Homeಮುಖಪುಟರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

ರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

- Advertisement -
- Advertisement -

ಅಮೇಥಿಯಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪತ್ರಕರ್ತರೊಡನೆ ಮಾತನಾಡುತ್ತಿರಬೇಕಾದರೆ, ಅವರ ತಲೆ, ಕಿವಿಯ ಮೇಲಿನ ಭಾಗಗಳಲ್ಲಿ ಲೇಸರ್ ಲೈಟ್‍ನಿಂದ ಹೊರಡುವ ರೀತಿಯ ಬೆಳಕು ಬಿದ್ದಿದೆ. ಅತೀ ಸಣ್ಣ ಅವಧಿಯಲ್ಲೇ 7 ಬಾರಿ ಈ ರೀತಿಯ ಬೆಳಕು ಓಡಾಡಿದೆ. ಆ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಪಡೆಯುತ್ತಿದ್ದ ಕ್ಯಾಮೆರಾಗಳಲ್ಲಿ ಇದು ಸ್ಪಷ್ಟವಾಗಿ ಕಂಡಿದೆ. ಇದು ಸ್ನೈಪರ್ ಗನ್‍ನಿಂದ ಶೂಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಆ ರೀತಿಯ ಬೆಳಕು ಬರುತ್ತದೆ ಎಂದು ರಕ್ಷಣಾ ಕೆಲಸದಲ್ಲಿರುವ ಕೆಲವರೂ ಹೇಳಿದ್ದಾರೆಂದು ಉಲ್ಲೇಖಿಸಿ, ಕಾಂಗ್ರೆಸ್ ನಾಯಕರಾದ ಅಹ್ಮದ್ ಪಟೇಲ್, ಸುರ್ಜೇವಾಲಾ ಮತ್ತು ಜೈರಾಂ ರಮೇಶ್ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಇದು ರಾಹುಲ್ ಗಾಂಧಿಯವರನ್ನು ಹತ್ಯೆಗೈಯ್ಯುವ ಸಂಚು ಆಗಿರಬಹುದು. ಹಾಗಾಗಿ ಅದರ ಕುರಿತು ಉನ್ನತ ಮಟ್ಟದ ತನಿಖೆ ನಡೆದು ಅಂತಹ ಅಪಾಯ ಇಲ್ಲದಂತೆ ಮಾಡಬೇಕು ಎಂದು ಈ ಪತ್ರ ಕೇಳಿದೆ.

ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಇಲಾಖೆಯು, ಎಸ್‍ಪಿಜಿ ಮುಖ್ಯಸ್ಥರ ಜೊತೆ ಈ ಕುರಿತು ಚರ್ಚೆ ನಡೆದಿದೆಯೆಂತಲೂ, ಅದು ಯಾರದ್ದೋ ಮೊಬೈಲ್ ಫೋನ್‍ನಿಂದ ಹೊರಟಿರುವ ಬೆಳಕು ಅಷ್ಟೇ ಆಗಿದೆಯೆಂಬ ಅಭಿಪ್ರಾಯವಿದೆ ಎಂದು ಹೇಳಿದೆಯೆಂದು ಎನ್‍ಡಿಟಿವಿ ವರದಿ ಮಾಡಿದೆ. ಆದರೆ, ಉತ್ತರ ಪ್ರದೇಶ ಸರ್ಕಾರವು ಭದ್ರತೆಯಲ್ಲಿ ತೋರಿಸುತ್ತಿರುವ ಲೋಪದ ಕಾರಣಕ್ಕೇ ಹೀಗೆ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್‍ಗಾಂಧಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗಲೂ ಅವಘಡ ಸಂಭವಿಸಿತ್ತು. ವಿಮಾನವು ಸರಿಯಾಗಿ ಲ್ಯಾಂಡ್ ಆಗದೇ, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೂ ಸಹಾ ಹತ್ಯೆಯ ಪ್ರಯತ್ನ ಇರಬಹುದೇ ಎಂಬ ಸಂದೇಹವನ್ನು ಹಲವರು ವ್ಯಕ್ತಪಡಿಸಿದ್ದರು. ನಂತರ ನಾಗರಿಕ ವಿಮಾನಯಾನ ನಿಯಂತ್ರಣ ಪ್ರಾಧಿಕಾರ ಡಿಜಿಸಿಎ, ಅದನ್ನು ಅಲ್ಲಗಳೆದಿತ್ತು. ಆಟೋ ಪೈಲಟ್ ಮೋಡ್‍ಗೆ ವಿಮಾನವನ್ನು ಹಾಕಲಾಗಿತ್ತೆಂದೂ, ನಂತರ ಚಾಲಕ ಅದನ್ನು ಮ್ಯಾನ್ಯುಯೆಲ್ ಮೋಡ್‍ಗೆ ಹಾಕಿ ನಿಭಾಯಿಸಿದರೆಂದೂ, ಇದು ಮಾಮೂಲಿಯೆಂತಲೂ ಅದು ಹೇಳಿತ್ತು.

ವಿಡಿಯೋ ನೋಡಿ

ರಾಹುಲ್‍ಗಾಂಧಿಯವರ ತಂದೆ ರಾಜೀವ್‍ಗಾಂಧಿ ಮತ್ತು ಅವರ ಅಜ್ಜಿ ಇಂದಿರಾಗಾಂಧಿಯವರೂ ಅವರ ಮೇಲೆ ನಡೆದ ಹತ್ಯಾಪ್ರಯತ್ನಗಳಿಂದಲೇ ಜೀವ ಕಳೆದುಕೊಂಡಿದ್ದರು ಎಂಬುದನ್ನಿಲ್ಲಿ ಸ್ಮರಿಸಬಹುದು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ವ್ಯಕ್ತವಾಗಿದ್ದು, ಅವರು ರಾಜಕಾರಣದಿಂದಲೇ ಹೊರಗುಳಿದರೂ ಪರವಾಗಿಲ್ಲ, ವಿದೇಶಕ್ಕೆ ಹೋದರೂ ಪರವಾಗಿಲ್ಲ, ಅವರ ಸುರಕ್ಷತೆ ಮುಖ್ಯ. ಆ ಕುಟುಂಬದಲ್ಲಿ ಮತ್ತೊಂದು ದುರಂತ ನಡೆಯದಿರಲಿ ಎಂಬ ಚರ್ಚೆಯನ್ನು ಹಲವರು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...