಂಡು ಮೇಕ್‌ಇನ್ ಇಂಡಿಯಾ ಮಾಡಲು ಆಗಿದ್ದ ಒಪ್ಪಂದ ಬಿಟ್ಟು ಈಗ ತಂತ್ರಜ್ಞಾನ ವರ್ಗಾವಣೆಯೂ ಇಲ್ಲದೇ ಹೋಗುವಂತಾಗಲು ಹೇಗೆ ಒಪ್ಪಿಕೊಂಡಿರಿ?
5. ರಕ್ಷಣಾ ಸಚಿವರನ್ನೂ ಒಳಗೊಂಡಂತೆ ಯಾರಿಗೂ ಗೊತ್ತಿಲ್ಲದ ವ್ಯವಹಾರವನ್ನು ಪ್ರಧಾನಿ ಕಾರ್ಯಾಲಯ ಮಾತ್ರ ದಿಢೀರ್ ಎಂದು ಮಾಡಿದ್ದು ಏಕೆ?

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಬೇಕೆಂದರೆ ಜಂಟಿ ಸಂಸದೀಯ ಸಮಿತಿಯ ತನಿಖೆ ಅಥವಾ ಸುಪ್ರೀಂಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಯಬೇಕಲ್ಲದೇ ಬೇರೆ ದಾರಿಯಿಲ್ಲ.

ಅದನ್ನು ಬಿಟ್ಟು ಮತ್ತಷ್ಟು ಮುಚ್ಚಿ ಹಾಕಲು ಹೊರಟರೆ, ‘ಚೌಕೀದಾರ್ ಚೋರ್ ಹೈ’ ಮಾತು ನಿಜವೆಂದು ಜನರು ಹೆಚ್ಚೆಚ್ಚು ನಂಬುತ್ತಾ ಹೋಗುತ್ತಾರೆ. ಬಿಜೆಪಿಯು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಿ ಧೈರ್ಯವನ್ನು ಮೆರೆಯಬೇಕು. ಅದೊಂದೇ ಪರಿಹಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...