Homeಅಂಕಣಗಳುರಾಷ್ಟ್ರ ಸಾಗಿದ ದೂರವೆಷ್ಟು?

ರಾಷ್ಟ್ರ ಸಾಗಿದ ದೂರವೆಷ್ಟು?

- Advertisement -
- Advertisement -

ಮಹಾತ್ಮಗಾಂಧಿಯವರ ನೇತೃತ್ವದಲ್ಲಿ ಭಾರತದ ಪ್ರಜೆಗಳು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ದೇಶ ಕೊನೆಗೂ ಸ್ವತಂತ್ರವಾಯಿತು. ನಮ್ಮದೇ ರಾಜ್ಯಾಂಗ ರಚನೆಯಾಯಿತು. ಭಾರತ ಒಂದು ರಿಪಬ್ಲಿಕ್ ಆಯಿತು, ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿ ಎಲ್ಲ ರಾಜ್ಯಗಳು ಸ್ವತಂತ್ರವಾಗಿ ರಾಜ್ಯಾಂಗದ ಆಶಯಗಳಿಗನುಸಾರ ಕಾರ್ಯನಿರ್ವಹಿಸುತ್ತಾ ಅಧಿಕಾರ ಪಡೆದವು. ಸ್ವಾತಂತ್ರ್ಯ ಬಂದಾಗ ಭಾರತದ ಶೇ.20ರಷ್ಟು ಜನ ಮಾತ್ರ ಅಕ್ಷರಜ್ಞಾನ ಉಳ್ಳವರಾಗಿದ್ದರು. ಆದರೂ ಭಾರತದ 18 ವರ್ಷಕ್ಕೆ ಮೇಲ್ಪಟ್ಟ ಎಲ್ಲ ಪುರುಷರಿಗೂ ಸ್ತ್ರೀಯರಿಗೂ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ಕಲ್ಪಿಸಲಾಯಿತು. ಭಾರತದ ಈ ಮತದಾರರು ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವುದರಲ್ಲಿ ಯಶಸ್ವಿಯಾದರು. ಅಂದು ಭಾರತದ 10 ಜನರಲ್ಲಿ 8 ಜನ ಬಡತನದ ಸೀಮಾರೇಖೆಯ ತಳಗಿದ್ದರು.
ಈ 70 ವರ್ಷಗಳಲ್ಲಿ ಅನೇಕ ವಿಚಾರಗಳಲ್ಲಿ ಭಾರತ ಪ್ರಗತಿ ಹೊಂದಿದೆ. ಚಂದ್ರಮಂಡಲಕ್ಕೆ ಲಗ್ಗೆ ಹಾಕಿದ್ದೇವೆ. ಸೂರ್ಯನ ಹೊರವಲಯದವರೆಗೆ ಹೋಗಿ ಅಧ್ಯಯನ ನಡೆಸುವ ಸಾಹಸಕ್ಕೆ ಕೈಹಾಕಿದ್ದೇವೆ. ಇಂದಿಗೂ ಭಾರತದಲ್ಲಿ ಶೇ.18ರಷ್ಟು ಜನ ಬಡತನದ ಸೀಮಾರೇಖೆಯ ತಳಗೆ ವಾಸಿಸುತ್ತಿದ್ದಾರೆ. ಅಂದರೆ ಇವರಿಗೆ ಎರಡು ಹೊತ್ತಿನ ಊಟ ಕೂಡ ದೊರೆಯುತ್ತಿಲ್ಲ. 13 ಪಂಚವಾರ್ಷಿಕ ಯೋಜನೆಗಳು ಜಾರಿಗೊಂಡಂತಾದರೂ ಬಡವ ಮತ್ತಷ್ಟು ಬಡವನಾಗಿದ್ದಾನೆ. ಶೇ.10ರಷ್ಟು ಜನರಿಗೆ ಪಂಚವಾರ್ಷಿಕ ಯೋಜನೆಗಳ ಲಾಭ ಲಭ್ಯವಾಗಿದೆ. ಪ್ರಧಾನಿ ಜವಾಹರಲಾಲ್ ನೆಹರು ಅವರು 1964ರಲ್ಲಿ ಹೋಮಿಬಾಬಾ ಅವರ ಮುಂದಾಳತ್ವದಲ್ಲಿ ಭಾರತ ಸ್ಪರ್ಧಾತ್ಮಕವಾಗಿ ಅನುಕೂಲಗಳನ್ನು ಪಡೆಯಲು ಸಮಿತಿಯೊಂದನ್ನು ರಚಿಸಿದರು. ಹಾರ್ಡ್‍ವೇರ್ ಮತ್ತು ಸಾಫ್ಟ್‍ವೇರ್‍ಗಳನ್ನು ಅಭಿವೃದ್ಧಿಪಡಿಸಲು ಸಮಿತಿ ನಿರ್ಧರಿಸಿತು. ಆ ಮೂಲಕ ಭಾರತ ಆರ್ಥಿಕವಾಗಿ ಸದÀೃಢ ರಾಷ್ಟ್ರವಾಗುವ ಅವಕಾಶವಿದೆಯೆಂದು ಸಮಿತಿ ಅಭಿಪ್ರಾಯಪಟ್ಟಿತು. ಭಾರತ ಸಾಫ್ಟ್‍ವೇರ್ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಯಿತು. ಸಾಫ್ಟ್‍ವೇರ್ ಉದ್ಯಮದಲ್ಲಿ ಭಾರತ ದಾಪುಗಾಲು ಹಾಕಿತು. ಲಕ್ಷಾಂತರ ಯುವಕ ಯುವತಿಯರಿಗೆ ಈ ಮೂಲಕ ಉದ್ಯೋಗಾವಕಾಶ ದೊರೆಯಿತು.
1947ರಲ್ಲಿ ನಮಗೆ ಸ್ವಾತಂತ್ರ್ಯ ಸಿಕ್ಕಿತು. ಅದೇ ಕಾಲದಲ್ಲಿ ತುಳಿತಕ್ಕೆ ಒಳಗಾಗಿದ್ದ ಇಂಡೋನೇಷಿಯಾ, ಮೈನ್‍ಮಾರ್, ಶ್ರೀಲಂಕಾ, ದಕ್ಷಿಣ ಕೊರಿಯಾ, ಜೋರ್ಡಾನ್, ಇಸÉ್ರೀಲ್, ಚೈನಾ ಸ್ವಾತಂತ್ರ್ಯ ಪಡೆದವು. ಎರಡನೇ ಮಹಾಯುದ್ಧದಿಂದ ಜಪಾನ್ ಮತ್ತು ಜರ್ಮನಿ ಸಂಪೂರ್ಣ ನೆಲಕಚ್ಚಿದ್ದವು. ಮುಂದಿನ ದಶಕದಲ್ಲಿ ಸಿಂಗಪೂರ್ ಮತ್ತು ಮಲೇಷಿಯಾಗಳಲ್ಲಿ ಸ್ವತಂತ್ರ ದೇಶಗಳಾದವು.
ಭಾರತೀಯರ ಸರಾಸರಿ ಆಯಸ್ಸು ಈಗ 60 ವರ್ಷಗಳಾದರೆ ಇಂಡೋನೇಷಿಯಾದಲ್ಲಿ ಸರಾಸರಿ ಆಯಸ್ಸು ಈಗ 80ಕ್ಕೆ ಮೇಲ್ಪಟ್ಟು. ಮಾನವ ಸಂಪನ್ಮೂಲ ಅಭಿವೃದ್ಧಿಯ ವಿಚಾರದಲ್ಲಿ ಇಂಡೋನೇಷಿಯಾ, ದಕ್ಷಿಣ ಕೊರಿಯಾ, ಮಲೇಷಿಯಾ ಮತ್ತು ಸಿಂಗಪುರ್‍ಗಳಿಗಿಂತ ಭಾರತ ಬಹಳ ಹಿಂದೆ ಬಿದ್ದಿದೆ. 168 ರಾಷ್ಟ್ರಗಳ ಪೈಕಿ ಭಾರತ 131ನೇ ಸ್ಥಾನದಲ್ಲಿದೆ. ಸಿಂಗಾಪುರದ ಸರಾಸರಿ ಆದಾಯ ಭಾರತದ 25 ಪಟ್ಟು. ಏಷ್ಯಾದಲ್ಲಿ ಅತಿಕಡಿಮೆ ಬಡತನವಿರುವ ರಾಷ್ಟ್ರ ಮಲೇಷಿಯಾ. 1990ರವರೆಗೆ ಇಂಡೋನೇಷಿಯಾ ಶಿಕ್ಷಣ ಮತ್ತು ಆರೋಗ್ಯ ಬಾಬಿನಲ್ಲಿ ತುಂಬ ಹಣ ವ್ಯಯಮಾಡಿತು. ಅದರ ಫಲವಾಗಿ ಈಗ ಬಡತನ ಶೇ.10ಕ್ಕೆ ಇಳಿದಿದೆ. 70ರ ದಶಕದಲ್ಲಿ ಭಾರತ ಮತ್ತು ಚೈನಾದ ಸರಾಸರಿ ಆದಾಯ ಒಂದೇ ಆಗಿತ್ತು. ಈಗ ಚೈನಾದ ಸರಾಸರಿ ಆದಾಯ ಆಗಿನ ಹೋಲಿಕೆಯಲ್ಲಿ ಹನ್ನೆರಡು ಪಟ್ಟು ಹೆಚ್ಚಿದೆ. ಬೆಟ್ಟದ ತುದಿ ಮುಟ್ಟಬೇಕೆಂಬ ಕನವರಿಕೆಯೇ ಬೇರೆ, ಬೆಟ್ಟದ ಶಿಖರ ಏರಿ ಅದರ ಸುಖ ಅನುಭವಿಸುವುದೇ ಬೇರೆ.
ಕಾನೂನಿಗೆ ವಿರುದ್ಧವಾಗಿ ಜಮೀನು ಕಬಳಿಸುವುದು, ಅಕ್ರಮದ ಡಿನೋಟಿಫಿಕೇಷನ್ ಹೊರಡಿಸುವುದು, ಸೈನ್ಯಕ್ಕೆ ಆಯುಧಗಳನ್ನು ಕೊಳ್ಳುವುದರಲ್ಲೂ ಲಂಚ ನುಂಗುವುದು, ತರಂಗಾಂತರಗಳನ್ನು ನೀತಿ ನಿಯಮವಿಲ್ಲದೆ ಮಾರಾಟ ಮಾಡುವುದು. ಆಟ, ಮನರಂಜನೆ, ಕ್ರೀಡೆಗಳ ಹೆಸರಿನಲ್ಲಿ ಸಾರ್ವಜನಿಕ ಹಣವನ್ನು ಸೂರೆಮಾಡುವುದು. ಅದಾನಿ, ಅಂಬಾನಿ ಮುಂತಾದ ಭ್ರಷ್ಟ ಉದ್ಯಮಿಗಳ ಸಾಲಮನ್ನಾ ಮಾಡುವುದು… ಇವು ಇಂದಿನ ಪ್ರಚಲಿತ ವಿದ್ಯಮಾನಗಳು. ಬಡತನ ನಿವಾರಣೆಯ ಯೋಜನೆಗಳ ಹೆಸರಿನಲ್ಲಿ ಲೂಟಿ ಅವ್ಯಾಹತವಾಗಿ ನಡೆಯುತ್ತಿದ್ದು, ಪ್ರತಿವರ್ಷ ಅಧಿಕಾರಿಗಳು ಸುಮಾರು 90000 ಕೋಟಿ ರೂ.ಗಳ ಲೂಟಿ ಮಾಡುತ್ತಾರೆ. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಹೆಸರಿನಲ್ಲಿ ಒಂದು ಸಾವಿರ ಕೋಟಿಗಿಂತ ಹೆಚ್ಚಿಗೆ ರಾಷ್ಟ್ರ ಖರ್ಚು ಮಾಡುತ್ತದೆ. ರಾಷ್ಟೀಯ ಆರೋಗ್ಯ ಯೋಜನೆ ನೆಪದಲ್ಲಿ 1000 ಕೋಟಿ ಖರ್ಚು ಬೀಳುತ್ತದೆ. ಬಂಡವಾಳ ಪರದೇಶಗಳಿಗೆ ಹಾರಿಹೋಗುವುದು 462 ಬಿಲಿಯನ್ ರೂಗಳು. ಭ್ರಷ್ಟ ಉನ್ನತಾಧಿಕಾರಿಗಳು ಕದಿಯುವುದು 92000 ಕೋಟಿ ರೂಗಳು. ಇವೆಲ್ಲ ಕಪ್ಪು ಹಣವಾಗಿ ಪರಿವರ್ತನೆಯಾಗುತ್ತದೆ. ಅಧಿಕಾರದ ದುರುಪಯೋಗದ ಕಾರಣದಿಂದ, ಮಂತ್ರಿಗಳು, ಅಧಿಕಾರಿಗಳು, ಶಾಸಕರುಗಳ ಲೂಟಿಯ ಕಾರಣದಿಂದ ದೇಶದ ಆರ್ಥಿಕ ಪ್ರಗತಿ ಹಿಮ್ಮೆಟ್ಟುತ್ತಿದೆ. ಇದು ವಾಸ್ತವ.
ಹಣಕಾಸಿನ ವಹಿವಾಟನ್ನು ನಮ್ಮ ಸರ್ಕಾರಗಳು ಸರಿಯಾಗಿ ನಿರ್ವಹಿಸುತ್ತಿಲ್ಲ. ರಾಷ್ಟ್ರದ ಆದಾಯದ 1/6ರಷ್ಟು ಹಣ ಭಾರತದ 2/3ರಷ್ಟು ಜನಸಂಖ್ಯೆಗೆ ಹಂಚಿಕೆಯಾಗುತ್ತಿದೆ. 5/6ರಷ್ಟು ಆದಾಯ 1/3 ರಷ್ಟು ಜನರ ಪಾಲಾಗುತ್ತದೆ. ಸರ್ಕಾರದ ಒಟ್ಟು ಆದಾಯಕ್ಕೂ ಮಾಡುವ ಖರ್ಚಿಗೂ ಮಧ್ಯೆ ದೊಡ್ಡ ಕಂದರ ನಿರ್ಮಾಣವಾಗಿದೆ. ಸರ್ಕಾರದ ಸಾಧನೆಗೂ ವ್ಯಕ್ತಿಗಳ ನಿರೀಕ್ಷೆಗಳಿಗೂ ಅಜಗಜಾಂತರ. ಆಹಾರಧಾನ್ಯಗಳ ಬೆಲೆ ಗಗನಕ್ಕೇರುತ್ತಿದೆ. ಸರ್ಕಾರಕ್ಕೆ ಸಾಮಾನ್ಯರ ಕಷ್ಟ ಅರ್ಥವಾಗುತ್ತಲೇ ಇಲ್ಲ. ಈಚೆಗೆ ಸರ್ಕಾರದ ಸಾಲದ ಪಟ್ಟಿ ಹೆಚ್ಚಿದೆ. ಬಡ್ಡಿ ಕಟ್ಟಲು ಬಜೆಟ್‍ನಲ್ಲಿ ಪ್ರತಿವರ್ಷ ಬಜೆಟ್‍ನ ಶೇ.23ರಷ್ಟು ಹಣವನ್ನು ತೆಗೆದಿಡುತ್ತದೆ. ಸರ್ಕಾರ ದಿನಕ್ಕೆ 1600 ಕೋಟಿ ಸಾಲ ಮಾಡುತ್ತದೆ. ಆಹಾರ ಪದಾರ್ಥಗಳ ಹಂಚಿಕೆಯಲ್ಲಿ ಮೋಸ, ಅಳತೆಯಲ್ಲಿ ಮೋಸ, ಆಹಾರಧಾನ್ಯಗಳ ಕಳ್ಳ ಸಾಗಾಣಿಕೆಯಿಂದ ಸರ್ಕಾರಕ್ಕೆ 40000 ಕೋಟಿ ರುಪಾಯಿಗಳ ನಷ್ಟವಾಗುತ್ತದೆ. ಕಳೆದ 10 ವರ್ಷಗಳಿಂದಲೂ ಪ್ರತಿ ವರ್ಷ ಇಷ್ಟೊಂದು ನಷ್ಟವುಂಟಾಗುತ್ತಿದೆ.
ಈ ಎಲ್ಲ ಅನಿಷ್ಟಗಳನ್ನು ನಿವಾರಣೆ ಮಾಡಿಕೊಳ್ಳಬೇಕಾದ ತುರ್ತು ನಮ್ಮ ಕಣ್ಣೆದುರಿಗಿರುವಾಗಲೇ, ಈಗ ಹಿಂದು ಸೇವಾಸಂಸ್ಥೆಯ ಹೆಸರಿನಲ್ಲಿ ಭಯೋತ್ಪಾದಕರನ್ನು ಬೆಳೆಸಲಾಗುತ್ತಿದೆ. ಅವರಿಗೆ ಧರ್ಮದ ಅಫೀಮು ತಿನ್ನಿಸಿ ಯುವಕರ ತಲೆಕೆಡಿಸಿ ಸಮಾಜದಲ್ಲಿ ದ್ವೇಷಭಾವನೆ ಬೆಳೆಸಲು ಅನೇಕ ಸಂಘ ಸಂಸ್ಥೆಗಳನ್ನು ಹುಟ್ಟುಹಾಕಲಾಗಿದೆ. ಇದೊಂದು ಅತ್ಯಂತ ಅಪಾಯಕಾರಿ ಬೆಳವಣಿಗೆ. ದೇಶದಾದ್ಯಂತ ಅಶಾಂತಿ, ಗೊಂದಲ, ಹಿಂಸೆ, ಭಯೋತ್ಪಾದನೆ ಹರಡಲು ಮತಾಂಧ ಸಂಸ್ಥೆಗಳು ಹಿಂದೂ ಹೆಸರಿನಲ್ಲಿ ರೂಪತಾಳಿರುವುದು ಒಂದು ಭಯಾನಕ ಬೆಳವಣಿಗೆ.
ಒಟ್ಟಿನಲ್ಲಿ ಸಮಾಜದಲ್ಲಿ ಒಂದು ಅಲ್ಲೋಲಕಲ್ಲೋಲ ಪರಿಸ್ಥಿತಿ ಉದ್ಭವವಾಗುತ್ತಿದೆ. ಸಮಾಜದ ಇತರ ಪಿಡುಗುಗಳ ವಿರುದ್ಧ ಹೋರಾಡುವುದರ ಜೊತೆಗೆ ಈ ದುಷ್ಟ ಭಯೋತ್ಪಾದನೆಯ ಪ್ರವೃತ್ತಿಯನ್ನು ತಡೆಗಟ್ಟುವುದು ಎಲ್ಲ ಭಾರತೀಯರ ಆದ್ಯ ಕರ್ತವ್ಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...