Homeಚಳವಳಿ'ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ' - ದೇವನೂರು ಮಹಾದೇವ

‘ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ’ – ದೇವನೂರು ಮಹಾದೇವ

- Advertisement -
(ಚುನಾವಣಾ ಪ್ರಚಾರ ಭಾಷಣ ಅಂದರೇನೆ ರೇಜಿಗೆ ಹುಟ್ಟಿಸುತ್ತೆ. ಆರೋಪ – ಪ್ರತ್ಯಾರೋಪ, ಹಾರಾಟ- ಚೀರಾಟ ಮಾಮೂಲು. ಚುನಾವಣಾ ಪ್ರಚಾರದಲ್ಲಿ ಪ್ರಬುದ್ಧ – ಸಮತೋಲಿತ ಭಾಷೆ, ಭಾವ ಹೇಗೆ ಸಾಧ್ಯ ಎಂದು ವಕಾಲತ್ತು ವಹಿಸುವವರೇ ಹೆಚ್ಚು. ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯರಾಗಿರುವ ದೇವನೂರು ಮಹಾದೇವ ಅವರು ತಮ್ಮ ಪಕ್ಷದ ಮೇಲುಕೋಟೆ ಕ್ಷೇತ್ರದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಪರವಾಗಿ ಮಾಡಿದ ಚುಟುಕಾದ ಚುನಾವಣಾ ಭಾಷಣ ಇಲ್ಲಿದೆ. ಎದುರಾಳಿ ಪಕ್ಷದವರಿಗೂ ವಿನಂತಿ ಮಾಡಬಲ್ಲಂತಹ ನೈತಿಕತೆ ಬಹುಶಃ ದೇವನೂರು ಅಂಥವರಿಗೆ ಮಾತ್ರ ಸಾಧ್ಯ.)
ಈಗ ಒಂದು ಸುದ್ದಿ ಹರಿದಾಡುತ್ತಿದೆ- ದರ್ಶನ್ ಅಮೆರಿಕಕ್ಕೆ ಹೋಗಿ ಬಿಡುತ್ತಾರೆ ಎಂಬುದೇ ಆ ಸುದ್ದಿ. ಇಂಥ ಸುದ್ದಿ ಕಳೆದ ಚುನಾವಣೆಯಲ್ಲಿ ಪುಟ್ಟಣ್ಣಯ್ಯನವರ ಬಗೆಗೂ ಇತ್ತು. ಪುಟ್ಟಣ್ಣಯ್ಯನವರ ಜೀವದ ತುಡಿತ ಗೊತ್ತಿರುವವರು ಇಂಥ ಮಾತಾಡಲಾರರು. ಪುಟ್ಟಣ್ಣಯ್ಯ ಜತೆ ಪ್ರವಾಸ ಮಾಡಿದ್ದೇನೆ. ಪುಟ್ಟಣ್ಣಯ್ಯ ಎಲ್ಲಿಗೆ ಹೋಗಲಿ, ಅವರು ನೆನಪಿಸಿಕೊಳ್ಳುತ್ತಿದ್ದುದು ಏನು ಗೊತ್ತೆ? ಪಾಂಡವಪುರದ ಬೋಂಡ, ಪಕೋಡ ಹಾಗೂ ಮದ್ದೂರು ಜೋಪಡಿ ಹೋಟೆಲ್ ದೋಸೆ. ಪಾಂಡವಪುರದ ಥರದ ಬೋಂಡವನ್ನು ಎಲ್ಲೂ ಮಾಡಲ್ಲ ಬಿಡಿ ಅಂತಿದ್ದರು. ಆಮೇಲೆ ನಮ್ಮ ರಾಣಿ ಮಾಡೋ ಇಡ್ಲಿ ಕೈಮ ಅಮೆರಿಕದಲ್ಲೂ ಮಾಡಲ್ಲ ಅಂತಿದ್ದರು. ಇಡ್ಲೀನ ಅಮೆರಿಕದಲ್ಲಿ ಮಾಡ್ತಾರ? ಅಷ್ಟೊಂದು ಮುಗ್ಧ ಕೂಡ ಅವರು. ಅವರು ಅಮೆರಿಕದಲ್ಲಿ ಮೂರು ತಿಂಗಳು ಇರಬೇಕಾಗಿ ಬಂದಾಗ ಅವರ ಮನಸ್ಸಲ್ಲಿ ಇದ್ದುದು ಒಂದೇ- ಕುಡಿಯುವ ನೀರಿನ ಸಮಸ್ಯೆ. ಅಮೆರಿಕದಲ್ಲಿ ಸಾವಿರಾರು ಕಿಲೋಮೀಟರ್ ನಾಲೆ ಮಾಡಿ ಕುಡಿಯುವ ನೀರು ತಂದು ಕೊಡುವುದಾದರೆ ನಮ್ಮಲ್ಲಿ ಏನಾಗಿದೆ? ಇದು ಅವರ ಚಿಂತೆಯಾಗಿತ್ತು. ದುದ್ದ ಹೋಬಳಿಗೆ ನೀರು ತರುವುದು ಹೇಗೆ? ಅದಕ್ಕಾಗಿ ಪುಟ್ಟಣ್ಣಯ್ಯ ತಪಸ್ಸು ಮಾಡುತ್ತಿದ್ದರು. ನನ್ನಿಂದಲೂ ಕೆಲವರಿಗೆ ಹೇಳಿಸಿದ್ದರು. ಇಂಥ ಮನಸ್ಥಿತಿಯ ಪುಟ್ಟಣ್ಣಯ್ಯನವರ ಮಗ ದರ್ಶನ್ ಅಮೆರಿಕ ಬಿಟ್ಟುಬಂದು, ಅಪ್ಪನ ಹೆಸರನ್ನು ಉಳಿಸಲು, ಅಪ್ಪನ ಕೆಲಸ ಕಾರ್ಯಗಳನ್ನು ಮುಂದುವರಿಸಲು ಪಣ ತೊಟ್ಟಿದ್ದಾರೆ. ದರ್ಶನ್ ನಿರ್ಧಾರದ ಗಟ್ಟಿತನ ನೋಡಿಯೆ ಸ್ವರಾಜ್ ಇಂಡಿಯಾ ಪಕ್ಷವು ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ದರ್ಶನ್‍ಗೆ ತಮ್ಮ ಆಶೀರ್ವಾದ ಬೇಕು.
ಈಗ ಕಾಂಗ್ರೆಸ್ ದರ್ಶನ್‍ಗೆ ಬೆಂಬಲಿಸಿದೆ, ಜೆಡಿಎಸ್ ನೇರ ಪ್ರತಿಸ್ಪರ್ಧಿಯಾಗಿದೆ. ಆದರೂ ನಮಗೆ ಸನ್ಮಾನ್ಯ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನೈತಿಕ ಬೆಂಬಲವೂ ಬೇಕು. ಯಾಕೆಂದರೆ ದೇವೇಗೌಡರು ರಾಜಕಾರಣದಲ್ಲಿ ಭೀಷ್ಮ ಇದ್ದಂತೆ. ಅವರು ಎದುರು ಪಾರ್ಟಿಯಲ್ಲಿ ಇರಬಹುದು. ರಾಜಕಾರಣದಲ್ಲಿ ಭಿನ್ನಾಭಿಪ್ರಾಯಗಳೂ ಇರಬಹುದು. ಪ್ರಧಾನಿಯಾಗಿದ್ದ ಆ ಕಾಲಾವಧಿಯಲ್ಲಿ ನಾನು ಅವರ ಬಹಿರಂಗ ಬೆಂಬಲಿಗನಾಗಿದ್ದೆ. ಅದು ಅವರಿಗೂ ಗೊತ್ತು. ಹಾಗೇ ಕಾವೇರಿ ನದಿ ನೀರಿನ ವಿವಾದದಲ್ಲಿ ಅವರ ಪಕ್ಷಾತೀತ ನಡೆಯನ್ನು ಮೆಚ್ಚಿ ಬರೆದಿದ್ದೆ. ಭಿನ್ನಾಭಿಪ್ರಾಯಗಳ ನಡುವೆ ಇಂಥವೂ ಇರುತ್ತದೆ. ರಾಜಕಾರಣದ ಭೀಷ್ಮರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದ ಈ ಬಾಲಕ ದರ್ಶನ್ ಮೇಲೂ ಇರಲಿ ಎಂದು ವಿನಂತಿಸುವೆ.
ಇಂದು ದೇಶದ ರಾಜಕಾರಣ ಕೆಟ್ಟಿದೆ. ಎಷ್ಟು ಕೆಟ್ಟಿದೆ ಅಂದರೆ ಕೆ.ಆರ್.ಎಸ್ ಡ್ಯಾಂಗೆ ಡೈನಮೆಟ್ ಇಟ್ಟರೂ ಸರಿಯೇ- ಎಲ್ಲರೂ ಕೊಚ್ಚಿಕೊಂಡು ಹೋದರೂ ಸರಿಯೇ- ನಾನು ನನ್ನ ಬಂಧುಬಳಗ ಬದುಕಬೇಕು, ಈ ರೀತಿ ಇದೆ ಇಂದಿನ ರಾಜಕಾರಣ. ಸಾರ್ವಜನಿಕ ಸಂಪತ್ತು ಸಮುದಾಯಕ್ಕೆ ಸೇರಬೇಕು. ಆದರೆ ಅದರ ಲೂಟಿ ಮಾಡಲು ದರೋಡೆಕೋರರು ರಾಜಕಾರಣದಲ್ಲಿ ಹೆಚ್ಚಾಗಿ ಪ್ರವೇಶಿಸುತ್ತಿದ್ದಾರೆ. ಇದು ಎಲ್ಲೆಲ್ಲು ಇದೆ. ಈ ದರೋಡೆ ರಾಜಕಾರಣವನ್ನು ಮತದಾರ ತಡೆಗಟ್ಟಬೇಕು. ತಡೆಗಟ್ಟದಿದ್ದರೆ ಉಳಿಗಾಲವಿಲ್ಲ.
ಈಗ ಜನಬಲ ಮತ್ತು ಹಣಬಲದ ನಡುವೆ ಸ್ಪರ್ಧೆ ನಡೆಯುತ್ತಿದೆ. ಹಣವು ಮದದಿಂದ ಜನರನ್ನು ಜಾನುವಾರುಗಳು ಎಂಬಂತೆ ಭಾವಿಸಿ ಕೊಂಡುಕೊಳ್ಳಬಹುದು ಅಂದುಕೊಂಡಿದೆ. ಹಣದ ಮದ ಮುರಿಯಬೇಕು. ಹಣದ ಗರ್ವಭಂಗವಾಗಬೇಕು. ಇದಾದಾಗಲೇ ಜನಸಾಮಾನ್ಯರು ಉಸಿರಾಡಲು ಸಾಧ್ಯ. ಅದಕ್ಕಾಗಿ ಮತದಾರರು ದರ್ಶನ್‍ರನ್ನು ಗೆಲ್ಲಿಸಬೇಕು, ಕೈ ಹಿಡಿದು ನಡೆಸಬೇಕು. ಇದು ನನ್ನ ಪ್ರಾರ್ಥನೆ.
ಕೊನೆಯದಾಗಿ ಇನ್ನೊಂದು ಮನವಿ: ದರ್ಶನ್‍ಗೆ ಪ್ರಚಾರವನ್ನು ಹೇಗೆ, ಎಲ್ಲಿಂದ ಮಾಡಬೇಕು? ನೆನಪಿಡಿ- ಸುಳ್ಳು ಹಬ್ಬಿಸುತ್ತಾರೆ. ನೆನಪಿಡಿ- ಒಡಕು ಉಂಟುಮಾಡುತ್ತಾರೆ. ಇಂಥಲ್ಲಿ ಹೇಗೆ ಪ್ರಚಾರ? ಎಲ್ಲಿದ್ದೀರೊ ಅಲ್ಲೆ ಪ್ರಚಾರ ಮಾಡಬೇಕು. ನಂನಮ್ಮ ಮನೆಯಿಂದಲೇ ಆರಂಭಿಸಬೇಕು. ನಂನಮ್ಮ ಬೀದಿಯಲ್ಲೇ ಪ್ರಚಾರ ಆಗಬೇಕು. ಎಲ್ಲಿದ್ದೀವೋ ಅಲ್ಲೇ ಪ್ರಚಾರ. ಈ ರೀತಿ ಪ್ರಚಾರವನ್ನು ಮೇಲುಕೋಟೆ ಕ್ಷೇತ್ರದ ಯುವಕರು ಕೈಗೊಂಡರೆ ಇದೇ ರಾಜ್ಯದ ಚುನಾವಣಾ ರೀತಿರಿವಾಜಿಗೆ ಒಂದು ಮಾದರಿಯಾಗಿ ನಾಡಿಗೆ ಕೊಡುಗೆ ಕೊಟ್ಟಂತಾಗುತ್ತದೆ. ದರ್ಶನ್ ಗೆಲುವಿನ ಜೊತೆಗೆ ಈ ಮಾದರಿಯನ್ನೂ ಹುಟ್ಟುಹಾಕಿ ಎಂದು ಮೇಲುಕೋಟೆ ಕ್ಷೇತ್ರದ ನಮ್ಮ ಯುವಕರಲ್ಲಿ ವಿನಂತಿಸುವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...

ಮೋದಿ, ಶಾ ವಿರುದ್ಧ ಘೋಷಣೆ ಆರೋಪ: ತನ್ನದೇ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಮನವಿ ಮಾಡಿದ ಜೆಎನ್‌ಯು ಆಡಳಿತ ಮಂಡಳಿ

ಸೋಮವಾರ ರಾತ್ರಿ ವಿದ್ಯಾರ್ಥಿಗಳ ಗುಂಪೊಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಆ ಘೋಷಣೆಗಳು "ಪ್ರಚೋದನಕಾರಿ, ಪ್ರಚೋದನಕಾರಿ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬ ವಿಪಕ್ಷಗಳ ಆರೋಪ ತಿರಸ್ಕರಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ತನಿಖೆಯು ಪಕ್ಷಪಾತದಿಂದ ಕೂಡಿದೆ ಅಥವಾ ಸರ್ಕಾರದ ಒತ್ತಡದಲ್ಲಿದೆ ಎಂಬ ವಿರೋಧ ಪಕ್ಷದ ಆರೋಪಗಳನ್ನು ತಿರಸ್ಕರಿಸಿರುವ ಕೇರಳ ಹೈಕೋರ್ಟ್, ಪ್ರಸ್ತುತ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ...

ಆರ್‌ಎಸ್‌ಎಸ್ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ನಲಪಾಡ್‌ಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಮತ್ತು ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸಂಸದ/ಶಾಸಕರ...

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...