Homeಚಳವಳಿಅಮೃತಭೂಮಿಯಲ್ಲಿ ಬಿತ್ತಿದ ಬೀಜಗಳು  ನಾಡೆಲ್ಲಾ ಪಸರಿಸಲಿ....

ಅಮೃತಭೂಮಿಯಲ್ಲಿ ಬಿತ್ತಿದ ಬೀಜಗಳು  ನಾಡೆಲ್ಲಾ ಪಸರಿಸಲಿ….

- Advertisement -
ರೈತ ಚಳವಳಿಯ ಪುನಶ್ಚೇತನ ಆಗಬೇಕೆಂದರೆ ಯುವಜನರು ದೊಡ್ಡ ಪ್ರಮಾಣದಲ್ಲಿ ಸಂಘಟನೆಯೊಳಕ್ಕೂ ಬರಬೇಕು; ರೈತ ಚಳವಳಿಯೊಳಕ್ಕೂ ಬರಬೇಕು. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘವು ನಡೆಸಿದ ಆತ್ಮಾವಲೋಕನವು ಹೀಗಿತ್ತು. ರೈತ ಚಳವಳಿಗೆ ಬಂದ ಹೊಸಬರಿಗೆ ರೈತ ಸಂಘದ ಮೂಲ ಸಿದ್ಧಾಂತಗಳನ್ನು ಹೇಳಿಕೊಡುವ ಕೆಲಸ ನಡೆಯಲಿಲ್ಲ. ಹಾಗಾಗಿಯೇ ಎಂಬತ್ತರ ದಶಕದ ತಲೆಮಾರಿಗಿದ್ದ ಸೈದ್ಧಾಂತಿಕ ಸ್ಪಷ್ಟತೆ ನಂತರದ ದಶಕಗಳಲ್ಲಿ ಬಂದ ತಲೆಮಾರುಗಳಲ್ಲಿ ಕಾಣಲಿಲ್ಲ. ವಿಚಾರದ ಮೇಲೆ ಕಟ್ಟುವ ಹೊಸ ತಲೆಮಾರಿನ ರೈತ ಚಳವಳಿ ಕೇವಲ ಸಂಘರ್ಷದ ಜೊತೆಗೆ ರಚನಾತ್ಮಕ ಕೆಲಸಗಳಲ್ಲಿಯೂ ತೊಡಗಿಸಿಕೊಳ್ಳಬೇಕೆಂಬುದು ಈ ಹೊತ್ತಿನ ತುರ್ತಾಗಿದೆ.
ಆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಅಮೃತಭೂಮಿಯಲ್ಲಿ “ಹೊಸ ತಲೆಮಾರಿನ ರೈತ ಚಳವಳಿ ಕಟ್ಟಲು” ಎಂಬ ಮೂರು ದಿನಗಳ ಯುವ ರೈತರ ಅಧ್ಯಯನ ಶಿಬಿರ ನಡೆಸಲಾಯಿತು. ಕೃಷಿಗೆ ಅಂಟಿಕೊಂಡಿರುವ ರೋಗಗಳಿಗೆ ಪರಿಹಾರದ ಹುಡುಕಾಟ ಶಿಬಿರದಲ್ಲಿ ನಡೆದಿತ್ತು. ಭಾಗವಹಿಸಿದ್ದ ಸಕ್ರಿಯ ರೈತ ಯುವ ಕಾರ್ಯಕರ್ತರಲ್ಲಿ ಕೃಷಿಯನ್ನು ಪುನರ್ ಸ್ಥಾಪಿಸಲೇಬೇಕೆಂಬ ಹೊಸ ಕನಸು ಎದ್ದು ಕಾಣುತ್ತಿತ್ತು. ಇದಾಗಬೇಕಾದರೆ ಇಂದಿನ ಯುವ ಸಮೂಹ ವೈಚಾರಿಕ ಸ್ಪಷ್ಟತೆಯೊಂದಿಗೆ ಚಳವಳಿ ರೂಪಿಸಿದಲ್ಲಿ ಮಾತ್ರ ಸಾಧ್ಯ ಎಂಬ ಎಚ್ಚರದೊಂದಿಗೆ ಈ ಮೂರೂ ದಿನಗಳು ಕಳೆದವು.
ಪ್ರೊ.ನಂಜುಂಡಸ್ವಾಮಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ, ಸಸಿನೆಡುವುದರ ಮುಖಾಂತರ ಶಿಬಿರಕ್ಕೆ ಅಧಿಕೃತವಾಗಿ ಕೆ.ಟಿ.ಗಂಗಾದರ್‍ರವರು ಚಾಲನೆ ನೀಡಿದರು. ಚುಕ್ಕಿ ನಂಜುಂಡಸ್ವಾಮಿರವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಶಿಬಿರದ ಹಿಂದಿನ ಉದ್ದೇಶ ಮತ್ತು ಅಗತ್ಯತೆಯ ಕುರಿತು ಆಶಯ ನುಡಿಯನ್ನು ತಿಳಿಸಿದರು.
ಹಿರಿಯರಾದ ಕೆಸಿ ಬಸವರಾಜು, ಬಡಗಲಪುರ ನಾಗೇಂದ್ರ, ಚಾಮರಸ ಮಾಲೀ ಪಾಟೀಲ್ ರೈತ ಚಳವಳಿಯ ಇತಿಹಾಸದ ಕುರಿತು ಮಾತನಾಡಿದರು. ಅನಂತರ ಆಹಾರ ತಜ್ಞರಾದ  ಕೆ.ಸಿ ರಘುರವರು ಮಾತನಾಡಿ ಪ್ರಸ್ತುತ ಸರ್ಕಾರದ ನೀತಿಗಳು ದೇಶದ ಆರ್ಥಿಕ ನೀತಿಯನ್ನು ದಿವಾಳಿಯೆಡೆಗೆ ಕೊಂಡೊಯ್ಯುತ್ತಿವೆ. ಆದ್ದರಿಂದ ರೈತರು ವಲಯಾದಾರಿತ ಮತ್ತು ಪಾರಂಪರಿಕ ಕೃಷಿಯನ್ನು ಅನುಸರಿಸಿ, ಆಹಾರ ಸಾರ್ವಭೌಮತ್ವವನ್ನು ಹೇಗೆ ಹೊಂದಬಹುದೆಂದು ವಿವರಿಸಿದರು.
ಕೃಷಿಯಲ್ಲಿ ಮಹಿಳೆಯರು ಎನ್ನುವ ವಿಷಯದ ಕುರಿತು ಮಾತನಾಡುತ್ತಾ ಸಾಮಾಜಿಕ ಹೋರಾಟಗಾರ್ತಿ ಕವಿತ ಕುರಗಂಟಿ ಭಾರತದಲ್ಲಿ ಕೃಷಿ ಎಂದ ಕೂಡಲೆ ಮಹಿಳೆಯರು ಕೊಡುಗೆ ಪರಿಗಣನೆಗೆ ಬರುವುದೇ ಇಲ್ಲ. ರೈತನೆಂದರೆ ಪುರುಷ ಎಂಬ ಮನಸ್ಥಿತಿ ಬಹುತೇಕರದ್ದು ಭಾರತದ ಮಹಿಳೆ ಕೃಷಿಕರ ಬಗ್ಗೆಯೂ ಚರ್ಚೆಗಳು ನಡೆಯುವುದು ಅಗತ್ಯ ಮತ್ತು ಭಾರತ ಕೃಷಿ ನಿಂತಿರುವುದು ಮಹಿಳಾ ಕೃಷಿಕರ ಕೊಡುಗೆಯಿಂದ ಇನ್ನಾದರೂ ನಾವು ರೈತ ಮಹಿಳೆಯರ ಪಾತ್ರವನ್ನು  ಗುರುತಿಸಿ ಅವರಿಗೆ ಸಮಾನ ಹಕ್ಕುಗಳು ಹಾಗೂ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂದರು.
ರಾಸಾಯನಿಕ ಕೃಷಿ ಸೃಷ್ಟಿಸಿರುವ ದುರಂತಗಳು ಕೃಷಿ ಕ್ಷೇತ್ರಕ್ಕಿರುವ ಸವಾಲುಗಳು ಮತ್ತು ಅವುಗಳನ್ನು ಹಿಮ್ಮೆಟ್ಟಿಸಿ ನಾವು ಹೇಗೆ ಕೃಷಿಯಲ್ಲಿ ಪರ್ಯಾಯಗಳನ್ನು ಸೃಷ್ಟಿಸಿ ಸ್ವಾವಲಂಬನೆ ಸಾಧಿಸಬಹುದು ಎನ್ನುವುದರ ಕುರಿತು ಸುರೇಶ್ ಕೆ.ಪಿ ಅವರು ರೈತ ಸಂಘದ ಯುವ ಕೃಷಿಕರೊಂದಿಗೆ ಚರ್ಚೆ ನಡೆಸಿದರು.
ಇಂದಿನ ಕಾಲಘಟ್ಟಕ್ಕೆ ಹೊಸ ಆಶಯ ವಿಷಯಗಳೊಂದಿಗೆ ರಚನಾತ್ಮಕವಾಗಿ ಹೊಸ ತಲೆಮಾರಿನ ರೈತ ಚಳವಳಿಯನ್ನು ಹೇಗೆ ಕಟ್ಟಿಕೊಂಡು ಮುನ್ನಡೆಯಬೇಕು ಎನ್ನುವುದರ ಬಗ್ಗೆ ಕುರಿತು ಮಲ್ಲಿಗೆ ಸಿರಿಮನೆಯವರು ಯುವ ಕೃಷಿಕರೊಂದಿಗೆ ಸಂವಾದ ನಡೆಸಿದರು. ದೇಶದಲ್ಲಿ ಉಲ್ಬಣಿಸುತ್ತಿರುವ ನಿರುದ್ಯೋಗ ಸಮಸ್ಯೆ ಕುರಿತು ಮಾತನಾಡುತ್ತಾಮುತ್ತುರಾಜ್ ಅವರು  ಗ್ರಾಮೀಣ ಪ್ರದೇಶದಲ್ಲೆ ಉದ್ಯೋಗ ಸೃಷ್ಟಿಸುವ ಸಾಧ್ಯತೆಗಳ ಬಗ್ಗೆ ಇಂದಿನ ಯುವಜನಾಂಗ  ಚಿಂತಿಸಬೇಕು ಎನ್ನುವ ಆಶಯ ವ್ಯಕ್ತಪಡಿಸಿದರು. ಜನಶಕ್ತಿಯ ಡಾ.ವಾಸು ಹೊಸ ತಲೆಮಾರಿನ ರೈತ ಚಳವಳಿ ಕಟ್ಟಲು ನಾವೇನು ಮಾಡಬೇಕು ಎನ್ನುವುದರ ಕುರಿತು ಸವಿವರವಾಗಿ ಮಾತನಾಡುತ್ತಾ ಮುಂದಿನ ರೋಪುರೇಷೆಗಳನ್ನು ತಯಾರಿಸುವ ಕುರಿತು ಚರ್ಚೆ ನಡೆಸಿದರು.
ರೈತ ಸಂಘ ಉದಯವಾದ ಸಮಯದಲ್ಲಿ ರೈತ ಸಂಘಟನೆಯೊಳಗೆ ಸಾಂಸ್ಕೃತಿಕ ವಿಭಾಗ ತುಂಬಾ ಸಕ್ರಿಯವಾಗಿತ್ತು. ಅಂದು ಯುವ ರೈತ ಹೋರಾಟಗಾರರು ರಚಿಸಿದ ಅನೇಕ ಹಾಡುಗಳು ರೈತಸಂಘದೊಳಗೆ ಕ್ರಾಂತಿಯ ಕಿಚ್ಚನ್ನು ಹೆಚ್ಚಿಸಿದ್ದವು. ಈ ಗೀತೆಗಳು ಅಂದಿನ ಸಮಯದಲ್ಲಿ ರೈತ ಸಂಘದ ಅವಿಭಾಜ್ಯ ಅಂಗವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಮರೆಯಾಗಿದ ಅವನ್ನು ಮತ್ತೆ ನಮಗೆ ತಲುಪಿಸಿಕೊಡುವ ಕೆಲಸವನ್ನು ಹಿರಿಯರಾದ ಹಿ.ಶಿ.ರಾಮಚಂದ್ರಗೌಡರು ಶಿಬಿರದಲ್ಲಿ ಹಾಡು ಹಾಡಿಸುವ ಮೂಲಕ ಮಾಡಿದರು. ಶಿಬಿರದಲ್ಲಿ ಕುವೆಂಪು ಅವರ ರೈತಗೀತೆ -ನೇಗಿಲಯೋಗಿ,  ಮೈಲಾರಪ್ಪ ಸಗರ ಅವರು ಬರೆದಿರುವ ‘ನಮ್ಮ ಹಸಿರು ಬಾವುಟ’ ಹಾಗೂ ‘ಹಾರಿಸೋಣ ಕರ್ನಾಟಕ ರಾಜ್ಯ ರೈತ ಬಾವುಟ’ ಮತ್ತು ಹಿ.ಶಿ.ರಾಮಚಂದ್ರಗೌಡರ ‘ಬಾ ತಂಗಿ ಬಾರವ್ವ’, ‘ಕೂತಂಡವರ ಮಾತು ಕೇಳಿ’, ‘ಏನು ಮಾಡಿ ಏನು ಬಂತಣ್ಣ’ ಗೀತೆಗಳನ್ನು ಶಿಬಿರಾರ್ಥಿಗಳು  ಅಬ್ಯಾಸಿಸಿ ಹಾಡಿದರು.
ಸಮಾರೋಪ ಕಾರ್ಯಕ್ರಮದಲ್ಲಿ ಕೈಗೊಂಡ ದೇಶ ನಿರ್ಮಾಣದ ನಿರ್ಣಯಗಳು:
– ರೈತ ಯುವ ವಿಭಾಗವನ್ನು ರಾಜ್ಯಾದ್ಯಂತ ಬಲವಾಗಿ ಮತ್ತು ಪರಿಣಾಮಕಾರಿಯಾಗಿ ಕಟ್ಟಲು ನಿರ್ಧರಿಸಲಾಗಿದೆ.
– ಆರು ತಿಂಗಳ ಕಾಲ ವ್ಯವಸ್ಥಿತ ತಯಾರಿ ನಡೆಸಿ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ತಂಡಗಳನ್ನು ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಹಂಗಾಮಿ ಸಮಿತಿಗಳನ್ನು ರಚಿಸುವುದು.
– ಆ ತಯಾರಿಯ ನಂತರ 2019 ಫೆಬ್ರವರಿ 13ರ ಪ್ರೋ.ಎಂ.ಡಿ.ಎನ್ ಜನ್ಮದಿನದಂದೂ ರಾಜ್ಯ ರೈತ ಸಂಘದ ಅಡಿಯಲ್ಲಿ ಅದರ ಅಂಗ ಸಂಘಟನೆಯಾಗಿ ಉದ್ಘಾಟಿಸುವುದು.
– ಹಂಗಾಮಿ ರಾಜ್ಯಸಮಿತಿಯನ್ನು ಆಯ್ಕೆಮಾಡಲಾಯಿತು.
– ಮೊದಲ ಹಂತದಲ್ಲಿ ಎಲ್ಲಾ ವಿಭಾಗಮಟ್ಟದಲ್ಲಿ ರಾಜ್ಯ ಶಿಬಿರದ ಮಾದರಿಯಲ್ಲಿ ಶಿಬಿರಗಳನ್ನು ಆಯೋಜಿಸುವುದು.
– ರಾಜ್ಯದ ವಿವಿಧ ಗ್ರಾಮಗಳಲ್ಲಿ ಉದ್ಯೋಗ ಸೃಷ್ಠಿಯ ಸಾಧ್ಯತೆಗಳು ಮತ್ತು ರಚನಾತ್ಮಕ ಕಾರ್ಯಕ್ರಮಗಳ ಸಾಧ್ಯತೆಗಳನ್ನು ಗುರುತಿಸಿ ಅದನ್ನು ಜಾರಿಮಾಡಲು ಬೇಕಾದ ತಯಾರಿಯನ್ನು ನಡೆಸುವುದು.
– ಗ್ರಾಮೀಣ ಭಾಗದ ಯುವತಿಯರು ಹಾಗೂ ಯುವಕರನ್ನು ಸಂಘಟಿಸುವುದಲ್ಲದೆ ರಾಜ್ಯದ ನಗರಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಆಸಕ್ತರು ಪರಿಣಿತರು ಮತ್ತು ಸಂಘಟನೆಗಳನ್ನು ನಮ್ಮ ಬಳಗವಾಗಿ ಒಳಗೊಳ್ಳುವ ಪ್ರಯತ್ನ ಮಾಡಲಾಗುವುದು.
– ನವಾಜ್ ಮತ್ತು ಮಹೇಶ್ 
- Advertisement -

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...