Homeಚಳವಳಿ'ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ' - ದೇವನೂರು ಮಹಾದೇವ

‘ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ’ – ದೇವನೂರು ಮಹಾದೇವ

- Advertisement -
(ಚುನಾವಣಾ ಪ್ರಚಾರ ಭಾಷಣ ಅಂದರೇನೆ ರೇಜಿಗೆ ಹುಟ್ಟಿಸುತ್ತೆ. ಆರೋಪ – ಪ್ರತ್ಯಾರೋಪ, ಹಾರಾಟ- ಚೀರಾಟ ಮಾಮೂಲು. ಚುನಾವಣಾ ಪ್ರಚಾರದಲ್ಲಿ ಪ್ರಬುದ್ಧ – ಸಮತೋಲಿತ ಭಾಷೆ, ಭಾವ ಹೇಗೆ ಸಾಧ್ಯ ಎಂದು ವಕಾಲತ್ತು ವಹಿಸುವವರೇ ಹೆಚ್ಚು. ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯರಾಗಿರುವ ದೇವನೂರು ಮಹಾದೇವ ಅವರು ತಮ್ಮ ಪಕ್ಷದ ಮೇಲುಕೋಟೆ ಕ್ಷೇತ್ರದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಪರವಾಗಿ ಮಾಡಿದ ಚುಟುಕಾದ ಚುನಾವಣಾ ಭಾಷಣ ಇಲ್ಲಿದೆ. ಎದುರಾಳಿ ಪಕ್ಷದವರಿಗೂ ವಿನಂತಿ ಮಾಡಬಲ್ಲಂತಹ ನೈತಿಕತೆ ಬಹುಶಃ ದೇವನೂರು ಅಂಥವರಿಗೆ ಮಾತ್ರ ಸಾಧ್ಯ.)
ಈಗ ಒಂದು ಸುದ್ದಿ ಹರಿದಾಡುತ್ತಿದೆ- ದರ್ಶನ್ ಅಮೆರಿಕಕ್ಕೆ ಹೋಗಿ ಬಿಡುತ್ತಾರೆ ಎಂಬುದೇ ಆ ಸುದ್ದಿ. ಇಂಥ ಸುದ್ದಿ ಕಳೆದ ಚುನಾವಣೆಯಲ್ಲಿ ಪುಟ್ಟಣ್ಣಯ್ಯನವರ ಬಗೆಗೂ ಇತ್ತು. ಪುಟ್ಟಣ್ಣಯ್ಯನವರ ಜೀವದ ತುಡಿತ ಗೊತ್ತಿರುವವರು ಇಂಥ ಮಾತಾಡಲಾರರು. ಪುಟ್ಟಣ್ಣಯ್ಯ ಜತೆ ಪ್ರವಾಸ ಮಾಡಿದ್ದೇನೆ. ಪುಟ್ಟಣ್ಣಯ್ಯ ಎಲ್ಲಿಗೆ ಹೋಗಲಿ, ಅವರು ನೆನಪಿಸಿಕೊಳ್ಳುತ್ತಿದ್ದುದು ಏನು ಗೊತ್ತೆ? ಪಾಂಡವಪುರದ ಬೋಂಡ, ಪಕೋಡ ಹಾಗೂ ಮದ್ದೂರು ಜೋಪಡಿ ಹೋಟೆಲ್ ದೋಸೆ. ಪಾಂಡವಪುರದ ಥರದ ಬೋಂಡವನ್ನು ಎಲ್ಲೂ ಮಾಡಲ್ಲ ಬಿಡಿ ಅಂತಿದ್ದರು. ಆಮೇಲೆ ನಮ್ಮ ರಾಣಿ ಮಾಡೋ ಇಡ್ಲಿ ಕೈಮ ಅಮೆರಿಕದಲ್ಲೂ ಮಾಡಲ್ಲ ಅಂತಿದ್ದರು. ಇಡ್ಲೀನ ಅಮೆರಿಕದಲ್ಲಿ ಮಾಡ್ತಾರ? ಅಷ್ಟೊಂದು ಮುಗ್ಧ ಕೂಡ ಅವರು. ಅವರು ಅಮೆರಿಕದಲ್ಲಿ ಮೂರು ತಿಂಗಳು ಇರಬೇಕಾಗಿ ಬಂದಾಗ ಅವರ ಮನಸ್ಸಲ್ಲಿ ಇದ್ದುದು ಒಂದೇ- ಕುಡಿಯುವ ನೀರಿನ ಸಮಸ್ಯೆ. ಅಮೆರಿಕದಲ್ಲಿ ಸಾವಿರಾರು ಕಿಲೋಮೀಟರ್ ನಾಲೆ ಮಾಡಿ ಕುಡಿಯುವ ನೀರು ತಂದು ಕೊಡುವುದಾದರೆ ನಮ್ಮಲ್ಲಿ ಏನಾಗಿದೆ? ಇದು ಅವರ ಚಿಂತೆಯಾಗಿತ್ತು. ದುದ್ದ ಹೋಬಳಿಗೆ ನೀರು ತರುವುದು ಹೇಗೆ? ಅದಕ್ಕಾಗಿ ಪುಟ್ಟಣ್ಣಯ್ಯ ತಪಸ್ಸು ಮಾಡುತ್ತಿದ್ದರು. ನನ್ನಿಂದಲೂ ಕೆಲವರಿಗೆ ಹೇಳಿಸಿದ್ದರು. ಇಂಥ ಮನಸ್ಥಿತಿಯ ಪುಟ್ಟಣ್ಣಯ್ಯನವರ ಮಗ ದರ್ಶನ್ ಅಮೆರಿಕ ಬಿಟ್ಟುಬಂದು, ಅಪ್ಪನ ಹೆಸರನ್ನು ಉಳಿಸಲು, ಅಪ್ಪನ ಕೆಲಸ ಕಾರ್ಯಗಳನ್ನು ಮುಂದುವರಿಸಲು ಪಣ ತೊಟ್ಟಿದ್ದಾರೆ. ದರ್ಶನ್ ನಿರ್ಧಾರದ ಗಟ್ಟಿತನ ನೋಡಿಯೆ ಸ್ವರಾಜ್ ಇಂಡಿಯಾ ಪಕ್ಷವು ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ದರ್ಶನ್‍ಗೆ ತಮ್ಮ ಆಶೀರ್ವಾದ ಬೇಕು.
ಈಗ ಕಾಂಗ್ರೆಸ್ ದರ್ಶನ್‍ಗೆ ಬೆಂಬಲಿಸಿದೆ, ಜೆಡಿಎಸ್ ನೇರ ಪ್ರತಿಸ್ಪರ್ಧಿಯಾಗಿದೆ. ಆದರೂ ನಮಗೆ ಸನ್ಮಾನ್ಯ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನೈತಿಕ ಬೆಂಬಲವೂ ಬೇಕು. ಯಾಕೆಂದರೆ ದೇವೇಗೌಡರು ರಾಜಕಾರಣದಲ್ಲಿ ಭೀಷ್ಮ ಇದ್ದಂತೆ. ಅವರು ಎದುರು ಪಾರ್ಟಿಯಲ್ಲಿ ಇರಬಹುದು. ರಾಜಕಾರಣದಲ್ಲಿ ಭಿನ್ನಾಭಿಪ್ರಾಯಗಳೂ ಇರಬಹುದು. ಪ್ರಧಾನಿಯಾಗಿದ್ದ ಆ ಕಾಲಾವಧಿಯಲ್ಲಿ ನಾನು ಅವರ ಬಹಿರಂಗ ಬೆಂಬಲಿಗನಾಗಿದ್ದೆ. ಅದು ಅವರಿಗೂ ಗೊತ್ತು. ಹಾಗೇ ಕಾವೇರಿ ನದಿ ನೀರಿನ ವಿವಾದದಲ್ಲಿ ಅವರ ಪಕ್ಷಾತೀತ ನಡೆಯನ್ನು ಮೆಚ್ಚಿ ಬರೆದಿದ್ದೆ. ಭಿನ್ನಾಭಿಪ್ರಾಯಗಳ ನಡುವೆ ಇಂಥವೂ ಇರುತ್ತದೆ. ರಾಜಕಾರಣದ ಭೀಷ್ಮರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದ ಈ ಬಾಲಕ ದರ್ಶನ್ ಮೇಲೂ ಇರಲಿ ಎಂದು ವಿನಂತಿಸುವೆ.
ಇಂದು ದೇಶದ ರಾಜಕಾರಣ ಕೆಟ್ಟಿದೆ. ಎಷ್ಟು ಕೆಟ್ಟಿದೆ ಅಂದರೆ ಕೆ.ಆರ್.ಎಸ್ ಡ್ಯಾಂಗೆ ಡೈನಮೆಟ್ ಇಟ್ಟರೂ ಸರಿಯೇ- ಎಲ್ಲರೂ ಕೊಚ್ಚಿಕೊಂಡು ಹೋದರೂ ಸರಿಯೇ- ನಾನು ನನ್ನ ಬಂಧುಬಳಗ ಬದುಕಬೇಕು, ಈ ರೀತಿ ಇದೆ ಇಂದಿನ ರಾಜಕಾರಣ. ಸಾರ್ವಜನಿಕ ಸಂಪತ್ತು ಸಮುದಾಯಕ್ಕೆ ಸೇರಬೇಕು. ಆದರೆ ಅದರ ಲೂಟಿ ಮಾಡಲು ದರೋಡೆಕೋರರು ರಾಜಕಾರಣದಲ್ಲಿ ಹೆಚ್ಚಾಗಿ ಪ್ರವೇಶಿಸುತ್ತಿದ್ದಾರೆ. ಇದು ಎಲ್ಲೆಲ್ಲು ಇದೆ. ಈ ದರೋಡೆ ರಾಜಕಾರಣವನ್ನು ಮತದಾರ ತಡೆಗಟ್ಟಬೇಕು. ತಡೆಗಟ್ಟದಿದ್ದರೆ ಉಳಿಗಾಲವಿಲ್ಲ.
ಈಗ ಜನಬಲ ಮತ್ತು ಹಣಬಲದ ನಡುವೆ ಸ್ಪರ್ಧೆ ನಡೆಯುತ್ತಿದೆ. ಹಣವು ಮದದಿಂದ ಜನರನ್ನು ಜಾನುವಾರುಗಳು ಎಂಬಂತೆ ಭಾವಿಸಿ ಕೊಂಡುಕೊಳ್ಳಬಹುದು ಅಂದುಕೊಂಡಿದೆ. ಹಣದ ಮದ ಮುರಿಯಬೇಕು. ಹಣದ ಗರ್ವಭಂಗವಾಗಬೇಕು. ಇದಾದಾಗಲೇ ಜನಸಾಮಾನ್ಯರು ಉಸಿರಾಡಲು ಸಾಧ್ಯ. ಅದಕ್ಕಾಗಿ ಮತದಾರರು ದರ್ಶನ್‍ರನ್ನು ಗೆಲ್ಲಿಸಬೇಕು, ಕೈ ಹಿಡಿದು ನಡೆಸಬೇಕು. ಇದು ನನ್ನ ಪ್ರಾರ್ಥನೆ.
ಕೊನೆಯದಾಗಿ ಇನ್ನೊಂದು ಮನವಿ: ದರ್ಶನ್‍ಗೆ ಪ್ರಚಾರವನ್ನು ಹೇಗೆ, ಎಲ್ಲಿಂದ ಮಾಡಬೇಕು? ನೆನಪಿಡಿ- ಸುಳ್ಳು ಹಬ್ಬಿಸುತ್ತಾರೆ. ನೆನಪಿಡಿ- ಒಡಕು ಉಂಟುಮಾಡುತ್ತಾರೆ. ಇಂಥಲ್ಲಿ ಹೇಗೆ ಪ್ರಚಾರ? ಎಲ್ಲಿದ್ದೀರೊ ಅಲ್ಲೆ ಪ್ರಚಾರ ಮಾಡಬೇಕು. ನಂನಮ್ಮ ಮನೆಯಿಂದಲೇ ಆರಂಭಿಸಬೇಕು. ನಂನಮ್ಮ ಬೀದಿಯಲ್ಲೇ ಪ್ರಚಾರ ಆಗಬೇಕು. ಎಲ್ಲಿದ್ದೀವೋ ಅಲ್ಲೇ ಪ್ರಚಾರ. ಈ ರೀತಿ ಪ್ರಚಾರವನ್ನು ಮೇಲುಕೋಟೆ ಕ್ಷೇತ್ರದ ಯುವಕರು ಕೈಗೊಂಡರೆ ಇದೇ ರಾಜ್ಯದ ಚುನಾವಣಾ ರೀತಿರಿವಾಜಿಗೆ ಒಂದು ಮಾದರಿಯಾಗಿ ನಾಡಿಗೆ ಕೊಡುಗೆ ಕೊಟ್ಟಂತಾಗುತ್ತದೆ. ದರ್ಶನ್ ಗೆಲುವಿನ ಜೊತೆಗೆ ಈ ಮಾದರಿಯನ್ನೂ ಹುಟ್ಟುಹಾಕಿ ಎಂದು ಮೇಲುಕೋಟೆ ಕ್ಷೇತ್ರದ ನಮ್ಮ ಯುವಕರಲ್ಲಿ ವಿನಂತಿಸುವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...