Homeಅಂಕಣಗಳುನಿಮ್ಮ ಖಾತೆಗಳನ್ನ ಬುಟ್ಟುಕೊಟ್ರೆ ಸರಕಾರ ಉಳಿತದಂತೆ ಸಾ...

ನಿಮ್ಮ ಖಾತೆಗಳನ್ನ ಬುಟ್ಟುಕೊಟ್ರೆ ಸರಕಾರ ಉಳಿತದಂತೆ ಸಾ…

- Advertisement -
- Advertisement -

| ಯಾಹೂ |

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವುಂಟಾದರೂ ಕೊಲ್ಲೂರು ಪ್ರಾಂತ್ಯದ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಹರಿಸುತ್ತಿರುವ ರೇವಣ್ಣನವರನ್ನು ಮಾತನಾಡಿಸಿ, ಮನಸ್ಸನ್ನು ಹಗುರ ಮಾಡಿಕೊಳ್ಳಬೇಕೆನಿಸಿತಲ್ಲಾ, ಆ ಕೂಡಲೇ ಪೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: “ಕೊಲ್ಲೂರು ಸಿರಿದೇವಿ ಮೂಕಾಂಬಿಕೇ, ನಿನ್ನ ದರುಶನಕೆ ಬಂದಿಹೆನು ಕಾಪಾಡಮ್ಮ.”
“ಹಲೋ ಯಾರ್ರಿ.”
“ನಾನು ಸರ್ ಯಾಹೂ.”
“ಏನ್ರಿ”
“ಎಲ್ಲಿದ್ದಿರಿ ಸಾರ್.”
“ನಾನೆಲ್ಲಿದ್ರೆ ನಿಮಗೇನ್ರಿ.”
“ಅಲ್ಲ ಸಾರ್. ರೇವಣ್ಣ ಪುಣ್ಯಕ್ಷೇತ್ರಗಳಿಗೆ ಭೇಟಿ ಕೊಡ್ತಾ ಅವುರೆ ಅಂದ್ರು, ಅದಕೆ ಫೋನ್ ಮಾಡಿದೆ ಸಾರ್.”
“ಕೊಲ್ಲೂರು ಮೂಕಾಂಬಿಕೆ, ಆನೆಗುಡ್ಡದ ಆಂಜನೇಯ, ಕಟೀಲು, ಧರ್ಮಸ್ಥಳ, ಇಲ್ಯಲ್ಲ ಹೋಗಿ ಬಂದೆ ಕಂಡ್ರಿ.”
“ದೇವರು ಸರಕಾರ ಉಳುಸ್ತವ ಸಾರ್.”
“ಉಳುಸ್ತವೆ ಕಂಡ್ರಿ.”
“ಹ್ಯಂಗೆ ಸಾರ್.”
“ಯಾರ್ಯಾರಿಗೆ ಮನಿಯಾಳು ಬುದ್ದಿ ಇರತದೊ ಅವುರಿಗ್ಯಲ್ಲ ವಳ್ಳೆ ಬುದ್ದಿ ಕೊಡು ಅಂತ ನಾವು ದೇವರ ಕೇಳಿಕೊಂಡು ಪೂಜೆ ಮಾಡುಸ್ತಿವಿ, ಹೋಮ ಮಾಡುಸ್ತಿವಿ.”
“ಆಗ ದೇವುರು ಅವುರಿಗ್ಯಲ್ಲ ವಳ್ಳೆ ಬುದ್ದಿ ಕೊಡ್ತದ ಸಾರ್.”
“ಕೊಡ್ತದೊ ಬುಡ್ತದೊ ನಾವು ಮಾಡೊ ಕ್ಯಲಸ ಮಾಡಬೇಕಲ್ವೇನ್ರಿ”
“ನಿಜ ಸಾರ್.”
“ಅದ್ಕೆ ನಾನು ಮದ್ಲು ಹೋಗಿ ಕೇಳಿಕಂಡಿದ್ದು ಮೈಸೂರು ಚಾಮುಂಡೇಶ್ವರಿಯ. ಅವುಳು ಮೈಸೂರು ಮಾರಾಜನ್ನ ಕಾಪಾಡಿದಂಗೆ ನಮ್ಮ ಕುಮಾರನ ಸರಕಾರನೂ ಉಳುಸ್ತಾಳೆ.”
“ಹೆಣ್ಣು ದೇವರಿಗೆ ಇಷ್ಟು ಗೌರವ ಕೊಡೋ ನೀವು ಆ ಸುಮಲತನ್ನ ಬೈದರಲ್ಲ ಸಾರ್.”
“ನಾನೆಲ್ಲಿ ಬೋದೆ. ವಟ್ಟಿಗೇನು ತಿಂತೀರಿ ನೀವು ನಿಮ್ಮಂಥೊರಿಂದ್ಲೆ ಹಿಂಗಾಗಿರದು.”
“ಸಾರಿ ಸರ್ ಬೈಲಿಲ್ಲ ಟೀಕೆ ಮಾಡಿದ್ರಿ.”
“ಟೀಕೆ ಎಲ್ಲಿ ಮಾಡಿದೇರೀ? ಪಾಪ ಗಂಡ ಸತ್ತು ತಿಂಗಳಾಗಿಲ್ಲ ಯಲಕ್ಷನ್ನಿಗೆ ಬಂದವುಳೆ ಅಂದೆ ಇದು ತೆಪ್ಪ.”
“ತೆಪ್ಪಲ್ಲ ಸಾರ್, ಅಕಸ್ಮಾತ್ ನೀವು ಅಂಬರೀಶನಂಗಾಗಿ…..”
“ಥೂ ಬುಡ್ತು ಅನ್ರಿ.”
“ಸಾರಿ ಸ, ನಿಮ್ಮ ನಂತ್ರ ಭವಾನಕ್ಕನಿಗೆ ಟಿಕೆಟ್ ಕೊಟ್ರೆ ನೀವು ಅಂಗನ್ನಕ್ಕಾಯ್ತದ.”
“ಭವಾನಿ ನಾನಿಲ್ದಾಗ ರಾಜಕಾರಣ ಮಾಡದಕ್ಕಿಂತ ಈಗ್ಲೆ ಅವುಳು ರಾಜಕಾರಣಿ ಕಂಡ್ರಿ, ಅವುಳ ಕ್ಯಲಸ ನಿಮಗೇನು ಗೊತ್ತು.”
“ಗೊತ್ತಾಗಲಿಲ್ಲ ಸಾರ್.”
“ಹಾಸನ ಜಿಲ್ಲೆ ಇಸಗೂಲುಡುಗ್ರ್ಯಲ್ಲ ಪಾಸಾಗ್ಯವೆ ಅಂಗೆ ಮಾಡಿದ್ಲು.”
“ರಿಯಲ್ಲಿ ಗ್ರೇಟ್ ಸಾ, ಅಂಗಿದ್ರೆ ಅವುರ ಎಮ್ಮೆಲ್ಸಿ ಮಾಡಿ ಶಿಕ್ಷಣ ಸಚಿವರನ್ನಾಗಿ ಮಾಡಿದ್ರೆ, ಇಡೀ ಕರ್ನಾಟಕದ ಸ್ಕೂಲು ಮಕ್ಕಳ್ಯಲ್ಲ ಪಾಸಾಯ್ತವಲ್ಲವ ಸಾ.”
“ಆಯ್ತವೆ ಸರಿ, ಆದ್ರೆ ಅವುಳ ಎಮ್ಮೆಲ್ಸಿ ಮಾಡಕ್ಕೆ ಬುಡ್ತಾರೇನ್ರಿ. ಈಗ್ಲೆ, ದ್ಯಾವೇಗೌಡ್ರು ಮಕ್ಕಳದೆ ಸರಕಾರ ಅಂತ ವಟ್ಟೆಕಿಚ್ಚು ಮಾಡೋರು ಆಗ ಬುಡ್ತಾರಾ.”
“ವಟ್ಟೆಕಿಚ್ಚು, ರಾಜಕಾರಣಿಗಳ ಹುಟ್ಟುಗುಣ ಸಾ. ವಟ್ಟೆಕಿಚ್ಚು, ಕರುಬುತನ, ಕಿಜ್ಜರತನ, ಸಣ್ಣತನ ಇವ್ಯಲ್ಲ ನಿಮ್ಮಂತವರ ಹುಟ್ಟುಗುಣ.”
“ನಮ್ಮಂತವುರು ಅಂತ ಯಾಕಂತೀರಿ ಹಲ್ಲಿಡುದು ಮಾತಾಡಿ.”
“ನೀವು ದೇವೇಗೌಡ್ರ ಮಕ್ಕಳಲ್ಲವ ಸಾರ್.”
“ಅದ್ಕೆ ಅಂಗಂದುಬುಡದಾ. ನಮ್ಮ ತಂದೆ ಈ ವಯಸ್ಸಿನಲ್ಲಿ ಎಷ್ಟು ಕಷ್ಟಪಡ್ತರೆ ಅಂತ ನಿಮಗೇನ್ರಿ ಗೊತ್ತು”
“ನಿಜ ಸಾ, ಗೌಡ್ರು ಅನ್ನ ನಿದ್ದೆ ಬುಟ್ಟು ಬರೀ ಮುದ್ದೆ ತಿನ್ನಕಂಡು ನೋವಿನ ಕಣ್ಣಲ್ಲಿ ಕುಂತಿರದ ನೋಡಿದ್ರೆ ವಟ್ಟೆ ಉರಿತದೆ. ಈ ಹಾಳು ಎಮ್ಮೆಲ್ಲೆಗಳು ಅದ ತಿಳಕಳ್ಳಿಲ್ಲ.”
“ತಿಳಕಳಕ್ಕೆ ಯಂಗಾಯ್ತದ್ರಿ, ಆ ಬಿಜೆಪಿಗಳು ಕೋಟಿ ಕೋಟಿ ಕೊಡ್ತೀವಿ ಅಂತ ಆಸೆ ತೋರಿಸಿಬುಟ್ಟವುರೆ, ಅದ್ಕೆ ಅಂಗಾಡದು.”
“ನೀವು ತೋರಬೇಕಾಗಿತ್ತು.”
“ಎಲ್ಲಿಂದ ತರದ್ರಿ ಅಷ್ಟೊಂದು ದುಡ್ಡ.”
“ಸರಕಾರದ ಖಜಾನೇನೆ ನಿಮ್ಮದಲವಾ ಸಾ.”
“ಸರಕಾರದ ಖಜಾನೆ ನಮ್ಮದು ಅಂತ ಈ ಮುಂಡೆ ಮಕ್ಕಳಿಗ್ಯಲ್ಲ ಕೇಳಿ ಕೇಳಿದಂಗೆ ಕೊಡಕ್ಕಾಯ್ತದೇನ್ರಿ.”
“ಅದ್ಕೆ ಅಲವ ಸಾ, ಬಂಡಾಯ.”
“ಬಂಡಾಯ ಏಳ್ಳಿಬುಡಿ, ಕುಮಾರನ ಸರಕಾರವ ಏನು ಮಾಡಕ್ಕಾಗದಿಲ್ಲ. ನಾನೀಗಾಗ್ಲೆ ಯಲ್ಲಾ ದೇವರನೂ ನೋಡಿ ಪೂಜೆ ಮಾಡಿ ಬಂದಿದ್ದಿನಿ. ನಮ್ಮ ಕಡೆ ದೇವುರಿದಾನೆ.”
“ಒಂದು ಡವುಟು ಸಾರ್.”
“ಏನ್ರಿ ಅದು.”
“ನೀವು ಈಗಾಗ್ಲೆ ಒಂದು ಡಜನ್ ದೇವುರಿಗೆ ನಿಮ್ಮ ಕಷ್ಟ ಹೇಳಕಂಡಿದ್ದಿರಿ, ಇದರಲ್ಲಿ ಯಾವ ದೇವರು ನಿಮ್ಮ ಕೈ ಹಿಡಿತವೆ.”
“ಯಲ್ಲಾ ದೇವರೂ ಹಿಡಿತವೆ.”
“ಹಿಡಿಲಿಲ್ಲ ಅಂದ್ರೆ.”
“ಹಿಡಿದೇ ಹಿಡಿತವೆ ಕಂಡ್ರಿ. ನಮ್ಮ ತಂದೆ ಕನಕಪುರ, ಹೊಳೆನರಸೀಪುರದಲ್ಲಿ ಸೋತು, ಮನಿಗೆ ಬಂದಾಗ ಸುಮ್ಮನೆ ಕೂತಗಳಿಲ್ಲ. ದೇವರ ಪೂಜೆ ಮಾಡಿದ್ರು. ಜಗದ್ಗುರುಗಳ ಕಾಲಿಗೆ ಬಿದ್ರು. ಮುಂದೇನಾಯ್ತು? ಪ್ರಧಾನಿಯಾದ್ರು! ಇದ ನಂಬಕ್ಕಾಯ್ತದೇನ್ರಿ, ಅದ್ಕೆ ನಾವು ಯಾವತ್ತೂ ದೇವರ ಪೂಜೆ, ಪುನಸ್ಕಾರ ಬುಡದಿಲ್ಲ. ಕುಮಾರನ್ನ ಚಾಮುಂಡೇಶ್ವರಿ ಕೈ ಹಿಡಿದೇ ಹಿಡಿತಳೆ.”
“ನಮಗಿರೋ ಮಾಹಿತಿ ಪ್ರಕಾರ ಈ ಒಂದು ವರ್ಷ ನಿಮ್ಮ ಕುಟುಂಬ ಇಡೀ ಸರಕಾರನ ತಿಂದು ಕುಂತದಂತೆ? ಯಾವ ಯಮ್ಮೆಲ್ಲೆಗೂ ಅನುದಾನ ಇಲವಂತೆ.”
“ಅದ್ಯಾವನ್ರಿ ಅಂಗಂದೋನು? ಧರ್ಮಸ್ಥಳಕ್ಕೆ ಬಂದು ಸತ್ಯ ಮಾಡ್ಳಿ, ಕರಕೊಂಡು ಬನ್ರಿ ಅವುರ.”
“ಸರಕಾರ ಉಳಿಬೇಕಾದ್ರೆ ಒಂದು ಸಿಂಪಲ್ ತೀರ್ಮಾನ ಇದ್ದತ್ತಂತೆ ಸಾರ್.”
“ಅದ್ಯಾವುದ್ರಿ ಸಿಂಪಲ್ಲು ತೀರ್ಮಾನ? ಅಂತದು ಇದ್ದತೆ?.”
“ನಿಮ್ಮ ಕೈಲಿ ಅದೆ ಸಾರ್.”
“ನನ್ನ ಕೈಲಿ ನಿಂಬೆಹಣ್ಣವೆ ಕಂಡ್ರಿ.”
“ಆ ಐದು ನಿಂಬೆ ಹಣ್ಣ ನಿಮ್ಮ ಸರಕಾರಕ್ಕೆ ಸಪೋಲ್ಟು ಮಾಡಿರೋ ಸಮರ್ಥರಾದ ಐದು ಜನ ಎಂಎಲ್‍ಎಗಳ ಕೈಗೆ ಕೊಟ್ಟು, ನಿಮ್ಮ ಖಾತೆ, ಕುಮಾರಣ್ಣನತ್ರ ಇರೋ ಖಾತೆ ಹಂಚಿದ್ರೆ, ಸರಕಾರ ಇನ್ನ ನಾಕೊರ್ಸ ಇರತದೆ ಸಾ.”
“ಇದು ಸಿಂಪಲ್ಲು ತೀರ್ಮಾನ ಏನ್ರಿ. ಯಾವನ್ರಿ ನಿಮಗೆ ಇಂಥಾ ಮನಿಯಾಳ ಬುದ್ದಿ ಹೇಳಿಕೊಟ್ಟೋನು. ಸರಕಾರ ಬಿದ್ದೋಗಿ ನಾವು ವಿರೋಧ ಪಕ್ಷದಲ್ಲಿ ಕುತಗಂಡ್ರೂ ಇಂತ ಕ್ಯಲಸ ಮಾಡಕ್ಕಾಯ್ತದೇನ್ರಿ.”
“ಅಂಗಾದ್ರೆ ಸರಕಾರನ ನಿಮ್ಮ ಯಾವ ದೇವರೂ ಉಳಿಸಕ್ಕಾಗಿದಲ್ಲ ಸಾ.”
“ಹೋಗ್ಲಿ ಬುಡ್ರಿ.”
“ಮುಂದಿನ ಚುನಾವಣೆಗೆ ದುಡ್ಡಾಯ್ತಲ್ಲ ಬುಡ್ರಿ.”
“ಏನಂದ್ರಿ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...