Homeರಾಜಕೀಯರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

ರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

- Advertisement -
- Advertisement -

ಬಹುಶಃ ಇದಕ್ಕಿಂತ ದೊಡ್ಡ ಹಗರಣ ಇತ್ತೀಚಿನ ದಿನಗಳಲ್ಲಿ ನಡೆದಿರಲಾರದು. ರಾಫೇಲ್ ಡೀಲ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರ ಪ್ರಯತ್ನಿಸಿದಂತೆಲ್ಲಾ, ಹೊಸ ಹೊಸ ಹಗರಣಗಳನ್ನೇ ಮಾಡುತ್ತಿದೆ. ಅದರಲ್ಲಿ ಅತ್ಯಂತ ಹೊಸ ಹಗರಣ ಹಿಂದೆಂದಿಗಿಂತಲೂ ಆಘಾತಕಾರಿಯಾದುದು. ಮೋದಿ ಸರ್ಕಾರವು ಹಸೀ ಹಸೀ ಸುಳ್ಳನ್ನು ಸುಪ್ರಿಂಕೋರ್ಟಿಗೇ ಹೇಳಲಾಗಿದೆ.

ಹೌದು, ಇಂದು ರಾಫೇಲ್ ವಿಚಾರದಲ್ಲಿ ಸುಪ್ರೀಂಕೋರ್ಟು ತೀರ್ಪು ಹೊರಬಿದ್ದ ನಂತರ ಚುನಾವಣಾ ಸೋಲಿನಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತು ಗೋದಿ ಮೀಡಿಯಾಗೆ ಇದ್ದಕ್ಕಿದ್ದಂತೆ ಭಾರೀ ಹುಮ್ಮಸ್ಸು ಬಂದಿತು. ಆದರೆ ಜಡ್ಜ್ಮೆಂಟ್ ಪ್ರತಿ ಹೊರಬಿದ್ದು ಅದನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಇನ್ನೊಂದು ಹಗರಣ ಹೊರಬಿದ್ದಿತು.

ಸುಪ್ರೀಂಕೋರ್ಟು ಹೇಳಿದ್ದು ಇಷ್ಟು. ಈ ವ್ಯವಹಾರದ ತಾಂತ್ರಿಕ ಅಂಶಗಳನ್ನು ನಿರ್ಧರಿಸುವುದು ನಮ್ಮ ಪರಿಣಿತಿಯ ವಿಚಾರ ಅಲ್ಲ; ಡಸಾಲ್ಟ್ & ರಿಲೆಯನ್ಸ್ ನಡುವೆ ಏನು ನಡೆದಿದೆ ಅದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ; ಇದರಲ್ಲಿ ಪ್ರತಿವಾದಿ (ನರೇಂದ್ರ ದಾಮೋದರದಾಸ್ ಮೋದಿ)ಯ ಪಾತ್ರದ ಬಗ್ಗೆ ಏನು ಹೇಳಲಾಗುತ್ತಿದೆ ಅದನ್ನು ಅವರು ನಿರಾಕರಿಸಿದ್ದಾರೆ. ಈ ವ್ಯವಹಾರವನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿಯೇ ಮಾಡಲಾಗಿದೆ. (ಈ ಕುರಿತು ತೀರ್ಪಿನ 21ನೇ ಪುಟದ 25ನೇ ಪಾಯಿಂಟ್‌ನಲ್ಲಿ ಹೇಳಲಾಗಿದೆ) ವ್ಯವಹಾರದ ದರಗಳ ಕುರಿತು ಕಂಟ್ರೋಲರ್ & ಆಡಿಟರ್ ಜನರಲ್ (ಸಿಎಜಿ) ಮುಂದೆ ಇಡಲಾಗಿದೆ ಮತ್ತು ಅದನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಪರಿಶೀಲಿಸಿದೆ. ಇವೆಲ್ಲಾ ಕಾರಣಗಳಿಂದ ಇದರಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ನ್ಯಾಯಾಲಯವು ಭಾವಿಸಿ ಈ ಪಿಟಿಷನ್‌ಅನ್ನು ವಜಾಗೊಳಿಸುತ್ತೇವೆ.

ಈ ಎಲ್ಲಾ ವ್ಯವಹಾರವು ಸೂಕ್ತ ಪ್ರಕ್ರಿಯೆಯನ್ನನುಸರಿಸಿಯೇ ನಡೆದಿದೆ ಎಂದು ಸುಪ್ರೀಂಕೋರ್ಟು ಭಾವಿಸಲು ಇದು ಮುಖ್ಯ ಕಾರಣಗಳಲ್ಲೊಂದಾಗಿದೆ.

(ತೀರ್ಪಿನ ಪ್ರತಿಯ ಈ ಭಾಗವನ್ನೂ ನೋಡಬಹುದು)

ಆದರೆ, ವಾಸ್ತವವೇನು?

ಕಾಕತಾಳೀಯವಾಗಿ, ಈ ತೀರ್ಪು ಬಂದ ದಿನವೇ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸಭೆ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ಅದರ ಅಧ್ಯಕ್ಷರು ಡೆಪ್ಯುಟಿ ಸಿಎಜಿಯನ್ನು ‘ನಮ್ಮ ಮುಂದಿಟ್ಟಿದ್ದ ಆ ವರದಿ ಯಾವುದು?’ ಎಂದು ಕೇಳಿದ್ದಾರೆ. ಅಂತಹ ಯಾವ ವರದಿಯೂ ಇಲ್ಲವೆಂದು ಅವರು ಉತ್ತರಿಸಿದ್ದಾರೆ. ಅಂದರೆ, ಸಿಎಜಿಯ ಮುಂದಾಗಲೀ ಪಿಎಸಿಯ ಮುಂದಾಗಲೀ ಅಂತಹ ಯಾವ ಮಾಹಿತಿಯನ್ನೂ ಕೊಟ್ಟೇ ಇಲ್ಲ. ಅಷ್ಟೂ ಸಾಲದೆಂಬಂತೆ ಅವೆಲ್ಲವನ್ನೂ ಮಾಡಿಯಾಗಿದೆಯೆಂದು ಸುಪ್ರೀಂಕೋರ್ಟಿಗೇ ಸುಳ್ಳು ಹೇಳಲಾಗಿದೆ.

ಖುದ್ದು ಪಿಎಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಪಕ್ಕದಲ್ಲೇ ಕೂರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿಯವರು ಇಂದು ಪತ್ರಿಕಾಗೋಷ್ಠಿ ನಡೆಸಿ ಇದೆಲ್ಲವನ್ನೂ ವಿವರಿಸಿದ್ದಾರೆ. (ಪತ್ರಿಕಾಗೋಷ್ಠಿಯ ವಿಡಿಯೋ ಇದರೊಂದಿಗಿದೆ, ನೋಡಬಹುದು)

ಹಾಗೆಯೇ ಸುಪ್ರೀಂಕೋರ್ಟಿನ ಅತ್ಯಂತ ಘನತೆವೆತ್ತ ನ್ಯಾಯವಾದಿಗಳಲ್ಲೊಬ್ಬರಾದ ಪ್ರಶಾಂತ್ ಭೂಷಣ್ ಏನು ಹೇಳಿದ್ದಾರೆಂಬುದರ ಕುರಿತೂ ಸದ್ಯದಲ್ಲೇ ವಿವರಗಳನ್ನು ನಿಮ್ಮ ಮುಂದಿಡಲಾಗುವುದು. ಎಲ್ಲಾ ವಿವರಗಳೂ ಈ ಸುದ್ದಿಯೊಂದಿಗೆ ಅಪ್‌ಡೇಟ್ ಆಗುತ್ತಿರುತ್ತದೆ, ಸರ್ಕಾರವು ಮತ್ತು ಸುಪ್ರೀಂಕೋರ್ಟು ನಂತರ ಏನೇನು ಹೇಳುತ್ತದೆ ಎಂಬ ವಿವರಗಳು ಇದರ ಜೊತೆಗೆ ಇರುತ್ತವೆ. ಆಗಿಂದಾಗ್ಗೆ ಈ ಪುಟವನ್ನು ನೀವು ನೋಡುತ್ತಿರಬಹುದು.

ಅದೇನೇ ಇರಲಿ, ಸುಪ್ರೀಂಕೋರ್ಟಿನ ತೀರ್ಪು ಬಂದು ಕ್ಲೀನ್‌ಚಿಟ್ ಸಿಕ್ಕಿತು ಎಂದು ಎಲ್ಲರೂ ಭಾವಿಸುತ್ತಿರುವಾಗ, ಅದು ಕ್ಲೀನ್‌ಚಿಟ್ ಅಲ್ಲ; ಪಾರ್ಲಿಮೆಂಟ್ ಸಮಿತಿಗೇ ವರದಿ ಕೊಟ್ಟಿದ್ದೇವೆಂದು ಸುಪ್ರೀಂಕೋರ್ಟಿಗೇ ಸ್ವತಃ ಕೇಂದ್ರ ಸರ್ಕಾರವೇ ಸುಳ್ಳು ಹೇಳಿದ ಪ್ರಕರಣ ಎಂದು ಬಿಚ್ಚಿಕೊಳ್ಳುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

ಈ ವಿಚಾರದಲ್ಲಿ ಹೊರಬರುವ, ಈ ವಾದಕ್ಕೆ ಪ್ರತಿಯಾಗಿ ಬರುವ ವಾದಗಳನ್ನೂ ನಿಮ್ಮ ಮುಂದಿಡುವ ಕೆಲಸವನ್ನು ಈ ಪುಟದಲ್ಲಿ ಮಾಡಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...