Homeಮುಖಪುಟರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

- Advertisement -
- Advertisement -

ನಿಮಗಿದು ಗೊತ್ತೇ? ಮೊನ್ನೆಯಷ್ಟೇ ಬಿಜೆಪಿ ಸೇರಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಿಯಲ್ ಎಸ್ಟೇಟ್ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಹಾಜರಾಗುವಂತೆ ಕಳೆದ ಡಿಸೆಂಬರ್ ನಲ್ಲಿ ಕೋರ್ಟ್ ವಾರೆಂಟ್ ಹೊರಡಿಸಿತ್ತು.

ರುದ್ರಾ ಬಿಲ್ಡ್ವೆಲ್ ಕಂಪನಿಯ ಪ್ರಾಜೆಕ್ಟ್ ಒಂದರಲ್ಲಿ ನಡೆದ ಮೋಸ ಮತ್ತು ಪಿತೂರಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಗೆ ಈ ಕಂಪನಿಯ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸತತ ಗೈರು ಹಾಜರಾಗಿದ್ದರು. ನಂತರ ಜನವರಿ 24, 2019ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ದೆಹಲಿ ಹೈಕೋರ್ಟ್ ಖಡಕ್ ವಾರ್ನಿಂಗ್ ನೀಡಿತ್ತು. ಆದರೆ ಗಂಭೀರ್ ತಮ್ಮ ಮೇಲಿನ ಪ್ರಕರಣ ಕೈ ಬಿಡುವಂತೆ ಮೇಲ್ಮನವಿ ಸಲ್ಲಿಸಿದ್ದರು. ದೆಹಲಿಯ ಸಾಕೇತ್ ಕೋರ್ಟ್ ಅರ್ಜಿಯನ್ನು ವಜಾ ಮಾಡಿತ್ತು.

ದೆಹಲಿಯ ಗಾಜಿಯಾಬಾದ್ ನ ಇಂದಿರಾಪುರಂನಲ್ಲಿ ಶುರುವಾಗಬೇಕಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಪ್ಲ್ಯಾಟ್ ಖರೀದಿಸಲು ಅನೇಕರು ಕೋಟ್ಯಾಂತರ ರೂಪಾಯಿ ಹೂಡಿಕೆ ಮಾಡಿದ್ದರು. ಆದರೆ ಕಟ್ಟಡ ನಿರ್ಮಾಣ ಕೆಲಸ ಇನ್ನೂ ಪ್ರಾರಂಭವಾಗಿಲ್ಲ ಎಂದು ಹೂಡಿಕೆದಾರರು 2016ರಲ್ಲಿ ದೂರು ಸಲ್ಲಿಸಿದ್ದರು. ಹೂಡಿಕೆದಾರರನ್ನು ವಂಚಿಸುವ ಸಲುವಾಗಿಯೇ ಈ ಪ್ರಾಜೆಕ್ಟನ್ನು ಆರಂಭಿಸಲಾಗಿತ್ತು ಎಂದು ಈ ದೂರಿನಲ್ಲಿ ಹೇಳಲಾಗಿದ್ದು ಪ್ರಕರಣ ವಿಚಾರಣೆಯ ಹಂತದಲ್ಲಿದೆ.

ಈ ಎಲ್ಲಾ ಕೇಸುಗಳಿಂದ ಬೇಸತ್ತಿರುವ ಗಂಭೀರ್ ಈ ಕಾರಣಕ್ಕಾಗಿಯೇ ಖುಸೆಗೊಳ್ಳಲು ಬಿಜೆಪಿ ಸೇರಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಈ ಹಿಂದೆಯೂ ಹಲವಾರು ಜನ ತಮ್ಮ ಮೇಲಿನ ಕೇಸುಗಳಿಂದ ತಪ್ಪಿಸಿಕೊಳ್ಳಲು ಬಿಜೆಪಿ ಸೇರಿದ್ದರು ನಂತರ ಅವರ ಕೇಸುಗಳು ಖುಲಾಸೆಗೊಂಡ ಸಾಕಷ್ಟು ಉದಾಹರಣೆಗಳು ಸಹ ಇವೆ.

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕೇಳಿ ಬಂದಿದ್ದ ಮುಕುಲ್ ರಾಯ್ ಬಿಜೆಪಿ ಸೇರ್ಪಡೆ

ಈ ಹಿಂದೆಯೂ ಮುಕುಲ್ ರಾಯ್ ಶ್ರದ್ಧಾ ಚಿಟ್ ಫಂಡ್ ಸ್ಕ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ನಂತರ ಅವರು ಬಿಜೆಪಿ ಸೇರಿದ ಕೂಡಲೇ ಹಗರಣ ಮುಕ್ತರಾದರು. ಹಿಮಾಚಲ ಪ್ರದೇಶದ ಅನಿಲ್ ಶರ್ಮಾ ಟಿಲಿಕಾಂ ಹಗರಣದಲ್ಲಿ ಸಿಲುಕಿಕೊಂಡು ಬಿಜೆಪಿ ಸೇರಿ ಬಗೆಹರಿಸಿಕೊಂಡರು. ಇಂತಹ ಹತ್ತಾರು ಉದಾಹರಣೆಗಳ ಸಾಲಿಗೆ ಹೊಸ ಸೇರ್ಪಡೆ ಗೌತಮ್ ಗಂಭೀರತೆ ಆಗಿದ್ದಾರೆ.

ಒಂದು ರಾಜಕೀಯ ಪಕ್ಷಕ್ಕೆ ಆರೋಗ್ಯಕರವೆನಿಸದ `ಕಾಂಗ್ರೆಸ್ ಮುಕ್ತ ಭಾರತ ಮಾಡುವೆ’ ಎಂದು ಹೊರಟ ಬಿಜೆಪಿ ಅದಕ್ಕೋಸ್ಕರ ಆಯ್ದುಕೊಂಡಿದ್ದು ಜನರಿಗೆ ಹತ್ತಿರವಾಗುವ ಜನಪರ ಹಾದಿಯನ್ನಲ್ಲ, ಬದಲಿಗೆ ಕಾಂಗ್ರೆಸಿನ ಹಗರಣವೀರರನ್ನು ತನ್ನತ್ತ ಸೆಳೆದುಕೊಂಡು ಕಾಂಗ್ರೆಸ್ ಅನ್ನು ಶುದ್ಧಗೊಳಿಸಿದ್ದು! ಈ ವಿಚಾರದಲ್ಲಿ ಬಿಜೆಪಿ ಎರಡು ರೀತಿಯಲ್ಲಿ ವ್ಯವಹರಿಸುತ್ತಾ ಬಂದಿದೆ. ಒಂದು, ಹಗರಣದಲ್ಲಿ ಸಿಕ್ಕಿಹಾಕಿಕೊಂಡವರಿಗೆ ತಮ್ಮ ಪಕ್ಷಕ್ಕೆ ಆಹ್ವಾನಿಸಿ ಅವರಿಗೆ ತಮ್ಮ ಪ್ರಭಾವ ಮತ್ತು ಅಧಿಕಾರ ದುರಪಯೋಗ ಬಳಸಿ ಕ್ಲಿನ್ ಚಿಟ್ ನೀಡಲಾಗುತ್ತದೆ. ಒಂದುವೇಳೆ ಅವರು ಪಕ್ಷಕ್ಕೆ ಬರದಿದ್ದರೆ ಅಂಥವರ ಮೇಲೆ ಐ.ಟಿ ದಾಳಿ, ಇ.ಡಿ ದಾಳಿ ರೀತಿಯಲ್ಲಿ ಬೆದರಿಕೆ ಒಡ್ಡಿ, ಸಿಬಿಐ ತನಿಖೆಯ ಗುಮ್ಮನನ್ನು ತೋರಿಸಿ ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಅಪ್ರಜಾತಾಂತ್ರಿಕ ನಡೆ ಎರಡನೆಯದ್ದು.

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ

ಕರ್ನಾಟಕದ ಎಸ್.ಎಂ ಕೃಷ್ಣರವರು ಸಹ ತೆರಿಗೆ ವಂಚನೆಯ ಬಲೆಯಲ್ಲಿ ಬಂಧಿಯಾಗಿದ್ದ ತಮ್ಮ ಅಳಿಯ ಸಿದ್ಧಾರ್ಥ ಹೆಗ್ಡೆಯನ್ನು ಬಚಾವು ಮಾಡಿಕೊಳ್ಳುವುದಕ್ಕಾಗಿ ಇಳಿ ವಯಸ್ಸಿನಲ್ಲಿ ಬಿಜೆಪಿ ಸೇರಿ ಮೂಲೆಗುಂಪಾದರು ಎಂಬ ಮಾತುಗಳಿವೆ. ಕೊಡಗು ಚಿಕ್ಕಮಗಳೂರು ಬೇನಾಮಿ ಕಾಫಿ ಎಸ್ಟೇಟ್ ಕುರಿತು ಸಿದ್ದಾರ್ಥ ವಿರುದ್ಧ ದೂರುಗಳಿದ್ದವು. ತನಿಖೆ ಭಯಕ್ಕಾಗಿಯೇ ಬಿಜೆಪಿ ಸೇರಿದ್ದರು ಎಂಬ ಮಾತುಗಳು ಚಾಲ್ತಿಯಲ್ಲಿವೆ. ಇನ್ನು ದೇಶ ಬಿಟ್ಟು ಓಡಿಹೋದ ಕಳ್ಳ ಉದ್ಯಮಿಗಳಿಗೆಲ್ಲಾ ನೇರ ಬಿಜೆಪಿಯೇ ಸಹಕರಿಸಿದ್ದಲ್ಲದೇ ಅವರಿಂದ ಹೇರಳವಾಗಿ ಪಾರ್ಟಿ ಫಂಡ್ ಪಡೆಯಿತ್ತಿರುವುದರ ಬಗ್ಗೆ ಬಿಜೆಪಿಯ ಮಿತ್ರ ಶಿವಸೇನೆಯೇ ಆರೋಪ ಮಾಡಿದೆ.

ಅವಕಾಶ ಸಿಕ್ಕಾಗಲೆಲ್ಲಾ ದೆಹಲಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿರುವ ಆಪ್ ಸರ್ಕಾರವನ್ನು ಗಂಭೀರ್ ಟೀಕಿಸಿದ್ದರು. ಕಳೆದ ವರ್ಷ ಗಂಭೀರ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಕೇಳಿಬಂದ ಸಂದರ್ಭದಲ್ಲಿ ಅದನ್ನು ಸ್ವತಃ ತಳ್ಳಿಹಾಕಿದ್ದರು. ಆದರೆ ಈಗ ಯಾವುದೇ ಮಾತುಕತೆಗಳಿಲ್ಲದೆ ಇದ್ದಕ್ಕಿದ್ದಂತೆ ಬಿಜೆಪಿ ಸೇರಿ ಕೂತುಹಲಕ್ಕೆ ತೆರೆ ಎಳೆದಿದ್ದಾರೆ.

ಇನ್ನೂ ಅನುಮಾನಗಳಿಗೆ ಎಡೆಮಾಡಿಕೊಡುವ ಕಾರಣವೆಂದರೆ ಗಂಭೀರ್ ಅವರು ತರಾತುರಿಯಲ್ಲಿ ಬಿಜೆಪಿ ಸೇರಿದ್ದರು ಕೂಡ ಈ ಲೋಕಸಭೆಯಲ್ಲಿ ಸ್ಪರ್ಧಿಸುವ ಕುರಿತು ಯಾವುದೇ ಸ್ಪಷ್ಟನೆಯನ್ನು ನೀಡುತ್ತಿಲ್ಲ. ಈ ಕುರಿತು ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿ ಮುಖಂಡರು ಅಧಿಕಾರಯುತ ಧ್ವನಿಯಲ್ಲಿ ಹೇಳುತ್ತಿರುವುದು ಊಹಾಪೋಹಗಳಿಗೆ ಕಾರಣವಾಗಿದೆ. ಬಿಜೆಪಿಯಲ್ಲಿ ಗಂಭೀರ್ ಭವಿಷ್ಯ ಏನಾಗಲಿದೆ ಎನ್ನುವುದಕ್ಕಿಂತ ಇಂಥಾ ಅಪ್ರಜಾತಾಂತ್ರಿಕ ನಡೆಗಳಿಂದ ಸ್ವತಃ ಬಿಜೆಪಿಯೇ ತನ್ನ ಭವಿಷ್ಯ ಹಾಳುಮಾಡಿಕೊಂಡಿರುವುದರಿಂದ ಜನ ಗೌತಮ್ ಗಂಭೀರ್ ಬಗ್ಗೆ ಅಷ್ಟು ಗಮನವನ್ನು ಕೊಡುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...