Homeಕರ್ನಾಟಕರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಜ್ಯಪಾಲರು, ಸುಪ್ರೀಂಕೋರ್ಟಿನ ಮಧ್ಯಪ್ರವೇಶದಿಂದ ಬಿಕ್ಕಟ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.

- Advertisement -
- Advertisement -

ರಾಜ್ಯ ಸರ್ಕಾರದ ಸುತ್ತ ನಡೆಯುತ್ತಿರುವ ಘಟನಾವಳಿಗಳು ರಾಷ್ಟ್ರಪತಿ ಆಡಳಿತದ ಕಡೆಗೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಎಷ್ಟು ಸಮಯ ತೆಗೆದುಕೊಂಡರೂ ಪರವಾಗಿಲ್ಲ, ಆ ನಂತರ ಬಿದ್ದು ಹೋಗುವ ಸಾಧ್ಯತೆಯೇ ಹೆಚ್ಚಿದೆ. ಆದರೆ, ಬಿಜೆಪಿಯವರು ಅಷ್ಟು ಹೊತ್ತು ಕಾಯಲು ಸಿದ್ಧವಿಲ್ಲ. ಹಾಗೆ ಆದರೆ, ಮುಂಬೈನಲ್ಲಿ ಇರುವ ಶಾಸಕರು ಮರಳಿ ತಮ್ಮ ಪಕ್ಷಗಳಿಗೆ ಹೋಗಿಬಿಡಬಹುದೆಂಬ ಆತಂಕ ಬಿಜೆಪಿಯದ್ದು. ಹಾಗಾಗಿ ರಾಜ್ಯಪಾಲರಿಗೆ ಪದೇ ಪದೇ ಮನವಿ ಕೊಟ್ಟು ಅವರಿಂದ ಸ್ಪೀಕರ್‍ಗೆ ಸಂದೇಶ ಬರುವಂತೆ ನೋಡಿಕೊಂಡರು. ಆದರೆ, ಸ್ಪೀಕರ್‍ಗೆ ಸದನವನ್ನು ಯಾವ ರೀತಿ ನಡೆಸಬೇಕೆಂಬ ನಿರ್ದೇಶನ ಕೊಡುವ ಅಧಿಕಾರ ರಾಜ್ಯಪಾಲರಿಗಿಲ್ಲವಾದ್ದರಿಂದ ಅದಕ್ಕೆ ಸ್ಪೀಕರ್ ಕವಡೆ ಕಾಸಿನ ಕಿಮ್ಮತ್ತು ನೀಡಲಿಲ್ಲ.

ಆ ನಂತರ ಸಭಾನಾಯಕ ಕುಮಾರಸ್ವಾಮಿಯವರಿಗೇ ರಾಜ್ಯಪಾಲರಿಂದ ಸಮಯ ನಿಗದಿ ಮಾಡಿಸಿದರು. ತಾಂತ್ರಿಕವಾಗಿ ಇದು ಸರಿಯಿತ್ತು. ಹಾಗಾಗಿ ಅದನ್ನು ಕುಮಾರಸ್ವಾಮಿಯವರು ಒಪ್ಪಲೇಬೇಕಾಗುತ್ತದೆ ಎಂಬ ನಿರೀಕ್ಷೆ ಎಲ್ಲರದ್ದಾಗಿತ್ತು. ಅದರ ಕುರಿತು ಮತ್ತೆ ರಾಜ್ಯಪಾಲರಿಗೆ ಪತ್ರ ಬರೆದರು. ಮಧ್ಯಾಹ್ನ 1.30ರ ಡೆಡ್‍ಲೈನ್‍ಗೆ ಡೋಂಟ್‍ಕೇರ್ ಎಂಬಂತೆ ಸದನದ ಕಲಾಪ ನಡೆಯಿತು. ಅಷ್ಟೇ ಅಲ್ಲದೇ ರಾಜ್ಯಪಾಲರು ಇಂತಹ ಡೆಡ್‍ಲೈನ್ ತಾಂತ್ರಿಕವಾಗಿಯೂ ತಪ್ಪಿರಬಹುದೇ ಎಂಬ ಅನುಮಾನ ಮೂಡುವ ರೀತಿಯಲ್ಲಿ ಹಲವು ಕೋರ್ಟ್ ಆದೇಶಗಳನ್ನು ಉಲ್ಲೇಖಿಸಲಾಯಿತು.

ಇಷ್ಟು ಹೊತ್ತಿಗೆ ರಾಜ್ಯಪಾಲರಿಂದ ಇನ್ನೊಂದು ಗಡುವು, ಸಂಜೆ 6 ಗಂಟೆ ನಿಗದಿಯಾಯಿತು. ಅದನ್ನು ಉಲ್ಲೇಖಿಸಿದ ಕುಮಾರಸ್ವಾಮಿಯವರು ರಾಜ್ಯಪಾಲರು ಈ ಅವಧಿಯಲ್ಲಿ ನಡೆದುಕೊಂಡ ಪಕ್ಷಪಾತದ ರೀತಿಯನ್ನು ಸದನದಲ್ಲಿ ಪ್ರಸ್ತಾಪಿಸಿದರು. ಅಂದರೆ, ರಾಜ್ಯಪಾಲರ ಈ ನಡೆಗೆ ನಮ್ಮ ಮಾನ್ಯತೆ ಇಲ್ಲ ಎನ್ನುವುದನ್ನು ಸೂಚಿಸಿದರು. ತನ್ನ ಪತ್ರದಲ್ಲಿ ಕುದುರೆ ವ್ಯಾಪಾರ ಎಂಬ ಪದವನ್ನು ಬಳಸಿರುವ ರಾಜ್ಯಪಾಲರು, ಕುದುರೆ ವ್ಯಾಪಾರ ಯಾರು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಲ್ಲವಾ ಎಂದು ಹರಿಹಾಯ್ದರು.

ಮುಂದುವರೆದು, ಯಡಿಯೂರಪ್ಪನವರನ್ನುದ್ದೇಶಿಸಿ ‘ಬಹಳ ಆತುರದಲ್ಲಿದ್ದೀರಿ. ಅದು ಅಷ್ಟು ಒಳ್ಳೆಯದಲ್ಲ. ನೋಡೋಣ, ಏನಾಗುತ್ತೆ ಅಂತ. ರಾಷ್ಟ್ರಪತಿ ಆಡಳಿತ ಬರುತ್ತದೋ ಅಥವಾ ನೀವು ಮುಖ್ಯಮಂತ್ರಿಯಾಗ್ತೀರೋ ಎನ್ನೋದನ್ನು ನೋಡೋಣ’ ಎಂದೂ ಹೇಳಿದರು.

ಇದರ ಅರ್ಥ ಇಷ್ಟೇ. ರಾಜ್ಯಪಾಲರ (ಸರ್ಕಾರದ ಪ್ರಕಾರ) ಅನೈತಿಕ ನಡೆಗೆ ಸರ್ಕಾರವು ಬದ್ಧವಾಗುವುದಿಲ್ಲ. ಅದರ ಬದಲಿಗೆ ಸುಪ್ರೀಂಕೋರ್ಟಿಗೆ ಹೋಗುತ್ತದೆ. ಸುಪ್ರೀಂಕೋರ್ಟು ತೀರ್ಮಾನ ಘೋಷಿಸುವುದೇ ತಡವಾಗುವ ಸಾಧ್ಯತೆಯೂ ಇದೆ. ಏಕೆಂದರೆ, ಇದರಲ್ಲಿ ಹಲವು ಸಾಂವಿಧಾನಿಕ ಅಂಶಗಳಿವೆ. ಅಸಾಂವಿಧಾನಿಕವಾದ ತೀರ್ಪು ಬಂದರೆ, ಶಾಸಕಾಂಗದ ಸ್ವಾಯತ್ತತೆಗೆ ಧಕ್ಕೆ ತಂದರೆ ಒಪ್ಪಲ್ಲ ಎನ್ನುವ ಸರ್ಕಾರ ಇದೆ. ಹಾಗಾಗಿ ಕೋರ್ಟೂ ಎಚ್ಚರಿಕೆಯಿಂದ ಹೆಜ್ಜೆಗಳನ್ನಿಡಬೇಕಾಗುತ್ತದೆ. ಆ ಮಧ್ಯೆ ಸದನದಲ್ಲಿ ವಿಶ್ವಾಸಮತ ಯಾಚನೆ ಮುಗಿಯದೇ ಹೋದರೆ ರಾಜ್ಯಪಾಲರು ಏನು ಮಾಡುತ್ತಾರೆ?

ಇದನ್ನೂ ಓದಿ: ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಸರ್ಕಾರವನ್ನು ಮತ್ತು ಸದನವನ್ನು ಅಮಾನತ್ತಿನಲ್ಲಿಡುವ ಸಂಭವವಿದೆ. ಆಗ ಅನಿವಾರ್ಯವಾಗಿ ರಾಷ್ಟ್ರಪತಿ ಆಡಳಿತ ಬರುತ್ತದೆ. ಅದೇ ಹೊತ್ತಿನಲ್ಲಿ ಸುಪ್ರೀಂಕೋರ್ಟಿನಲ್ಲಿ ಉಳಿದ ವಿಚಾರಗಳು ಬಗೆಹರಿದಿರುವುದಿಲ್ಲ. ಹಾಗಿರುವಾಗ ಬಿಜೆಪಿಯನ್ನು ಆಡಳಿತದಲ್ಲಿ ಕೂರಿಸುವ ಕೆಲಸವನ್ನು ರಾಜ್ಯಪಾಲರು ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇವೆಲ್ಲದರ ಕಾರಣದಿಂದ ರಾಷ್ಟ್ರಪತಿ ಆಡಳಿತದ ಪ್ರಶ್ನೆ ಉದ್ಭವಿಸಿದೆ. ಆ ನಂತರ ಈ ಬಿಕ್ಕಟ್ಟು ಹೇಗೆ ಮತ್ತು ಯಾವಾಗ ಬಗೆಹರಿಯುತ್ತದೆಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಇರುತ್ತವೆ. ಶಾಸಕರು ಅನರ್ಹಗೊಂಡರೂ ಬಿಜೆಪಿಗೆ ಹೆಚ್ಚಿನ ಸೀಟುಗಳು ಇರುವುದರಿಂದ ಅವರದ್ದೇ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚು. ಅನರ್ಹಗೊಂಡ ನಂತರ ಮತ್ತೆ ಆ ಶಾಸಕರು ಬಿಜೆಪಿ ಟಿಕೆಟ್‍ನಿಂದ ಸ್ಪರ್ಧಿಸಿ ಗೆಲ್ಲಬೇಕು. ಕೆಲವರು ಸೋಲಲೂಬಹುದು. ಒಟ್ಟಿನಲ್ಲಿ ಅತಂತ್ರ ಸ್ಥಿತಿ ಸಾಕಷ್ಟು ಕಾಲ ಮುಂದುವರೆಯುವುದಂತೂ ಖಂಡಿತ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...