HomeUncategorizedರೆಡ್ಡಿಯ ಗುಡ್ ಟೈಮ್ - ಮೋದಿಯ ಅಚ್ಚೆ ದಿನ್

ರೆಡ್ಡಿಯ ಗುಡ್ ಟೈಮ್ – ಮೋದಿಯ ಅಚ್ಚೆ ದಿನ್

- Advertisement -
- Advertisement -

‘ನೋಡಪಾ… ಕೆಟ್ಟ ಘಳಿಗೆಯಲ್ಲಿ ಏನೇನಾಗಿದೆಯೋ ಅದ್ನೆಲ್ಲಾ ಮರ್‍ತೊಗ್ಬಿಡು, ನನ್ನ ಟೈಮು ಈಗ ಚೆನ್ನಾಗಿ ಶುರುವಾಗಿದೆ.’
ರಾಯಚೂರು ರೂರಲ್ ಎಂಎಲ್‌ಎ ಬಸನಗೌಡರನ್ನು ಆಪರೇಷನ್ ಮಾಡಲು ಹೋಗಿದ್ದ ದಿ ಗ್ರೇಟ್ ಜೆನ್ನಿ ಅಲಿಯಾಸ್ ಜನಾರ್ಧನ ರೆಡ್ಡಿಯ ಡೀಲಿಂಗ್ ಡೈಲಾಗ್ ಇದು. ಇವಿಎಂ ಮಷೀನ್‌ಗಳ ಪಕಡ್ಬಂದಿಯೂ ಸೇರಿದಂತೆ ಮಾಡಬಾರದ ಮಸಲತ್ತುಗಳನ್ನೆಲ್ಲ ಮಾಡಿದ ಹೊರತಾಗಿಯೂ ಮ್ಯಾಜಿಕ್ ನಂಬರ್ ತಲುಪಲಾರದ ಅತಂತ್ರ ಸ್ಥಿತಿಯಲ್ಲಿ ಬಿಜೆಪಿಗೆ ಜನಾರ್ಧನ ರೆಡ್ಡಿಯ ಆಸರೆಯಲ್ಲದೆ ಮತ್ತೇನೂ ಬಾಕಿ ಉಳಿದಿರಲಿಲ್ಲ. ಸ್ವತಃ ಅಮಿತ್ ಶಾ, ಯಡ್ಯೂರಪ್ಪನವರ ಹೆಗಲಿಗೆ ಅಧಿಕಾರದ ಜೋಳಿಗೆ ನೇತುಹಾಕಿ ದಿಲ್ಲಿ ಸೇರಿಕೊಂಡು ರಿಮೋಟ್ ಹಿಡಿದು ಕೂತಮೇಲೆ ಪಾಪ, ರೆಡ್ಡಿಯಾದರು ಇನ್ನೇನು ಮಾಡಬೇಕಿತ್ತು. ಆದ್ರೆ ಇಲ್ಲಿ ನಾವೆಲ್ಲ ಗಮನಿಸಬೇಕಾದ ಮತ್ತೊಂದು ಅಂಶವಿದೆ. ಅದು ಜೆನ್ನಿ ರೆಡ್ಡಿಯ ಬಾಯಿಂದ ಹೊರಬಿದ್ದ ‘ನನ್ನ ಟೈಮು ಚೆನ್ನಾಗಿ ಶುರುವಾಗಿದೆ’ ಅನ್ನೋ ಸಂಗತಿ. ಇದು ಯಾಕಷ್ಟು imporatant ವಿಷಯವಾಗುತ್ತೆ ಅನ್ನೋದಕ್ಕೆ 2014ರ ಲೋಕಸಭಾ ಸಮರ ಕಣದಲ್ಲಿ ಮೋದಿ ಮಹಾತ್ಮರು ಉದುರಿಸಿದ್ದ ಡೈಲಾಗ್ ನೆನಪಿಸಿಕೊಳ್ಳಿ. ಅವತ್ತು ಹೋದಬಂದ ಕಡೆಯಲ್ಲೆಲ್ಲ ‘ಅಚ್ಚೇ ದಿನ್ ಆಯೇಗಾ, ಜರೂರ್ ಆಯೇಗಾ’ ಅಂತ ಮಹಾತ್ಮರು ಬಂಬಡಾ ಬಜಾಯಿಸಿದ್ದಕ್ಕೂ ಇವತ್ತು ರೆಡ್ಡಿಯಂತಹ ಮಾಫಿಯಾಗಳು ‘ನಮಗೆ ಗುಡ್ ಟೈಮ್ ಶುರುವಾಗಿದೆ’ ಅನ್ನೋದಕ್ಕೂ ಸಂಬಂಧ ಇರೋದು ಕಾಣಿಸುತ್ತೆ ಅಲ್ವಾ?

ಮೋದಿ ‘ಅಚ್ಚೇ ದಿನ್ ಅಂದಾಗ, ನಮ್ಮ ಬಡ ಬೋರೇಗೌಡಪ್ಪಗಳು ತಮ್ಮ ಮನೆಯ ದೀಪಕ್ಕೆ ಎಣ್ಣೆ ಬರುತ್ತೆ, ತಟ್ಟೆಗೆ ಅನ್ನ ಬಂದು ಬೀಳುತ್ತೆ, ಬೆಲೆಯೇರಿಕೆಯ ಗ್ರಾಫು ಕುಸಿಯುತ್ತೆ ಅಂತ ಕನಸು ಕಂಡಿದ್ದರು. ಆದರೆ ಮೋದಿಯ ಅಚ್ಚೇ ದಿನ್ ವಾಸ್ತವ ಅಂತಹ ಬೋರೇಗೌಡರಿಗಲ್ಲ, ಇಂಥಾ ಜನಾರ್ಧನ ರೆಡ್ಡಿಗಳಿಗೆ. ಇಲ್ಲದೇ ಹೋಗಿದ್ದರೆ, ಅನಾಮತ್ತು ಹದಿನಾರೂವರೆ ಸಾವಿರ ಕೋಟಿಯ ಅದಿರು ಲಫಡಾ ಕೇಸಿನಲ್ಲಿ
ನಂಬರ್1 ಆರೋಪಿಯಾಗಿ ಜೈಲು ಸೇರಿ, ಬೇಲ್‌ಡೀಲ್ ಕೇಸಲ್ಲಿ ಜಡ್ಜ್‌ಗೆ 10 ಕೋಟಿಯ ಬೇಲ್‌ಪೂರಿ ತಿನ್ನಿಸಲು ಹೋಗಿ ತಗಲಾಕ್ಕೊಂಡು ಜೈಲೂಟ ಭದ್ರ ಮಾಡಿಕೊಂಡಿದ್ದ ಜನಾರ್ಧನ ರೆಡ್ಡಿ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿಯಾಗುತ್ತಿದ್ದಂತೆಯೇ ಸುಲಭವಾಗಿ ಬೇಲ್ ಮೇಲೆ ಹೊರಬಂದು ನಿಟ್ಟುಸಿರು ಬಿಡುತ್ತಿರಲಿಲ್ಲ. ಸಿಬಿಐ ರೇಡುಗಳಿಂದ ಇನ್ನು ರೆಡ್ಡಿಯ ಕಥೆ ಮುಗಿದೇಹೋಯ್ತು, ಅವನ ಆಸ್ತಿಯೆಲ್ಲ ಜಪ್ತಿಯಾಗಿ ಬೀದಿಗೆ ಬಂದ ಅನ್ನುವವರ ಮುಂದೆ ಮುನ್ನೂರು ಕೋಟಿ ಖರ್ಚು ಮಾಡಿ ಮಗಳ ಮದುವೆ ಮಾಡಿ ಕುಟುಂಬ ಸಮೇತ ಹಾಡಿ ಕುಣಿಯುತ್ತಾನೆಂದರೆ ಅವನ ‘ಗುಡ್ ಟೈಂ’ ಹಿಂದೆ ಮೋದಿಯ ‘ಅಚ್ಚೇ ದಿನ್ ಕೆಲಸ ಮಾಡಿಲ್ಲ ಅನ್ನಲಿಕ್ಕಾಗುತ್ತಾ? ಅದೂ ಇಡೀ ದೇಶಕ್ಕೆ ದೇಶವೇ ಮೋದಿ ಮಾಡಿದ ‘ನೋಟ್‌ಬಂಧಿಯಿಂದ ದುಡ್ಡಿಗಾಗಿ ಪರದಾಡುತ್ತಿರುವ ಹೊತ್ತಲ್ಲಿ!

ರೆಡ್ಡಿ ಒಬ್ಬನೇ ಅಲ್ಲ, ಮೋದಿಯ ಅಚ್ಚೇ ದಿನ್‌ಗಳ ಫಾಯಿದೆ ಪಡೆದವರು ಬಹಳಷ್ಟು ಮಂದಿಯಿದ್ದಾರೆ. ಆದರೆ ಅವರೆಲ್ಲ ಈ ನೆಲದ ಸಿರಿವಂತರು, ಇಂಡಸ್ಟ್ರಿಯಲಿಸ್ಟುಗಳು, ಕಾರ್ಪೊರೇಟ್ ಕಂಪನಿಗಳು ಮಾತ್ರ! ಆಮ್ ಆದ್ಮಿಯ ಪಾಲಿಗೆ ಅಚ್ಚೇ ದಿನವೂ ಬರಲಿಲ್ಲ, ಹದಿನೈದು ಲಕ್ಷವೂ ಇಣುಕಿ ನೋಡಲಿಲ್ಲ. ಇದೇ ವರ್ಷ ಚೀನಾದ ಶಾಂಘೈ ಮೂಲದ ಹುರೂನ್ ಎಂಬ ಇಂಟರ್‌ನ್ಯಾಷನಲ್ ಅನಾಲಿಟಿಕಲ್ ಸಂಸ್ಥೆಯೊಂದು ಜಗತ್ತಿನ ಸಿರಿವಂತರ ಪಟ್ಟಿ ಬಿಡುಗಡೆ ಮಾಡಿತು. ಅದರ ಪ್ರಕಾರ ಕಳೆದ ಮೂರ್‍ನಾಲ್ಕು ವರ್ಷದಲ್ಲಿ ಇಂಡಿಯಾದ ಬಿಲಿಯನೇರುಗಳ ಆಸ್ತಿಗಳಿಕೆ ಶೇ.49ರಷ್ಟು ಹೆಚ್ಚಾಗಿದೆಯಂತೆ. ಅಂದಹಾಗೆ ಆ ಲಿಸ್ಟಿನಲ್ಲಿ ಸ್ಥಾನ ಪಡೆದ ಭಾರತದ ಬಿಲಿಯನೇರುಗಳ ಸಂಖ್ಯೆ 131. ಅಂದರೆ 130 ಕೋಟಿ ಜನಸಂಖ್ಯೆಯಿರುವ ಭಾರತದಲ್ಲಿ ಕೇವಲ 131 ಜನರ ಆಸ್ತಿ ಮಾತ್ರ ರಾಕೆಟ್ ವೇಗದಲ್ಲಿ ಹೆಚ್ಚಾಗಿದೆ. ಈ ರಿಪೋರ್ಟು ಹೇಳುವ ಪ್ರಕಾರ ಮೋದಿ ಮಹಾತ್ಮರ ಚೆಡ್ಡಿ ದೋಸ್ತು ಅದಾನಿಯ ಆಸ್ತಿ ಕಳೆದ ಒಂದು ವರ್ಷದಲ್ಲೇ 109% ಜಾಸ್ತಿಯಾಗಿದೆಯಂತೆ! ಇನ್ನು ಅಂಬಾನಿ ಬ್ರದರ್‍ಸ್‌ಗಳದ್ದು, ಜಿಂದಾಲ್ ಕುಡಿಗಳದ್ದು, ಮಿತ್ತಲ್ ಕುಟುಂಬಗಳದ್ದು ಕೇಳೋದೆ ಬೇಡ. ದುರಂತವೆಂದರೆ ಮೋದಿ ಹೇಳಿದ್ದ ಅಚ್ಚೇ ದಿನ್ ಇವರೆಲ್ಲ ಆಸ್ತಿಗಳನ್ನು ಇಷ್ಟೆಲ್ಲ ಹೆಚ್ಚು ಮಾಡಿದ್ದರೂ, ಸುಮಾರು 60 ಕೋಟಿ ಬಡ ಭಾರತೀಯರ ಆದಾಯ ಈ ಅವಧಿಯಲ್ಲಿ ಏನಾಗಿದೆ ಎಂಬುದನ್ನು ನಾವು ಮರೆಯುವಂತಿಲ್ಲ.

ಒಟ್ಟಿನಲ್ಲಿ ಮೋದಿ ಮಹಾತ್ಮರ ಅಚ್ಚೇ ದಿನ್ ಜನಸಾಮಾನ್ಯರಿಗೆ ದಕ್ಕಲಿಲ್ಲ, ರೆಡ್ಡಿಯಂಥಾ, ಅಂಬಾನಿ-ಅದಾನಿಗಳಂಥ ಕಾಳಧನಿಕರಿಗೆ ‘ಗುಡ್ ಟೈಂ’ ರೂಪದಲ್ಲಿ ವಕ್ಕರಿಸಿಕೊಂಡಿದೆ ಅನ್ನೋದು ರೆಡ್ಡಿ ಮಾತಿನಿಂದಲೇ ದೃಢವಾಗುತ್ತೆ.

– ಗಿರೀಶ್ ತಾಳಿಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...