HomeUncategorizedರೆಡ್ಡಿಯ ಗುಡ್ ಟೈಮ್ - ಮೋದಿಯ ಅಚ್ಚೆ ದಿನ್

ರೆಡ್ಡಿಯ ಗುಡ್ ಟೈಮ್ – ಮೋದಿಯ ಅಚ್ಚೆ ದಿನ್

- Advertisement -
- Advertisement -

‘ನೋಡಪಾ… ಕೆಟ್ಟ ಘಳಿಗೆಯಲ್ಲಿ ಏನೇನಾಗಿದೆಯೋ ಅದ್ನೆಲ್ಲಾ ಮರ್‍ತೊಗ್ಬಿಡು, ನನ್ನ ಟೈಮು ಈಗ ಚೆನ್ನಾಗಿ ಶುರುವಾಗಿದೆ.’
ರಾಯಚೂರು ರೂರಲ್ ಎಂಎಲ್‌ಎ ಬಸನಗೌಡರನ್ನು ಆಪರೇಷನ್ ಮಾಡಲು ಹೋಗಿದ್ದ ದಿ ಗ್ರೇಟ್ ಜೆನ್ನಿ ಅಲಿಯಾಸ್ ಜನಾರ್ಧನ ರೆಡ್ಡಿಯ ಡೀಲಿಂಗ್ ಡೈಲಾಗ್ ಇದು. ಇವಿಎಂ ಮಷೀನ್‌ಗಳ ಪಕಡ್ಬಂದಿಯೂ ಸೇರಿದಂತೆ ಮಾಡಬಾರದ ಮಸಲತ್ತುಗಳನ್ನೆಲ್ಲ ಮಾಡಿದ ಹೊರತಾಗಿಯೂ ಮ್ಯಾಜಿಕ್ ನಂಬರ್ ತಲುಪಲಾರದ ಅತಂತ್ರ ಸ್ಥಿತಿಯಲ್ಲಿ ಬಿಜೆಪಿಗೆ ಜನಾರ್ಧನ ರೆಡ್ಡಿಯ ಆಸರೆಯಲ್ಲದೆ ಮತ್ತೇನೂ ಬಾಕಿ ಉಳಿದಿರಲಿಲ್ಲ. ಸ್ವತಃ ಅಮಿತ್ ಶಾ, ಯಡ್ಯೂರಪ್ಪನವರ ಹೆಗಲಿಗೆ ಅಧಿಕಾರದ ಜೋಳಿಗೆ ನೇತುಹಾಕಿ ದಿಲ್ಲಿ ಸೇರಿಕೊಂಡು ರಿಮೋಟ್ ಹಿಡಿದು ಕೂತಮೇಲೆ ಪಾಪ, ರೆಡ್ಡಿಯಾದರು ಇನ್ನೇನು ಮಾಡಬೇಕಿತ್ತು. ಆದ್ರೆ ಇಲ್ಲಿ ನಾವೆಲ್ಲ ಗಮನಿಸಬೇಕಾದ ಮತ್ತೊಂದು ಅಂಶವಿದೆ. ಅದು ಜೆನ್ನಿ ರೆಡ್ಡಿಯ ಬಾಯಿಂದ ಹೊರಬಿದ್ದ ‘ನನ್ನ ಟೈಮು ಚೆನ್ನಾಗಿ ಶುರುವಾಗಿದೆ’ ಅನ್ನೋ ಸಂಗತಿ. ಇದು ಯಾಕಷ್ಟು imporatant ವಿಷಯವಾಗುತ್ತೆ ಅನ್ನೋದಕ್ಕೆ 2014ರ ಲೋಕಸಭಾ ಸಮರ ಕಣದಲ್ಲಿ ಮೋದಿ ಮಹಾತ್ಮರು ಉದುರಿಸಿದ್ದ ಡೈಲಾಗ್ ನೆನಪಿಸಿಕೊಳ್ಳಿ. ಅವತ್ತು ಹೋದಬಂದ ಕಡೆಯಲ್ಲೆಲ್ಲ ‘ಅಚ್ಚೇ ದಿನ್ ಆಯೇಗಾ, ಜರೂರ್ ಆಯೇಗಾ’ ಅಂತ ಮಹಾತ್ಮರು ಬಂಬಡಾ ಬಜಾಯಿಸಿದ್ದಕ್ಕೂ ಇವತ್ತು ರೆಡ್ಡಿಯಂತಹ ಮಾಫಿಯಾಗಳು ‘ನಮಗೆ ಗುಡ್ ಟೈಮ್ ಶುರುವಾಗಿದೆ’ ಅನ್ನೋದಕ್ಕೂ ಸಂಬಂಧ ಇರೋದು ಕಾಣಿಸುತ್ತೆ ಅಲ್ವಾ?

ಮೋದಿ ‘ಅಚ್ಚೇ ದಿನ್ ಅಂದಾಗ, ನಮ್ಮ ಬಡ ಬೋರೇಗೌಡಪ್ಪಗಳು ತಮ್ಮ ಮನೆಯ ದೀಪಕ್ಕೆ ಎಣ್ಣೆ ಬರುತ್ತೆ, ತಟ್ಟೆಗೆ ಅನ್ನ ಬಂದು ಬೀಳುತ್ತೆ, ಬೆಲೆಯೇರಿಕೆಯ ಗ್ರಾಫು ಕುಸಿಯುತ್ತೆ ಅಂತ ಕನಸು ಕಂಡಿದ್ದರು. ಆದರೆ ಮೋದಿಯ ಅಚ್ಚೇ ದಿನ್ ವಾಸ್ತವ ಅಂತಹ ಬೋರೇಗೌಡರಿಗಲ್ಲ, ಇಂಥಾ ಜನಾರ್ಧನ ರೆಡ್ಡಿಗಳಿಗೆ. ಇಲ್ಲದೇ ಹೋಗಿದ್ದರೆ, ಅನಾಮತ್ತು ಹದಿನಾರೂವರೆ ಸಾವಿರ ಕೋಟಿಯ ಅದಿರು ಲಫಡಾ ಕೇಸಿನಲ್ಲಿ
ನಂಬರ್1 ಆರೋಪಿಯಾಗಿ ಜೈಲು ಸೇರಿ, ಬೇಲ್‌ಡೀಲ್ ಕೇಸಲ್ಲಿ ಜಡ್ಜ್‌ಗೆ 10 ಕೋಟಿಯ ಬೇಲ್‌ಪೂರಿ ತಿನ್ನಿಸಲು ಹೋಗಿ ತಗಲಾಕ್ಕೊಂಡು ಜೈಲೂಟ ಭದ್ರ ಮಾಡಿಕೊಂಡಿದ್ದ ಜನಾರ್ಧನ ರೆಡ್ಡಿ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿಯಾಗುತ್ತಿದ್ದಂತೆಯೇ ಸುಲಭವಾಗಿ ಬೇಲ್ ಮೇಲೆ ಹೊರಬಂದು ನಿಟ್ಟುಸಿರು ಬಿಡುತ್ತಿರಲಿಲ್ಲ. ಸಿಬಿಐ ರೇಡುಗಳಿಂದ ಇನ್ನು ರೆಡ್ಡಿಯ ಕಥೆ ಮುಗಿದೇಹೋಯ್ತು, ಅವನ ಆಸ್ತಿಯೆಲ್ಲ ಜಪ್ತಿಯಾಗಿ ಬೀದಿಗೆ ಬಂದ ಅನ್ನುವವರ ಮುಂದೆ ಮುನ್ನೂರು ಕೋಟಿ ಖರ್ಚು ಮಾಡಿ ಮಗಳ ಮದುವೆ ಮಾಡಿ ಕುಟುಂಬ ಸಮೇತ ಹಾಡಿ ಕುಣಿಯುತ್ತಾನೆಂದರೆ ಅವನ ‘ಗುಡ್ ಟೈಂ’ ಹಿಂದೆ ಮೋದಿಯ ‘ಅಚ್ಚೇ ದಿನ್ ಕೆಲಸ ಮಾಡಿಲ್ಲ ಅನ್ನಲಿಕ್ಕಾಗುತ್ತಾ? ಅದೂ ಇಡೀ ದೇಶಕ್ಕೆ ದೇಶವೇ ಮೋದಿ ಮಾಡಿದ ‘ನೋಟ್‌ಬಂಧಿಯಿಂದ ದುಡ್ಡಿಗಾಗಿ ಪರದಾಡುತ್ತಿರುವ ಹೊತ್ತಲ್ಲಿ!

ರೆಡ್ಡಿ ಒಬ್ಬನೇ ಅಲ್ಲ, ಮೋದಿಯ ಅಚ್ಚೇ ದಿನ್‌ಗಳ ಫಾಯಿದೆ ಪಡೆದವರು ಬಹಳಷ್ಟು ಮಂದಿಯಿದ್ದಾರೆ. ಆದರೆ ಅವರೆಲ್ಲ ಈ ನೆಲದ ಸಿರಿವಂತರು, ಇಂಡಸ್ಟ್ರಿಯಲಿಸ್ಟುಗಳು, ಕಾರ್ಪೊರೇಟ್ ಕಂಪನಿಗಳು ಮಾತ್ರ! ಆಮ್ ಆದ್ಮಿಯ ಪಾಲಿಗೆ ಅಚ್ಚೇ ದಿನವೂ ಬರಲಿಲ್ಲ, ಹದಿನೈದು ಲಕ್ಷವೂ ಇಣುಕಿ ನೋಡಲಿಲ್ಲ. ಇದೇ ವರ್ಷ ಚೀನಾದ ಶಾಂಘೈ ಮೂಲದ ಹುರೂನ್ ಎಂಬ ಇಂಟರ್‌ನ್ಯಾಷನಲ್ ಅನಾಲಿಟಿಕಲ್ ಸಂಸ್ಥೆಯೊಂದು ಜಗತ್ತಿನ ಸಿರಿವಂತರ ಪಟ್ಟಿ ಬಿಡುಗಡೆ ಮಾಡಿತು. ಅದರ ಪ್ರಕಾರ ಕಳೆದ ಮೂರ್‍ನಾಲ್ಕು ವರ್ಷದಲ್ಲಿ ಇಂಡಿಯಾದ ಬಿಲಿಯನೇರುಗಳ ಆಸ್ತಿಗಳಿಕೆ ಶೇ.49ರಷ್ಟು ಹೆಚ್ಚಾಗಿದೆಯಂತೆ. ಅಂದಹಾಗೆ ಆ ಲಿಸ್ಟಿನಲ್ಲಿ ಸ್ಥಾನ ಪಡೆದ ಭಾರತದ ಬಿಲಿಯನೇರುಗಳ ಸಂಖ್ಯೆ 131. ಅಂದರೆ 130 ಕೋಟಿ ಜನಸಂಖ್ಯೆಯಿರುವ ಭಾರತದಲ್ಲಿ ಕೇವಲ 131 ಜನರ ಆಸ್ತಿ ಮಾತ್ರ ರಾಕೆಟ್ ವೇಗದಲ್ಲಿ ಹೆಚ್ಚಾಗಿದೆ. ಈ ರಿಪೋರ್ಟು ಹೇಳುವ ಪ್ರಕಾರ ಮೋದಿ ಮಹಾತ್ಮರ ಚೆಡ್ಡಿ ದೋಸ್ತು ಅದಾನಿಯ ಆಸ್ತಿ ಕಳೆದ ಒಂದು ವರ್ಷದಲ್ಲೇ 109% ಜಾಸ್ತಿಯಾಗಿದೆಯಂತೆ! ಇನ್ನು ಅಂಬಾನಿ ಬ್ರದರ್‍ಸ್‌ಗಳದ್ದು, ಜಿಂದಾಲ್ ಕುಡಿಗಳದ್ದು, ಮಿತ್ತಲ್ ಕುಟುಂಬಗಳದ್ದು ಕೇಳೋದೆ ಬೇಡ. ದುರಂತವೆಂದರೆ ಮೋದಿ ಹೇಳಿದ್ದ ಅಚ್ಚೇ ದಿನ್ ಇವರೆಲ್ಲ ಆಸ್ತಿಗಳನ್ನು ಇಷ್ಟೆಲ್ಲ ಹೆಚ್ಚು ಮಾಡಿದ್ದರೂ, ಸುಮಾರು 60 ಕೋಟಿ ಬಡ ಭಾರತೀಯರ ಆದಾಯ ಈ ಅವಧಿಯಲ್ಲಿ ಏನಾಗಿದೆ ಎಂಬುದನ್ನು ನಾವು ಮರೆಯುವಂತಿಲ್ಲ.

ಒಟ್ಟಿನಲ್ಲಿ ಮೋದಿ ಮಹಾತ್ಮರ ಅಚ್ಚೇ ದಿನ್ ಜನಸಾಮಾನ್ಯರಿಗೆ ದಕ್ಕಲಿಲ್ಲ, ರೆಡ್ಡಿಯಂಥಾ, ಅಂಬಾನಿ-ಅದಾನಿಗಳಂಥ ಕಾಳಧನಿಕರಿಗೆ ‘ಗುಡ್ ಟೈಂ’ ರೂಪದಲ್ಲಿ ವಕ್ಕರಿಸಿಕೊಂಡಿದೆ ಅನ್ನೋದು ರೆಡ್ಡಿ ಮಾತಿನಿಂದಲೇ ದೃಢವಾಗುತ್ತೆ.

– ಗಿರೀಶ್ ತಾಳಿಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...