Homeಅಂಕಣಗಳುರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

ರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

- Advertisement -
- Advertisement -

ಎಚ್.ಎಸ್.ದೊರೆಸ್ವಾಮಿ |

ಬಿಜೆಪಿಯ ಬತ್ತಳಿಕೆಯಲ್ಲಿದ್ದ ಎಲ್ಲಾ ಆಯುಧಗಳು ಠುಸ್ಸೆಂದಿವೆ. ಅದರಿಂದ ಮಧ್ಯಪ್ರದೇಶ, ರಾಜಸ್ಥಾನ ಶಾಸನಸಭೆ ಚುನಾವಣೆಗಳನ್ನು ಎದುರಿಸಲು ಬಿಜೆಪಿಗೆ ನಡುಕ ಹುಟ್ಟಿದೆ. ರಫೇಲ್ ಡೀಲ್, ನೋಟುಗಳ ಅಮಾನ್ಯೀಕರಣ, ಸ್ವಚ್ಛ ಭಾರತ, ಜನರ ಖಾತೆಗೆ ಹದಿನೈದು ಲಕ್ಷ ರೂಪಾಯಿ ಹಾಕುವುದು ಮುಂತಾದ ಮೋದಿಯ ಎಲ್ಲಾ ತಂತ್ರಗಾರಿಕೆಯೂ ವಿಫಲಗೊಂಡು ಮೋದಿ, ಷಾಗಳು ತತ್ತರಿಸ ಹತ್ತಿದ್ದಾರೆ. ಸೀಮಾಂದ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯುಡು ಎಲ್ಲ ವಿರೋಧ ಪಕ್ಷಗಳನ್ನು ಒಂದುಗೂಡಿಸಿ ಲೋಕಸಭೆಯ ಚುನಾವಣೆಯನ್ನು ಎದುರಿಸಲು ಭಾರಿ ಪ್ರಯತ್ನ ಮಾಡುತ್ತಿರುವುದೂ ಬಿಜೆಪಿಗೆ ಭಾರಿ ತಲೆನೋವಾಗಿದೆ. ಆದ್ದರಿಂದ ಮೋದಿ, ಷಾಗಳು ಚುನಾವಣೆ ಎದುರಿಸಲು ಹೊಸತಂತ್ರ ರೂಪಿಸಲು ಹೆಣಗುತ್ತಿದ್ದಾರೆ.

ಅವರಿಗೆ ರಾಮಚಂದ್ರ ಭೂಮಿಯ ನೆನಪಾಗಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಕೂಡಲೇ ಕಟ್ಟುವ ಮಾತನ್ನಾರಂಭಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಮುಂತಾದ ಹಿಂದೂ ಮತಾಂಧ ಸಂಸ್ಥೆಗಳ ನೆರವಂತೂ ಬಿಜೆಪಿಗೆ ಇದ್ದೇ ಇದೆ. ಆರೆಸ್ಸೆಸ್ ಏರ್ಪಡಿಸಿದ್ದ ಬೈಠಕ್‍ಗೆ ಬಿಜೆಪಿ ಅಧ್ಯಕ್ಷ ಷಾ ಹೋಗಿ ಅಯೋಧ್ಯೆಯಲ್ಲಿ ಒಂದು ಗದ್ದಲ ಎಬ್ಬಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲೇಬೇಕೆಂಬ ಉದ್ದೇಶ ಬಿಜೆಪಿಗಂತೂ ಇಲ್ಲ. ರಾಮಮಂದಿರ ನಿರ್ಮಾಣದ ಪ್ರಶ್ನೆಯನ್ನು ಜೀವಂತ ಇಟ್ಟು ಮತ ಕೀಳುವ ತಂತ್ರಗಾರಿಕೆ ಬಿಜೆಪಿಯದ್ದು. ಒಂದೊಮ್ಮೆ ರಾಮಚಂದ್ರನ ದೇವಾಲಯವನ್ನು ಕಟ್ಟಿಬಿಟ್ಟರೆ ಚುನಾವಣೆ ಎದುರಾದಾಗ ಅಯೋಧ್ಯೆ ಟ್ರಂಪ್‍ಕಾರ್ಡ್ ಬಳಸಲು ಎಲ್ಲಿ ಸಾಧ್ಯವಾದೀತು? ರಾಮ ಮಂದಿರದ ನೆಪದಲ್ಲಿ ಹಿಂದೂಗಳ ಮತಗಳನ್ನು ಕೀಳುತ್ತಾ ಹೋಗುವುದು ಬಿಜೆಪಿಯ ಹುನ್ನಾರ. ಇದಕ್ಕಾಗಿ ಅಯೋಧ್ಯೆಯಲ್ಲಿ ಒಂದು ಲಕ್ಷ ಹಿಂದೂಗಳ ಸಮಾವೇಶವನ್ನು ನಡೆಸಿದ್ದಾರೆ. ಮೋದಿಗೆ ಸಾಥ್ ಕೊಡಲು ಉತ್ತರ ಪ್ರದೇಶದ ಸನ್ಯಾಸದ ಛದ್ಮ ವೇಷಧಾರಿ ಮುಖ್ಯಮಂತ್ರಿ ಆದಿತ್ಯನಾಥ್ ಇದ್ದೇ ಇದ್ದಾನೆ. ಉತ್ತರಪ್ರದೇಶ ಸರ್ಕಾರ ಈ ಮಾರೀಚನ ಕೈಯಲ್ಲಿರುವುದರಿಂದ ಬಿಜೆಪಿ ರಕ್ಷಣೆಗೆ ಬೇಕಾದ ಎಲ್ಲ ಕ್ರಮಗಳೂ ಸುಲಭ. ಅಯೋಧ್ಯೆಯಲ್ಲಿ ತಲೆತಲಾಂತರದಿಂದ ನೆಲೆಸಿರುವ ಮುಸ್ಲಿಂ ಜನಾಂಗಕ್ಕೆ ತಮಗೇನು ಕೇಡು ಕಾದಿದೆಯೋ ಎಂಬ ಆತಂಕ ಉಂಟಾಗಿದೆ. ಈ ಹಿಂದೂ ಮತಾಂಧರ ಸಮಾವೇಶದಲ್ಲಿ ಎಷ್ಟು ಹೆಣಗಳು ಬೀಳುವುದೋ ಎಂಬ ಆತಂಕ ಅಲ್ಲಿಯ ಮಹಮದೀಯರದಾಗಿದೆ. ಆದರೂ ಸಾಮೂಹಿಕವಾಗಿ ಸಮಾವೇಶ ನಡೆಯುವ ಕಾಲದಲ್ಲಿ ಅಯೋಧ್ಯೆ ಬಿಟ್ಟುಹೋಗುವುದಾಗಿ ಘೋಷಿಸಿದ್ದಾರೆ.

ಅಯೋಧ್ಯೆಯಲ್ಲಿ ಅನೇಕ ಕಾಲದಿಂದ ಹಿಂದೂ ಮುಸ್ಲಿಮರು ಅನ್ಯೋನ್ಯವಾಗಿ ಬಾಳುತ್ತಿದ್ದಾರೆ. ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಅಡ್ವಾಣಿಯವರ ನೇತೃತ್ವದಲ್ಲಿ ಕರಸೇವಕರು ಕೆಡಿಸಿದ ಸಂದರ್ಭ ಹೊರತುಪಡಿಸಿ, ಅದಕ್ಕೆ ಹಿಂದಿನ ದಿನಗಳಲ್ಲಾಗಲಿ, ಅನಂತರದ ದಿನಗಳಲ್ಲಾಗಲಿ ಅಯೋಧ್ಯೆಯಲ್ಲಿ ಕೋಮುಗಲಭೆ ಆಗಿಲ್ಲ. ಲೋಕಸಭೆ ಚುನಾವಣೆಯ ನಿಮಿತ್ತ ಈಗ ಮತ್ತೆ ಅಯೋಧ್ಯೆಯಲ್ಲಿ ಗದ್ದಲ ಎಬ್ಬಿಸಿ ಗೊಂದಲ ಉಂಟುಮಾಡಿ ಚುನಾವಣೆಯಲ್ಲಿ ಗೆದ್ದು ಬರುವ ಸಂಚನ್ನು ರೂಪಿಸಲಾಗಿದೆ.

ಎರಡನೆಯದಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇವಾಲಯದ ಸಮಸ್ಯೆಯೊಂದನ್ನು ಬಿಜೆಪಿ ಹುಟ್ಟುಹಾಕಿ ಅದರ ದುರ್ಲಾಭ ಪಡೆಯುವ ಹುನ್ನಾರವೂ ರೂಪುಗೊಳ್ಳುತ್ತಿದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಸ್ತ್ರೀಯರಿಗೂ ಪ್ರವೇಶ ಮಾಡುವ ಹಕ್ಕಿದೆಯೆಂದು ಸರ್ವೋಚ್ಛ ನ್ಯಾಯಾಲಯ ತೀರ್ಪಿತ್ತಿದೆ. ದೇವಸ್ಥಾನದ ಮುಖ್ಯ ಅರ್ಚಕರು, ಆಡಳಿತ ಮಂಡಳಿಯವರು ಸರ್ವೋಚ್ಛ ನ್ಯಾಯಾಲಯದ ಈ ತೀರ್ಪನ್ನು ಪರಿಶೀಲಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿವೆ. ಕೇರಳ ಸರ್ಕಾರಕ್ಕೆ ಈಗಂತೂ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸದೆ ಬೇರೆದಾರಿ ಇಲ್ಲವಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಈಗ ಮೋದಿಯೇ ಆದರ ಸರ್ವಾಧಿಕಾರಿ. ‘any stick is good to beat’ ಇದು ಮೋದಿಯ ನಿಲುವು. ಹೀಗಾಗಿ ಬೇಜವಾಬ್ದಾರಿಯ ಪ್ರಧಾನಮಂತ್ರಿ ಮೋದಿ ಚುನಾವಣೆ ದೃಷ್ಟಿಯಿಂದ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ನಡೆದುಕೊಳ್ಳಲು ಹೊರಟಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತಂದು ಕೇರಳೀಯ ಹಿಂದೂಗಳ ಮತಗಳನ್ನೆಲ್ಲ ತನ್ನದಾಗಿಸಿಕೊಳ್ಳುವ ಏಕೈಕ ಉದ್ದೇಶದಿಂದ ಅಯ್ಯಪ್ಪ ಭಕ್ತರನ್ನು ಕೇರಳ ಸರ್ಕಾರದ ವಿರುದ್ಧ ಎತ್ತಿ ಕಟ್ಟಲು ಸಂಚು ಮಾಡಲಾಗಿದೆ. ಮಹಿಳೆಯರಿಗೂ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ದೊರೆಯಬೇಕು ಎಂಬುದು ಹಿಂದೂಗಳೆಲ್ಲರ ಅಭಿಮತವಾಗಿದೆ. ಹಿಂದೂ ಮತಾಂಧರು ಇದನ್ನು ಅರ್ಥಮಾಡಿಕೊಳ್ಳಬೇಕು. ಚುನಾವಣೆ ಗೆಲ್ಲುವುದಕ್ಕೆ ಇದು ಸಾಧನ ಎಂದು ಸರ್ವಾಧಿಕಾರಿ ಮೋದಿ ನಂಬಿದ್ದರೆ, ಬಿಜೆಪಿಯೇತರ ಹಿಂದೂಗಳು ದೇವಾಲಯ ಪ್ರವೇಶದ ವಿಚಾರದಲ್ಲಿ ಸ್ತ್ರೀ-ಪುರುಷರ ಭೇದ ಮಾಡಬಾರದೆಂದು ಘೋಷಣೆ ಮಾಡುತ್ತಾರೆ.

ಮೋದಿ ಅಮಿತ್ ಷಾಗಳಿಗೆ ಅಂತಿಮ ತೀರ್ಪು ಬರುವವರೆಗೂ ಕಾಯುವ ವ್ಯವಧಾನ ಇಲ್ಲ. ಮತದಾರರ ಮನಸ್ಸುಗಳನ್ನು ಕೆಡಿಸಿ, ಮತ ಕಸಿಯುವ ಏಕೈಕ ಗುರಿಯನ್ನೇ ಹೊಂದಿರುವ ಅವರು ಕಿವಿಗೆ ಕಣಜ ಹೊಕ್ಕವರಂತೆ ನಡೆದುಕೊಳ್ಳುತ್ತಿದ್ದಾರೆ. ಶಬರಿಮಲೆಗೆ ಹರಕೆ ಹೊತ್ತು ಹೋಗುವ ಜನ ದಕ್ಷಿಣ ರಾಜ್ಯಗಳಲ್ಲಂತೂ ತುಂಬ ಇದ್ದಾರೆ. ಇವರಿರುವ ಸ್ಥಳಗಳಲ್ಲಿ ಅಯ್ಯಪ್ಪನ ದೇವಾಲಯಗಳನ್ನೂ ಕಟ್ಟಲಾಗಿದೆ. ಅದರ ಮೇಲ್ವಿಚಾರಣೆಗೆ ಇರುವವರನ್ನೆಲ್ಲಾ ಕರೆದು ಸಭೆ ಮಾಡಿ ಅಯ್ಯಪ್ಪ ಭಕ್ತರ ಎಲ್ಲ ಓಟನ್ನೂ ನಮಗೆ ಹಾಕಿಸಿ ಎಂದು ಕೇಳುವ ಪ್ರಸ್ತಾಪವನ್ನು ಮೋದಿ, ಷಾ ಜೋಡಿ ಈಗಾಗಲೇ ಮಾಡಿದೆ. ಈ ಮುಗ್ಧ ಭಕ್ತರ ಧಾರ್ಮಿಕ ಭಾವನೆಯನ್ನು ಕೆರಳಿಸಿ ಅವರಲ್ಲಿ ವಿಷ ತುಂಬಿ ಅವರ ಮತಗಳನ್ನೆಲ್ಲ ಕಸಿಯುವ ತಂತ್ರಗಾರಿಕೆಗೆ ಈಗಾಗಲೇ ಕೈಹಾಕಿದ್ದಾರೆ.

ತಮ್ಮದೇ ಪಕ್ಷ ಇಡೀ ದೇಶದಲ್ಲಿ ಮತ್ತು ಅಯೋಧ್ಯೆ ವಿವಾದವಿರುವ ಉತ್ತರಪ್ರದೇಶದಲ್ಲಿ ಅಧಿಕಾರದಲ್ಲಿದ್ದರು ಇಷ್ಟು ದಿನ ತೆಪ್ಪಗಿದ್ದು ಚುನಾವಣೆಯ ಹೊಸ್ತಿಲಲ್ಲಿ ಅಯೋಧ್ಯೆ, ಅಯ್ಯಪ್ಪರನ್ನು ಭಜಿಸುತ್ತಿರುವ ಬಿಜೆಪಿಯವರ ಈ ಎರಡೂ ಹುನ್ನಾರಗಳನ್ನು ಜನರು ಅರ್ಥಮಾಡಿಕೊಳ್ಳಬೇಕಿದೆ. ಮೋದಿ-ಷಾ-ಆರೆಸ್ಸೆಸ್, ಹೇಗೆ ತಮ್ಮ ಬೇಳೆ ಬೇಯಿಸಿಕೊಳ್ಳಲು ಹೇಗೆ ಈ ಮುಗ್ಧ ಜನರನ್ನು ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ನಮ್ಮೆಲ್ಲರ ಮೇಲಿರುವ ಹೊಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....