Homeಕರ್ನಾಟಕರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಜ್ಯಪಾಲರು, ಸುಪ್ರೀಂಕೋರ್ಟಿನ ಮಧ್ಯಪ್ರವೇಶದಿಂದ ಬಿಕ್ಕಟ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.

- Advertisement -
- Advertisement -

ರಾಜ್ಯ ಸರ್ಕಾರದ ಸುತ್ತ ನಡೆಯುತ್ತಿರುವ ಘಟನಾವಳಿಗಳು ರಾಷ್ಟ್ರಪತಿ ಆಡಳಿತದ ಕಡೆಗೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಎಷ್ಟು ಸಮಯ ತೆಗೆದುಕೊಂಡರೂ ಪರವಾಗಿಲ್ಲ, ಆ ನಂತರ ಬಿದ್ದು ಹೋಗುವ ಸಾಧ್ಯತೆಯೇ ಹೆಚ್ಚಿದೆ. ಆದರೆ, ಬಿಜೆಪಿಯವರು ಅಷ್ಟು ಹೊತ್ತು ಕಾಯಲು ಸಿದ್ಧವಿಲ್ಲ. ಹಾಗೆ ಆದರೆ, ಮುಂಬೈನಲ್ಲಿ ಇರುವ ಶಾಸಕರು ಮರಳಿ ತಮ್ಮ ಪಕ್ಷಗಳಿಗೆ ಹೋಗಿಬಿಡಬಹುದೆಂಬ ಆತಂಕ ಬಿಜೆಪಿಯದ್ದು. ಹಾಗಾಗಿ ರಾಜ್ಯಪಾಲರಿಗೆ ಪದೇ ಪದೇ ಮನವಿ ಕೊಟ್ಟು ಅವರಿಂದ ಸ್ಪೀಕರ್‍ಗೆ ಸಂದೇಶ ಬರುವಂತೆ ನೋಡಿಕೊಂಡರು. ಆದರೆ, ಸ್ಪೀಕರ್‍ಗೆ ಸದನವನ್ನು ಯಾವ ರೀತಿ ನಡೆಸಬೇಕೆಂಬ ನಿರ್ದೇಶನ ಕೊಡುವ ಅಧಿಕಾರ ರಾಜ್ಯಪಾಲರಿಗಿಲ್ಲವಾದ್ದರಿಂದ ಅದಕ್ಕೆ ಸ್ಪೀಕರ್ ಕವಡೆ ಕಾಸಿನ ಕಿಮ್ಮತ್ತು ನೀಡಲಿಲ್ಲ.

ಆ ನಂತರ ಸಭಾನಾಯಕ ಕುಮಾರಸ್ವಾಮಿಯವರಿಗೇ ರಾಜ್ಯಪಾಲರಿಂದ ಸಮಯ ನಿಗದಿ ಮಾಡಿಸಿದರು. ತಾಂತ್ರಿಕವಾಗಿ ಇದು ಸರಿಯಿತ್ತು. ಹಾಗಾಗಿ ಅದನ್ನು ಕುಮಾರಸ್ವಾಮಿಯವರು ಒಪ್ಪಲೇಬೇಕಾಗುತ್ತದೆ ಎಂಬ ನಿರೀಕ್ಷೆ ಎಲ್ಲರದ್ದಾಗಿತ್ತು. ಅದರ ಕುರಿತು ಮತ್ತೆ ರಾಜ್ಯಪಾಲರಿಗೆ ಪತ್ರ ಬರೆದರು. ಮಧ್ಯಾಹ್ನ 1.30ರ ಡೆಡ್‍ಲೈನ್‍ಗೆ ಡೋಂಟ್‍ಕೇರ್ ಎಂಬಂತೆ ಸದನದ ಕಲಾಪ ನಡೆಯಿತು. ಅಷ್ಟೇ ಅಲ್ಲದೇ ರಾಜ್ಯಪಾಲರು ಇಂತಹ ಡೆಡ್‍ಲೈನ್ ತಾಂತ್ರಿಕವಾಗಿಯೂ ತಪ್ಪಿರಬಹುದೇ ಎಂಬ ಅನುಮಾನ ಮೂಡುವ ರೀತಿಯಲ್ಲಿ ಹಲವು ಕೋರ್ಟ್ ಆದೇಶಗಳನ್ನು ಉಲ್ಲೇಖಿಸಲಾಯಿತು.

ಇಷ್ಟು ಹೊತ್ತಿಗೆ ರಾಜ್ಯಪಾಲರಿಂದ ಇನ್ನೊಂದು ಗಡುವು, ಸಂಜೆ 6 ಗಂಟೆ ನಿಗದಿಯಾಯಿತು. ಅದನ್ನು ಉಲ್ಲೇಖಿಸಿದ ಕುಮಾರಸ್ವಾಮಿಯವರು ರಾಜ್ಯಪಾಲರು ಈ ಅವಧಿಯಲ್ಲಿ ನಡೆದುಕೊಂಡ ಪಕ್ಷಪಾತದ ರೀತಿಯನ್ನು ಸದನದಲ್ಲಿ ಪ್ರಸ್ತಾಪಿಸಿದರು. ಅಂದರೆ, ರಾಜ್ಯಪಾಲರ ಈ ನಡೆಗೆ ನಮ್ಮ ಮಾನ್ಯತೆ ಇಲ್ಲ ಎನ್ನುವುದನ್ನು ಸೂಚಿಸಿದರು. ತನ್ನ ಪತ್ರದಲ್ಲಿ ಕುದುರೆ ವ್ಯಾಪಾರ ಎಂಬ ಪದವನ್ನು ಬಳಸಿರುವ ರಾಜ್ಯಪಾಲರು, ಕುದುರೆ ವ್ಯಾಪಾರ ಯಾರು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಲ್ಲವಾ ಎಂದು ಹರಿಹಾಯ್ದರು.

ಮುಂದುವರೆದು, ಯಡಿಯೂರಪ್ಪನವರನ್ನುದ್ದೇಶಿಸಿ ‘ಬಹಳ ಆತುರದಲ್ಲಿದ್ದೀರಿ. ಅದು ಅಷ್ಟು ಒಳ್ಳೆಯದಲ್ಲ. ನೋಡೋಣ, ಏನಾಗುತ್ತೆ ಅಂತ. ರಾಷ್ಟ್ರಪತಿ ಆಡಳಿತ ಬರುತ್ತದೋ ಅಥವಾ ನೀವು ಮುಖ್ಯಮಂತ್ರಿಯಾಗ್ತೀರೋ ಎನ್ನೋದನ್ನು ನೋಡೋಣ’ ಎಂದೂ ಹೇಳಿದರು.

ಇದರ ಅರ್ಥ ಇಷ್ಟೇ. ರಾಜ್ಯಪಾಲರ (ಸರ್ಕಾರದ ಪ್ರಕಾರ) ಅನೈತಿಕ ನಡೆಗೆ ಸರ್ಕಾರವು ಬದ್ಧವಾಗುವುದಿಲ್ಲ. ಅದರ ಬದಲಿಗೆ ಸುಪ್ರೀಂಕೋರ್ಟಿಗೆ ಹೋಗುತ್ತದೆ. ಸುಪ್ರೀಂಕೋರ್ಟು ತೀರ್ಮಾನ ಘೋಷಿಸುವುದೇ ತಡವಾಗುವ ಸಾಧ್ಯತೆಯೂ ಇದೆ. ಏಕೆಂದರೆ, ಇದರಲ್ಲಿ ಹಲವು ಸಾಂವಿಧಾನಿಕ ಅಂಶಗಳಿವೆ. ಅಸಾಂವಿಧಾನಿಕವಾದ ತೀರ್ಪು ಬಂದರೆ, ಶಾಸಕಾಂಗದ ಸ್ವಾಯತ್ತತೆಗೆ ಧಕ್ಕೆ ತಂದರೆ ಒಪ್ಪಲ್ಲ ಎನ್ನುವ ಸರ್ಕಾರ ಇದೆ. ಹಾಗಾಗಿ ಕೋರ್ಟೂ ಎಚ್ಚರಿಕೆಯಿಂದ ಹೆಜ್ಜೆಗಳನ್ನಿಡಬೇಕಾಗುತ್ತದೆ. ಆ ಮಧ್ಯೆ ಸದನದಲ್ಲಿ ವಿಶ್ವಾಸಮತ ಯಾಚನೆ ಮುಗಿಯದೇ ಹೋದರೆ ರಾಜ್ಯಪಾಲರು ಏನು ಮಾಡುತ್ತಾರೆ?

ಇದನ್ನೂ ಓದಿ: ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಸರ್ಕಾರವನ್ನು ಮತ್ತು ಸದನವನ್ನು ಅಮಾನತ್ತಿನಲ್ಲಿಡುವ ಸಂಭವವಿದೆ. ಆಗ ಅನಿವಾರ್ಯವಾಗಿ ರಾಷ್ಟ್ರಪತಿ ಆಡಳಿತ ಬರುತ್ತದೆ. ಅದೇ ಹೊತ್ತಿನಲ್ಲಿ ಸುಪ್ರೀಂಕೋರ್ಟಿನಲ್ಲಿ ಉಳಿದ ವಿಚಾರಗಳು ಬಗೆಹರಿದಿರುವುದಿಲ್ಲ. ಹಾಗಿರುವಾಗ ಬಿಜೆಪಿಯನ್ನು ಆಡಳಿತದಲ್ಲಿ ಕೂರಿಸುವ ಕೆಲಸವನ್ನು ರಾಜ್ಯಪಾಲರು ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇವೆಲ್ಲದರ ಕಾರಣದಿಂದ ರಾಷ್ಟ್ರಪತಿ ಆಡಳಿತದ ಪ್ರಶ್ನೆ ಉದ್ಭವಿಸಿದೆ. ಆ ನಂತರ ಈ ಬಿಕ್ಕಟ್ಟು ಹೇಗೆ ಮತ್ತು ಯಾವಾಗ ಬಗೆಹರಿಯುತ್ತದೆಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಇರುತ್ತವೆ. ಶಾಸಕರು ಅನರ್ಹಗೊಂಡರೂ ಬಿಜೆಪಿಗೆ ಹೆಚ್ಚಿನ ಸೀಟುಗಳು ಇರುವುದರಿಂದ ಅವರದ್ದೇ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚು. ಅನರ್ಹಗೊಂಡ ನಂತರ ಮತ್ತೆ ಆ ಶಾಸಕರು ಬಿಜೆಪಿ ಟಿಕೆಟ್‍ನಿಂದ ಸ್ಪರ್ಧಿಸಿ ಗೆಲ್ಲಬೇಕು. ಕೆಲವರು ಸೋಲಲೂಬಹುದು. ಒಟ್ಟಿನಲ್ಲಿ ಅತಂತ್ರ ಸ್ಥಿತಿ ಸಾಕಷ್ಟು ಕಾಲ ಮುಂದುವರೆಯುವುದಂತೂ ಖಂಡಿತ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...