Homeರಾಜಕೀಯರಾಫೇಲ್‌ನ ಜಡ್ಜ್ಮೆಂಟ್‌ನಲ್ಲಿ ತಪ್ಪು ನುಸುಳಿದೆ: ಕೇಂದ್ರ ಸರ್ಕಾರದಿಂದಲೇ ಅರ್ಜಿ ಸಲ್ಲಿಕೆ

ರಾಫೇಲ್‌ನ ಜಡ್ಜ್ಮೆಂಟ್‌ನಲ್ಲಿ ತಪ್ಪು ನುಸುಳಿದೆ: ಕೇಂದ್ರ ಸರ್ಕಾರದಿಂದಲೇ ಅರ್ಜಿ ಸಲ್ಲಿಕೆ

- Advertisement -
- Advertisement -

ಇದನ್ನು ತಮಾಷೆ ಎನ್ನುವುದೋ, ನಮ್ಮ ದೇಶ ತಲುಪಿರುವ ದುರಂತದ ಸ್ಥಿತಿ ಎನ್ನುವುದೋ ಹೇಳುವುದು ಕಷ್ಟ. ನಿನ್ನೆ ಸುಪ್ರೀಂಕೋರ್ಟಿನಲ್ಲಿ ರಾಫೇಲ್ ಡೀಲ್‌ಗೆ ಸಂಬಂಧಿಸಿದಂತೆ ‘ತಮಗೆ ವಿಜಯ, ಪ್ರತಿಪಕ್ಷ ಕ್ಷಮೆ ಕೇಳಬೇಕು’, ‘ಮೋದಿಗೆ ಕ್ಲೀನ್‌ಚಿಟ್’, ‘ರಾಫೇಲ್ ಡೀಲ್‌ನಲ್ಲಿ ಏನೂ ತಪ್ಪಿಲ್ಲ’ ಎಂದೆಲ್ಲಾ ಬಿಜೆಪಿ ಮತ್ತು ಅದರ ಪಟಾಲಂ ಹಾಗೂ ಗೋದಿ ಮೀಡಿಯಾಗಳು ಕೂಗಾಡಿದ್ದವು. ವಾಸ್ತವದಲ್ಲಿ ಕೋರ್ಟಿಗೆ ಹೋಗಿದ್ದದ್ದು ಪ್ರತಿಪಕ್ಷವಲ್ಲ; ಅವು ಜಂಟಿ ಸಂಸದೀಯ ಸಮಿತಿಯ ರಚನೆಗೆ ಒತ್ತಾಯಿಸಿದ್ದವು. ಸುಪ್ರೀಂಕೋರ್ಟ್ ಏನೂ ತಪ್ಪಾಗಿಲ್ಲ ಎಂದು ಹೇಳುವುದಕ್ಕಿಂತ ಹೆಚ್ಚಾಗಿ ತಾನು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಲೇ ಹೆಚ್ಚು ಒತ್ತು ಕೊಟ್ಟಿತ್ತು.

ಈಗ ನೋಡಿದರೆ, ‘ಆ ಜಡ್ಜ್ಮೆಂಟ್‌ನಲ್ಲಿ ತಪ್ಪು ನುಸುಳಿದೆ, ತಾನು ಸೀಲ್ ಮಾಡಿದ ಕವರ್‌ನಲ್ಲಿ ಹೇಳಿದ್ದ ವಾಕ್ಯಗಳ ಆಧಾರದಿಂದಲೇ ಈ ತಪ್ಪು ಆಗಿದೆ’ ಎಂದು ಸ್ವತಃ ಕೇಂದ್ರ ಸರ್ಕಾರವು ಇಂದು ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದೆ. ಇದೇಕೆ ನಡೆಯಿತು ಎಂಬುದನ್ನು ನೋಡೋಣ.

ಈ ಡೀಲ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟು ಹೇಳಿದ್ದು 3 ಅಂಶ.

1. ಬೆಲೆಯ ಕುರಿತು ತಾನೇನೂ ಹೇಳಲಾರೆ, ಅದು ಪರಿಣಿತರಿಗೆ ಬಿಟ್ಟಿದ್ದು.
2. ಆಫ್‌ಸೆಟ್ ಪಾರ್ಟ್ನರ್ (ಅಂದರೆ ಅನಿಲ್ ಅಂಬಾನಿಯನ್ನೇ ಡಸಾಲ್ಟ್ನವರು ತೆಗೆದುಕೊಂಡಿದ್ದು) ಆಯ್ದುಕೊಂಡಿದ್ದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ.
3. ನಿಯಮಗಳನ್ನು ಸರಿಯಾಗಿ ಪಾಲಿಸಿಯೇ ವ್ಯವಹಾರ ನಡೆದಿದೆ.

ಅಂದರೆ ಮೊದಲೆರಡು ವಿಚಾರಗಳಲ್ಲಿ ಸರಿ ತಪ್ಪು ಏನು ನಡೆದಿದೆ ಎಂದು ಕೋರ್ಟ್ ಏನೂ ಹೇಳಿಲ್ಲ; ಇದರಲ್ಲಿ ಮಧ್ಯಪ್ರವೇಶಿಸುವುದು ಆಗದು ಎಂದು ಹೇಳಿದೆ. ಆದರೆ, ನಿಯಮಗಳನ್ನು ಸರಿಯಾಗಿ ಪಾಲಿಸಲಾಗಿದೆ ಎಂಬ ಅಭಿಪ್ರಾಯಕ್ಕೆ ಬರಲು ಅದು ಮುಂದಿಟ್ಟ ಪ್ರಮುಖ ಅಂಶವೆಂದರೆ 25ನೇ ಪ್ಯಾರಾ.

ಅದರ ಪ್ರಕಾರ ಈ ವ್ಯವಹಾರದ ಕುರಿತು ಸಿಎಜಿ ಪರಿಶೀಲಿಸಿದೆ, ಅದನ್ನು ಸಂಸತ್ತಿನ ಲೆಕ್ಕಪತ್ರ ಸಮಿತಿಯು (ಪಿಎಸಿ) ಪರಿಶೀಲಿಸಿದೆ ಮತ್ತು ಪಾರ್ಲಿಮೆಂಟ್‌ನಲ್ಲಿ ಅದರ ಸಾರಾಂಶವು ಮಂಡನೆಯಾಗುವುದರ ಮೂಲಕ ಸಾರ್ವಜನಿಕರಿಗೂ ವಿಷಯ ತಿಳಿಯುತ್ತದೆ.

ಇದು ಹೊರಬಿದ್ದ ಕೂಡಲೇ ಸಂಸತ್ತಿನ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ರಾಹುಲ್‌ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದರು. ಅಂತಹದೊಂದು ವರದಿಯೇ ತಮ್ಮ ಸಮಿತಿಯ ಮುಂದೆ ಬಂದಿಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದ್ದರು.

ಅಷ್ಟೇ ಅಲ್ಲದೇ, ಸಿಎಜಿಯನ್ನು ಮತ್ತು ಸುಪ್ರೀಂಕೋರ್ಟಿಗೆ ಈ ಸುಳ್ಳು ಹೇಳಿದ ಅಟಾರ್ನಿ ಜನರಲ್‌ರನ್ನು ಸಮಿತಿಯ ಮುಂದೆ ಕರೆಸಲು, ಇತರ ಸದಸ್ಯರಿಗೂ ಕೇಳುತ್ತೇನೆ ಎಂದು ಖರ್ಗೆ ಗುಡುಗಿದ್ದರು. ಅಲ್ಲಿಗೆ ತಾವು ಸೀಲ್ಡ್ ಕವರ್‌ನಲ್ಲಿ ಸುಪ್ರೀಂಕೋರ್ಟಿಗೆ ಹೇಳಿದ್ದ ಸುಳ್ಳನ್ನು ಆದೇಶದಲ್ಲೂ ಕೋರ್ಟು ಬಿಚ್ಚಿಟ್ಟದ್ದರಿಂದ ಸಿಕ್ಕಿ ಹಾಕಿಕೊಂಡ ಕೇಂದ್ರ ಸರ್ಕಾರವು ಅಡಕತ್ತರಿಗೆ ಸಿಕ್ಕಿಬಿಟ್ಟಿತು. ಇನ್ನು ತಾನು ಪೂರ್ಣ ಸಿಕ್ಕಿಹಾಕಿಕೊಳ್ಳುತ್ತೇನೆ ಎಂದು ಅದಕ್ಕೆ ಗೊತ್ತಾಯಿತು.

ಹಾಗಾಗಿ ಇಂದು ಸ್ವತಃ ತಾನೇ ಅಫಿಡವಿಟ್ ಸಲ್ಲಿಸಿತು. ಅದರಲ್ಲಿ `ತಾನು ನೀಡಿದ ಮಾಹಿತಿಯಲ್ಲಿ ಇಂಗ್ಲಿಷಿನಲ್ಲಿ ವಿವರಿಸಿದ ವಾಕ್ಯಗಳಲ್ಲಿ ತಪ್ಪು ಅರ್ಥ ಉಂಟಾಗಿರಬಹುದು. ಸಾಮಾನ್ಯವಾಗಿ ಸಿಎಜಿ ವರದಿಯನ್ನು ಪಿಎಸಿ ಪರಿಶೀಲಿಸುತ್ತದೆ ಮತ್ತು ಸಾಮಾನ್ಯವಾಗಿ ಅದರ ಸಾರಾಂಶವು ಸಂಸತ್ತಿನಲ್ಲಿ ಮಂಡನೆಯಾಗುತ್ತದೆ ಎಂಬ ಅರ್ಥದಲ್ಲಿ ಹೇಳಿದ್ದೇ ಹೊರತು, ಈಗಾಗಲೇ ಸಲ್ಲಿಸಲಾಗಿದೆ ಎಂದಲ್ಲ’ ಎಂದು ಹೇಳಿಕೊಂಡಿದೆ.

ಅಂದರೆ ವಿಚಾರ ಸ್ಪಷ್ಟವಾಗಿದೆ. ಬಿಜೆಪಿ ಪಕ್ಷವು, ಈ ಡೀಲ್‌ನಲ್ಲಿ ನೇರವಾಗಿ ಭಾಗಿಯಾದ ನರೇಂದ್ರ ಮೋದಿಯವರನ್ನು ಬಚಾವು ಮಾಡಲು ಒಂದಾದ ಮೇಲೆ ಒಂದರಂತೆ ಸುಳ್ಳುಗಳನ್ನು ಹೇಳತೊಡಗಿದೆ. ಪ್ರತೀ ಸುಳ್ಳೂ ಅನುಮಾನಗಳನ್ನು ಗಟ್ಟಿ ಮಾಡಿದೆಯೇ ಹೊರತು ಎಲ್ಲಿಯೂ ಅನುಮಾನ ನಿವಾರಣೆಯಾಗುವಂತೆ ಆಗಿಲ್ಲ.

ಹೀಗಾಗಿ
1. ಸುದೀರ್ಘ ಇತಿಹಾಸವುಳ್ಳ ಎಚ್‌ಎಎಲ್‌ನಿಂದ ಕಿತ್ತುಕೊಂಡು ಅನಿಲ್ ಅಂಬಾನಿಗೆ ಕೊಟ್ಟಿದ್ದೇಕೆ?
2. ಅದನ್ನು ನೀಡಬೇಕಾಗಿ ಬಂದಿದ್ದು ಭಾರತದ ಪ್ರಧಾನಿಯ ಕೋರಿಕೆಯ ಮೇರೆಗೆ ಎಂಬ ಹೇಳಿಕೆಯು ಫ್ರಾನ್ಸ್ನಿಂದ ಬಂದಿದ್ದನ್ನು ನೀವು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದೇಕೆ?
3. ಮೂರು ಪಟ್ಟು ಹೆಚ್ಚು ಬೆಲೆಗೆ ಕೊಂಡುಕೊಳ್ಳುತ್ತಿರುವುದೇಕೆ?
4. ಹಿಂದೆ ಭಾರತದಲ್ಲೇ ತಂತ್ರಜ್ಞಾನವನ್ನೂ ಪಡೆದುಕೊಂಡು ಮೇಕ್‌ಇನ್ ಇಂಡಿಯಾ ಮಾಡಲು ಆಗಿದ್ದ ಒಪ್ಪಂದ ಬಿಟ್ಟು ಈಗ ತಂತ್ರಜ್ಞಾನ ವರ್ಗಾವಣೆಯೂ ಇಲ್ಲದೇ ಹೋಗುವಂತಾಗಲು ಹೇಗೆ ಒಪ್ಪಿಕೊಂಡಿರಿ?
5. ರಕ್ಷಣಾ ಸಚಿವರನ್ನೂ ಒಳಗೊಂಡಂತೆ ಯಾರಿಗೂ ಗೊತ್ತಿಲ್ಲದ ವ್ಯವಹಾರವನ್ನು ಪ್ರಧಾನಿ ಕಾರ್ಯಾಲಯ ಮಾತ್ರ ದಿಢೀರ್ ಎಂದು ಮಾಡಿದ್ದು ಏಕೆ?

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಬೇಕೆಂದರೆ ಜಂಟಿ ಸಂಸದೀಯ ಸಮಿತಿಯ ತನಿಖೆ ಅಥವಾ ಸುಪ್ರೀಂಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಯಬೇಕಲ್ಲದೇ ಬೇರೆ ದಾರಿಯಿಲ್ಲ.

ಅದನ್ನು ಬಿಟ್ಟು ಮತ್ತಷ್ಟು ಮುಚ್ಚಿ ಹಾಕಲು ಹೊರಟರೆ, ‘ಚೌಕೀದಾರ್ ಚೋರ್ ಹೈ’ ಮಾತು ನಿಜವೆಂದು ಜನರು ಹೆಚ್ಚೆಚ್ಚು ನಂಬುತ್ತಾ ಹೋಗುತ್ತಾರೆ. ಬಿಜೆಪಿಯು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಿ ಧೈರ್ಯವನ್ನು ಮೆರೆಯಬೇಕು. ಅದೊಂದೇ ಪರಿಹಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...