Homeಮುಖಪುಟರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

- Advertisement -
- Advertisement -

ನಿಮಗಿದು ಗೊತ್ತೇ? ಮೊನ್ನೆಯಷ್ಟೇ ಬಿಜೆಪಿ ಸೇರಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಿಯಲ್ ಎಸ್ಟೇಟ್ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಹಾಜರಾಗುವಂತೆ ಕಳೆದ ಡಿಸೆಂಬರ್ ನಲ್ಲಿ ಕೋರ್ಟ್ ವಾರೆಂಟ್ ಹೊರಡಿಸಿತ್ತು.

ರುದ್ರಾ ಬಿಲ್ಡ್ವೆಲ್ ಕಂಪನಿಯ ಪ್ರಾಜೆಕ್ಟ್ ಒಂದರಲ್ಲಿ ನಡೆದ ಮೋಸ ಮತ್ತು ಪಿತೂರಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಗೆ ಈ ಕಂಪನಿಯ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸತತ ಗೈರು ಹಾಜರಾಗಿದ್ದರು. ನಂತರ ಜನವರಿ 24, 2019ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ದೆಹಲಿ ಹೈಕೋರ್ಟ್ ಖಡಕ್ ವಾರ್ನಿಂಗ್ ನೀಡಿತ್ತು. ಆದರೆ ಗಂಭೀರ್ ತಮ್ಮ ಮೇಲಿನ ಪ್ರಕರಣ ಕೈ ಬಿಡುವಂತೆ ಮೇಲ್ಮನವಿ ಸಲ್ಲಿಸಿದ್ದರು. ದೆಹಲಿಯ ಸಾಕೇತ್ ಕೋರ್ಟ್ ಅರ್ಜಿಯನ್ನು ವಜಾ ಮಾಡಿತ್ತು.

ದೆಹಲಿಯ ಗಾಜಿಯಾಬಾದ್ ನ ಇಂದಿರಾಪುರಂನಲ್ಲಿ ಶುರುವಾಗಬೇಕಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಪ್ಲ್ಯಾಟ್ ಖರೀದಿಸಲು ಅನೇಕರು ಕೋಟ್ಯಾಂತರ ರೂಪಾಯಿ ಹೂಡಿಕೆ ಮಾಡಿದ್ದರು. ಆದರೆ ಕಟ್ಟಡ ನಿರ್ಮಾಣ ಕೆಲಸ ಇನ್ನೂ ಪ್ರಾರಂಭವಾಗಿಲ್ಲ ಎಂದು ಹೂಡಿಕೆದಾರರು 2016ರಲ್ಲಿ ದೂರು ಸಲ್ಲಿಸಿದ್ದರು. ಹೂಡಿಕೆದಾರರನ್ನು ವಂಚಿಸುವ ಸಲುವಾಗಿಯೇ ಈ ಪ್ರಾಜೆಕ್ಟನ್ನು ಆರಂಭಿಸಲಾಗಿತ್ತು ಎಂದು ಈ ದೂರಿನಲ್ಲಿ ಹೇಳಲಾಗಿದ್ದು ಪ್ರಕರಣ ವಿಚಾರಣೆಯ ಹಂತದಲ್ಲಿದೆ.

ಈ ಎಲ್ಲಾ ಕೇಸುಗಳಿಂದ ಬೇಸತ್ತಿರುವ ಗಂಭೀರ್ ಈ ಕಾರಣಕ್ಕಾಗಿಯೇ ಖುಸೆಗೊಳ್ಳಲು ಬಿಜೆಪಿ ಸೇರಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಈ ಹಿಂದೆಯೂ ಹಲವಾರು ಜನ ತಮ್ಮ ಮೇಲಿನ ಕೇಸುಗಳಿಂದ ತಪ್ಪಿಸಿಕೊಳ್ಳಲು ಬಿಜೆಪಿ ಸೇರಿದ್ದರು ನಂತರ ಅವರ ಕೇಸುಗಳು ಖುಲಾಸೆಗೊಂಡ ಸಾಕಷ್ಟು ಉದಾಹರಣೆಗಳು ಸಹ ಇವೆ.

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕೇಳಿ ಬಂದಿದ್ದ ಮುಕುಲ್ ರಾಯ್ ಬಿಜೆಪಿ ಸೇರ್ಪಡೆ

ಈ ಹಿಂದೆಯೂ ಮುಕುಲ್ ರಾಯ್ ಶ್ರದ್ಧಾ ಚಿಟ್ ಫಂಡ್ ಸ್ಕ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ನಂತರ ಅವರು ಬಿಜೆಪಿ ಸೇರಿದ ಕೂಡಲೇ ಹಗರಣ ಮುಕ್ತರಾದರು. ಹಿಮಾಚಲ ಪ್ರದೇಶದ ಅನಿಲ್ ಶರ್ಮಾ ಟಿಲಿಕಾಂ ಹಗರಣದಲ್ಲಿ ಸಿಲುಕಿಕೊಂಡು ಬಿಜೆಪಿ ಸೇರಿ ಬಗೆಹರಿಸಿಕೊಂಡರು. ಇಂತಹ ಹತ್ತಾರು ಉದಾಹರಣೆಗಳ ಸಾಲಿಗೆ ಹೊಸ ಸೇರ್ಪಡೆ ಗೌತಮ್ ಗಂಭೀರತೆ ಆಗಿದ್ದಾರೆ.

ಒಂದು ರಾಜಕೀಯ ಪಕ್ಷಕ್ಕೆ ಆರೋಗ್ಯಕರವೆನಿಸದ `ಕಾಂಗ್ರೆಸ್ ಮುಕ್ತ ಭಾರತ ಮಾಡುವೆ’ ಎಂದು ಹೊರಟ ಬಿಜೆಪಿ ಅದಕ್ಕೋಸ್ಕರ ಆಯ್ದುಕೊಂಡಿದ್ದು ಜನರಿಗೆ ಹತ್ತಿರವಾಗುವ ಜನಪರ ಹಾದಿಯನ್ನಲ್ಲ, ಬದಲಿಗೆ ಕಾಂಗ್ರೆಸಿನ ಹಗರಣವೀರರನ್ನು ತನ್ನತ್ತ ಸೆಳೆದುಕೊಂಡು ಕಾಂಗ್ರೆಸ್ ಅನ್ನು ಶುದ್ಧಗೊಳಿಸಿದ್ದು! ಈ ವಿಚಾರದಲ್ಲಿ ಬಿಜೆಪಿ ಎರಡು ರೀತಿಯಲ್ಲಿ ವ್ಯವಹರಿಸುತ್ತಾ ಬಂದಿದೆ. ಒಂದು, ಹಗರಣದಲ್ಲಿ ಸಿಕ್ಕಿಹಾಕಿಕೊಂಡವರಿಗೆ ತಮ್ಮ ಪಕ್ಷಕ್ಕೆ ಆಹ್ವಾನಿಸಿ ಅವರಿಗೆ ತಮ್ಮ ಪ್ರಭಾವ ಮತ್ತು ಅಧಿಕಾರ ದುರಪಯೋಗ ಬಳಸಿ ಕ್ಲಿನ್ ಚಿಟ್ ನೀಡಲಾಗುತ್ತದೆ. ಒಂದುವೇಳೆ ಅವರು ಪಕ್ಷಕ್ಕೆ ಬರದಿದ್ದರೆ ಅಂಥವರ ಮೇಲೆ ಐ.ಟಿ ದಾಳಿ, ಇ.ಡಿ ದಾಳಿ ರೀತಿಯಲ್ಲಿ ಬೆದರಿಕೆ ಒಡ್ಡಿ, ಸಿಬಿಐ ತನಿಖೆಯ ಗುಮ್ಮನನ್ನು ತೋರಿಸಿ ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಅಪ್ರಜಾತಾಂತ್ರಿಕ ನಡೆ ಎರಡನೆಯದ್ದು.

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ

ಕರ್ನಾಟಕದ ಎಸ್.ಎಂ ಕೃಷ್ಣರವರು ಸಹ ತೆರಿಗೆ ವಂಚನೆಯ ಬಲೆಯಲ್ಲಿ ಬಂಧಿಯಾಗಿದ್ದ ತಮ್ಮ ಅಳಿಯ ಸಿದ್ಧಾರ್ಥ ಹೆಗ್ಡೆಯನ್ನು ಬಚಾವು ಮಾಡಿಕೊಳ್ಳುವುದಕ್ಕಾಗಿ ಇಳಿ ವಯಸ್ಸಿನಲ್ಲಿ ಬಿಜೆಪಿ ಸೇರಿ ಮೂಲೆಗುಂಪಾದರು ಎಂಬ ಮಾತುಗಳಿವೆ. ಕೊಡಗು ಚಿಕ್ಕಮಗಳೂರು ಬೇನಾಮಿ ಕಾಫಿ ಎಸ್ಟೇಟ್ ಕುರಿತು ಸಿದ್ದಾರ್ಥ ವಿರುದ್ಧ ದೂರುಗಳಿದ್ದವು. ತನಿಖೆ ಭಯಕ್ಕಾಗಿಯೇ ಬಿಜೆಪಿ ಸೇರಿದ್ದರು ಎಂಬ ಮಾತುಗಳು ಚಾಲ್ತಿಯಲ್ಲಿವೆ. ಇನ್ನು ದೇಶ ಬಿಟ್ಟು ಓಡಿಹೋದ ಕಳ್ಳ ಉದ್ಯಮಿಗಳಿಗೆಲ್ಲಾ ನೇರ ಬಿಜೆಪಿಯೇ ಸಹಕರಿಸಿದ್ದಲ್ಲದೇ ಅವರಿಂದ ಹೇರಳವಾಗಿ ಪಾರ್ಟಿ ಫಂಡ್ ಪಡೆಯಿತ್ತಿರುವುದರ ಬಗ್ಗೆ ಬಿಜೆಪಿಯ ಮಿತ್ರ ಶಿವಸೇನೆಯೇ ಆರೋಪ ಮಾಡಿದೆ.

ಅವಕಾಶ ಸಿಕ್ಕಾಗಲೆಲ್ಲಾ ದೆಹಲಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿರುವ ಆಪ್ ಸರ್ಕಾರವನ್ನು ಗಂಭೀರ್ ಟೀಕಿಸಿದ್ದರು. ಕಳೆದ ವರ್ಷ ಗಂಭೀರ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಕೇಳಿಬಂದ ಸಂದರ್ಭದಲ್ಲಿ ಅದನ್ನು ಸ್ವತಃ ತಳ್ಳಿಹಾಕಿದ್ದರು. ಆದರೆ ಈಗ ಯಾವುದೇ ಮಾತುಕತೆಗಳಿಲ್ಲದೆ ಇದ್ದಕ್ಕಿದ್ದಂತೆ ಬಿಜೆಪಿ ಸೇರಿ ಕೂತುಹಲಕ್ಕೆ ತೆರೆ ಎಳೆದಿದ್ದಾರೆ.

ಇನ್ನೂ ಅನುಮಾನಗಳಿಗೆ ಎಡೆಮಾಡಿಕೊಡುವ ಕಾರಣವೆಂದರೆ ಗಂಭೀರ್ ಅವರು ತರಾತುರಿಯಲ್ಲಿ ಬಿಜೆಪಿ ಸೇರಿದ್ದರು ಕೂಡ ಈ ಲೋಕಸಭೆಯಲ್ಲಿ ಸ್ಪರ್ಧಿಸುವ ಕುರಿತು ಯಾವುದೇ ಸ್ಪಷ್ಟನೆಯನ್ನು ನೀಡುತ್ತಿಲ್ಲ. ಈ ಕುರಿತು ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿ ಮುಖಂಡರು ಅಧಿಕಾರಯುತ ಧ್ವನಿಯಲ್ಲಿ ಹೇಳುತ್ತಿರುವುದು ಊಹಾಪೋಹಗಳಿಗೆ ಕಾರಣವಾಗಿದೆ. ಬಿಜೆಪಿಯಲ್ಲಿ ಗಂಭೀರ್ ಭವಿಷ್ಯ ಏನಾಗಲಿದೆ ಎನ್ನುವುದಕ್ಕಿಂತ ಇಂಥಾ ಅಪ್ರಜಾತಾಂತ್ರಿಕ ನಡೆಗಳಿಂದ ಸ್ವತಃ ಬಿಜೆಪಿಯೇ ತನ್ನ ಭವಿಷ್ಯ ಹಾಳುಮಾಡಿಕೊಂಡಿರುವುದರಿಂದ ಜನ ಗೌತಮ್ ಗಂಭೀರ್ ಬಗ್ಗೆ ಅಷ್ಟು ಗಮನವನ್ನು ಕೊಡುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...