Homeಕರ್ನಾಟಕರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಜ್ಯಪಾಲರು, ಸುಪ್ರೀಂಕೋರ್ಟಿನ ಮಧ್ಯಪ್ರವೇಶದಿಂದ ಬಿಕ್ಕಟ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.

- Advertisement -
- Advertisement -

ರಾಜ್ಯ ಸರ್ಕಾರದ ಸುತ್ತ ನಡೆಯುತ್ತಿರುವ ಘಟನಾವಳಿಗಳು ರಾಷ್ಟ್ರಪತಿ ಆಡಳಿತದ ಕಡೆಗೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಎಷ್ಟು ಸಮಯ ತೆಗೆದುಕೊಂಡರೂ ಪರವಾಗಿಲ್ಲ, ಆ ನಂತರ ಬಿದ್ದು ಹೋಗುವ ಸಾಧ್ಯತೆಯೇ ಹೆಚ್ಚಿದೆ. ಆದರೆ, ಬಿಜೆಪಿಯವರು ಅಷ್ಟು ಹೊತ್ತು ಕಾಯಲು ಸಿದ್ಧವಿಲ್ಲ. ಹಾಗೆ ಆದರೆ, ಮುಂಬೈನಲ್ಲಿ ಇರುವ ಶಾಸಕರು ಮರಳಿ ತಮ್ಮ ಪಕ್ಷಗಳಿಗೆ ಹೋಗಿಬಿಡಬಹುದೆಂಬ ಆತಂಕ ಬಿಜೆಪಿಯದ್ದು. ಹಾಗಾಗಿ ರಾಜ್ಯಪಾಲರಿಗೆ ಪದೇ ಪದೇ ಮನವಿ ಕೊಟ್ಟು ಅವರಿಂದ ಸ್ಪೀಕರ್‍ಗೆ ಸಂದೇಶ ಬರುವಂತೆ ನೋಡಿಕೊಂಡರು. ಆದರೆ, ಸ್ಪೀಕರ್‍ಗೆ ಸದನವನ್ನು ಯಾವ ರೀತಿ ನಡೆಸಬೇಕೆಂಬ ನಿರ್ದೇಶನ ಕೊಡುವ ಅಧಿಕಾರ ರಾಜ್ಯಪಾಲರಿಗಿಲ್ಲವಾದ್ದರಿಂದ ಅದಕ್ಕೆ ಸ್ಪೀಕರ್ ಕವಡೆ ಕಾಸಿನ ಕಿಮ್ಮತ್ತು ನೀಡಲಿಲ್ಲ.

ಆ ನಂತರ ಸಭಾನಾಯಕ ಕುಮಾರಸ್ವಾಮಿಯವರಿಗೇ ರಾಜ್ಯಪಾಲರಿಂದ ಸಮಯ ನಿಗದಿ ಮಾಡಿಸಿದರು. ತಾಂತ್ರಿಕವಾಗಿ ಇದು ಸರಿಯಿತ್ತು. ಹಾಗಾಗಿ ಅದನ್ನು ಕುಮಾರಸ್ವಾಮಿಯವರು ಒಪ್ಪಲೇಬೇಕಾಗುತ್ತದೆ ಎಂಬ ನಿರೀಕ್ಷೆ ಎಲ್ಲರದ್ದಾಗಿತ್ತು. ಅದರ ಕುರಿತು ಮತ್ತೆ ರಾಜ್ಯಪಾಲರಿಗೆ ಪತ್ರ ಬರೆದರು. ಮಧ್ಯಾಹ್ನ 1.30ರ ಡೆಡ್‍ಲೈನ್‍ಗೆ ಡೋಂಟ್‍ಕೇರ್ ಎಂಬಂತೆ ಸದನದ ಕಲಾಪ ನಡೆಯಿತು. ಅಷ್ಟೇ ಅಲ್ಲದೇ ರಾಜ್ಯಪಾಲರು ಇಂತಹ ಡೆಡ್‍ಲೈನ್ ತಾಂತ್ರಿಕವಾಗಿಯೂ ತಪ್ಪಿರಬಹುದೇ ಎಂಬ ಅನುಮಾನ ಮೂಡುವ ರೀತಿಯಲ್ಲಿ ಹಲವು ಕೋರ್ಟ್ ಆದೇಶಗಳನ್ನು ಉಲ್ಲೇಖಿಸಲಾಯಿತು.

ಇಷ್ಟು ಹೊತ್ತಿಗೆ ರಾಜ್ಯಪಾಲರಿಂದ ಇನ್ನೊಂದು ಗಡುವು, ಸಂಜೆ 6 ಗಂಟೆ ನಿಗದಿಯಾಯಿತು. ಅದನ್ನು ಉಲ್ಲೇಖಿಸಿದ ಕುಮಾರಸ್ವಾಮಿಯವರು ರಾಜ್ಯಪಾಲರು ಈ ಅವಧಿಯಲ್ಲಿ ನಡೆದುಕೊಂಡ ಪಕ್ಷಪಾತದ ರೀತಿಯನ್ನು ಸದನದಲ್ಲಿ ಪ್ರಸ್ತಾಪಿಸಿದರು. ಅಂದರೆ, ರಾಜ್ಯಪಾಲರ ಈ ನಡೆಗೆ ನಮ್ಮ ಮಾನ್ಯತೆ ಇಲ್ಲ ಎನ್ನುವುದನ್ನು ಸೂಚಿಸಿದರು. ತನ್ನ ಪತ್ರದಲ್ಲಿ ಕುದುರೆ ವ್ಯಾಪಾರ ಎಂಬ ಪದವನ್ನು ಬಳಸಿರುವ ರಾಜ್ಯಪಾಲರು, ಕುದುರೆ ವ್ಯಾಪಾರ ಯಾರು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಲ್ಲವಾ ಎಂದು ಹರಿಹಾಯ್ದರು.

ಮುಂದುವರೆದು, ಯಡಿಯೂರಪ್ಪನವರನ್ನುದ್ದೇಶಿಸಿ ‘ಬಹಳ ಆತುರದಲ್ಲಿದ್ದೀರಿ. ಅದು ಅಷ್ಟು ಒಳ್ಳೆಯದಲ್ಲ. ನೋಡೋಣ, ಏನಾಗುತ್ತೆ ಅಂತ. ರಾಷ್ಟ್ರಪತಿ ಆಡಳಿತ ಬರುತ್ತದೋ ಅಥವಾ ನೀವು ಮುಖ್ಯಮಂತ್ರಿಯಾಗ್ತೀರೋ ಎನ್ನೋದನ್ನು ನೋಡೋಣ’ ಎಂದೂ ಹೇಳಿದರು.

ಇದರ ಅರ್ಥ ಇಷ್ಟೇ. ರಾಜ್ಯಪಾಲರ (ಸರ್ಕಾರದ ಪ್ರಕಾರ) ಅನೈತಿಕ ನಡೆಗೆ ಸರ್ಕಾರವು ಬದ್ಧವಾಗುವುದಿಲ್ಲ. ಅದರ ಬದಲಿಗೆ ಸುಪ್ರೀಂಕೋರ್ಟಿಗೆ ಹೋಗುತ್ತದೆ. ಸುಪ್ರೀಂಕೋರ್ಟು ತೀರ್ಮಾನ ಘೋಷಿಸುವುದೇ ತಡವಾಗುವ ಸಾಧ್ಯತೆಯೂ ಇದೆ. ಏಕೆಂದರೆ, ಇದರಲ್ಲಿ ಹಲವು ಸಾಂವಿಧಾನಿಕ ಅಂಶಗಳಿವೆ. ಅಸಾಂವಿಧಾನಿಕವಾದ ತೀರ್ಪು ಬಂದರೆ, ಶಾಸಕಾಂಗದ ಸ್ವಾಯತ್ತತೆಗೆ ಧಕ್ಕೆ ತಂದರೆ ಒಪ್ಪಲ್ಲ ಎನ್ನುವ ಸರ್ಕಾರ ಇದೆ. ಹಾಗಾಗಿ ಕೋರ್ಟೂ ಎಚ್ಚರಿಕೆಯಿಂದ ಹೆಜ್ಜೆಗಳನ್ನಿಡಬೇಕಾಗುತ್ತದೆ. ಆ ಮಧ್ಯೆ ಸದನದಲ್ಲಿ ವಿಶ್ವಾಸಮತ ಯಾಚನೆ ಮುಗಿಯದೇ ಹೋದರೆ ರಾಜ್ಯಪಾಲರು ಏನು ಮಾಡುತ್ತಾರೆ?

ಇದನ್ನೂ ಓದಿ: ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಸರ್ಕಾರವನ್ನು ಮತ್ತು ಸದನವನ್ನು ಅಮಾನತ್ತಿನಲ್ಲಿಡುವ ಸಂಭವವಿದೆ. ಆಗ ಅನಿವಾರ್ಯವಾಗಿ ರಾಷ್ಟ್ರಪತಿ ಆಡಳಿತ ಬರುತ್ತದೆ. ಅದೇ ಹೊತ್ತಿನಲ್ಲಿ ಸುಪ್ರೀಂಕೋರ್ಟಿನಲ್ಲಿ ಉಳಿದ ವಿಚಾರಗಳು ಬಗೆಹರಿದಿರುವುದಿಲ್ಲ. ಹಾಗಿರುವಾಗ ಬಿಜೆಪಿಯನ್ನು ಆಡಳಿತದಲ್ಲಿ ಕೂರಿಸುವ ಕೆಲಸವನ್ನು ರಾಜ್ಯಪಾಲರು ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇವೆಲ್ಲದರ ಕಾರಣದಿಂದ ರಾಷ್ಟ್ರಪತಿ ಆಡಳಿತದ ಪ್ರಶ್ನೆ ಉದ್ಭವಿಸಿದೆ. ಆ ನಂತರ ಈ ಬಿಕ್ಕಟ್ಟು ಹೇಗೆ ಮತ್ತು ಯಾವಾಗ ಬಗೆಹರಿಯುತ್ತದೆಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಇರುತ್ತವೆ. ಶಾಸಕರು ಅನರ್ಹಗೊಂಡರೂ ಬಿಜೆಪಿಗೆ ಹೆಚ್ಚಿನ ಸೀಟುಗಳು ಇರುವುದರಿಂದ ಅವರದ್ದೇ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚು. ಅನರ್ಹಗೊಂಡ ನಂತರ ಮತ್ತೆ ಆ ಶಾಸಕರು ಬಿಜೆಪಿ ಟಿಕೆಟ್‍ನಿಂದ ಸ್ಪರ್ಧಿಸಿ ಗೆಲ್ಲಬೇಕು. ಕೆಲವರು ಸೋಲಲೂಬಹುದು. ಒಟ್ಟಿನಲ್ಲಿ ಅತಂತ್ರ ಸ್ಥಿತಿ ಸಾಕಷ್ಟು ಕಾಲ ಮುಂದುವರೆಯುವುದಂತೂ ಖಂಡಿತ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...