Homeಕರ್ನಾಟಕರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಜ್ಯಪಾಲರು, ಸುಪ್ರೀಂಕೋರ್ಟಿನ ಮಧ್ಯಪ್ರವೇಶದಿಂದ ಬಿಕ್ಕಟ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.

- Advertisement -
- Advertisement -

ರಾಜ್ಯ ಸರ್ಕಾರದ ಸುತ್ತ ನಡೆಯುತ್ತಿರುವ ಘಟನಾವಳಿಗಳು ರಾಷ್ಟ್ರಪತಿ ಆಡಳಿತದ ಕಡೆಗೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಎಷ್ಟು ಸಮಯ ತೆಗೆದುಕೊಂಡರೂ ಪರವಾಗಿಲ್ಲ, ಆ ನಂತರ ಬಿದ್ದು ಹೋಗುವ ಸಾಧ್ಯತೆಯೇ ಹೆಚ್ಚಿದೆ. ಆದರೆ, ಬಿಜೆಪಿಯವರು ಅಷ್ಟು ಹೊತ್ತು ಕಾಯಲು ಸಿದ್ಧವಿಲ್ಲ. ಹಾಗೆ ಆದರೆ, ಮುಂಬೈನಲ್ಲಿ ಇರುವ ಶಾಸಕರು ಮರಳಿ ತಮ್ಮ ಪಕ್ಷಗಳಿಗೆ ಹೋಗಿಬಿಡಬಹುದೆಂಬ ಆತಂಕ ಬಿಜೆಪಿಯದ್ದು. ಹಾಗಾಗಿ ರಾಜ್ಯಪಾಲರಿಗೆ ಪದೇ ಪದೇ ಮನವಿ ಕೊಟ್ಟು ಅವರಿಂದ ಸ್ಪೀಕರ್‍ಗೆ ಸಂದೇಶ ಬರುವಂತೆ ನೋಡಿಕೊಂಡರು. ಆದರೆ, ಸ್ಪೀಕರ್‍ಗೆ ಸದನವನ್ನು ಯಾವ ರೀತಿ ನಡೆಸಬೇಕೆಂಬ ನಿರ್ದೇಶನ ಕೊಡುವ ಅಧಿಕಾರ ರಾಜ್ಯಪಾಲರಿಗಿಲ್ಲವಾದ್ದರಿಂದ ಅದಕ್ಕೆ ಸ್ಪೀಕರ್ ಕವಡೆ ಕಾಸಿನ ಕಿಮ್ಮತ್ತು ನೀಡಲಿಲ್ಲ.

ಆ ನಂತರ ಸಭಾನಾಯಕ ಕುಮಾರಸ್ವಾಮಿಯವರಿಗೇ ರಾಜ್ಯಪಾಲರಿಂದ ಸಮಯ ನಿಗದಿ ಮಾಡಿಸಿದರು. ತಾಂತ್ರಿಕವಾಗಿ ಇದು ಸರಿಯಿತ್ತು. ಹಾಗಾಗಿ ಅದನ್ನು ಕುಮಾರಸ್ವಾಮಿಯವರು ಒಪ್ಪಲೇಬೇಕಾಗುತ್ತದೆ ಎಂಬ ನಿರೀಕ್ಷೆ ಎಲ್ಲರದ್ದಾಗಿತ್ತು. ಅದರ ಕುರಿತು ಮತ್ತೆ ರಾಜ್ಯಪಾಲರಿಗೆ ಪತ್ರ ಬರೆದರು. ಮಧ್ಯಾಹ್ನ 1.30ರ ಡೆಡ್‍ಲೈನ್‍ಗೆ ಡೋಂಟ್‍ಕೇರ್ ಎಂಬಂತೆ ಸದನದ ಕಲಾಪ ನಡೆಯಿತು. ಅಷ್ಟೇ ಅಲ್ಲದೇ ರಾಜ್ಯಪಾಲರು ಇಂತಹ ಡೆಡ್‍ಲೈನ್ ತಾಂತ್ರಿಕವಾಗಿಯೂ ತಪ್ಪಿರಬಹುದೇ ಎಂಬ ಅನುಮಾನ ಮೂಡುವ ರೀತಿಯಲ್ಲಿ ಹಲವು ಕೋರ್ಟ್ ಆದೇಶಗಳನ್ನು ಉಲ್ಲೇಖಿಸಲಾಯಿತು.

ಇಷ್ಟು ಹೊತ್ತಿಗೆ ರಾಜ್ಯಪಾಲರಿಂದ ಇನ್ನೊಂದು ಗಡುವು, ಸಂಜೆ 6 ಗಂಟೆ ನಿಗದಿಯಾಯಿತು. ಅದನ್ನು ಉಲ್ಲೇಖಿಸಿದ ಕುಮಾರಸ್ವಾಮಿಯವರು ರಾಜ್ಯಪಾಲರು ಈ ಅವಧಿಯಲ್ಲಿ ನಡೆದುಕೊಂಡ ಪಕ್ಷಪಾತದ ರೀತಿಯನ್ನು ಸದನದಲ್ಲಿ ಪ್ರಸ್ತಾಪಿಸಿದರು. ಅಂದರೆ, ರಾಜ್ಯಪಾಲರ ಈ ನಡೆಗೆ ನಮ್ಮ ಮಾನ್ಯತೆ ಇಲ್ಲ ಎನ್ನುವುದನ್ನು ಸೂಚಿಸಿದರು. ತನ್ನ ಪತ್ರದಲ್ಲಿ ಕುದುರೆ ವ್ಯಾಪಾರ ಎಂಬ ಪದವನ್ನು ಬಳಸಿರುವ ರಾಜ್ಯಪಾಲರು, ಕುದುರೆ ವ್ಯಾಪಾರ ಯಾರು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಲ್ಲವಾ ಎಂದು ಹರಿಹಾಯ್ದರು.

ಮುಂದುವರೆದು, ಯಡಿಯೂರಪ್ಪನವರನ್ನುದ್ದೇಶಿಸಿ ‘ಬಹಳ ಆತುರದಲ್ಲಿದ್ದೀರಿ. ಅದು ಅಷ್ಟು ಒಳ್ಳೆಯದಲ್ಲ. ನೋಡೋಣ, ಏನಾಗುತ್ತೆ ಅಂತ. ರಾಷ್ಟ್ರಪತಿ ಆಡಳಿತ ಬರುತ್ತದೋ ಅಥವಾ ನೀವು ಮುಖ್ಯಮಂತ್ರಿಯಾಗ್ತೀರೋ ಎನ್ನೋದನ್ನು ನೋಡೋಣ’ ಎಂದೂ ಹೇಳಿದರು.

ಇದರ ಅರ್ಥ ಇಷ್ಟೇ. ರಾಜ್ಯಪಾಲರ (ಸರ್ಕಾರದ ಪ್ರಕಾರ) ಅನೈತಿಕ ನಡೆಗೆ ಸರ್ಕಾರವು ಬದ್ಧವಾಗುವುದಿಲ್ಲ. ಅದರ ಬದಲಿಗೆ ಸುಪ್ರೀಂಕೋರ್ಟಿಗೆ ಹೋಗುತ್ತದೆ. ಸುಪ್ರೀಂಕೋರ್ಟು ತೀರ್ಮಾನ ಘೋಷಿಸುವುದೇ ತಡವಾಗುವ ಸಾಧ್ಯತೆಯೂ ಇದೆ. ಏಕೆಂದರೆ, ಇದರಲ್ಲಿ ಹಲವು ಸಾಂವಿಧಾನಿಕ ಅಂಶಗಳಿವೆ. ಅಸಾಂವಿಧಾನಿಕವಾದ ತೀರ್ಪು ಬಂದರೆ, ಶಾಸಕಾಂಗದ ಸ್ವಾಯತ್ತತೆಗೆ ಧಕ್ಕೆ ತಂದರೆ ಒಪ್ಪಲ್ಲ ಎನ್ನುವ ಸರ್ಕಾರ ಇದೆ. ಹಾಗಾಗಿ ಕೋರ್ಟೂ ಎಚ್ಚರಿಕೆಯಿಂದ ಹೆಜ್ಜೆಗಳನ್ನಿಡಬೇಕಾಗುತ್ತದೆ. ಆ ಮಧ್ಯೆ ಸದನದಲ್ಲಿ ವಿಶ್ವಾಸಮತ ಯಾಚನೆ ಮುಗಿಯದೇ ಹೋದರೆ ರಾಜ್ಯಪಾಲರು ಏನು ಮಾಡುತ್ತಾರೆ?

ಇದನ್ನೂ ಓದಿ: ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಸರ್ಕಾರವನ್ನು ಮತ್ತು ಸದನವನ್ನು ಅಮಾನತ್ತಿನಲ್ಲಿಡುವ ಸಂಭವವಿದೆ. ಆಗ ಅನಿವಾರ್ಯವಾಗಿ ರಾಷ್ಟ್ರಪತಿ ಆಡಳಿತ ಬರುತ್ತದೆ. ಅದೇ ಹೊತ್ತಿನಲ್ಲಿ ಸುಪ್ರೀಂಕೋರ್ಟಿನಲ್ಲಿ ಉಳಿದ ವಿಚಾರಗಳು ಬಗೆಹರಿದಿರುವುದಿಲ್ಲ. ಹಾಗಿರುವಾಗ ಬಿಜೆಪಿಯನ್ನು ಆಡಳಿತದಲ್ಲಿ ಕೂರಿಸುವ ಕೆಲಸವನ್ನು ರಾಜ್ಯಪಾಲರು ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇವೆಲ್ಲದರ ಕಾರಣದಿಂದ ರಾಷ್ಟ್ರಪತಿ ಆಡಳಿತದ ಪ್ರಶ್ನೆ ಉದ್ಭವಿಸಿದೆ. ಆ ನಂತರ ಈ ಬಿಕ್ಕಟ್ಟು ಹೇಗೆ ಮತ್ತು ಯಾವಾಗ ಬಗೆಹರಿಯುತ್ತದೆಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಇರುತ್ತವೆ. ಶಾಸಕರು ಅನರ್ಹಗೊಂಡರೂ ಬಿಜೆಪಿಗೆ ಹೆಚ್ಚಿನ ಸೀಟುಗಳು ಇರುವುದರಿಂದ ಅವರದ್ದೇ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚು. ಅನರ್ಹಗೊಂಡ ನಂತರ ಮತ್ತೆ ಆ ಶಾಸಕರು ಬಿಜೆಪಿ ಟಿಕೆಟ್‍ನಿಂದ ಸ್ಪರ್ಧಿಸಿ ಗೆಲ್ಲಬೇಕು. ಕೆಲವರು ಸೋಲಲೂಬಹುದು. ಒಟ್ಟಿನಲ್ಲಿ ಅತಂತ್ರ ಸ್ಥಿತಿ ಸಾಕಷ್ಟು ಕಾಲ ಮುಂದುವರೆಯುವುದಂತೂ ಖಂಡಿತ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...