Homeಮುಖಪುಟರೆಡ್ಡಿ ಹಣಿಯುವ ಶಾ ತಂತ್ರಕ್ಕೆ ರಾಮುಲು ಆದರೇ ಬದಾಮಿಯ ಹರಕೆಯ ಕುರಿ?

ರೆಡ್ಡಿ ಹಣಿಯುವ ಶಾ ತಂತ್ರಕ್ಕೆ ರಾಮುಲು ಆದರೇ ಬದಾಮಿಯ ಹರಕೆಯ ಕುರಿ?

- Advertisement -
- Advertisement -

– ಗಿರೀಶ್ ತಾಳಿಕಟ್ಟೆ /

ಈ ಸಲದ ಎಲೆಕ್ಷನ್‍ನ ಹೈವೋಲ್ಟೇಜ್ ಕ್ಷೇತ್ರ ಅಂತ್ಯಾವುದಾದರು ಇದ್ದರೆ ಅದು ಬದಾಮಿ ಅನ್ನೋದ್ರಲ್ಲಿ ಯಾವ ಡೌಟೂ ಇಲ್ಲ. ಸಿಎಂ ಸಿದ್ರಾಮಯ್ಯ ಅಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಗಾಳಿ ಸುದ್ದಿ ತೇಲಾಡಿದಾಗಲೇ ಬದಾಮಿ ಹೈಲೈಟಿಗೆ ಬಂದಿತ್ತು. ಆದರೆ ಯಾವಾಗ ಬಿಜೆಪಿ, ಶ್ರೀರಾಮುಲು ಎಂಬ ರೆಡ್ಡಿ ಬೆಟಾಲಿಯನ್ ಬಂಟನನ್ನು ತಂದು ಸಿದ್ರಾಮಯ್ಯನ ಎದುರು ನಿಲ್ಲಿಸಿತೋ ಆಗಿನಿಂದ ಅದು ಸಿಕ್ಕಾಪಟ್ಟೆ ಸೆನ್ಸೇಷನಲ್ ಕ್ಷೇತ್ರವಾಗಿದೆ. ಚಾಮುಂಡೇಶ್ವರಿಯಲ್ಲಿ ಗೆಲುವು ಕಷ್ಟ ಅಂತಾ, ಕುರುಬರ ಸಾಲಿಡ್ ಮತಗಳಿರುವ ಬದಾಮಿಗೂ ಸಿದ್ರಾಮಯ್ಯ ತನ್ನ ಸ್ಪರ್ಧೆ ವಿಸ್ತರಿಸಿದರೆ ಬಿಜೆಪಿ ಅಲ್ಲಿಯೂ ಶ್ರೀರಾಮುಲು ಎಂಬ ರೊಕ್ಕಸ್ಥ ಆಸಾಮಿಯನ್ನು ಕಣಕ್ಕಿಳಿಸಿ ಬೆವರಿಳಿಸುವಂತೆ ಮಾಡುತ್ತಿದೆ ಎಂಬ ವೆರಿ ಸೂಪರ್‍ಫಿಶಿಯಲ್ ಅಭಿಪ್ರಾಯ ಜನರ ನಡುವೆ ಹರಿದಾಡುತ್ತಿದೆ, ಅಥವಾ ಹರಿದಾಡಿಸಲಾಗುತ್ತಿದೆ.
ಕಾಂಗ್ರೆಸ್ ಪಾಲಿಗೆ ದಿಲ್ಲಿ ಕೂಸು ರಾಹುಲ್‍ಗಿಂತಲೂ ಸ್ಟಾರ್ ಕ್ಯಾಂಪೇನರ್ ಅಂತಂದರೆ ಅದು ಸಿಎಂ ಸಿದ್ರಾಮಯ್ಯ. ಈಗಾಗಲೇ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಜನರನ್ನು ಕೈ ಪಾರ್ಟಿಯತ್ತ ಸೆಳೆದಿವೆ. ಇನ್ನು ಸಿದ್ರಾಮಯ್ಯನಂತ ಮಾಸ್ ಲೀಡರ್ರು ಪ್ರಚಾರ ಮಾಡಿಬಿಟ್ರೆ ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯೋದ್ರಲ್ಲಿ ಸಂಶಯವಿಲ್ಲ. ಬಹುತೇಕ ಸಮೀಕ್ಷೆಗಳು ಇದನ್ನೇ ಹೇಳುತ್ತಿವೆ. ಹಾಗಾಗಿ ಸಿಎಂ ಸಿದ್ರಾಮಯ್ಯರನ್ನು ತಮ್ಮ ಕ್ಷೇತ್ರಕ್ಕಷ್ಟೇ ಸೀಮಿತವಾಗಿಸಬೇಕು ಅನ್ನೊ ಪ್ಲ್ಯಾನು ಹಾಕಿಕೊಂಡೇ ಬಿಜೆಪಿ ಬದಾಮಿಯಲ್ಲಿ ಶ್ರೀರಾಮುಲುರನ್ನು ಫೀಲ್ಡಿಗಿಳಿಸಿದೆ. ಇದು ರಾಮುಲು ಸ್ಪರ್ಧೆಯ ನೇರಾನೇರ ವಾಸ್ತವ. ಆದ್ರೆ ಪಾಲಿಟಿಕ್ಸ್ ಅನ್ನೋದು ಇಷ್ಟು ಸರಳವಾದ ಸಂಗತಿ ಅಲ್ಲ. ಒಂದೊಂದು ತಿರುವಿನೊಳಗೂ ಹತ್ತಾರು ಒಳಹುಗಳು ಮಲಗಿರುತ್ತವೆ. ರಾಮುಲು ಸ್ಪರ್ಧೆಯ ಹಿಂದೆಯೂ ಇಂತದ್ದೇ ಒಂದು ಹಿಡನ್ ಕಾರ್ಯತಂತ್ರವಿದೆ. ಅದು ಸ್ವತಃ ಬಿಜೆಪಿಯೇ ಅಳೆದು-ತೂಗಿ ಮಡಗಿದ ಮಹೂರ್ತ! ಒಂದೇ ಕಲ್ಲಿಗೆ ಎರಡು ಹಣ್ಣು ಉದುರಿಸೋ ಅಮಿತ್ ಶಾ ಸ್ಕೆಚ್ಚು!!

ಸೋಲಿನ ಪಾಕ

ಎತ್ತಿಂದೆತ್ತ ಲೆಕ್ಕ ಹಾಕಿದರೂ, ಏನೆಲ್ಲಾ ಪರ್ಮುಟೇಷನ್-ಕಾಂಬಿನೇಷನ್ ಗುಣಿಸಿ ಗುಡ್ಡೆ ಹಾಕಿದರೂ ಬದಾಮಿಯಲ್ಲಿ ಸಿದ್ರಾಮಯ್ಯನ ಎದುರು ಬಿಜೆಪಿ ಗೆಲ್ಲೋದಕ್ಕೆ ಸಾಧ್ಯವೇ ಇಲ್ಲ. ಜಾತಿ ಕೆಮಿಸ್ಟ್ರಿಯನ್ನೇ ಅಪ್ಲೈ ಮಾಡಿ ನೋಡೋಣ. ಅಜಮಾಸು ಎರಡು ಕಾಲು ಲಕ್ಷದಷ್ಟು ಮತದಾರರಿರುವ ಬದಾಮಿಯಲ್ಲಿ ಕುರುಬರದ್ದೇ ಮೇಲುಗೈ. ಏನಿಲ್ಲವೆಂದರು 46 ಸಾವಿರ ಓಟುಗಳಿವೆ. 36 ಸಾವಿರ ಮತಗಳೊಂದಿಗೆ ಎರಡನೇ ಸ್ಥಾನದಲ್ಲಿರುವ ಲಿಂಗಾಯತರು ಪಂಚಮಸಾಲಿ ಮತ್ತು ಬಣಜಿಗ ಎಂಬ ಎರಡು ಪಂಗಡಗಳಾಗಿ ಇಬ್ಬಾಗವಾಗಿವೆ. ಇನ್ನು ಗಾಣಿಗರ 26 ಸಾವಿರ, ನೇಕಾರರ 17 ಸಾವಿರ, ದಲಿತರ 25 ಸಾವಿರ, ನಾಯಕರ 13 ಸಾವಿರ, ಅಲ್ಪಸಂಖ್ಯಾತರ 12 ಸಾವಿರ ಮತಗಳಿವೆ. ಕುರುಬರ, ದಲಿತರ, ಅಲ್ಪಸಂಖ್ಯಾತರ ಮತಗಳು ಒಗ್ಗೂಡಿದರೆ ಸಾಕು ಸಿದ್ರಾಮಯ್ಯ ಗೆಲುವನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಆದಾಗ್ಯೂ ಇನ್ನುಳಿದ ಜಾತಿಗಳ ಮೇಲೂ ಆರ್.ಬಿ.ತಿಮ್ಮಾಪೂರ, ಬಿ.ಬಿ.ಚಿಮ್ಮನಕಟ್ಟಿ, ಸತೀಶ್ ಜಾರಕಿಹೊಳಿಯಂತಹ ಲೋಕಲ್ ಲೀಡರುಗಳ ಪವರ್‍ಫುಲ್ ಪ್ರಭಾವವಿದೆ. ಇನ್ನು ಲಿಂಗಾಯತ ಮತಗಳನ್ನು ಸೆಳೆಯಲು ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಲಿಂಗಾಯತ ಲೀಡರುಗಳ ದಂಡೇ ಕಾರ್ಯಪ್ರವೃತ್ತವಾಗಿದೆ. ಪರಿಸ್ಥಿತಿ ಹೇಗಿದೆಯೆಂದರೆ ಬಿಜೆಪಿಯ ರಾಮುಲುಗೆ ತನ್ನದೇ ಜಾತಿಯ ನಾಯಕರ ಮತಗಳು ಬೀಳೋದೂ ಡೌಟು. ಯಾಕೆಂದ್ರೆ ಅವು ಅದೇ ಸಮುದಾಯದ ಸತೀಶ್ ಜಾರಕಿಹೊಳಿಯ ಸ್ಥಳೀಯ ಪ್ರಭಾವಳಿಯಲ್ಲಿವೆ.
ಇಲ್ಲಿ ಬಿಜೆಪಿಗೆ ನಿಜಕ್ಕೂ ಸಿದ್ರಾಮಯ್ಯನ ನಿದ್ದೆಗೆಡಿಸುವುದೇ ಏಕಮೇವ ಇರಾದೆಯಾಗಿದ್ದಿದ್ದರೆ ಯಾರಾದರು ಪವರ್‍ಫುಲ್ ಲಿಂಗಾಯತ ಲೀಡರನ್ನು ಚುನಾವಣೆಗೆ ಇಳಿಸಬೇಕಿತ್ತು. ಕೇವಲ ಇದೊಂದು ಕ್ಷೇತ್ರದ ಲಿಂಗಾಯತರ ಮತಗಾತ್ರವನ್ನು ಕಬ್ಜಾ ಮಾಡಿಕೊಳ್ಳುವುದಲ್ಲದೇ ಇಡೀ ಉತ್ತರ ಕರ್ನಾಟಕದಲ್ಲಿ ಈಗಲೂ ಲಿಂಗಾಯತರ ಜೊತೆ ನಾವೇ ಹೆಜ್ಜೆ ಹಾಕುತ್ತಿದ್ದೇವೆ ಎಂಬ ಸಂದೇಶ ಹೊರಬೀಳುವಂತೆ ಮಾಡುವಲ್ಲೂ ಅದು ಪ್ರಮುಖ ಪಾತ್ರ ವಹಿಸುತ್ತಿತ್ತು. ಆದರೆ ಹಾಗೆ ಮಾಡದೆ ಜಾತಿ ಲೆಕ್ಕಾಚಾರದಲ್ಲೂ ಹಿಂದೆ ಬಿದ್ದಿರುವ, ಕ್ಷೇತ್ರ ಒಡನಾಟದಲ್ಲೂ ತಾಳೆಯಾಗದ ರೆಡ್ಡಿ ಪಾಳೆಯದ ಶ್ರೀರಾಮುಲುವನ್ನು ಬಿಜೆಪಿ ಕಣಕ್ಕಿಳಿಸಿರೋದು ಯಾಕೆ?

ಬಿಸಿ ತುಪ್ಪಕ್ಕೆ ದ್ವಂದ್ವ ಸೂತ್ರ
ಗಣಿ ಮಾಫಿಯಾದ ಕಾರಣಕ್ಕೆ ಜೈಲುಪಾಲಾಗಿ, ಇತ್ತೀಚೆಗಷ್ಟೇ ಬೇಲ್ ಮೇಲೆ ಹೊರಬಂದರೂ ಬಳ್ಳಾರಿ ಜಿಲ್ಲೆಯೊಳಗೆ ಕಾಲಿಡದಂತೆ ನಿರ್ಬಂಧ ಹೇರಿಸಿಕೊಂಡಿರುವ ಜನಾರ್ಧನ ರೆಡ್ಡಿ ಮತ್ತವರ ಟೀಮು ಬಿಜೆಪಿ ಪಾಲಿಗೆ ಬಿಸಿ ತುಪ್ಪದಂತಾಗಿದ್ದಾರೆ. ಅತ್ತ ನುಂಗುವಂತೆಯೂ ಇಲ್ಲ, ಇತ್ತ ಉಗುಳುವಂತೆಯೂ ಇಲ್ಲ. ರೆಡ್ಡಿಗಳ ಕಾಸು, ವರ್ಚಸ್ಸು ಬೇಕು ಆದರೆ ಪಕ್ಷದೊಳಗೆ ಅವರು ಪ್ರಭಾವಿಗಳಾಗೋದು ಬೇಡ. ಇದು ಬಿಜೆಪಿಯ ಆಂತರಿಕ ಇಂಗಿತ. ಚುನಾವಣೆ ಗೆಲ್ಲೋದಕ್ಕೆ, ಅಗತ್ಯ ಬಿದ್ದರೆ ಆಪರೇಷನ್ ಕಮಲಕ್ಕೆ ರೆಡ್ಡಿಗಳೇ ಫೈನಾನ್ಸ್ ಮಾಡಬೇಕಾಗಿರೋದ್ರಿಂದ ಅವರನ್ನು ಅಷ್ಟು ಸುಲಭಕ್ಕೆ ಸೈಡ್‍ಲೈನ್ ಮಾಡಲಾಗದು. ಹಾಗಂತ ಈ ಹಿಂದೆ ಅವರೇ ಪಕ್ಷವನ್ನು ಹೈಜಾಕ್ ಮಾಡುವಷ್ಟರ ಮಟ್ಟಕ್ಕೆ ಬೆಳೆಯಲೂ ಬಿಡುವಂತಿಲ್ಲ. ಇಂಥಾ ಇಕ್ಕಟ್ಟನ್ನು ನಿಭಾಯಿಸಿಕೊಳ್ಳಲೇ ಅಮಿತ್ ಷಾ, ಸಂಘ ಪರಿವಾರದ ಜೊತೆಗೆ ಸಮಾಲೋಚನೆ ನಡೆಸಿ ಶ್ರೀರಾಮುಲುವನ್ನು ಸಿದ್ರಾಮಯ್ಯ ವಿರುದ್ಧ ಕಣಕ್ಕಿಳಿಸಿದ್ದಾರೆ ಎನ್ನಲಾಗುತ್ತಿದೆ.
ಹೀಗೆ ಮಾಡೋದ್ರಿಂದ ಷಾ ಮತ್ತು ಸಂಘ, ಒಂದೇ ಕಲ್ಲಿಗೆ ಎರಡು ಹಕ್ಕಿಯ ಕಾಲು ಮುರಿಯಲು ಹೊರಟಿದ್ದಾರೆ. ಏನೇ ತಿಪ್ಪರಲಾಗ ಹಾಕಿದರೂ ಬದಾಮಿಯಲ್ಲಿ ತಮ್ಮ ಪಕ್ಷದ ಕ್ಯಾಂಡಿಡೇಟು ಸಿದ್ರಾಮಯ್ಯನ ವಿರುದ್ಧ ಗೆಲ್ಲೊಲ್ಲ ಅನ್ನೋದು ಅಮಿತ್ ಷಾಗೂ ಗೊತ್ತಿತ್ತು. ಆದರೆ ಆ ಸೋಲಿನಿಂದಲೂ ಒಂದು ಲಾಭ ಮಾಡಿಕೊಳ್ಳುವ ತಂತ್ರ ಹೆಣೆದೇ ರಾಮುಲುವನ್ನು ಕಣಕ್ಕಿಳಿಸುವಂತೆ ಜನಾರ್ಧನ ರೆಡ್ಡಿಯ ಮುಂದೆ ಅಮಿತ್ ಶಾ ಆಫರ್ ಇಟ್ಟಿದ್ದಾರೆ. ಅದು ಪಕ್ಷದೊಳಗೆ ರೆಡ್ಡಿಗಳನ್ನು ಅಡ್ಡಡ್ಡ ಮಲಗಿಸುವ ನಾಜೂಕಯ್ಯನ ತಂತ್ರ. ಹೇಗೂ ರೆಡ್ಡಿ ಬ್ರಿಗೇಡು ಪೊಲಿಟಿಕಲ್ ಪುನರ್ಜನ್ಮಕ್ಕಾಗಿ ಹಾತೊರೆಯುತ್ತಾ ಇರೋದ್ರಿಂದ ಪಕ್ಷ ಇಟ್ಟ ಈ ಆಫರ್ರನ್ನು ಜನಾರ್ಧನ್ ರೆಡ್ಡಿ ತಿರಸ್ಕರಿಸಲು ಬರುವುದಿಲ್ಲ. ಒಂದೊಮ್ಮೆ ಆತ ಅಲ್ಲಿ ಸೋಲುವ ಸುಳಿವಿಡಿದು ತನ್ನ ಭಂಟನ ಸ್ಪರ್ಧೆಗೆ ಅಡ್ಡಡ್ಡ ತಲೆಯಾಡಿಸಿದರೆ ಪಕ್ಷದೊಳಗೆ ರೆಡ್ಡಿ ತಾನಾಗೇ ಆತ್ಮಹತ್ಯೆ ಮಾಡಿಕೊಂಡಂತಾಗುತ್ತಿತ್ತು. ಧೈರ್ಯ ಮಾಡಿ ಸ್ಪರ್ಧೆಗೆ ಸೈ ಅಂದರೂ, ಶ್ರೀರಾಮುಲುಗೆ ಅಲ್ಲಿ ಸೋಲು ಕಟ್ಟಿಟ್ಟ ಬುತ್ತಿ. ಆ ಸೋಲು ಸಹಾ ರೆಡ್ಡಿ ಬೆಟಾಲಿಯನನ್ನು ಪಕ್ಷದೊಳಗೆ ಕೆಡವಿ ಬಿಡುತ್ತೆ! ಅಲ್ಲಿಗೆ ಯಾವ ದುಶ್ಮನಿ, ಮನಸ್ತಾಪವನ್ನೂ ಕಟ್ಟಿಕೊಳ್ಳದೆ ರೆಡ್ಡಿಗಳನ್ನು ಮಟ್ಟ ಹಾಕಿದಂತೆ ಆಯ್ತಲ್ಲವೇ!! ಅಪ್ಪಿತಪ್ಪಿ, ಶ್ರೀರಾಮುಲು ಗೆದ್ದೇ ಬಿಟ್ಟರು ಅಂತಿಟ್ಟುಕೊಳ್ಳಿ ಆಗಲೂ ಲಾಭ ಬಿಜೆಪಿಗೇ ತಾನೇ.

ಒಂದು ಕಡೆ ಸಿದ್ರಾಮಯ್ಯರನ್ನು ವಿಚಲಿತ ಮಾಡಿದಂತಾಗುತ್ತೆ. ಮತ್ತೊಂದೆಡೆ ರೆಡ್ಡಿಗಳನ್ನು ಎರಡು ತುದಿಯ ಖಡ್ಗದಿಂದ ಇರಿದಂತಾಗುತ್ತೆ! ಇದು ಅಮಿತ್ ಷಾ ಲೆಕ್ಕಾಚಾರ. ಒಟ್ಟಿನಲ್ಲಿ ರೆಡ್ಡಿಗಳನ್ನು ಕಟ್ಟಿಹಾಕಲು ರಾಮುಲು ಎಂಬ ಹರಕೆಯ ಕುರಿಯನ್ನು ಷಾ ಬಳಸಿಕೊಳ್ಳುತ್ತಿರೋದು ಸ್ಪಷ್ಟ. ಕಾಕತಾಳೀಯ ಅಂದ್ರೆ, ಹಿಂದೆ ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ ಸ್ಪರ್ಧಿಸಿದ್ದಾಗ ಬಿಜೆಪಿಯ ಮಿನುಗು`ತಾರೆ’ ಸುಷ್ಮಾ ಸ್ವರಾಜ್ ಪರ ರಿಸ್ಕನ್ನು ಕೈಗೆತ್ತಿಕೊಂಡು ಬಿಜೆಪಿಯೊಳಗೆ ಬಲಾಢ್ಯರಾಗಿ ಬೆಳೆದಿದ್ದ ರೆಡ್ಡಿಗಳನ್ನು ಮಟ್ಟ ಹಾಕಲು ಇದೀಗ ಅಂತದ್ದೇ ಚಾಲೆಂಜಿಂಗ್ ಚುನಾವಣೆ ಬಳಕೆಯಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...