Homeಅಂಕಣಗಳುನಿಮ್ಮ ಖಾತೆಗಳನ್ನ ಬುಟ್ಟುಕೊಟ್ರೆ ಸರಕಾರ ಉಳಿತದಂತೆ ಸಾ...

ನಿಮ್ಮ ಖಾತೆಗಳನ್ನ ಬುಟ್ಟುಕೊಟ್ರೆ ಸರಕಾರ ಉಳಿತದಂತೆ ಸಾ…

- Advertisement -
- Advertisement -

| ಯಾಹೂ |

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವುಂಟಾದರೂ ಕೊಲ್ಲೂರು ಪ್ರಾಂತ್ಯದ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಹರಿಸುತ್ತಿರುವ ರೇವಣ್ಣನವರನ್ನು ಮಾತನಾಡಿಸಿ, ಮನಸ್ಸನ್ನು ಹಗುರ ಮಾಡಿಕೊಳ್ಳಬೇಕೆನಿಸಿತಲ್ಲಾ, ಆ ಕೂಡಲೇ ಪೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: “ಕೊಲ್ಲೂರು ಸಿರಿದೇವಿ ಮೂಕಾಂಬಿಕೇ, ನಿನ್ನ ದರುಶನಕೆ ಬಂದಿಹೆನು ಕಾಪಾಡಮ್ಮ.”
“ಹಲೋ ಯಾರ್ರಿ.”
“ನಾನು ಸರ್ ಯಾಹೂ.”
“ಏನ್ರಿ”
“ಎಲ್ಲಿದ್ದಿರಿ ಸಾರ್.”
“ನಾನೆಲ್ಲಿದ್ರೆ ನಿಮಗೇನ್ರಿ.”
“ಅಲ್ಲ ಸಾರ್. ರೇವಣ್ಣ ಪುಣ್ಯಕ್ಷೇತ್ರಗಳಿಗೆ ಭೇಟಿ ಕೊಡ್ತಾ ಅವುರೆ ಅಂದ್ರು, ಅದಕೆ ಫೋನ್ ಮಾಡಿದೆ ಸಾರ್.”
“ಕೊಲ್ಲೂರು ಮೂಕಾಂಬಿಕೆ, ಆನೆಗುಡ್ಡದ ಆಂಜನೇಯ, ಕಟೀಲು, ಧರ್ಮಸ್ಥಳ, ಇಲ್ಯಲ್ಲ ಹೋಗಿ ಬಂದೆ ಕಂಡ್ರಿ.”
“ದೇವರು ಸರಕಾರ ಉಳುಸ್ತವ ಸಾರ್.”
“ಉಳುಸ್ತವೆ ಕಂಡ್ರಿ.”
“ಹ್ಯಂಗೆ ಸಾರ್.”
“ಯಾರ್ಯಾರಿಗೆ ಮನಿಯಾಳು ಬುದ್ದಿ ಇರತದೊ ಅವುರಿಗ್ಯಲ್ಲ ವಳ್ಳೆ ಬುದ್ದಿ ಕೊಡು ಅಂತ ನಾವು ದೇವರ ಕೇಳಿಕೊಂಡು ಪೂಜೆ ಮಾಡುಸ್ತಿವಿ, ಹೋಮ ಮಾಡುಸ್ತಿವಿ.”
“ಆಗ ದೇವುರು ಅವುರಿಗ್ಯಲ್ಲ ವಳ್ಳೆ ಬುದ್ದಿ ಕೊಡ್ತದ ಸಾರ್.”
“ಕೊಡ್ತದೊ ಬುಡ್ತದೊ ನಾವು ಮಾಡೊ ಕ್ಯಲಸ ಮಾಡಬೇಕಲ್ವೇನ್ರಿ”
“ನಿಜ ಸಾರ್.”
“ಅದ್ಕೆ ನಾನು ಮದ್ಲು ಹೋಗಿ ಕೇಳಿಕಂಡಿದ್ದು ಮೈಸೂರು ಚಾಮುಂಡೇಶ್ವರಿಯ. ಅವುಳು ಮೈಸೂರು ಮಾರಾಜನ್ನ ಕಾಪಾಡಿದಂಗೆ ನಮ್ಮ ಕುಮಾರನ ಸರಕಾರನೂ ಉಳುಸ್ತಾಳೆ.”
“ಹೆಣ್ಣು ದೇವರಿಗೆ ಇಷ್ಟು ಗೌರವ ಕೊಡೋ ನೀವು ಆ ಸುಮಲತನ್ನ ಬೈದರಲ್ಲ ಸಾರ್.”
“ನಾನೆಲ್ಲಿ ಬೋದೆ. ವಟ್ಟಿಗೇನು ತಿಂತೀರಿ ನೀವು ನಿಮ್ಮಂಥೊರಿಂದ್ಲೆ ಹಿಂಗಾಗಿರದು.”
“ಸಾರಿ ಸರ್ ಬೈಲಿಲ್ಲ ಟೀಕೆ ಮಾಡಿದ್ರಿ.”
“ಟೀಕೆ ಎಲ್ಲಿ ಮಾಡಿದೇರೀ? ಪಾಪ ಗಂಡ ಸತ್ತು ತಿಂಗಳಾಗಿಲ್ಲ ಯಲಕ್ಷನ್ನಿಗೆ ಬಂದವುಳೆ ಅಂದೆ ಇದು ತೆಪ್ಪ.”
“ತೆಪ್ಪಲ್ಲ ಸಾರ್, ಅಕಸ್ಮಾತ್ ನೀವು ಅಂಬರೀಶನಂಗಾಗಿ…..”
“ಥೂ ಬುಡ್ತು ಅನ್ರಿ.”
“ಸಾರಿ ಸ, ನಿಮ್ಮ ನಂತ್ರ ಭವಾನಕ್ಕನಿಗೆ ಟಿಕೆಟ್ ಕೊಟ್ರೆ ನೀವು ಅಂಗನ್ನಕ್ಕಾಯ್ತದ.”
“ಭವಾನಿ ನಾನಿಲ್ದಾಗ ರಾಜಕಾರಣ ಮಾಡದಕ್ಕಿಂತ ಈಗ್ಲೆ ಅವುಳು ರಾಜಕಾರಣಿ ಕಂಡ್ರಿ, ಅವುಳ ಕ್ಯಲಸ ನಿಮಗೇನು ಗೊತ್ತು.”
“ಗೊತ್ತಾಗಲಿಲ್ಲ ಸಾರ್.”
“ಹಾಸನ ಜಿಲ್ಲೆ ಇಸಗೂಲುಡುಗ್ರ್ಯಲ್ಲ ಪಾಸಾಗ್ಯವೆ ಅಂಗೆ ಮಾಡಿದ್ಲು.”
“ರಿಯಲ್ಲಿ ಗ್ರೇಟ್ ಸಾ, ಅಂಗಿದ್ರೆ ಅವುರ ಎಮ್ಮೆಲ್ಸಿ ಮಾಡಿ ಶಿಕ್ಷಣ ಸಚಿವರನ್ನಾಗಿ ಮಾಡಿದ್ರೆ, ಇಡೀ ಕರ್ನಾಟಕದ ಸ್ಕೂಲು ಮಕ್ಕಳ್ಯಲ್ಲ ಪಾಸಾಯ್ತವಲ್ಲವ ಸಾ.”
“ಆಯ್ತವೆ ಸರಿ, ಆದ್ರೆ ಅವುಳ ಎಮ್ಮೆಲ್ಸಿ ಮಾಡಕ್ಕೆ ಬುಡ್ತಾರೇನ್ರಿ. ಈಗ್ಲೆ, ದ್ಯಾವೇಗೌಡ್ರು ಮಕ್ಕಳದೆ ಸರಕಾರ ಅಂತ ವಟ್ಟೆಕಿಚ್ಚು ಮಾಡೋರು ಆಗ ಬುಡ್ತಾರಾ.”
“ವಟ್ಟೆಕಿಚ್ಚು, ರಾಜಕಾರಣಿಗಳ ಹುಟ್ಟುಗುಣ ಸಾ. ವಟ್ಟೆಕಿಚ್ಚು, ಕರುಬುತನ, ಕಿಜ್ಜರತನ, ಸಣ್ಣತನ ಇವ್ಯಲ್ಲ ನಿಮ್ಮಂತವರ ಹುಟ್ಟುಗುಣ.”
“ನಮ್ಮಂತವುರು ಅಂತ ಯಾಕಂತೀರಿ ಹಲ್ಲಿಡುದು ಮಾತಾಡಿ.”
“ನೀವು ದೇವೇಗೌಡ್ರ ಮಕ್ಕಳಲ್ಲವ ಸಾರ್.”
“ಅದ್ಕೆ ಅಂಗಂದುಬುಡದಾ. ನಮ್ಮ ತಂದೆ ಈ ವಯಸ್ಸಿನಲ್ಲಿ ಎಷ್ಟು ಕಷ್ಟಪಡ್ತರೆ ಅಂತ ನಿಮಗೇನ್ರಿ ಗೊತ್ತು”
“ನಿಜ ಸಾ, ಗೌಡ್ರು ಅನ್ನ ನಿದ್ದೆ ಬುಟ್ಟು ಬರೀ ಮುದ್ದೆ ತಿನ್ನಕಂಡು ನೋವಿನ ಕಣ್ಣಲ್ಲಿ ಕುಂತಿರದ ನೋಡಿದ್ರೆ ವಟ್ಟೆ ಉರಿತದೆ. ಈ ಹಾಳು ಎಮ್ಮೆಲ್ಲೆಗಳು ಅದ ತಿಳಕಳ್ಳಿಲ್ಲ.”
“ತಿಳಕಳಕ್ಕೆ ಯಂಗಾಯ್ತದ್ರಿ, ಆ ಬಿಜೆಪಿಗಳು ಕೋಟಿ ಕೋಟಿ ಕೊಡ್ತೀವಿ ಅಂತ ಆಸೆ ತೋರಿಸಿಬುಟ್ಟವುರೆ, ಅದ್ಕೆ ಅಂಗಾಡದು.”
“ನೀವು ತೋರಬೇಕಾಗಿತ್ತು.”
“ಎಲ್ಲಿಂದ ತರದ್ರಿ ಅಷ್ಟೊಂದು ದುಡ್ಡ.”
“ಸರಕಾರದ ಖಜಾನೇನೆ ನಿಮ್ಮದಲವಾ ಸಾ.”
“ಸರಕಾರದ ಖಜಾನೆ ನಮ್ಮದು ಅಂತ ಈ ಮುಂಡೆ ಮಕ್ಕಳಿಗ್ಯಲ್ಲ ಕೇಳಿ ಕೇಳಿದಂಗೆ ಕೊಡಕ್ಕಾಯ್ತದೇನ್ರಿ.”
“ಅದ್ಕೆ ಅಲವ ಸಾ, ಬಂಡಾಯ.”
“ಬಂಡಾಯ ಏಳ್ಳಿಬುಡಿ, ಕುಮಾರನ ಸರಕಾರವ ಏನು ಮಾಡಕ್ಕಾಗದಿಲ್ಲ. ನಾನೀಗಾಗ್ಲೆ ಯಲ್ಲಾ ದೇವರನೂ ನೋಡಿ ಪೂಜೆ ಮಾಡಿ ಬಂದಿದ್ದಿನಿ. ನಮ್ಮ ಕಡೆ ದೇವುರಿದಾನೆ.”
“ಒಂದು ಡವುಟು ಸಾರ್.”
“ಏನ್ರಿ ಅದು.”
“ನೀವು ಈಗಾಗ್ಲೆ ಒಂದು ಡಜನ್ ದೇವುರಿಗೆ ನಿಮ್ಮ ಕಷ್ಟ ಹೇಳಕಂಡಿದ್ದಿರಿ, ಇದರಲ್ಲಿ ಯಾವ ದೇವರು ನಿಮ್ಮ ಕೈ ಹಿಡಿತವೆ.”
“ಯಲ್ಲಾ ದೇವರೂ ಹಿಡಿತವೆ.”
“ಹಿಡಿಲಿಲ್ಲ ಅಂದ್ರೆ.”
“ಹಿಡಿದೇ ಹಿಡಿತವೆ ಕಂಡ್ರಿ. ನಮ್ಮ ತಂದೆ ಕನಕಪುರ, ಹೊಳೆನರಸೀಪುರದಲ್ಲಿ ಸೋತು, ಮನಿಗೆ ಬಂದಾಗ ಸುಮ್ಮನೆ ಕೂತಗಳಿಲ್ಲ. ದೇವರ ಪೂಜೆ ಮಾಡಿದ್ರು. ಜಗದ್ಗುರುಗಳ ಕಾಲಿಗೆ ಬಿದ್ರು. ಮುಂದೇನಾಯ್ತು? ಪ್ರಧಾನಿಯಾದ್ರು! ಇದ ನಂಬಕ್ಕಾಯ್ತದೇನ್ರಿ, ಅದ್ಕೆ ನಾವು ಯಾವತ್ತೂ ದೇವರ ಪೂಜೆ, ಪುನಸ್ಕಾರ ಬುಡದಿಲ್ಲ. ಕುಮಾರನ್ನ ಚಾಮುಂಡೇಶ್ವರಿ ಕೈ ಹಿಡಿದೇ ಹಿಡಿತಳೆ.”
“ನಮಗಿರೋ ಮಾಹಿತಿ ಪ್ರಕಾರ ಈ ಒಂದು ವರ್ಷ ನಿಮ್ಮ ಕುಟುಂಬ ಇಡೀ ಸರಕಾರನ ತಿಂದು ಕುಂತದಂತೆ? ಯಾವ ಯಮ್ಮೆಲ್ಲೆಗೂ ಅನುದಾನ ಇಲವಂತೆ.”
“ಅದ್ಯಾವನ್ರಿ ಅಂಗಂದೋನು? ಧರ್ಮಸ್ಥಳಕ್ಕೆ ಬಂದು ಸತ್ಯ ಮಾಡ್ಳಿ, ಕರಕೊಂಡು ಬನ್ರಿ ಅವುರ.”
“ಸರಕಾರ ಉಳಿಬೇಕಾದ್ರೆ ಒಂದು ಸಿಂಪಲ್ ತೀರ್ಮಾನ ಇದ್ದತ್ತಂತೆ ಸಾರ್.”
“ಅದ್ಯಾವುದ್ರಿ ಸಿಂಪಲ್ಲು ತೀರ್ಮಾನ? ಅಂತದು ಇದ್ದತೆ?.”
“ನಿಮ್ಮ ಕೈಲಿ ಅದೆ ಸಾರ್.”
“ನನ್ನ ಕೈಲಿ ನಿಂಬೆಹಣ್ಣವೆ ಕಂಡ್ರಿ.”
“ಆ ಐದು ನಿಂಬೆ ಹಣ್ಣ ನಿಮ್ಮ ಸರಕಾರಕ್ಕೆ ಸಪೋಲ್ಟು ಮಾಡಿರೋ ಸಮರ್ಥರಾದ ಐದು ಜನ ಎಂಎಲ್‍ಎಗಳ ಕೈಗೆ ಕೊಟ್ಟು, ನಿಮ್ಮ ಖಾತೆ, ಕುಮಾರಣ್ಣನತ್ರ ಇರೋ ಖಾತೆ ಹಂಚಿದ್ರೆ, ಸರಕಾರ ಇನ್ನ ನಾಕೊರ್ಸ ಇರತದೆ ಸಾ.”
“ಇದು ಸಿಂಪಲ್ಲು ತೀರ್ಮಾನ ಏನ್ರಿ. ಯಾವನ್ರಿ ನಿಮಗೆ ಇಂಥಾ ಮನಿಯಾಳ ಬುದ್ದಿ ಹೇಳಿಕೊಟ್ಟೋನು. ಸರಕಾರ ಬಿದ್ದೋಗಿ ನಾವು ವಿರೋಧ ಪಕ್ಷದಲ್ಲಿ ಕುತಗಂಡ್ರೂ ಇಂತ ಕ್ಯಲಸ ಮಾಡಕ್ಕಾಯ್ತದೇನ್ರಿ.”
“ಅಂಗಾದ್ರೆ ಸರಕಾರನ ನಿಮ್ಮ ಯಾವ ದೇವರೂ ಉಳಿಸಕ್ಕಾಗಿದಲ್ಲ ಸಾ.”
“ಹೋಗ್ಲಿ ಬುಡ್ರಿ.”
“ಮುಂದಿನ ಚುನಾವಣೆಗೆ ದುಡ್ಡಾಯ್ತಲ್ಲ ಬುಡ್ರಿ.”
“ಏನಂದ್ರಿ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....