HomeUncategorizedರೆಡ್ಡಿಯ ಗುಡ್ ಟೈಮ್ - ಮೋದಿಯ ಅಚ್ಚೆ ದಿನ್

ರೆಡ್ಡಿಯ ಗುಡ್ ಟೈಮ್ – ಮೋದಿಯ ಅಚ್ಚೆ ದಿನ್

- Advertisement -
- Advertisement -

‘ನೋಡಪಾ… ಕೆಟ್ಟ ಘಳಿಗೆಯಲ್ಲಿ ಏನೇನಾಗಿದೆಯೋ ಅದ್ನೆಲ್ಲಾ ಮರ್‍ತೊಗ್ಬಿಡು, ನನ್ನ ಟೈಮು ಈಗ ಚೆನ್ನಾಗಿ ಶುರುವಾಗಿದೆ.’
ರಾಯಚೂರು ರೂರಲ್ ಎಂಎಲ್‌ಎ ಬಸನಗೌಡರನ್ನು ಆಪರೇಷನ್ ಮಾಡಲು ಹೋಗಿದ್ದ ದಿ ಗ್ರೇಟ್ ಜೆನ್ನಿ ಅಲಿಯಾಸ್ ಜನಾರ್ಧನ ರೆಡ್ಡಿಯ ಡೀಲಿಂಗ್ ಡೈಲಾಗ್ ಇದು. ಇವಿಎಂ ಮಷೀನ್‌ಗಳ ಪಕಡ್ಬಂದಿಯೂ ಸೇರಿದಂತೆ ಮಾಡಬಾರದ ಮಸಲತ್ತುಗಳನ್ನೆಲ್ಲ ಮಾಡಿದ ಹೊರತಾಗಿಯೂ ಮ್ಯಾಜಿಕ್ ನಂಬರ್ ತಲುಪಲಾರದ ಅತಂತ್ರ ಸ್ಥಿತಿಯಲ್ಲಿ ಬಿಜೆಪಿಗೆ ಜನಾರ್ಧನ ರೆಡ್ಡಿಯ ಆಸರೆಯಲ್ಲದೆ ಮತ್ತೇನೂ ಬಾಕಿ ಉಳಿದಿರಲಿಲ್ಲ. ಸ್ವತಃ ಅಮಿತ್ ಶಾ, ಯಡ್ಯೂರಪ್ಪನವರ ಹೆಗಲಿಗೆ ಅಧಿಕಾರದ ಜೋಳಿಗೆ ನೇತುಹಾಕಿ ದಿಲ್ಲಿ ಸೇರಿಕೊಂಡು ರಿಮೋಟ್ ಹಿಡಿದು ಕೂತಮೇಲೆ ಪಾಪ, ರೆಡ್ಡಿಯಾದರು ಇನ್ನೇನು ಮಾಡಬೇಕಿತ್ತು. ಆದ್ರೆ ಇಲ್ಲಿ ನಾವೆಲ್ಲ ಗಮನಿಸಬೇಕಾದ ಮತ್ತೊಂದು ಅಂಶವಿದೆ. ಅದು ಜೆನ್ನಿ ರೆಡ್ಡಿಯ ಬಾಯಿಂದ ಹೊರಬಿದ್ದ ‘ನನ್ನ ಟೈಮು ಚೆನ್ನಾಗಿ ಶುರುವಾಗಿದೆ’ ಅನ್ನೋ ಸಂಗತಿ. ಇದು ಯಾಕಷ್ಟು imporatant ವಿಷಯವಾಗುತ್ತೆ ಅನ್ನೋದಕ್ಕೆ 2014ರ ಲೋಕಸಭಾ ಸಮರ ಕಣದಲ್ಲಿ ಮೋದಿ ಮಹಾತ್ಮರು ಉದುರಿಸಿದ್ದ ಡೈಲಾಗ್ ನೆನಪಿಸಿಕೊಳ್ಳಿ. ಅವತ್ತು ಹೋದಬಂದ ಕಡೆಯಲ್ಲೆಲ್ಲ ‘ಅಚ್ಚೇ ದಿನ್ ಆಯೇಗಾ, ಜರೂರ್ ಆಯೇಗಾ’ ಅಂತ ಮಹಾತ್ಮರು ಬಂಬಡಾ ಬಜಾಯಿಸಿದ್ದಕ್ಕೂ ಇವತ್ತು ರೆಡ್ಡಿಯಂತಹ ಮಾಫಿಯಾಗಳು ‘ನಮಗೆ ಗುಡ್ ಟೈಮ್ ಶುರುವಾಗಿದೆ’ ಅನ್ನೋದಕ್ಕೂ ಸಂಬಂಧ ಇರೋದು ಕಾಣಿಸುತ್ತೆ ಅಲ್ವಾ?

ಮೋದಿ ‘ಅಚ್ಚೇ ದಿನ್ ಅಂದಾಗ, ನಮ್ಮ ಬಡ ಬೋರೇಗೌಡಪ್ಪಗಳು ತಮ್ಮ ಮನೆಯ ದೀಪಕ್ಕೆ ಎಣ್ಣೆ ಬರುತ್ತೆ, ತಟ್ಟೆಗೆ ಅನ್ನ ಬಂದು ಬೀಳುತ್ತೆ, ಬೆಲೆಯೇರಿಕೆಯ ಗ್ರಾಫು ಕುಸಿಯುತ್ತೆ ಅಂತ ಕನಸು ಕಂಡಿದ್ದರು. ಆದರೆ ಮೋದಿಯ ಅಚ್ಚೇ ದಿನ್ ವಾಸ್ತವ ಅಂತಹ ಬೋರೇಗೌಡರಿಗಲ್ಲ, ಇಂಥಾ ಜನಾರ್ಧನ ರೆಡ್ಡಿಗಳಿಗೆ. ಇಲ್ಲದೇ ಹೋಗಿದ್ದರೆ, ಅನಾಮತ್ತು ಹದಿನಾರೂವರೆ ಸಾವಿರ ಕೋಟಿಯ ಅದಿರು ಲಫಡಾ ಕೇಸಿನಲ್ಲಿ
ನಂಬರ್1 ಆರೋಪಿಯಾಗಿ ಜೈಲು ಸೇರಿ, ಬೇಲ್‌ಡೀಲ್ ಕೇಸಲ್ಲಿ ಜಡ್ಜ್‌ಗೆ 10 ಕೋಟಿಯ ಬೇಲ್‌ಪೂರಿ ತಿನ್ನಿಸಲು ಹೋಗಿ ತಗಲಾಕ್ಕೊಂಡು ಜೈಲೂಟ ಭದ್ರ ಮಾಡಿಕೊಂಡಿದ್ದ ಜನಾರ್ಧನ ರೆಡ್ಡಿ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿಯಾಗುತ್ತಿದ್ದಂತೆಯೇ ಸುಲಭವಾಗಿ ಬೇಲ್ ಮೇಲೆ ಹೊರಬಂದು ನಿಟ್ಟುಸಿರು ಬಿಡುತ್ತಿರಲಿಲ್ಲ. ಸಿಬಿಐ ರೇಡುಗಳಿಂದ ಇನ್ನು ರೆಡ್ಡಿಯ ಕಥೆ ಮುಗಿದೇಹೋಯ್ತು, ಅವನ ಆಸ್ತಿಯೆಲ್ಲ ಜಪ್ತಿಯಾಗಿ ಬೀದಿಗೆ ಬಂದ ಅನ್ನುವವರ ಮುಂದೆ ಮುನ್ನೂರು ಕೋಟಿ ಖರ್ಚು ಮಾಡಿ ಮಗಳ ಮದುವೆ ಮಾಡಿ ಕುಟುಂಬ ಸಮೇತ ಹಾಡಿ ಕುಣಿಯುತ್ತಾನೆಂದರೆ ಅವನ ‘ಗುಡ್ ಟೈಂ’ ಹಿಂದೆ ಮೋದಿಯ ‘ಅಚ್ಚೇ ದಿನ್ ಕೆಲಸ ಮಾಡಿಲ್ಲ ಅನ್ನಲಿಕ್ಕಾಗುತ್ತಾ? ಅದೂ ಇಡೀ ದೇಶಕ್ಕೆ ದೇಶವೇ ಮೋದಿ ಮಾಡಿದ ‘ನೋಟ್‌ಬಂಧಿಯಿಂದ ದುಡ್ಡಿಗಾಗಿ ಪರದಾಡುತ್ತಿರುವ ಹೊತ್ತಲ್ಲಿ!

ರೆಡ್ಡಿ ಒಬ್ಬನೇ ಅಲ್ಲ, ಮೋದಿಯ ಅಚ್ಚೇ ದಿನ್‌ಗಳ ಫಾಯಿದೆ ಪಡೆದವರು ಬಹಳಷ್ಟು ಮಂದಿಯಿದ್ದಾರೆ. ಆದರೆ ಅವರೆಲ್ಲ ಈ ನೆಲದ ಸಿರಿವಂತರು, ಇಂಡಸ್ಟ್ರಿಯಲಿಸ್ಟುಗಳು, ಕಾರ್ಪೊರೇಟ್ ಕಂಪನಿಗಳು ಮಾತ್ರ! ಆಮ್ ಆದ್ಮಿಯ ಪಾಲಿಗೆ ಅಚ್ಚೇ ದಿನವೂ ಬರಲಿಲ್ಲ, ಹದಿನೈದು ಲಕ್ಷವೂ ಇಣುಕಿ ನೋಡಲಿಲ್ಲ. ಇದೇ ವರ್ಷ ಚೀನಾದ ಶಾಂಘೈ ಮೂಲದ ಹುರೂನ್ ಎಂಬ ಇಂಟರ್‌ನ್ಯಾಷನಲ್ ಅನಾಲಿಟಿಕಲ್ ಸಂಸ್ಥೆಯೊಂದು ಜಗತ್ತಿನ ಸಿರಿವಂತರ ಪಟ್ಟಿ ಬಿಡುಗಡೆ ಮಾಡಿತು. ಅದರ ಪ್ರಕಾರ ಕಳೆದ ಮೂರ್‍ನಾಲ್ಕು ವರ್ಷದಲ್ಲಿ ಇಂಡಿಯಾದ ಬಿಲಿಯನೇರುಗಳ ಆಸ್ತಿಗಳಿಕೆ ಶೇ.49ರಷ್ಟು ಹೆಚ್ಚಾಗಿದೆಯಂತೆ. ಅಂದಹಾಗೆ ಆ ಲಿಸ್ಟಿನಲ್ಲಿ ಸ್ಥಾನ ಪಡೆದ ಭಾರತದ ಬಿಲಿಯನೇರುಗಳ ಸಂಖ್ಯೆ 131. ಅಂದರೆ 130 ಕೋಟಿ ಜನಸಂಖ್ಯೆಯಿರುವ ಭಾರತದಲ್ಲಿ ಕೇವಲ 131 ಜನರ ಆಸ್ತಿ ಮಾತ್ರ ರಾಕೆಟ್ ವೇಗದಲ್ಲಿ ಹೆಚ್ಚಾಗಿದೆ. ಈ ರಿಪೋರ್ಟು ಹೇಳುವ ಪ್ರಕಾರ ಮೋದಿ ಮಹಾತ್ಮರ ಚೆಡ್ಡಿ ದೋಸ್ತು ಅದಾನಿಯ ಆಸ್ತಿ ಕಳೆದ ಒಂದು ವರ್ಷದಲ್ಲೇ 109% ಜಾಸ್ತಿಯಾಗಿದೆಯಂತೆ! ಇನ್ನು ಅಂಬಾನಿ ಬ್ರದರ್‍ಸ್‌ಗಳದ್ದು, ಜಿಂದಾಲ್ ಕುಡಿಗಳದ್ದು, ಮಿತ್ತಲ್ ಕುಟುಂಬಗಳದ್ದು ಕೇಳೋದೆ ಬೇಡ. ದುರಂತವೆಂದರೆ ಮೋದಿ ಹೇಳಿದ್ದ ಅಚ್ಚೇ ದಿನ್ ಇವರೆಲ್ಲ ಆಸ್ತಿಗಳನ್ನು ಇಷ್ಟೆಲ್ಲ ಹೆಚ್ಚು ಮಾಡಿದ್ದರೂ, ಸುಮಾರು 60 ಕೋಟಿ ಬಡ ಭಾರತೀಯರ ಆದಾಯ ಈ ಅವಧಿಯಲ್ಲಿ ಏನಾಗಿದೆ ಎಂಬುದನ್ನು ನಾವು ಮರೆಯುವಂತಿಲ್ಲ.

ಒಟ್ಟಿನಲ್ಲಿ ಮೋದಿ ಮಹಾತ್ಮರ ಅಚ್ಚೇ ದಿನ್ ಜನಸಾಮಾನ್ಯರಿಗೆ ದಕ್ಕಲಿಲ್ಲ, ರೆಡ್ಡಿಯಂಥಾ, ಅಂಬಾನಿ-ಅದಾನಿಗಳಂಥ ಕಾಳಧನಿಕರಿಗೆ ‘ಗುಡ್ ಟೈಂ’ ರೂಪದಲ್ಲಿ ವಕ್ಕರಿಸಿಕೊಂಡಿದೆ ಅನ್ನೋದು ರೆಡ್ಡಿ ಮಾತಿನಿಂದಲೇ ದೃಢವಾಗುತ್ತೆ.

– ಗಿರೀಶ್ ತಾಳಿಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...