Homeಚಳವಳಿ'ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ' - ದೇವನೂರು ಮಹಾದೇವ

‘ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ’ – ದೇವನೂರು ಮಹಾದೇವ

- Advertisement -
(ಚುನಾವಣಾ ಪ್ರಚಾರ ಭಾಷಣ ಅಂದರೇನೆ ರೇಜಿಗೆ ಹುಟ್ಟಿಸುತ್ತೆ. ಆರೋಪ – ಪ್ರತ್ಯಾರೋಪ, ಹಾರಾಟ- ಚೀರಾಟ ಮಾಮೂಲು. ಚುನಾವಣಾ ಪ್ರಚಾರದಲ್ಲಿ ಪ್ರಬುದ್ಧ – ಸಮತೋಲಿತ ಭಾಷೆ, ಭಾವ ಹೇಗೆ ಸಾಧ್ಯ ಎಂದು ವಕಾಲತ್ತು ವಹಿಸುವವರೇ ಹೆಚ್ಚು. ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯರಾಗಿರುವ ದೇವನೂರು ಮಹಾದೇವ ಅವರು ತಮ್ಮ ಪಕ್ಷದ ಮೇಲುಕೋಟೆ ಕ್ಷೇತ್ರದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಪರವಾಗಿ ಮಾಡಿದ ಚುಟುಕಾದ ಚುನಾವಣಾ ಭಾಷಣ ಇಲ್ಲಿದೆ. ಎದುರಾಳಿ ಪಕ್ಷದವರಿಗೂ ವಿನಂತಿ ಮಾಡಬಲ್ಲಂತಹ ನೈತಿಕತೆ ಬಹುಶಃ ದೇವನೂರು ಅಂಥವರಿಗೆ ಮಾತ್ರ ಸಾಧ್ಯ.)
ಈಗ ಒಂದು ಸುದ್ದಿ ಹರಿದಾಡುತ್ತಿದೆ- ದರ್ಶನ್ ಅಮೆರಿಕಕ್ಕೆ ಹೋಗಿ ಬಿಡುತ್ತಾರೆ ಎಂಬುದೇ ಆ ಸುದ್ದಿ. ಇಂಥ ಸುದ್ದಿ ಕಳೆದ ಚುನಾವಣೆಯಲ್ಲಿ ಪುಟ್ಟಣ್ಣಯ್ಯನವರ ಬಗೆಗೂ ಇತ್ತು. ಪುಟ್ಟಣ್ಣಯ್ಯನವರ ಜೀವದ ತುಡಿತ ಗೊತ್ತಿರುವವರು ಇಂಥ ಮಾತಾಡಲಾರರು. ಪುಟ್ಟಣ್ಣಯ್ಯ ಜತೆ ಪ್ರವಾಸ ಮಾಡಿದ್ದೇನೆ. ಪುಟ್ಟಣ್ಣಯ್ಯ ಎಲ್ಲಿಗೆ ಹೋಗಲಿ, ಅವರು ನೆನಪಿಸಿಕೊಳ್ಳುತ್ತಿದ್ದುದು ಏನು ಗೊತ್ತೆ? ಪಾಂಡವಪುರದ ಬೋಂಡ, ಪಕೋಡ ಹಾಗೂ ಮದ್ದೂರು ಜೋಪಡಿ ಹೋಟೆಲ್ ದೋಸೆ. ಪಾಂಡವಪುರದ ಥರದ ಬೋಂಡವನ್ನು ಎಲ್ಲೂ ಮಾಡಲ್ಲ ಬಿಡಿ ಅಂತಿದ್ದರು. ಆಮೇಲೆ ನಮ್ಮ ರಾಣಿ ಮಾಡೋ ಇಡ್ಲಿ ಕೈಮ ಅಮೆರಿಕದಲ್ಲೂ ಮಾಡಲ್ಲ ಅಂತಿದ್ದರು. ಇಡ್ಲೀನ ಅಮೆರಿಕದಲ್ಲಿ ಮಾಡ್ತಾರ? ಅಷ್ಟೊಂದು ಮುಗ್ಧ ಕೂಡ ಅವರು. ಅವರು ಅಮೆರಿಕದಲ್ಲಿ ಮೂರು ತಿಂಗಳು ಇರಬೇಕಾಗಿ ಬಂದಾಗ ಅವರ ಮನಸ್ಸಲ್ಲಿ ಇದ್ದುದು ಒಂದೇ- ಕುಡಿಯುವ ನೀರಿನ ಸಮಸ್ಯೆ. ಅಮೆರಿಕದಲ್ಲಿ ಸಾವಿರಾರು ಕಿಲೋಮೀಟರ್ ನಾಲೆ ಮಾಡಿ ಕುಡಿಯುವ ನೀರು ತಂದು ಕೊಡುವುದಾದರೆ ನಮ್ಮಲ್ಲಿ ಏನಾಗಿದೆ? ಇದು ಅವರ ಚಿಂತೆಯಾಗಿತ್ತು. ದುದ್ದ ಹೋಬಳಿಗೆ ನೀರು ತರುವುದು ಹೇಗೆ? ಅದಕ್ಕಾಗಿ ಪುಟ್ಟಣ್ಣಯ್ಯ ತಪಸ್ಸು ಮಾಡುತ್ತಿದ್ದರು. ನನ್ನಿಂದಲೂ ಕೆಲವರಿಗೆ ಹೇಳಿಸಿದ್ದರು. ಇಂಥ ಮನಸ್ಥಿತಿಯ ಪುಟ್ಟಣ್ಣಯ್ಯನವರ ಮಗ ದರ್ಶನ್ ಅಮೆರಿಕ ಬಿಟ್ಟುಬಂದು, ಅಪ್ಪನ ಹೆಸರನ್ನು ಉಳಿಸಲು, ಅಪ್ಪನ ಕೆಲಸ ಕಾರ್ಯಗಳನ್ನು ಮುಂದುವರಿಸಲು ಪಣ ತೊಟ್ಟಿದ್ದಾರೆ. ದರ್ಶನ್ ನಿರ್ಧಾರದ ಗಟ್ಟಿತನ ನೋಡಿಯೆ ಸ್ವರಾಜ್ ಇಂಡಿಯಾ ಪಕ್ಷವು ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ದರ್ಶನ್‍ಗೆ ತಮ್ಮ ಆಶೀರ್ವಾದ ಬೇಕು.
ಈಗ ಕಾಂಗ್ರೆಸ್ ದರ್ಶನ್‍ಗೆ ಬೆಂಬಲಿಸಿದೆ, ಜೆಡಿಎಸ್ ನೇರ ಪ್ರತಿಸ್ಪರ್ಧಿಯಾಗಿದೆ. ಆದರೂ ನಮಗೆ ಸನ್ಮಾನ್ಯ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನೈತಿಕ ಬೆಂಬಲವೂ ಬೇಕು. ಯಾಕೆಂದರೆ ದೇವೇಗೌಡರು ರಾಜಕಾರಣದಲ್ಲಿ ಭೀಷ್ಮ ಇದ್ದಂತೆ. ಅವರು ಎದುರು ಪಾರ್ಟಿಯಲ್ಲಿ ಇರಬಹುದು. ರಾಜಕಾರಣದಲ್ಲಿ ಭಿನ್ನಾಭಿಪ್ರಾಯಗಳೂ ಇರಬಹುದು. ಪ್ರಧಾನಿಯಾಗಿದ್ದ ಆ ಕಾಲಾವಧಿಯಲ್ಲಿ ನಾನು ಅವರ ಬಹಿರಂಗ ಬೆಂಬಲಿಗನಾಗಿದ್ದೆ. ಅದು ಅವರಿಗೂ ಗೊತ್ತು. ಹಾಗೇ ಕಾವೇರಿ ನದಿ ನೀರಿನ ವಿವಾದದಲ್ಲಿ ಅವರ ಪಕ್ಷಾತೀತ ನಡೆಯನ್ನು ಮೆಚ್ಚಿ ಬರೆದಿದ್ದೆ. ಭಿನ್ನಾಭಿಪ್ರಾಯಗಳ ನಡುವೆ ಇಂಥವೂ ಇರುತ್ತದೆ. ರಾಜಕಾರಣದ ಭೀಷ್ಮರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದ ಈ ಬಾಲಕ ದರ್ಶನ್ ಮೇಲೂ ಇರಲಿ ಎಂದು ವಿನಂತಿಸುವೆ.
ಇಂದು ದೇಶದ ರಾಜಕಾರಣ ಕೆಟ್ಟಿದೆ. ಎಷ್ಟು ಕೆಟ್ಟಿದೆ ಅಂದರೆ ಕೆ.ಆರ್.ಎಸ್ ಡ್ಯಾಂಗೆ ಡೈನಮೆಟ್ ಇಟ್ಟರೂ ಸರಿಯೇ- ಎಲ್ಲರೂ ಕೊಚ್ಚಿಕೊಂಡು ಹೋದರೂ ಸರಿಯೇ- ನಾನು ನನ್ನ ಬಂಧುಬಳಗ ಬದುಕಬೇಕು, ಈ ರೀತಿ ಇದೆ ಇಂದಿನ ರಾಜಕಾರಣ. ಸಾರ್ವಜನಿಕ ಸಂಪತ್ತು ಸಮುದಾಯಕ್ಕೆ ಸೇರಬೇಕು. ಆದರೆ ಅದರ ಲೂಟಿ ಮಾಡಲು ದರೋಡೆಕೋರರು ರಾಜಕಾರಣದಲ್ಲಿ ಹೆಚ್ಚಾಗಿ ಪ್ರವೇಶಿಸುತ್ತಿದ್ದಾರೆ. ಇದು ಎಲ್ಲೆಲ್ಲು ಇದೆ. ಈ ದರೋಡೆ ರಾಜಕಾರಣವನ್ನು ಮತದಾರ ತಡೆಗಟ್ಟಬೇಕು. ತಡೆಗಟ್ಟದಿದ್ದರೆ ಉಳಿಗಾಲವಿಲ್ಲ.
ಈಗ ಜನಬಲ ಮತ್ತು ಹಣಬಲದ ನಡುವೆ ಸ್ಪರ್ಧೆ ನಡೆಯುತ್ತಿದೆ. ಹಣವು ಮದದಿಂದ ಜನರನ್ನು ಜಾನುವಾರುಗಳು ಎಂಬಂತೆ ಭಾವಿಸಿ ಕೊಂಡುಕೊಳ್ಳಬಹುದು ಅಂದುಕೊಂಡಿದೆ. ಹಣದ ಮದ ಮುರಿಯಬೇಕು. ಹಣದ ಗರ್ವಭಂಗವಾಗಬೇಕು. ಇದಾದಾಗಲೇ ಜನಸಾಮಾನ್ಯರು ಉಸಿರಾಡಲು ಸಾಧ್ಯ. ಅದಕ್ಕಾಗಿ ಮತದಾರರು ದರ್ಶನ್‍ರನ್ನು ಗೆಲ್ಲಿಸಬೇಕು, ಕೈ ಹಿಡಿದು ನಡೆಸಬೇಕು. ಇದು ನನ್ನ ಪ್ರಾರ್ಥನೆ.
ಕೊನೆಯದಾಗಿ ಇನ್ನೊಂದು ಮನವಿ: ದರ್ಶನ್‍ಗೆ ಪ್ರಚಾರವನ್ನು ಹೇಗೆ, ಎಲ್ಲಿಂದ ಮಾಡಬೇಕು? ನೆನಪಿಡಿ- ಸುಳ್ಳು ಹಬ್ಬಿಸುತ್ತಾರೆ. ನೆನಪಿಡಿ- ಒಡಕು ಉಂಟುಮಾಡುತ್ತಾರೆ. ಇಂಥಲ್ಲಿ ಹೇಗೆ ಪ್ರಚಾರ? ಎಲ್ಲಿದ್ದೀರೊ ಅಲ್ಲೆ ಪ್ರಚಾರ ಮಾಡಬೇಕು. ನಂನಮ್ಮ ಮನೆಯಿಂದಲೇ ಆರಂಭಿಸಬೇಕು. ನಂನಮ್ಮ ಬೀದಿಯಲ್ಲೇ ಪ್ರಚಾರ ಆಗಬೇಕು. ಎಲ್ಲಿದ್ದೀವೋ ಅಲ್ಲೇ ಪ್ರಚಾರ. ಈ ರೀತಿ ಪ್ರಚಾರವನ್ನು ಮೇಲುಕೋಟೆ ಕ್ಷೇತ್ರದ ಯುವಕರು ಕೈಗೊಂಡರೆ ಇದೇ ರಾಜ್ಯದ ಚುನಾವಣಾ ರೀತಿರಿವಾಜಿಗೆ ಒಂದು ಮಾದರಿಯಾಗಿ ನಾಡಿಗೆ ಕೊಡುಗೆ ಕೊಟ್ಟಂತಾಗುತ್ತದೆ. ದರ್ಶನ್ ಗೆಲುವಿನ ಜೊತೆಗೆ ಈ ಮಾದರಿಯನ್ನೂ ಹುಟ್ಟುಹಾಕಿ ಎಂದು ಮೇಲುಕೋಟೆ ಕ್ಷೇತ್ರದ ನಮ್ಮ ಯುವಕರಲ್ಲಿ ವಿನಂತಿಸುವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...