Homeರಾಜಕೀಯರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

ರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

- Advertisement -
- Advertisement -

ಬಹುಶಃ ಇದಕ್ಕಿಂತ ದೊಡ್ಡ ಹಗರಣ ಇತ್ತೀಚಿನ ದಿನಗಳಲ್ಲಿ ನಡೆದಿರಲಾರದು. ರಾಫೇಲ್ ಡೀಲ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರ ಪ್ರಯತ್ನಿಸಿದಂತೆಲ್ಲಾ, ಹೊಸ ಹೊಸ ಹಗರಣಗಳನ್ನೇ ಮಾಡುತ್ತಿದೆ. ಅದರಲ್ಲಿ ಅತ್ಯಂತ ಹೊಸ ಹಗರಣ ಹಿಂದೆಂದಿಗಿಂತಲೂ ಆಘಾತಕಾರಿಯಾದುದು. ಮೋದಿ ಸರ್ಕಾರವು ಹಸೀ ಹಸೀ ಸುಳ್ಳನ್ನು ಸುಪ್ರಿಂಕೋರ್ಟಿಗೇ ಹೇಳಲಾಗಿದೆ.

ಹೌದು, ಇಂದು ರಾಫೇಲ್ ವಿಚಾರದಲ್ಲಿ ಸುಪ್ರೀಂಕೋರ್ಟು ತೀರ್ಪು ಹೊರಬಿದ್ದ ನಂತರ ಚುನಾವಣಾ ಸೋಲಿನಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತು ಗೋದಿ ಮೀಡಿಯಾಗೆ ಇದ್ದಕ್ಕಿದ್ದಂತೆ ಭಾರೀ ಹುಮ್ಮಸ್ಸು ಬಂದಿತು. ಆದರೆ ಜಡ್ಜ್ಮೆಂಟ್ ಪ್ರತಿ ಹೊರಬಿದ್ದು ಅದನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಇನ್ನೊಂದು ಹಗರಣ ಹೊರಬಿದ್ದಿತು.

ಸುಪ್ರೀಂಕೋರ್ಟು ಹೇಳಿದ್ದು ಇಷ್ಟು. ಈ ವ್ಯವಹಾರದ ತಾಂತ್ರಿಕ ಅಂಶಗಳನ್ನು ನಿರ್ಧರಿಸುವುದು ನಮ್ಮ ಪರಿಣಿತಿಯ ವಿಚಾರ ಅಲ್ಲ; ಡಸಾಲ್ಟ್ & ರಿಲೆಯನ್ಸ್ ನಡುವೆ ಏನು ನಡೆದಿದೆ ಅದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ; ಇದರಲ್ಲಿ ಪ್ರತಿವಾದಿ (ನರೇಂದ್ರ ದಾಮೋದರದಾಸ್ ಮೋದಿ)ಯ ಪಾತ್ರದ ಬಗ್ಗೆ ಏನು ಹೇಳಲಾಗುತ್ತಿದೆ ಅದನ್ನು ಅವರು ನಿರಾಕರಿಸಿದ್ದಾರೆ. ಈ ವ್ಯವಹಾರವನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿಯೇ ಮಾಡಲಾಗಿದೆ. (ಈ ಕುರಿತು ತೀರ್ಪಿನ 21ನೇ ಪುಟದ 25ನೇ ಪಾಯಿಂಟ್‌ನಲ್ಲಿ ಹೇಳಲಾಗಿದೆ) ವ್ಯವಹಾರದ ದರಗಳ ಕುರಿತು ಕಂಟ್ರೋಲರ್ & ಆಡಿಟರ್ ಜನರಲ್ (ಸಿಎಜಿ) ಮುಂದೆ ಇಡಲಾಗಿದೆ ಮತ್ತು ಅದನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಪರಿಶೀಲಿಸಿದೆ. ಇವೆಲ್ಲಾ ಕಾರಣಗಳಿಂದ ಇದರಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ನ್ಯಾಯಾಲಯವು ಭಾವಿಸಿ ಈ ಪಿಟಿಷನ್‌ಅನ್ನು ವಜಾಗೊಳಿಸುತ್ತೇವೆ.

ಈ ಎಲ್ಲಾ ವ್ಯವಹಾರವು ಸೂಕ್ತ ಪ್ರಕ್ರಿಯೆಯನ್ನನುಸರಿಸಿಯೇ ನಡೆದಿದೆ ಎಂದು ಸುಪ್ರೀಂಕೋರ್ಟು ಭಾವಿಸಲು ಇದು ಮುಖ್ಯ ಕಾರಣಗಳಲ್ಲೊಂದಾಗಿದೆ.

(ತೀರ್ಪಿನ ಪ್ರತಿಯ ಈ ಭಾಗವನ್ನೂ ನೋಡಬಹುದು)

ಆದರೆ, ವಾಸ್ತವವೇನು?

ಕಾಕತಾಳೀಯವಾಗಿ, ಈ ತೀರ್ಪು ಬಂದ ದಿನವೇ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸಭೆ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ಅದರ ಅಧ್ಯಕ್ಷರು ಡೆಪ್ಯುಟಿ ಸಿಎಜಿಯನ್ನು ‘ನಮ್ಮ ಮುಂದಿಟ್ಟಿದ್ದ ಆ ವರದಿ ಯಾವುದು?’ ಎಂದು ಕೇಳಿದ್ದಾರೆ. ಅಂತಹ ಯಾವ ವರದಿಯೂ ಇಲ್ಲವೆಂದು ಅವರು ಉತ್ತರಿಸಿದ್ದಾರೆ. ಅಂದರೆ, ಸಿಎಜಿಯ ಮುಂದಾಗಲೀ ಪಿಎಸಿಯ ಮುಂದಾಗಲೀ ಅಂತಹ ಯಾವ ಮಾಹಿತಿಯನ್ನೂ ಕೊಟ್ಟೇ ಇಲ್ಲ. ಅಷ್ಟೂ ಸಾಲದೆಂಬಂತೆ ಅವೆಲ್ಲವನ್ನೂ ಮಾಡಿಯಾಗಿದೆಯೆಂದು ಸುಪ್ರೀಂಕೋರ್ಟಿಗೇ ಸುಳ್ಳು ಹೇಳಲಾಗಿದೆ.

ಖುದ್ದು ಪಿಎಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಪಕ್ಕದಲ್ಲೇ ಕೂರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿಯವರು ಇಂದು ಪತ್ರಿಕಾಗೋಷ್ಠಿ ನಡೆಸಿ ಇದೆಲ್ಲವನ್ನೂ ವಿವರಿಸಿದ್ದಾರೆ. (ಪತ್ರಿಕಾಗೋಷ್ಠಿಯ ವಿಡಿಯೋ ಇದರೊಂದಿಗಿದೆ, ನೋಡಬಹುದು)

ಹಾಗೆಯೇ ಸುಪ್ರೀಂಕೋರ್ಟಿನ ಅತ್ಯಂತ ಘನತೆವೆತ್ತ ನ್ಯಾಯವಾದಿಗಳಲ್ಲೊಬ್ಬರಾದ ಪ್ರಶಾಂತ್ ಭೂಷಣ್ ಏನು ಹೇಳಿದ್ದಾರೆಂಬುದರ ಕುರಿತೂ ಸದ್ಯದಲ್ಲೇ ವಿವರಗಳನ್ನು ನಿಮ್ಮ ಮುಂದಿಡಲಾಗುವುದು. ಎಲ್ಲಾ ವಿವರಗಳೂ ಈ ಸುದ್ದಿಯೊಂದಿಗೆ ಅಪ್‌ಡೇಟ್ ಆಗುತ್ತಿರುತ್ತದೆ, ಸರ್ಕಾರವು ಮತ್ತು ಸುಪ್ರೀಂಕೋರ್ಟು ನಂತರ ಏನೇನು ಹೇಳುತ್ತದೆ ಎಂಬ ವಿವರಗಳು ಇದರ ಜೊತೆಗೆ ಇರುತ್ತವೆ. ಆಗಿಂದಾಗ್ಗೆ ಈ ಪುಟವನ್ನು ನೀವು ನೋಡುತ್ತಿರಬಹುದು.

ಅದೇನೇ ಇರಲಿ, ಸುಪ್ರೀಂಕೋರ್ಟಿನ ತೀರ್ಪು ಬಂದು ಕ್ಲೀನ್‌ಚಿಟ್ ಸಿಕ್ಕಿತು ಎಂದು ಎಲ್ಲರೂ ಭಾವಿಸುತ್ತಿರುವಾಗ, ಅದು ಕ್ಲೀನ್‌ಚಿಟ್ ಅಲ್ಲ; ಪಾರ್ಲಿಮೆಂಟ್ ಸಮಿತಿಗೇ ವರದಿ ಕೊಟ್ಟಿದ್ದೇವೆಂದು ಸುಪ್ರೀಂಕೋರ್ಟಿಗೇ ಸ್ವತಃ ಕೇಂದ್ರ ಸರ್ಕಾರವೇ ಸುಳ್ಳು ಹೇಳಿದ ಪ್ರಕರಣ ಎಂದು ಬಿಚ್ಚಿಕೊಳ್ಳುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

ಈ ವಿಚಾರದಲ್ಲಿ ಹೊರಬರುವ, ಈ ವಾದಕ್ಕೆ ಪ್ರತಿಯಾಗಿ ಬರುವ ವಾದಗಳನ್ನೂ ನಿಮ್ಮ ಮುಂದಿಡುವ ಕೆಲಸವನ್ನು ಈ ಪುಟದಲ್ಲಿ ಮಾಡಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...