HomeUncategorizedಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ' ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

ಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ’ ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

- Advertisement -
- Advertisement -

ಕುಸಿಯುತ್ತಿರುವ ಆರ್ಥಿಕತೆ, ನಿರುದ್ಯೋಗ ಸೇರಿ ಹಲವು ಸಮಸ್ಯೆಗಳು ಅಭಿವೃದ್ಧಿಗೆ ಮಾರಕವಾಗಿವೆ. ಜಿಡಿಪಿ ಕುಸಿದಿದ್ದು, ಹಲವು ಕ್ಷೇತ್ರಗಳು ಲಾಭವಿಲ್ಲದೇ ನೆಲಕಚ್ಚುತ್ತಿವೆ. ವ್ಯಾಪಾರ, ಉದ್ಯಮ, ಮಾರುಕಟ್ಟೆ ಸ್ಥಿತಿಗತಿ ಮಂದಗತಿಯಲ್ಲಿ ಸಾಗಿದೆ. ಕಾರ್ಪೊರೇಟ್ ವಲಯ ಚೇತರಿಕೆ ಕಾಣುತ್ತಿಲ್ಲ. ಹೀಗಿರುವಾಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಾತ್ರ ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿದೆ. ಕಾಂಗ್ರೆಸ್ ಆಡಳಿತವಿದ್ದಾಗಲೂ ಆರ್ಥಿಕತೆ ಕುಸಿತವುಂಟಾಗಿತ್ತು. ಆದರೆ ಹಲವು ಸುಧಾರಿತ ಕ್ರಮಗಳ ಜಾರಿಯ ನಂತರ ಎಲ್ಲವೂ ಸರಿಹೋಗಿ, ಜನತೆಯ ಜೀವನ ಕ್ರಮ ಉತ್ತಮವಾಗಿತ್ತು. ಆದರೆ ಬಿಜೆಪಿ ಆಡಳಿತದಲ್ಲಿ ಹಾಗೇ ಆಗುತ್ತಿಲ್ಲ. ಬಿಜೆಪಿ ಸರ್ಕಾರ ಇತರೆ ಆರ್ಥಿಕ ತಜ್ಞರ ಸಲಹೆ ಪಡೆಯದೇ ತನ್ನ ಸೊಂಡಿಲಿನಿಂದ ತಾನೇ ನೀರು ಕುಡಿಯಲು ಹೊರಟಿರುವ ವಿಷಯ  ಗೌಪ್ಯವಾಗಿ ಉಳಿದಿಲ್ಲ. ಈಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್, ದಿ ಹಿಂದೂ ದಿನಪತ್ರಿಕೆಯ ಅಭಿಪ್ರಾಯ ಸಂಗತಿಗೆ ಬರೆದ ಲೇಖನ ಜಗಜ್ಜಾಹೀರುಗೊಳಿಸಿದೆ.

ಹೌದು… ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್ ಸುದೀರ್ಘ ಲೇಖನವೊಂದನ್ನು ಬರೆದಿದ್ದಾರೆ. ಅದರಲ್ಲಿ ಬಿಜೆಪಿ ಸರ್ಕಾರ, ಕಾಂಗ್ರೆಸ್ ಆಡಳಿತದಲ್ಲಿ ಅನುಸರಿಸಲಾಗಿದ್ದ ಆರ್ಥಿಕತೆ ಅಭಿವೃದ್ಧಿ ನಿಯಮಾವಳಿಗಳನ್ನು ಅನುಸರಿಸಬೇಕಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಬಿಜೆಪಿಯ ರಾಜಕೀಯ ಯೋಜನೆಗಳ ಐಕಾನ್ ಆಗಿ ಆಯ್ಕೆ ಮಾಡುತ್ತದೆ. ಹಾಗೆಯೇ ಆರ್ಥಿಕತೆಯ ವಾಸ್ತುಶಿಲ್ಪದ ಆಧಾರವಾಗಿ ನರಸಿಂಹರಾವ್ ಅವರ ದೃಢ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

60 ವರ್ಷದ ಪರಕಲಾ ಪ್ರಭಾಕರ್ ಅವರು, ಆಂಧ್ರಪ್ರದೇಶ ಸರ್ಕಾರದ ಮಾಜಿ ಸಂವಹನ ಸಲಹೆಗಾರರಾಗಿದ್ದರು. ನೆಹರು ಕಾಲದ ಆರ್ಥಿಕತೆಯ ವ್ಯವಸ್ಥೆ ಹಾಗೂ ಚೌಕಟ್ಟಿನ ಬಗ್ಗೆ ಬಿಜೆಪಿ ಸರ್ಕಾರ ಮಾಡುತ್ತಿರುವ ಟೀಕೆ, ವಿಮರ್ಶೆ, ವ್ಯಂಗ್ಯದ ವಿರುದ್ಧವೂ ಪ್ರಭಾಕರ್ ಮಾತನಾಡಿದ್ದಾರೆ. ಥಿಂಕ್-ತ್ಯಾಂಕ್, ತಪ್ಪನ್ನು ತಿದ್ದಿಕೊಂಡು, ಅರಿತು ನಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಆಧುನಿಕ ಮಾರುಕಟ್ಟೆ, ಜಾಗತೀಕರಣದ ಜಗತ್ತಲ್ಲಿ ಆಂತರಿಕವಾಗಿ ಸಮಗ್ರ ಮಾನವತಾವಾದದ ರಚನೆಯ ಮೇಲೆ ಪ್ರಾಯೋಗಿಕ ಉಪಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲ. ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಆರ್ಥಿಕ ವಾಸ್ತುಶಿಲ್ಪ ಮತ್ತು ಅಭಿವೃದ್ಧಿ ಅಜೆಂಡಾವನ್ನು ಸ್ವೀಕರಿಸಿ ಅದನ್ನು ಅನುಸರಿಸುವ ಮೂಲಕ ಬಿಜೆಪಿ ಸೀಮಿತ ಕಾರ್ಯಸೂಚಿಯಿಂದ ಬಿಡುಗಡೆ ಹೊಂದಬಹುದು ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದ ಪ್ರಸ್ತುತ ಬೃಹತ್ ಸಮಸ್ಯೆ ಆರ್ಥಿಕತೆ ಕುಸಿತದಿಂದ ಹೊರಬರಲು ಬಿಜೆಪಿ ತನ್ನಲ್ಲಿರುವ ಕೆಲವು ಚಿಂತನೆಗಳಲ್ಲಿನ ದೌರ್ಬಲ್ಯತೆಯನ್ನು ಸರಿಪಡಿಸಿಕೊಳ್ಳಬೇಕಿದೆ. ಸರ್ಕಾರ ಇನ್ನೂ ನಿರಾಕರಣೆ ಕ್ರಮವನ್ನೇ ಅನುಸರಿಸುತ್ತಿದೆ. ಸಾರ್ವಜನಿಕ ವಲಯಕ್ಕೆ ಹರಿಯುವ ದತ್ತಾಂಶವು ನಂತರದ ದಿನಗಳಲ್ಲಿ ಎದುರಾಗಬಹುದಾದ ಗಂಭೀರ ಸವಾಲು ದುಃಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಬರೆದಿದ್ದಾರೆ.

ಇತ್ತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿಯ ಲೇಖನದ ಬಗ್ಗೆ ಪ್ರತಿಕ್ರಿಯಿಸಿ, 2014 ರಿಂದ 2019 ರವರೆಗೆ ಬಿಜೆಪಿ ಸರ್ಕಾರ ಮೂಲಭೂತ ಸುಧಾರಣೆಗಳನ್ನು ಮಾಡಿದೆ. ಸರಕು ಮತ್ತು ಸೇವಾ ತೆರಿಗೆ, ಆಧಾರ್ ಮತ್ತು ಅಡುಗೆ ಅನಿಲ ವಿತರಣೆಯಂತಹ ಕ್ರಮಗಳ ಬಗ್ಗೆ ಪಟ್ಟಿ ಮಾಡಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...