Homeಚಳವಳಿಅಮೃತಭೂಮಿಯಲ್ಲಿ ಬಿತ್ತಿದ ಬೀಜಗಳು  ನಾಡೆಲ್ಲಾ ಪಸರಿಸಲಿ....

ಅಮೃತಭೂಮಿಯಲ್ಲಿ ಬಿತ್ತಿದ ಬೀಜಗಳು  ನಾಡೆಲ್ಲಾ ಪಸರಿಸಲಿ….

- Advertisement -
ರೈತ ಚಳವಳಿಯ ಪುನಶ್ಚೇತನ ಆಗಬೇಕೆಂದರೆ ಯುವಜನರು ದೊಡ್ಡ ಪ್ರಮಾಣದಲ್ಲಿ ಸಂಘಟನೆಯೊಳಕ್ಕೂ ಬರಬೇಕು; ರೈತ ಚಳವಳಿಯೊಳಕ್ಕೂ ಬರಬೇಕು. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘವು ನಡೆಸಿದ ಆತ್ಮಾವಲೋಕನವು ಹೀಗಿತ್ತು. ರೈತ ಚಳವಳಿಗೆ ಬಂದ ಹೊಸಬರಿಗೆ ರೈತ ಸಂಘದ ಮೂಲ ಸಿದ್ಧಾಂತಗಳನ್ನು ಹೇಳಿಕೊಡುವ ಕೆಲಸ ನಡೆಯಲಿಲ್ಲ. ಹಾಗಾಗಿಯೇ ಎಂಬತ್ತರ ದಶಕದ ತಲೆಮಾರಿಗಿದ್ದ ಸೈದ್ಧಾಂತಿಕ ಸ್ಪಷ್ಟತೆ ನಂತರದ ದಶಕಗಳಲ್ಲಿ ಬಂದ ತಲೆಮಾರುಗಳಲ್ಲಿ ಕಾಣಲಿಲ್ಲ. ವಿಚಾರದ ಮೇಲೆ ಕಟ್ಟುವ ಹೊಸ ತಲೆಮಾರಿನ ರೈತ ಚಳವಳಿ ಕೇವಲ ಸಂಘರ್ಷದ ಜೊತೆಗೆ ರಚನಾತ್ಮಕ ಕೆಲಸಗಳಲ್ಲಿಯೂ ತೊಡಗಿಸಿಕೊಳ್ಳಬೇಕೆಂಬುದು ಈ ಹೊತ್ತಿನ ತುರ್ತಾಗಿದೆ.
ಆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಅಮೃತಭೂಮಿಯಲ್ಲಿ “ಹೊಸ ತಲೆಮಾರಿನ ರೈತ ಚಳವಳಿ ಕಟ್ಟಲು” ಎಂಬ ಮೂರು ದಿನಗಳ ಯುವ ರೈತರ ಅಧ್ಯಯನ ಶಿಬಿರ ನಡೆಸಲಾಯಿತು. ಕೃಷಿಗೆ ಅಂಟಿಕೊಂಡಿರುವ ರೋಗಗಳಿಗೆ ಪರಿಹಾರದ ಹುಡುಕಾಟ ಶಿಬಿರದಲ್ಲಿ ನಡೆದಿತ್ತು. ಭಾಗವಹಿಸಿದ್ದ ಸಕ್ರಿಯ ರೈತ ಯುವ ಕಾರ್ಯಕರ್ತರಲ್ಲಿ ಕೃಷಿಯನ್ನು ಪುನರ್ ಸ್ಥಾಪಿಸಲೇಬೇಕೆಂಬ ಹೊಸ ಕನಸು ಎದ್ದು ಕಾಣುತ್ತಿತ್ತು. ಇದಾಗಬೇಕಾದರೆ ಇಂದಿನ ಯುವ ಸಮೂಹ ವೈಚಾರಿಕ ಸ್ಪಷ್ಟತೆಯೊಂದಿಗೆ ಚಳವಳಿ ರೂಪಿಸಿದಲ್ಲಿ ಮಾತ್ರ ಸಾಧ್ಯ ಎಂಬ ಎಚ್ಚರದೊಂದಿಗೆ ಈ ಮೂರೂ ದಿನಗಳು ಕಳೆದವು.
ಪ್ರೊ.ನಂಜುಂಡಸ್ವಾಮಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ, ಸಸಿನೆಡುವುದರ ಮುಖಾಂತರ ಶಿಬಿರಕ್ಕೆ ಅಧಿಕೃತವಾಗಿ ಕೆ.ಟಿ.ಗಂಗಾದರ್‍ರವರು ಚಾಲನೆ ನೀಡಿದರು. ಚುಕ್ಕಿ ನಂಜುಂಡಸ್ವಾಮಿರವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಶಿಬಿರದ ಹಿಂದಿನ ಉದ್ದೇಶ ಮತ್ತು ಅಗತ್ಯತೆಯ ಕುರಿತು ಆಶಯ ನುಡಿಯನ್ನು ತಿಳಿಸಿದರು.
ಹಿರಿಯರಾದ ಕೆಸಿ ಬಸವರಾಜು, ಬಡಗಲಪುರ ನಾಗೇಂದ್ರ, ಚಾಮರಸ ಮಾಲೀ ಪಾಟೀಲ್ ರೈತ ಚಳವಳಿಯ ಇತಿಹಾಸದ ಕುರಿತು ಮಾತನಾಡಿದರು. ಅನಂತರ ಆಹಾರ ತಜ್ಞರಾದ  ಕೆ.ಸಿ ರಘುರವರು ಮಾತನಾಡಿ ಪ್ರಸ್ತುತ ಸರ್ಕಾರದ ನೀತಿಗಳು ದೇಶದ ಆರ್ಥಿಕ ನೀತಿಯನ್ನು ದಿವಾಳಿಯೆಡೆಗೆ ಕೊಂಡೊಯ್ಯುತ್ತಿವೆ. ಆದ್ದರಿಂದ ರೈತರು ವಲಯಾದಾರಿತ ಮತ್ತು ಪಾರಂಪರಿಕ ಕೃಷಿಯನ್ನು ಅನುಸರಿಸಿ, ಆಹಾರ ಸಾರ್ವಭೌಮತ್ವವನ್ನು ಹೇಗೆ ಹೊಂದಬಹುದೆಂದು ವಿವರಿಸಿದರು.
ಕೃಷಿಯಲ್ಲಿ ಮಹಿಳೆಯರು ಎನ್ನುವ ವಿಷಯದ ಕುರಿತು ಮಾತನಾಡುತ್ತಾ ಸಾಮಾಜಿಕ ಹೋರಾಟಗಾರ್ತಿ ಕವಿತ ಕುರಗಂಟಿ ಭಾರತದಲ್ಲಿ ಕೃಷಿ ಎಂದ ಕೂಡಲೆ ಮಹಿಳೆಯರು ಕೊಡುಗೆ ಪರಿಗಣನೆಗೆ ಬರುವುದೇ ಇಲ್ಲ. ರೈತನೆಂದರೆ ಪುರುಷ ಎಂಬ ಮನಸ್ಥಿತಿ ಬಹುತೇಕರದ್ದು ಭಾರತದ ಮಹಿಳೆ ಕೃಷಿಕರ ಬಗ್ಗೆಯೂ ಚರ್ಚೆಗಳು ನಡೆಯುವುದು ಅಗತ್ಯ ಮತ್ತು ಭಾರತ ಕೃಷಿ ನಿಂತಿರುವುದು ಮಹಿಳಾ ಕೃಷಿಕರ ಕೊಡುಗೆಯಿಂದ ಇನ್ನಾದರೂ ನಾವು ರೈತ ಮಹಿಳೆಯರ ಪಾತ್ರವನ್ನು  ಗುರುತಿಸಿ ಅವರಿಗೆ ಸಮಾನ ಹಕ್ಕುಗಳು ಹಾಗೂ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂದರು.
ರಾಸಾಯನಿಕ ಕೃಷಿ ಸೃಷ್ಟಿಸಿರುವ ದುರಂತಗಳು ಕೃಷಿ ಕ್ಷೇತ್ರಕ್ಕಿರುವ ಸವಾಲುಗಳು ಮತ್ತು ಅವುಗಳನ್ನು ಹಿಮ್ಮೆಟ್ಟಿಸಿ ನಾವು ಹೇಗೆ ಕೃಷಿಯಲ್ಲಿ ಪರ್ಯಾಯಗಳನ್ನು ಸೃಷ್ಟಿಸಿ ಸ್ವಾವಲಂಬನೆ ಸಾಧಿಸಬಹುದು ಎನ್ನುವುದರ ಕುರಿತು ಸುರೇಶ್ ಕೆ.ಪಿ ಅವರು ರೈತ ಸಂಘದ ಯುವ ಕೃಷಿಕರೊಂದಿಗೆ ಚರ್ಚೆ ನಡೆಸಿದರು.
ಇಂದಿನ ಕಾಲಘಟ್ಟಕ್ಕೆ ಹೊಸ ಆಶಯ ವಿಷಯಗಳೊಂದಿಗೆ ರಚನಾತ್ಮಕವಾಗಿ ಹೊಸ ತಲೆಮಾರಿನ ರೈತ ಚಳವಳಿಯನ್ನು ಹೇಗೆ ಕಟ್ಟಿಕೊಂಡು ಮುನ್ನಡೆಯಬೇಕು ಎನ್ನುವುದರ ಬಗ್ಗೆ ಕುರಿತು ಮಲ್ಲಿಗೆ ಸಿರಿಮನೆಯವರು ಯುವ ಕೃಷಿಕರೊಂದಿಗೆ ಸಂವಾದ ನಡೆಸಿದರು. ದೇಶದಲ್ಲಿ ಉಲ್ಬಣಿಸುತ್ತಿರುವ ನಿರುದ್ಯೋಗ ಸಮಸ್ಯೆ ಕುರಿತು ಮಾತನಾಡುತ್ತಾಮುತ್ತುರಾಜ್ ಅವರು  ಗ್ರಾಮೀಣ ಪ್ರದೇಶದಲ್ಲೆ ಉದ್ಯೋಗ ಸೃಷ್ಟಿಸುವ ಸಾಧ್ಯತೆಗಳ ಬಗ್ಗೆ ಇಂದಿನ ಯುವಜನಾಂಗ  ಚಿಂತಿಸಬೇಕು ಎನ್ನುವ ಆಶಯ ವ್ಯಕ್ತಪಡಿಸಿದರು. ಜನಶಕ್ತಿಯ ಡಾ.ವಾಸು ಹೊಸ ತಲೆಮಾರಿನ ರೈತ ಚಳವಳಿ ಕಟ್ಟಲು ನಾವೇನು ಮಾಡಬೇಕು ಎನ್ನುವುದರ ಕುರಿತು ಸವಿವರವಾಗಿ ಮಾತನಾಡುತ್ತಾ ಮುಂದಿನ ರೋಪುರೇಷೆಗಳನ್ನು ತಯಾರಿಸುವ ಕುರಿತು ಚರ್ಚೆ ನಡೆಸಿದರು.
ರೈತ ಸಂಘ ಉದಯವಾದ ಸಮಯದಲ್ಲಿ ರೈತ ಸಂಘಟನೆಯೊಳಗೆ ಸಾಂಸ್ಕೃತಿಕ ವಿಭಾಗ ತುಂಬಾ ಸಕ್ರಿಯವಾಗಿತ್ತು. ಅಂದು ಯುವ ರೈತ ಹೋರಾಟಗಾರರು ರಚಿಸಿದ ಅನೇಕ ಹಾಡುಗಳು ರೈತಸಂಘದೊಳಗೆ ಕ್ರಾಂತಿಯ ಕಿಚ್ಚನ್ನು ಹೆಚ್ಚಿಸಿದ್ದವು. ಈ ಗೀತೆಗಳು ಅಂದಿನ ಸಮಯದಲ್ಲಿ ರೈತ ಸಂಘದ ಅವಿಭಾಜ್ಯ ಅಂಗವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಮರೆಯಾಗಿದ ಅವನ್ನು ಮತ್ತೆ ನಮಗೆ ತಲುಪಿಸಿಕೊಡುವ ಕೆಲಸವನ್ನು ಹಿರಿಯರಾದ ಹಿ.ಶಿ.ರಾಮಚಂದ್ರಗೌಡರು ಶಿಬಿರದಲ್ಲಿ ಹಾಡು ಹಾಡಿಸುವ ಮೂಲಕ ಮಾಡಿದರು. ಶಿಬಿರದಲ್ಲಿ ಕುವೆಂಪು ಅವರ ರೈತಗೀತೆ -ನೇಗಿಲಯೋಗಿ,  ಮೈಲಾರಪ್ಪ ಸಗರ ಅವರು ಬರೆದಿರುವ ‘ನಮ್ಮ ಹಸಿರು ಬಾವುಟ’ ಹಾಗೂ ‘ಹಾರಿಸೋಣ ಕರ್ನಾಟಕ ರಾಜ್ಯ ರೈತ ಬಾವುಟ’ ಮತ್ತು ಹಿ.ಶಿ.ರಾಮಚಂದ್ರಗೌಡರ ‘ಬಾ ತಂಗಿ ಬಾರವ್ವ’, ‘ಕೂತಂಡವರ ಮಾತು ಕೇಳಿ’, ‘ಏನು ಮಾಡಿ ಏನು ಬಂತಣ್ಣ’ ಗೀತೆಗಳನ್ನು ಶಿಬಿರಾರ್ಥಿಗಳು  ಅಬ್ಯಾಸಿಸಿ ಹಾಡಿದರು.
ಸಮಾರೋಪ ಕಾರ್ಯಕ್ರಮದಲ್ಲಿ ಕೈಗೊಂಡ ದೇಶ ನಿರ್ಮಾಣದ ನಿರ್ಣಯಗಳು:
– ರೈತ ಯುವ ವಿಭಾಗವನ್ನು ರಾಜ್ಯಾದ್ಯಂತ ಬಲವಾಗಿ ಮತ್ತು ಪರಿಣಾಮಕಾರಿಯಾಗಿ ಕಟ್ಟಲು ನಿರ್ಧರಿಸಲಾಗಿದೆ.
– ಆರು ತಿಂಗಳ ಕಾಲ ವ್ಯವಸ್ಥಿತ ತಯಾರಿ ನಡೆಸಿ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ತಂಡಗಳನ್ನು ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಹಂಗಾಮಿ ಸಮಿತಿಗಳನ್ನು ರಚಿಸುವುದು.
– ಆ ತಯಾರಿಯ ನಂತರ 2019 ಫೆಬ್ರವರಿ 13ರ ಪ್ರೋ.ಎಂ.ಡಿ.ಎನ್ ಜನ್ಮದಿನದಂದೂ ರಾಜ್ಯ ರೈತ ಸಂಘದ ಅಡಿಯಲ್ಲಿ ಅದರ ಅಂಗ ಸಂಘಟನೆಯಾಗಿ ಉದ್ಘಾಟಿಸುವುದು.
– ಹಂಗಾಮಿ ರಾಜ್ಯಸಮಿತಿಯನ್ನು ಆಯ್ಕೆಮಾಡಲಾಯಿತು.
– ಮೊದಲ ಹಂತದಲ್ಲಿ ಎಲ್ಲಾ ವಿಭಾಗಮಟ್ಟದಲ್ಲಿ ರಾಜ್ಯ ಶಿಬಿರದ ಮಾದರಿಯಲ್ಲಿ ಶಿಬಿರಗಳನ್ನು ಆಯೋಜಿಸುವುದು.
– ರಾಜ್ಯದ ವಿವಿಧ ಗ್ರಾಮಗಳಲ್ಲಿ ಉದ್ಯೋಗ ಸೃಷ್ಠಿಯ ಸಾಧ್ಯತೆಗಳು ಮತ್ತು ರಚನಾತ್ಮಕ ಕಾರ್ಯಕ್ರಮಗಳ ಸಾಧ್ಯತೆಗಳನ್ನು ಗುರುತಿಸಿ ಅದನ್ನು ಜಾರಿಮಾಡಲು ಬೇಕಾದ ತಯಾರಿಯನ್ನು ನಡೆಸುವುದು.
– ಗ್ರಾಮೀಣ ಭಾಗದ ಯುವತಿಯರು ಹಾಗೂ ಯುವಕರನ್ನು ಸಂಘಟಿಸುವುದಲ್ಲದೆ ರಾಜ್ಯದ ನಗರಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಆಸಕ್ತರು ಪರಿಣಿತರು ಮತ್ತು ಸಂಘಟನೆಗಳನ್ನು ನಮ್ಮ ಬಳಗವಾಗಿ ಒಳಗೊಳ್ಳುವ ಪ್ರಯತ್ನ ಮಾಡಲಾಗುವುದು.
– ನವಾಜ್ ಮತ್ತು ಮಹೇಶ್ 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...