Homeಕರ್ನಾಟಕರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಜ್ಯಪಾಲರು, ಸುಪ್ರೀಂಕೋರ್ಟಿನ ಮಧ್ಯಪ್ರವೇಶದಿಂದ ಬಿಕ್ಕಟ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.

- Advertisement -
- Advertisement -

ರಾಜ್ಯ ಸರ್ಕಾರದ ಸುತ್ತ ನಡೆಯುತ್ತಿರುವ ಘಟನಾವಳಿಗಳು ರಾಷ್ಟ್ರಪತಿ ಆಡಳಿತದ ಕಡೆಗೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಎಷ್ಟು ಸಮಯ ತೆಗೆದುಕೊಂಡರೂ ಪರವಾಗಿಲ್ಲ, ಆ ನಂತರ ಬಿದ್ದು ಹೋಗುವ ಸಾಧ್ಯತೆಯೇ ಹೆಚ್ಚಿದೆ. ಆದರೆ, ಬಿಜೆಪಿಯವರು ಅಷ್ಟು ಹೊತ್ತು ಕಾಯಲು ಸಿದ್ಧವಿಲ್ಲ. ಹಾಗೆ ಆದರೆ, ಮುಂಬೈನಲ್ಲಿ ಇರುವ ಶಾಸಕರು ಮರಳಿ ತಮ್ಮ ಪಕ್ಷಗಳಿಗೆ ಹೋಗಿಬಿಡಬಹುದೆಂಬ ಆತಂಕ ಬಿಜೆಪಿಯದ್ದು. ಹಾಗಾಗಿ ರಾಜ್ಯಪಾಲರಿಗೆ ಪದೇ ಪದೇ ಮನವಿ ಕೊಟ್ಟು ಅವರಿಂದ ಸ್ಪೀಕರ್‍ಗೆ ಸಂದೇಶ ಬರುವಂತೆ ನೋಡಿಕೊಂಡರು. ಆದರೆ, ಸ್ಪೀಕರ್‍ಗೆ ಸದನವನ್ನು ಯಾವ ರೀತಿ ನಡೆಸಬೇಕೆಂಬ ನಿರ್ದೇಶನ ಕೊಡುವ ಅಧಿಕಾರ ರಾಜ್ಯಪಾಲರಿಗಿಲ್ಲವಾದ್ದರಿಂದ ಅದಕ್ಕೆ ಸ್ಪೀಕರ್ ಕವಡೆ ಕಾಸಿನ ಕಿಮ್ಮತ್ತು ನೀಡಲಿಲ್ಲ.

ಆ ನಂತರ ಸಭಾನಾಯಕ ಕುಮಾರಸ್ವಾಮಿಯವರಿಗೇ ರಾಜ್ಯಪಾಲರಿಂದ ಸಮಯ ನಿಗದಿ ಮಾಡಿಸಿದರು. ತಾಂತ್ರಿಕವಾಗಿ ಇದು ಸರಿಯಿತ್ತು. ಹಾಗಾಗಿ ಅದನ್ನು ಕುಮಾರಸ್ವಾಮಿಯವರು ಒಪ್ಪಲೇಬೇಕಾಗುತ್ತದೆ ಎಂಬ ನಿರೀಕ್ಷೆ ಎಲ್ಲರದ್ದಾಗಿತ್ತು. ಅದರ ಕುರಿತು ಮತ್ತೆ ರಾಜ್ಯಪಾಲರಿಗೆ ಪತ್ರ ಬರೆದರು. ಮಧ್ಯಾಹ್ನ 1.30ರ ಡೆಡ್‍ಲೈನ್‍ಗೆ ಡೋಂಟ್‍ಕೇರ್ ಎಂಬಂತೆ ಸದನದ ಕಲಾಪ ನಡೆಯಿತು. ಅಷ್ಟೇ ಅಲ್ಲದೇ ರಾಜ್ಯಪಾಲರು ಇಂತಹ ಡೆಡ್‍ಲೈನ್ ತಾಂತ್ರಿಕವಾಗಿಯೂ ತಪ್ಪಿರಬಹುದೇ ಎಂಬ ಅನುಮಾನ ಮೂಡುವ ರೀತಿಯಲ್ಲಿ ಹಲವು ಕೋರ್ಟ್ ಆದೇಶಗಳನ್ನು ಉಲ್ಲೇಖಿಸಲಾಯಿತು.

ಇಷ್ಟು ಹೊತ್ತಿಗೆ ರಾಜ್ಯಪಾಲರಿಂದ ಇನ್ನೊಂದು ಗಡುವು, ಸಂಜೆ 6 ಗಂಟೆ ನಿಗದಿಯಾಯಿತು. ಅದನ್ನು ಉಲ್ಲೇಖಿಸಿದ ಕುಮಾರಸ್ವಾಮಿಯವರು ರಾಜ್ಯಪಾಲರು ಈ ಅವಧಿಯಲ್ಲಿ ನಡೆದುಕೊಂಡ ಪಕ್ಷಪಾತದ ರೀತಿಯನ್ನು ಸದನದಲ್ಲಿ ಪ್ರಸ್ತಾಪಿಸಿದರು. ಅಂದರೆ, ರಾಜ್ಯಪಾಲರ ಈ ನಡೆಗೆ ನಮ್ಮ ಮಾನ್ಯತೆ ಇಲ್ಲ ಎನ್ನುವುದನ್ನು ಸೂಚಿಸಿದರು. ತನ್ನ ಪತ್ರದಲ್ಲಿ ಕುದುರೆ ವ್ಯಾಪಾರ ಎಂಬ ಪದವನ್ನು ಬಳಸಿರುವ ರಾಜ್ಯಪಾಲರು, ಕುದುರೆ ವ್ಯಾಪಾರ ಯಾರು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಲ್ಲವಾ ಎಂದು ಹರಿಹಾಯ್ದರು.

ಮುಂದುವರೆದು, ಯಡಿಯೂರಪ್ಪನವರನ್ನುದ್ದೇಶಿಸಿ ‘ಬಹಳ ಆತುರದಲ್ಲಿದ್ದೀರಿ. ಅದು ಅಷ್ಟು ಒಳ್ಳೆಯದಲ್ಲ. ನೋಡೋಣ, ಏನಾಗುತ್ತೆ ಅಂತ. ರಾಷ್ಟ್ರಪತಿ ಆಡಳಿತ ಬರುತ್ತದೋ ಅಥವಾ ನೀವು ಮುಖ್ಯಮಂತ್ರಿಯಾಗ್ತೀರೋ ಎನ್ನೋದನ್ನು ನೋಡೋಣ’ ಎಂದೂ ಹೇಳಿದರು.

ಇದರ ಅರ್ಥ ಇಷ್ಟೇ. ರಾಜ್ಯಪಾಲರ (ಸರ್ಕಾರದ ಪ್ರಕಾರ) ಅನೈತಿಕ ನಡೆಗೆ ಸರ್ಕಾರವು ಬದ್ಧವಾಗುವುದಿಲ್ಲ. ಅದರ ಬದಲಿಗೆ ಸುಪ್ರೀಂಕೋರ್ಟಿಗೆ ಹೋಗುತ್ತದೆ. ಸುಪ್ರೀಂಕೋರ್ಟು ತೀರ್ಮಾನ ಘೋಷಿಸುವುದೇ ತಡವಾಗುವ ಸಾಧ್ಯತೆಯೂ ಇದೆ. ಏಕೆಂದರೆ, ಇದರಲ್ಲಿ ಹಲವು ಸಾಂವಿಧಾನಿಕ ಅಂಶಗಳಿವೆ. ಅಸಾಂವಿಧಾನಿಕವಾದ ತೀರ್ಪು ಬಂದರೆ, ಶಾಸಕಾಂಗದ ಸ್ವಾಯತ್ತತೆಗೆ ಧಕ್ಕೆ ತಂದರೆ ಒಪ್ಪಲ್ಲ ಎನ್ನುವ ಸರ್ಕಾರ ಇದೆ. ಹಾಗಾಗಿ ಕೋರ್ಟೂ ಎಚ್ಚರಿಕೆಯಿಂದ ಹೆಜ್ಜೆಗಳನ್ನಿಡಬೇಕಾಗುತ್ತದೆ. ಆ ಮಧ್ಯೆ ಸದನದಲ್ಲಿ ವಿಶ್ವಾಸಮತ ಯಾಚನೆ ಮುಗಿಯದೇ ಹೋದರೆ ರಾಜ್ಯಪಾಲರು ಏನು ಮಾಡುತ್ತಾರೆ?

ಇದನ್ನೂ ಓದಿ: ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಸರ್ಕಾರವನ್ನು ಮತ್ತು ಸದನವನ್ನು ಅಮಾನತ್ತಿನಲ್ಲಿಡುವ ಸಂಭವವಿದೆ. ಆಗ ಅನಿವಾರ್ಯವಾಗಿ ರಾಷ್ಟ್ರಪತಿ ಆಡಳಿತ ಬರುತ್ತದೆ. ಅದೇ ಹೊತ್ತಿನಲ್ಲಿ ಸುಪ್ರೀಂಕೋರ್ಟಿನಲ್ಲಿ ಉಳಿದ ವಿಚಾರಗಳು ಬಗೆಹರಿದಿರುವುದಿಲ್ಲ. ಹಾಗಿರುವಾಗ ಬಿಜೆಪಿಯನ್ನು ಆಡಳಿತದಲ್ಲಿ ಕೂರಿಸುವ ಕೆಲಸವನ್ನು ರಾಜ್ಯಪಾಲರು ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇವೆಲ್ಲದರ ಕಾರಣದಿಂದ ರಾಷ್ಟ್ರಪತಿ ಆಡಳಿತದ ಪ್ರಶ್ನೆ ಉದ್ಭವಿಸಿದೆ. ಆ ನಂತರ ಈ ಬಿಕ್ಕಟ್ಟು ಹೇಗೆ ಮತ್ತು ಯಾವಾಗ ಬಗೆಹರಿಯುತ್ತದೆಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಇರುತ್ತವೆ. ಶಾಸಕರು ಅನರ್ಹಗೊಂಡರೂ ಬಿಜೆಪಿಗೆ ಹೆಚ್ಚಿನ ಸೀಟುಗಳು ಇರುವುದರಿಂದ ಅವರದ್ದೇ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚು. ಅನರ್ಹಗೊಂಡ ನಂತರ ಮತ್ತೆ ಆ ಶಾಸಕರು ಬಿಜೆಪಿ ಟಿಕೆಟ್‍ನಿಂದ ಸ್ಪರ್ಧಿಸಿ ಗೆಲ್ಲಬೇಕು. ಕೆಲವರು ಸೋಲಲೂಬಹುದು. ಒಟ್ಟಿನಲ್ಲಿ ಅತಂತ್ರ ಸ್ಥಿತಿ ಸಾಕಷ್ಟು ಕಾಲ ಮುಂದುವರೆಯುವುದಂತೂ ಖಂಡಿತ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...