HomeUncategorizedಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ' ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

ಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ’ ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

- Advertisement -
- Advertisement -

ಕುಸಿಯುತ್ತಿರುವ ಆರ್ಥಿಕತೆ, ನಿರುದ್ಯೋಗ ಸೇರಿ ಹಲವು ಸಮಸ್ಯೆಗಳು ಅಭಿವೃದ್ಧಿಗೆ ಮಾರಕವಾಗಿವೆ. ಜಿಡಿಪಿ ಕುಸಿದಿದ್ದು, ಹಲವು ಕ್ಷೇತ್ರಗಳು ಲಾಭವಿಲ್ಲದೇ ನೆಲಕಚ್ಚುತ್ತಿವೆ. ವ್ಯಾಪಾರ, ಉದ್ಯಮ, ಮಾರುಕಟ್ಟೆ ಸ್ಥಿತಿಗತಿ ಮಂದಗತಿಯಲ್ಲಿ ಸಾಗಿದೆ. ಕಾರ್ಪೊರೇಟ್ ವಲಯ ಚೇತರಿಕೆ ಕಾಣುತ್ತಿಲ್ಲ. ಹೀಗಿರುವಾಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಾತ್ರ ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿದೆ. ಕಾಂಗ್ರೆಸ್ ಆಡಳಿತವಿದ್ದಾಗಲೂ ಆರ್ಥಿಕತೆ ಕುಸಿತವುಂಟಾಗಿತ್ತು. ಆದರೆ ಹಲವು ಸುಧಾರಿತ ಕ್ರಮಗಳ ಜಾರಿಯ ನಂತರ ಎಲ್ಲವೂ ಸರಿಹೋಗಿ, ಜನತೆಯ ಜೀವನ ಕ್ರಮ ಉತ್ತಮವಾಗಿತ್ತು. ಆದರೆ ಬಿಜೆಪಿ ಆಡಳಿತದಲ್ಲಿ ಹಾಗೇ ಆಗುತ್ತಿಲ್ಲ. ಬಿಜೆಪಿ ಸರ್ಕಾರ ಇತರೆ ಆರ್ಥಿಕ ತಜ್ಞರ ಸಲಹೆ ಪಡೆಯದೇ ತನ್ನ ಸೊಂಡಿಲಿನಿಂದ ತಾನೇ ನೀರು ಕುಡಿಯಲು ಹೊರಟಿರುವ ವಿಷಯ  ಗೌಪ್ಯವಾಗಿ ಉಳಿದಿಲ್ಲ. ಈಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್, ದಿ ಹಿಂದೂ ದಿನಪತ್ರಿಕೆಯ ಅಭಿಪ್ರಾಯ ಸಂಗತಿಗೆ ಬರೆದ ಲೇಖನ ಜಗಜ್ಜಾಹೀರುಗೊಳಿಸಿದೆ.

ಹೌದು… ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್ ಸುದೀರ್ಘ ಲೇಖನವೊಂದನ್ನು ಬರೆದಿದ್ದಾರೆ. ಅದರಲ್ಲಿ ಬಿಜೆಪಿ ಸರ್ಕಾರ, ಕಾಂಗ್ರೆಸ್ ಆಡಳಿತದಲ್ಲಿ ಅನುಸರಿಸಲಾಗಿದ್ದ ಆರ್ಥಿಕತೆ ಅಭಿವೃದ್ಧಿ ನಿಯಮಾವಳಿಗಳನ್ನು ಅನುಸರಿಸಬೇಕಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಬಿಜೆಪಿಯ ರಾಜಕೀಯ ಯೋಜನೆಗಳ ಐಕಾನ್ ಆಗಿ ಆಯ್ಕೆ ಮಾಡುತ್ತದೆ. ಹಾಗೆಯೇ ಆರ್ಥಿಕತೆಯ ವಾಸ್ತುಶಿಲ್ಪದ ಆಧಾರವಾಗಿ ನರಸಿಂಹರಾವ್ ಅವರ ದೃಢ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

60 ವರ್ಷದ ಪರಕಲಾ ಪ್ರಭಾಕರ್ ಅವರು, ಆಂಧ್ರಪ್ರದೇಶ ಸರ್ಕಾರದ ಮಾಜಿ ಸಂವಹನ ಸಲಹೆಗಾರರಾಗಿದ್ದರು. ನೆಹರು ಕಾಲದ ಆರ್ಥಿಕತೆಯ ವ್ಯವಸ್ಥೆ ಹಾಗೂ ಚೌಕಟ್ಟಿನ ಬಗ್ಗೆ ಬಿಜೆಪಿ ಸರ್ಕಾರ ಮಾಡುತ್ತಿರುವ ಟೀಕೆ, ವಿಮರ್ಶೆ, ವ್ಯಂಗ್ಯದ ವಿರುದ್ಧವೂ ಪ್ರಭಾಕರ್ ಮಾತನಾಡಿದ್ದಾರೆ. ಥಿಂಕ್-ತ್ಯಾಂಕ್, ತಪ್ಪನ್ನು ತಿದ್ದಿಕೊಂಡು, ಅರಿತು ನಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಆಧುನಿಕ ಮಾರುಕಟ್ಟೆ, ಜಾಗತೀಕರಣದ ಜಗತ್ತಲ್ಲಿ ಆಂತರಿಕವಾಗಿ ಸಮಗ್ರ ಮಾನವತಾವಾದದ ರಚನೆಯ ಮೇಲೆ ಪ್ರಾಯೋಗಿಕ ಉಪಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲ. ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಆರ್ಥಿಕ ವಾಸ್ತುಶಿಲ್ಪ ಮತ್ತು ಅಭಿವೃದ್ಧಿ ಅಜೆಂಡಾವನ್ನು ಸ್ವೀಕರಿಸಿ ಅದನ್ನು ಅನುಸರಿಸುವ ಮೂಲಕ ಬಿಜೆಪಿ ಸೀಮಿತ ಕಾರ್ಯಸೂಚಿಯಿಂದ ಬಿಡುಗಡೆ ಹೊಂದಬಹುದು ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದ ಪ್ರಸ್ತುತ ಬೃಹತ್ ಸಮಸ್ಯೆ ಆರ್ಥಿಕತೆ ಕುಸಿತದಿಂದ ಹೊರಬರಲು ಬಿಜೆಪಿ ತನ್ನಲ್ಲಿರುವ ಕೆಲವು ಚಿಂತನೆಗಳಲ್ಲಿನ ದೌರ್ಬಲ್ಯತೆಯನ್ನು ಸರಿಪಡಿಸಿಕೊಳ್ಳಬೇಕಿದೆ. ಸರ್ಕಾರ ಇನ್ನೂ ನಿರಾಕರಣೆ ಕ್ರಮವನ್ನೇ ಅನುಸರಿಸುತ್ತಿದೆ. ಸಾರ್ವಜನಿಕ ವಲಯಕ್ಕೆ ಹರಿಯುವ ದತ್ತಾಂಶವು ನಂತರದ ದಿನಗಳಲ್ಲಿ ಎದುರಾಗಬಹುದಾದ ಗಂಭೀರ ಸವಾಲು ದುಃಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಬರೆದಿದ್ದಾರೆ.

ಇತ್ತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿಯ ಲೇಖನದ ಬಗ್ಗೆ ಪ್ರತಿಕ್ರಿಯಿಸಿ, 2014 ರಿಂದ 2019 ರವರೆಗೆ ಬಿಜೆಪಿ ಸರ್ಕಾರ ಮೂಲಭೂತ ಸುಧಾರಣೆಗಳನ್ನು ಮಾಡಿದೆ. ಸರಕು ಮತ್ತು ಸೇವಾ ತೆರಿಗೆ, ಆಧಾರ್ ಮತ್ತು ಅಡುಗೆ ಅನಿಲ ವಿತರಣೆಯಂತಹ ಕ್ರಮಗಳ ಬಗ್ಗೆ ಪಟ್ಟಿ ಮಾಡಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...