Homeರಾಜಕೀಯರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

ರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

- Advertisement -
- Advertisement -

ಬಹುಶಃ ಇದಕ್ಕಿಂತ ದೊಡ್ಡ ಹಗರಣ ಇತ್ತೀಚಿನ ದಿನಗಳಲ್ಲಿ ನಡೆದಿರಲಾರದು. ರಾಫೇಲ್ ಡೀಲ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರ ಪ್ರಯತ್ನಿಸಿದಂತೆಲ್ಲಾ, ಹೊಸ ಹೊಸ ಹಗರಣಗಳನ್ನೇ ಮಾಡುತ್ತಿದೆ. ಅದರಲ್ಲಿ ಅತ್ಯಂತ ಹೊಸ ಹಗರಣ ಹಿಂದೆಂದಿಗಿಂತಲೂ ಆಘಾತಕಾರಿಯಾದುದು. ಮೋದಿ ಸರ್ಕಾರವು ಹಸೀ ಹಸೀ ಸುಳ್ಳನ್ನು ಸುಪ್ರಿಂಕೋರ್ಟಿಗೇ ಹೇಳಲಾಗಿದೆ.

ಹೌದು, ಇಂದು ರಾಫೇಲ್ ವಿಚಾರದಲ್ಲಿ ಸುಪ್ರೀಂಕೋರ್ಟು ತೀರ್ಪು ಹೊರಬಿದ್ದ ನಂತರ ಚುನಾವಣಾ ಸೋಲಿನಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತು ಗೋದಿ ಮೀಡಿಯಾಗೆ ಇದ್ದಕ್ಕಿದ್ದಂತೆ ಭಾರೀ ಹುಮ್ಮಸ್ಸು ಬಂದಿತು. ಆದರೆ ಜಡ್ಜ್ಮೆಂಟ್ ಪ್ರತಿ ಹೊರಬಿದ್ದು ಅದನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಇನ್ನೊಂದು ಹಗರಣ ಹೊರಬಿದ್ದಿತು.

ಸುಪ್ರೀಂಕೋರ್ಟು ಹೇಳಿದ್ದು ಇಷ್ಟು. ಈ ವ್ಯವಹಾರದ ತಾಂತ್ರಿಕ ಅಂಶಗಳನ್ನು ನಿರ್ಧರಿಸುವುದು ನಮ್ಮ ಪರಿಣಿತಿಯ ವಿಚಾರ ಅಲ್ಲ; ಡಸಾಲ್ಟ್ & ರಿಲೆಯನ್ಸ್ ನಡುವೆ ಏನು ನಡೆದಿದೆ ಅದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ; ಇದರಲ್ಲಿ ಪ್ರತಿವಾದಿ (ನರೇಂದ್ರ ದಾಮೋದರದಾಸ್ ಮೋದಿ)ಯ ಪಾತ್ರದ ಬಗ್ಗೆ ಏನು ಹೇಳಲಾಗುತ್ತಿದೆ ಅದನ್ನು ಅವರು ನಿರಾಕರಿಸಿದ್ದಾರೆ. ಈ ವ್ಯವಹಾರವನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿಯೇ ಮಾಡಲಾಗಿದೆ. (ಈ ಕುರಿತು ತೀರ್ಪಿನ 21ನೇ ಪುಟದ 25ನೇ ಪಾಯಿಂಟ್‌ನಲ್ಲಿ ಹೇಳಲಾಗಿದೆ) ವ್ಯವಹಾರದ ದರಗಳ ಕುರಿತು ಕಂಟ್ರೋಲರ್ & ಆಡಿಟರ್ ಜನರಲ್ (ಸಿಎಜಿ) ಮುಂದೆ ಇಡಲಾಗಿದೆ ಮತ್ತು ಅದನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಪರಿಶೀಲಿಸಿದೆ. ಇವೆಲ್ಲಾ ಕಾರಣಗಳಿಂದ ಇದರಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ನ್ಯಾಯಾಲಯವು ಭಾವಿಸಿ ಈ ಪಿಟಿಷನ್‌ಅನ್ನು ವಜಾಗೊಳಿಸುತ್ತೇವೆ.

ಈ ಎಲ್ಲಾ ವ್ಯವಹಾರವು ಸೂಕ್ತ ಪ್ರಕ್ರಿಯೆಯನ್ನನುಸರಿಸಿಯೇ ನಡೆದಿದೆ ಎಂದು ಸುಪ್ರೀಂಕೋರ್ಟು ಭಾವಿಸಲು ಇದು ಮುಖ್ಯ ಕಾರಣಗಳಲ್ಲೊಂದಾಗಿದೆ.

(ತೀರ್ಪಿನ ಪ್ರತಿಯ ಈ ಭಾಗವನ್ನೂ ನೋಡಬಹುದು)

ಆದರೆ, ವಾಸ್ತವವೇನು?

ಕಾಕತಾಳೀಯವಾಗಿ, ಈ ತೀರ್ಪು ಬಂದ ದಿನವೇ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸಭೆ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ಅದರ ಅಧ್ಯಕ್ಷರು ಡೆಪ್ಯುಟಿ ಸಿಎಜಿಯನ್ನು ‘ನಮ್ಮ ಮುಂದಿಟ್ಟಿದ್ದ ಆ ವರದಿ ಯಾವುದು?’ ಎಂದು ಕೇಳಿದ್ದಾರೆ. ಅಂತಹ ಯಾವ ವರದಿಯೂ ಇಲ್ಲವೆಂದು ಅವರು ಉತ್ತರಿಸಿದ್ದಾರೆ. ಅಂದರೆ, ಸಿಎಜಿಯ ಮುಂದಾಗಲೀ ಪಿಎಸಿಯ ಮುಂದಾಗಲೀ ಅಂತಹ ಯಾವ ಮಾಹಿತಿಯನ್ನೂ ಕೊಟ್ಟೇ ಇಲ್ಲ. ಅಷ್ಟೂ ಸಾಲದೆಂಬಂತೆ ಅವೆಲ್ಲವನ್ನೂ ಮಾಡಿಯಾಗಿದೆಯೆಂದು ಸುಪ್ರೀಂಕೋರ್ಟಿಗೇ ಸುಳ್ಳು ಹೇಳಲಾಗಿದೆ.

ಖುದ್ದು ಪಿಎಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಪಕ್ಕದಲ್ಲೇ ಕೂರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿಯವರು ಇಂದು ಪತ್ರಿಕಾಗೋಷ್ಠಿ ನಡೆಸಿ ಇದೆಲ್ಲವನ್ನೂ ವಿವರಿಸಿದ್ದಾರೆ. (ಪತ್ರಿಕಾಗೋಷ್ಠಿಯ ವಿಡಿಯೋ ಇದರೊಂದಿಗಿದೆ, ನೋಡಬಹುದು)

ಹಾಗೆಯೇ ಸುಪ್ರೀಂಕೋರ್ಟಿನ ಅತ್ಯಂತ ಘನತೆವೆತ್ತ ನ್ಯಾಯವಾದಿಗಳಲ್ಲೊಬ್ಬರಾದ ಪ್ರಶಾಂತ್ ಭೂಷಣ್ ಏನು ಹೇಳಿದ್ದಾರೆಂಬುದರ ಕುರಿತೂ ಸದ್ಯದಲ್ಲೇ ವಿವರಗಳನ್ನು ನಿಮ್ಮ ಮುಂದಿಡಲಾಗುವುದು. ಎಲ್ಲಾ ವಿವರಗಳೂ ಈ ಸುದ್ದಿಯೊಂದಿಗೆ ಅಪ್‌ಡೇಟ್ ಆಗುತ್ತಿರುತ್ತದೆ, ಸರ್ಕಾರವು ಮತ್ತು ಸುಪ್ರೀಂಕೋರ್ಟು ನಂತರ ಏನೇನು ಹೇಳುತ್ತದೆ ಎಂಬ ವಿವರಗಳು ಇದರ ಜೊತೆಗೆ ಇರುತ್ತವೆ. ಆಗಿಂದಾಗ್ಗೆ ಈ ಪುಟವನ್ನು ನೀವು ನೋಡುತ್ತಿರಬಹುದು.

ಅದೇನೇ ಇರಲಿ, ಸುಪ್ರೀಂಕೋರ್ಟಿನ ತೀರ್ಪು ಬಂದು ಕ್ಲೀನ್‌ಚಿಟ್ ಸಿಕ್ಕಿತು ಎಂದು ಎಲ್ಲರೂ ಭಾವಿಸುತ್ತಿರುವಾಗ, ಅದು ಕ್ಲೀನ್‌ಚಿಟ್ ಅಲ್ಲ; ಪಾರ್ಲಿಮೆಂಟ್ ಸಮಿತಿಗೇ ವರದಿ ಕೊಟ್ಟಿದ್ದೇವೆಂದು ಸುಪ್ರೀಂಕೋರ್ಟಿಗೇ ಸ್ವತಃ ಕೇಂದ್ರ ಸರ್ಕಾರವೇ ಸುಳ್ಳು ಹೇಳಿದ ಪ್ರಕರಣ ಎಂದು ಬಿಚ್ಚಿಕೊಳ್ಳುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

ಈ ವಿಚಾರದಲ್ಲಿ ಹೊರಬರುವ, ಈ ವಾದಕ್ಕೆ ಪ್ರತಿಯಾಗಿ ಬರುವ ವಾದಗಳನ್ನೂ ನಿಮ್ಮ ಮುಂದಿಡುವ ಕೆಲಸವನ್ನು ಈ ಪುಟದಲ್ಲಿ ಮಾಡಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...