Homeಮುಖಪುಟಎರಡು ಪ್ರೆಸ್ ಮೀಟ್: ಹೊಳೆದ ರಾಹುಲ್, ಕನಲಿದ ಮೋದಿ!

ಎರಡು ಪ್ರೆಸ್ ಮೀಟ್: ಹೊಳೆದ ರಾಹುಲ್, ಕನಲಿದ ಮೋದಿ!

ಸುಲಲಿತ ಮಾತು, ವಿನಯವಂತಿಕೆ, ವಾಸ್ತವದ ಅರಿವು, ಲಘುಹಾಸ್ಯ: 'ಲೀಡರ್ ಮಟಿರಿಯಲ್' ಹಾದಿಯಲ್ಲಿ ರಾಹುಲ್...

- Advertisement -
- Advertisement -

| ನಾನುಗೌರಿ ಡೆಸ್ಕ್ |

ಶುಕ್ರವಾರ ಸಾಯಂಕಾಲ ನಡೆದ ಎರಡು ಪತ್ರಿಕಾಗೋಷ್ಠಿಗಳ ಸ್ವರೂಪ ತದ್ವಿರುದ್ಧವಾಗಿದ್ದವು. ಮೊದಲ ಬಾರಿಗೆ ಪತ್ರಿಕಾಗೋಷ್ಠಿಯಲ್ಲಿ ಕುಳಿತ ದೇಶದ ಪ್ರಧಾನಿಯ ಮುಖದಲ್ಲಿ ಮಂದಹಾಸವಿರಲಿಲ್ಲ, ಇನ್ನೊಂದು ಪ್ರೆಸ್‍ಮೀಟ್‍ನಲ್ಲಿ ರಾಹುಲ್ ಗಾಂಧಿ ಹಸನ್ಮುಖಿಯಾಗಿದ್ದರು. ಪ್ರಧಾನಿ ಯಾವ ಪ್ರಶ್ನೆಗೂ ಉತ್ತರಿಸದೇ ಸೊಕ್ಕೆ ಪ್ರದರ್ಶಿಸಿದರೆ, ರಾಹುಲ್ ಎಲ್ಲ ಪ್ರಶ್ನೆಗಳಿಗೂ ಸರಳವಾಗಿ, ವಿನಯವಂತಿಕೆಯಿಂದ ಉತ್ತರಿಸಿದರು.

ಸುಲಲಿತ ಮಾತಿನ ಓಘ, ಅಲ್ಲಲ್ಲಿ ಲಘು ಹಾಸ್ಯ ಮತ್ತು ದೇಶದ ಪ್ರಚಲತ ಸಮಸ್ಯೆಗಳ ಬಗೆಗೆನ ಅರಿವು… ರಾಹುಲ್ ಪಳಗಿದ್ದಾರೆ. ನಿಜವಾದ ‘ಲೀಡರ್ ಮಟಿರಿಯಲ್’ ಆಗುವ ಹಾದಿಯಲ್ಲಿ ಸದೃಡ ಹೆಜ್ಜೆ ಹಾಕುತ್ತಿದ್ದಾರೆ ಎಂಬುದಕ್ಕೆ ರಾಹುಲ್ ನಡೆಸಿದ ಪತ್ರಿಕಾಗೋಷ್ಠಿ ನಿದರ್ಶನವಾಗಿತ್ತು. ರಾಹುಲ್ ಮಾತಾಡಿದ್ದನ್ನು ಇಲ್ಲಿ ಸಾರಾಂಶೀಕರಿಸಿ, ಅವರದೇ ಮಾತಿನ ಲಹರಿಯಲ್ಲಿ ಕನ್ನಡದಲ್ಲಿ ನಿಮ್ಮ ಮುಂದೆ ಇಡುತ್ತಿದ್ದೇವೆ…..

‘ಮೊದಲಿಗೆ ಮಾಧ್ಯಮದ ಎಲ್ಲರಿಗೂ ಧನ್ಯವಾದಗಳು. ಅದಕ್ಕಿಂತ ಮುಖ್ಯವಾಗಿ ಬರಲಿರುವ ದಿನಗಳಲ್ಲಿ ಈ ದೇಶ ಯಾವ ದಾರಿಯಲ್ಲಿ ಸಾಗಬೇಕೆಂದು ಸೂಚಿಸುವ ಈ ದೇಶದ ಜನರಿಗೆ ಧನ್ಯಾವಾದಗಳು… ನಮ್ಮ ಕಾರ್ಯಕರ್ತರು, ಬೂತ್ ಕಮಿಟಿ ಸದಸ್ಯರು, ನಮ್ಮ ಅಭ್ಯರ್ಥಿಗಳು, ಎಲ್ಲ ನಾಯಕರಿಗೂ ಧನ್ಯವಾದಗಳು….

ಪ್ರಶ್ನೆ ಕೇಳಲು ಶುರು ಮಾಡಿ…

(ಪ್ರೆಸ್: ನೀವು ಪದೇ ಪದೇ ಮೋದಿಯವರು ಉತ್ತರ ನೀಡಲ್ಲ, ಪ್ರೆಸ್‍ನಿಂದ ದೂರ ಅಂತಿದ್ದಿರಿ. ಈಗ ಅವರು ಪ್ರೆಸ್ ಮೀಟ್ ಮಾಡ್ತಾ ಇದ್ದಾರೆ)

ಹಾಂ ಹಾಂ ಹಾಂ…. ನಾನೂ ಈ ವಿಷಯ ಕೇಳಿದೆ… ಬಡಾ ಕಾಮ್! ಅಂತೂ ಈ ದೇಶದ ಪ್ರಧಾನಿ ಮೊದಲ ಹೆಜ್ಜೆ ಇಟ್ಟರಲ್ಲ. ಗ್ರೇಟ್… ನಮ್ಮ ರಣದೀಪ್ (ಸುರ್ಜೇವಾಲ) ಹೇಳ್ತಾ ಇದ್ದರು: ಅಮಿತ್ ಶಾ ಜೊತೆ ಪ್ರಧಾನಿ ಪ್ರೆಸ್‍ಮೀಟ್‍ಗೆ ಹೋಗಿದ್ದಾರೆಂದು… ವಾವ್ ಎಂತಹ ಅಸಾಂಪ್ರದಾಯಿಕ ನಡೆ.. ಈ ದೇಶದ ಪ್ರಧಾನಿ ಮೊದಲ ಬಾರಿಗೆ ಪಾರ್ಟಿ ಅಧ್ಯಕ್ಷರ ಜೊತೆಗಾರರಾಗಿ ಪ್ರೆಸ್ ಮೀಟ್ ಮಾಡ್ತಾ ಇದ್ದಾರೆ…ನೋಡೋಣ ಅಲ್ಲಿ ಉತ್ತರ ನೀಡ್ತಾರಾ ಅಂತ.. ಮತ್ತೆ ರಣದೀಪ್ ಹೇಳಿದರು ಅಲ್ಲಿ ಬೇಗನೇ ಎಲ್ಲ ಬಾಗಿಲು ಮುಚ್ಚಿ ಬಂದೋಬಸ್ತ್ ಮಾಡಿದ್ದರು ಅಂತಾ… ನಮ್ಮ ಕಡೆಯಿಂದ ಕೆಲವು ಪ್ರಶ್ನೆಗಳನ್ನು ಕೇಳಲು ಒಂದಿಬ್ಬರು ಜರ್ನಲಿಸ್ಟ್‍ಗೆ ಹೇಳಿದ್ದೆವು. ಆದರೆ ಬಾಗಿಲು ತೆಗೆಯದೇ ಇದ್ದುದರಿಂದ ವಾಪಸ್ ಬಂದರು…

ಪ್ರಧಾನಿಯ ಪ್ರೆಸ್ ಮೀಟ್ ಲೈವ್ ಇರಬೇಕಿತ್ತು. ನಾನೂ ಒಂಡೆರಡು ಪ್ರಶ್ನೆ ಕೇಳುವುದಿತ್ತು. ರಫೇಲ್ ಡೀಲ್ ಬಗ್ಗೆ ನನ್ನ ಜೊತೆ ಚರ್ಚಿಸಲು ನೀವೇಕೆ ಹಿಂಜರಿದಿರಿ? ನಾನು ಕೇಳಬೇಕಿತ್ತು: ಈ ಹಿಂದೂಸ್ತಾನದ ಜನರ ಬೆವರಿನ 30 ಸಾವಿರ ಕೋಟಿ ರೂ.ಗಳನ್ನು ಅಂಬಾನಿಗೇಕೆ ನೀಡಿದಿರಿ? ಈ ಚರ್ಚೆ ಮಾಡಲು ನೀವು ಹೆದರಿಬಿಟ್ಟಿರಲ್ಲ?

(ಪ್ರೆಸ್: ಸರ್ಕಾರ ರಚನೆ ಕುರಿತು…ಈ ಪ್ರಶ್ನೆ ವಿವಿಧ ರೂಪದಲ್ಲಿ ಮತ್ತೆ ಮತ್ತೆ ಬಂತು)

ನಾನು ಮೊನ್ನೇನೆ ಹೇಳಿದ್ದೀನಿ..ಆದರೂ ಅದೇ ಪ್ರಶ್ನೆಯನ್ನು ಬೇರೆ ಬೇರೆ ರೂಪದಲ್ಲಿ ಮತ್ತೆ ವಾಪಸ್ ಕೇಳ್ತಾ ಇದ್ದೀರಿ. ಮೇ 23ಕ್ಕೆ ಕಾಯೋಣ… ನಿಮಗ್ಯಾಕೆ ಇಷ್ಟು ಆತುರ? ಜನರ ನಿರ್ಧಾರ ನೋಡಿದ ನಂತರವಷ್ಟೇ ಆ ಬಗ್ಗೆ ನಾನು ಮಾತಾಡುವೆ… ಜನಾದೇಶಕ್ಕೆ ನಾನು ಗೌರವ ಕೊಡುವೆ….

ನೀವು ನನಗೆ ಎಂತಹ ಕಠಿಣ ಪ್ರಶ್ನೆ ಕೇಳುತ್ತ ಬಂದಿದ್ದೀರಿ. ನ್ಯಾಯ್ ಯೋಜನೆಗೆ ದುಡ್ಡನ್ನು ಎಲ್ಲಿಂದ ತರುತ್ತೀರಿ ಇತ್ಯಾದಿ… ಆದರೆ ಮೋದೀಜಿಗೆ, ನೀವು ಮಾವಿನ ಹಣ್ಣು ಹೇಗೆ ತಿಂತೀರಿ, ನೀವು ಕುರ್ತಾ ತೋಳನ್ನು ಕಟ್ ಮಾಡ್ತಿದ್ದಿರಂತೆ, ಡ್ರೆಸ್ ಹೇಗೆ ಹಾಕಿಕೊಳ್ಳುತ್ತೀರಿ, ಈ ಕುರ್ತಾ ಎಲ್ಲಿಂದ ತಂದೀರಿ?
(ಮಂದಹಾಸದಲ್ಲಿ) ಇಂತಹ ಪ್ರಶ್ನೆ ಕೇಳ್ತಿರಪ್ಪ…

(ಪ್ರೆಸ್: ಸರ್ ಅದು ಪ್ರೆಸ್‍ನವರ ಸಂದರ್ಶನ ಅಲ್ಲ ಎಂದು ತಮಾಷೆ)

ಹಾ ಗೊತ್ತು… ಮೊನ್ನೆ ಪ್ರೆಸ್‍ನವರೇ ಬಾಲಾಕೋಟ್ ಬಗ್ಗೆ ಕೇಳಿದರಲ್ಲ? ಅದಕ್ಕೆ ಮೋದೀಜಿ, ಮಳೆ ಬರ್ತಾ ಇದೆ ಅಂತಾ ಹವಾಮಾನ ವರದಿ ಹೇಳೋಕೆ ಶುರು ಮಾಡಿದಾಗ ನನಗೆ ಗಾಬರಿ ಆಯ್ತು… ಅವರು ಏರ್‍ಫೋರ್ಸ್‍ನ ಅಧಿಕಾರಿಗಳಿಗೆ ಹೇಳಿದರಂತೆ: ಮೋಡ ಇವೆ, ರೇಡಾರ್‍ನಿಂದ ತಪ್ಪಿಸಿಕೊಬಹುದು, ದಾಳಿ ಮಾಡಿಬಿಡಿ…(ಬಲಗೈಯಿಂದ 4-5 ಸಲ ಮೇಜು ಕುಟ್ಟುತ್ತ) ಪ್ರೈಮ್ ಮಿನಿಸ್ಟರ್ ಎಕ್ಸ್‍ಲೆಂಟ್! ಪ್ರೈಮ್ ಮಿನಿಸ್ಟರ್ ಆಫ್ ಇಂಡಿಯಾ ಎಕ್ಸ್‍ಲೆಂಟ್…..

(ಪ್ರೆಸ್: ವೈಯಕ್ತಿಕ ಟೀಕೆ ಕುರಿತಂತೆ)

ನೋಡಿ, ನನಗೆ ಮೋದಿಯವರ ಬಗ್ಗೆ, ಅವರ ತಂದೆ ತಾಯಿಯವರ ಬಗ್ಗೆ ಗೌರವವಿದೆ. ಅವರ ತಂದೆ ತಾಯಿ ರಾಜಕೀಯದಲ್ಲಿ ಇಲ್ಲ, ಆದರೆ ಅವರೂ ತಪ್ಪು ಮಾಡಿದ್ದರೆ, ಅದನ್ನು ನಾನು ಪ್ರಶ್ನಿಸಲು ಹೋಗುವುದಿಲ್ಲ… ನನ್ನ ಬಗ್ಗೆ, ನನ್ನ ಪರಿವಾರದ ಬಗ್ಗೆ, ನನ್ನ ತಂದೆ-ತಾಯಿ ಬಗ್ಗೆ ಟೀಕಿಸಿವುದು, ಕೆಟ್ಟದಾಗಿ ಮಾತಾಡುವುದು ಮೋದೀಜಿಯವರಿಗೆ ಬಿಟ್ಟಿದ್ದು… ಅವರು ಎಷ್ಟಾದರೂ ಟೀಕಿಸಲಿ…

(ಪ್ರೆಸ್: ವಿಪಕ್ಷವಾಗಿ ಕಾಂಗ್ರೆಸ್ ಪಾತ್ರದ ಕುರಿತು)

2014ರ ಸಂಸತ್‍ನಲ್ಲಿ ನಮಗೆ ತುಂಬ ಕಡಿಮೆ ಸೀಟು ಇದ್ದವು. ಆದರೆ ನಾನು ಖುಷಿಯಿಂದ, ಗರ್ವದಿಂದ ಹೇಳುತ್ತೇನೆ: ವಿಪಕ್ಷವಾಗಿ ಕಾಂಗ್ರೆಸ್ ಅತ್ಯುತ್ತಮ ಅಂದರೆ ‘ಎ’ ಗ್ರೇಡ್ ಮಟ್ಟದ ರಚನಾತ್ಮಕ ವಿರೋಧವನ್ನು ಮಾಡಿದೆ. ಮೋದೀಜಿ ತಪ್ಪಿಸಿಕೊಳ್ಳದಂತೆ ನಾವು ಶೇ 90ರಷ್ಟು ಬಾಗಿಲುಗಳನ್ನು ಮುಚ್ಚಿದ್ದೇವೆ….
ಮೋದಿಯವರಿಗೆ ದೊಡ್ಡ ಅವಕಾಶಗಳಿದ್ವು.. ಅವರಿಂದ ನಾವು ಉತ್ತಮ ಕೆಲಸ ನಿರೀಕ್ಷಿದ್ದೆವು.. ಜನರ ಸಮಸ್ಯೆಗಳನ್ನು ಅವರು ಅರ್ಥ ಮಾಡಿಕೊಳ್ಳಲೇ ಇಲ್ಲ. ಅವರು ಯಾವ ಪ್ರಪಂಚದಲ್ಲಿ ಇದ್ದಾರೋ? ಜನರು ಅವರನ್ನು ಪ್ರಧಾನಿ ಪಟ್ಟದಲ್ಲಿ ಕೂಡಿಸಿದ್ದು ಅವರ ಬೋಧನೆಗಳನ್ನು ಕೇಳುತ್ತ ಕೂಡಲಲ್ಲ. ಅವರು ಸಮಸ್ಯೆ ಬಗೆಹರಿಸಲು.. ನಿರುದ್ಯೋಗ, , ರೈತರ ಬಿಕ್ಕಟ್ಟು, ಆರ್ಥಿಕತೆಯ ಕುಸಿತ ಇದ್ಯಾವುದಕ್ಕೂ ಅವರು ಸ್ಪಂದಿಸಲೇ ಇಲ್ಲ… ನೋಟ್‍ಬ್ಯಾನ್, ಗಬ್ಬರ್‍ಸಿಂಗ್ ಟ್ಯಾಕ್ಸ್ ಮೂಲಕ ಅರ್ಥವ್ಯವಸ್ಥೆಯನ್ನು ಹಾಳು ಮಾಡಿದರು…

ನಾವು ಈ ಎಲ್ಲ ಸಮಸ್ಯೆ ಇಟ್ಟುಕೊಂಡು ದೇಶಾದ್ಯಂತ ಹೋರಾಟ ಮಾಡಿದ್ದೇವೆ. ಮಧ್ಯಪ್ರದೇಶ, ರಾಜಸ್ಥಾನ, ಚತ್ತೀಸಘಡಗಳಲ್ಲಿ ಅದರ ಪರಿಣಾಮ ನೀವು ನೋಡಿದ್ದೀರಿ.. ಈ ಚುನಾವಣೆಯಲ್ಲಿ ಮೇಲೆ ಹೇಳಿದ ಸಮಸ್ಯೆಗಳನ್ನು ಇಟ್ಟುಕೊಂಡೇ ನಾವು ಪ್ರಚಾರ ಮಾಡಿದ್ದೇವೆ…

ಇದನ್ನು ಓದಿರಿ ನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ ಕಾರ್ಟೂನುಗಳು

ಪ್ರೆಸ್: ಉತ್ತರ ಪ್ರದೇಶದಲ್ಲಿ ಮೈತ್ರಿ ಆಗದೇ ಇದ್ದುದರ ಕುರಿತು)

ಕೇಳಿ ಇಲ್ಲಿ. ಈ ಸಲ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ತನ್ನ ಸ್ಪೇಸ್‍ಗಾಗಿ ಹುಡುಕಾಡಿಲ್ಲ. ನಮ್ಮ ಮೊದಲ ಉದ್ದೇಶ ಮೋದಿಯನ್ನು ಸೋಲಿಸುವುದು… ಕಾಂಗ್ರೆಸ್ ನೀತಿಗಳನ್ನು ಜನರಿಗೆ ತಲುಪಿಸುವುದು… ಮುಂದಿನದು ಅಸೆಂಬ್ಲಿ ಚುನಾವಣೆ…

ಎಸ್‍ಪಿ-ಬಿಎಸ್‍ಪಿ ಮೈತ್ರಿಯನ್ನು ನಾವು ಸ್ವಾಗತಿಸಿದ್ದೇವೆ. ಮಾಯಾವತಿಯವರ ಬಗ್ಗೆ ನನಗೆ ಗೌರವವಿದೆ… ಮಾಯಾವತಿ, ಮಮತಾ ಬ್ಯಾನರ್ಜಿ, ನಾಯ್ಡು ಇವರ್ಯಾರೂ ಮೋದಿ ಬೆಂಬಲಿಸುವುದಿಲ್ಲ ಎಂಬ ಖಾತ್ರಿಯಿದೆ…

ಈ ಚುನಾವಣೆ ಆರೆಸ್ಸೆಸ್ ಬಿಜೆಪಿಗಳಿಂದ ನಮ್ಮ ಸಂವಿಧಾನ ರಕ್ಷಿಸಲು, ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ಕಾಪಾಡಿಕೊಳ್ಳಲು ನಡೆದಿದೆ,, ಜನ ನಮಗೆ ಅವಕಾಶ ಕೊಡುತ್ತಾರೆ ಎಂಬ ನಂಬಿಕೆಯಿದೆ…

ಎಲ್ಲರಿಗೂ ಧನ್ಯವಾದ…(ಮತ್ತೆ ನಗುತ್ತ) ನಾನೀಗ ಪ್ರೆಸ್ ಮೀಟ್ ಚೆನ್ನಾಗಿ ಮಾಡ್ತಾ ಇದ್ದೀನಿ ಅಲ್ಲವಾ? ಹೌದಲ್ಲೋ ನೀವೇ ನೋಡಿದಿರಲ್ಲ ಈಗ.. ಅದಕ್ಕೆ ಯಾರು ಕಾರಣ? ನೀವೇ… ನನ್ನ ತಪ್ಪುಗಳನ್ನು ತಿದ್ದಿಕೊಳ್ಳಲು ನೆರವಾಗಿದ್ದೀರಿ… ಥ್ಯಾಂಕ್ಸ್, ಆಲ್ ದಿ ಬೆಸ್ಟ್

ಇದನ್ನು ಓದಿರಿ ಇದಿಂನ ಅಮಿತ್ ಷಾ ಪತ್ರಿಕಾಗೋಷ್ಠಿಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...