Homeಅಂಕಣಗಳುಹೊಸ ಸವಾಲುಗಳ ಕಾಲದಲ್ಲಿ ರೈತ ಮತ್ತು ಪ್ರಗತಿಪರರು

ಹೊಸ ಸವಾಲುಗಳ ಕಾಲದಲ್ಲಿ ರೈತ ಮತ್ತು ಪ್ರಗತಿಪರರು

- Advertisement -
- Advertisement -

ಗೌರಿ ಲಂಕೇಶ್
28 ಫೆಬ್ರವರಿ, 2008 (`ಕಂಡಹಾಗೆ’ ಸಂಪಾದಕೀಯದಿಂದ) |

ರೈತರ ಆತ್ಮಹತ್ಯೆಗಳ ಬಗ್ಗೆ ಅಧ್ಯಯನ ಮಾಡಿರುವವರು ಮತ್ತು ಕೋಮುಗಲಭೆಗಳ ಬಗ್ಗೆ ವಿಶ್ಲೇಷಿಸಿರುವವರು ಇವೆರಡರ ಮಧ್ಯೆ ಒಂದು ಸಾಮ್ಯತೆಯನ್ನು ಗುರುತಿಸುತ್ತಾರೆ. ಉದಾಹರಣೆಗೆ, ಅತ್ಮಹತ್ಯೆ ತರಹದ ತೀವ್ರವಾದ ವ್ಯಕ್ತಿಗತ ನಿರ್ಣಯವನ್ನು ತೆಗೆದುಕೊಳ್ಳುವಾಗ ರೈತನೊಬ್ಬ ತನ್ನ ಸುತ್ತಮುತ್ತಲಿನ ಸಮಾಜದಿಂದ ಸಂಪೂರ್ಣವಾಗಿ ಬೇರ್ಪಟ್ಟು ಏಕಾಂಗಿಯಾಗಿರುತ್ತಾನೆ. ಆತನನ್ನು ಸಮಾಜದೊಂದಿಗೆ, ಸಾಮಾಜಿಕ ಆಸರೆಯೊಂದಿಗೆ ಬೆಸೆಯುವ ಕೊಂಡಿ ಕಳಚಿ ಹೋಗಿರುತ್ತದೆ. ರೈತ ಸಂಘ ಇದ್ದ ಕಡೆ, ಅದು ಸಮರ್ಥವಾಗಿ ಕಾರ್ಯನಿರ್ವಹಿಸಿದ ಕಡೆ ರೈತನೊಬ್ಬ ಎಷ್ಟೇ ಸಂಕಷ್ಟದಲ್ಲಿದ್ದರೂ ಆತ ಆತ್ಮಹತ್ಯೆಯಂತಹ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳದಂತೆ ಒಂದು ಸಾಮಾಜಿಕ ಆಸರೆಯಾಗಿರುತ್ತಿತ್ತು. ಇದನ್ನು ಅರಿತುಕೊಂಡಿದ್ದ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು “ರೈತ ಸಂಘ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿರುವ ಕಡೆ ಆತ್ಮಹತ್ಯೆಗಳಾಗಿಲ್ಲ” ಎಂದೇ ಹೇಳುತ್ತಿದ್ದರು.
ಆದರೆ, ದುರದೃಷ್ಟವಶಾತ್ ರೈತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಳೆದ ಒಂದು ದಶಕದುದ್ದಕ್ಕೂ ರೈತ ಸಮುದಾಯಕ್ಕೆ ಆಸರೆಯಾಗಬೇಕಿದ್ದ ರೈತ ಸಂಘವೇ ವಿಭಜನೆಗೊಂಡು, ನಾಯಕರ ಸ್ವಪ್ರತಿಷ್ಟೆಗೆ ಬಲಿಯಾಗಿತ್ತು. ಈಗ ಅವೆಲ್ಲ ಮುಗಿದ ಕತೆ ಎಂದು ಆಶಿಸಬಹುದಾಗಿದೆ.
ಕರ್ನಾಟಕದಲ್ಲಿ ಕೋಮುವಾದ ಹೆಚ್ಚಾಗಿರುವುದರ ಹಿಂದೆಯೂ ಇಂತಹದ್ದೇ ಕಾರಣಗಳಿವೆ. 1969ರಲ್ಲಿ ಮಂಗಳೂರಿನಲ್ಲಿ ನಡೆದ ಕೋಮುಗಲಭೆ ಹೊರತುಪಡಿಸಿದರೆ 70 ಮತ್ತು 80ರ ದಶಕದಲ್ಲಿ ಅಲ್ಲಲ್ಲಿ ಮಾತ್ರ ಕೋಮುಗಲಭೆಗಳು ನಡೆದಿತ್ತು. ಆದರೆ 90ರ ದಶಕದಲ್ಲಿ ಆರಂಭಗೊಂಡ ಕೋಮುಗಲಭೆಗಳು ಇವತ್ತಿನವರೆಗೂ ನಿಂತಿಲ್ಲ.
ಇದಕ್ಕೆ ಪ್ರಮುಖ ಕಾರಣ 80ರ ದಶಕದವರೆಗೂ ಹಲವಾರು ಪ್ರಗತಿಪರರು ಮತ್ತು ಎಡಪಂಥೀಯರು ಈ ನಾಡಿನ ರೈತ, ಕೂಲಿ, ಕಾರ್ಮಿಕ, ದಲಿತ, ಶೂದ್ರ, ಯುವ ಜನಾಂಗ-ಇವರೆಲ್ಲರನ್ನೂ ಸಂಘಟಿಸುತ್ತಿದ್ದದ್ದು ಮತ್ತು ಚಿಂತನೆಗೆ, ಚಳವಳಿಗೆ ಪ್ರೇರೇಪಿಸುತ್ತಿದ್ದದ್ದು. ಆದರೆ 90ರ ದಶಕದಲ್ಲಿ ನಡೆದ ದುಷ್ಟ ರಾಜಕಾರಣದಿಂದಾಗಿ ಪ್ರಗತಿಪರ, ದಲಿತ, ಎಡಪಂಥೀಯರ ನಡುವೆ ಒಡಕು ಸೃಷ್ಟಿಯಾದದಲ್ಲದೆ, ಅದರಲ್ಲಿ ಹಲವರಿಗೆ ಆಮಿಷಗಳನ್ನು ನೀಡಿ ಭ್ರಷ್ಟಗೊಳಿಸಲಾಯಿತು. ರೈತಸಂಘದಲ್ಲಿ ಮಾತ್ರವಲ್ಲ, ದಲಿತ ಸಂಘರ್ಷ ಸಮಿತಿ ಕೂಡ ಛಿದ್ರಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿ ನಿಂತಿದೆ.
ಈ ಎಲ್ಲದರ ಹಿನ್ನೆಲೆಯಲ್ಲಿ ರೈತ ಸಂಘಟನೆ ಮತ್ತು ಪ್ರಗತಿಪರರು ಈಗಲಾದರೂ ತಾವು ಹಿಂದೆ ಸೋತಿದ್ದೆಲ್ಲಿ ಎಂಬುದರ ಬಗ್ಗೆ ಆತ್ಮವಿಮರ್ಷೆ ಮಾಡಿಕೊಂಡರೆ ಒಳ್ಳೆಯದು ಅನ್ನಿಸುತ್ತದೆ. ಯಾಕೆಂದರೆ ಇವುಗಳು ಹಿಂದೊಮ್ಮೆ ವಿಫಲಗೊಂಡಿದ್ದರ ಹಿಂದಿದ್ದ ಹಲವು ಕಾರಣಗಳಲ್ಲಿ ಅವಕಾಶವಾದ, ಸ್ವಾರ್ಥ, ಅಧಿಕಾರ ಲಾಲಸೆ ಪ್ರಮುಖ. ಅಂದಿನ ನಾಯಕರ ಸ್ವಪ್ರತಿಷ್ಠೆ ಮತ್ತು ಸ್ವಾರ್ಥ ಹೆಚ್ಚಾದಂತೆ ಅವರ ಸಂಘಟನೆಗಳ ಶಕ್ತಿ ಕಳೆದುಕೊಂಡವಲ್ಲದೆ, ಅವುಗಳ ರಾಜಿರಹಿತ ಹೋರಾಟವೂ ಮೂಲೆಗುಂಪಾದವು. ಅಂತಹ ಅಪಾಯಗಳು ಈಗ ಎದುರಾಗದಂತೆ ಎಚ್ಚರ ವಹಿಸಬೇಕಿದೆ.
ಈಗಿನ ಜಾಗತೀಕರಣವಂತೂ ರೈತ, ದಲಿತ, ಎಡಪಂಥೀಯ ಮತ್ತು ಮಹಿಳಾವಾದಿಗಳ ಚಳವಳಿಗಳಿಗೆ ಹೊಸ ಸವಾಲುಗಳನ್ನು ಹಾಕಿದೆ. ಇದೇ ಹೊತ್ತಿಗೆ ಸರ್ಕಾರಗಳೂ ಕೂಡ ಅನ್ಯಾಯಕ್ಕೆ, ಶೋಷಣೆಗೆ, ದಬ್ಬಾಳಿಕೆಗೆ ಒಳಗಾಗುತ್ತಿರುವ ಸಮುದಾಯಗಳ ಪರವಿಲ್ಲದೆ ಡಬ್ಲ್ಯೂಟಿಓ, ಐಎಂಎಫ್ ವಿಶ್ವಬ್ಯಾಂಕ್‍ನಂತಹ ಸಂಸ್ಥೆಗಳ ಪರವಾಗಿ ನಿಂತಿದೆ. ಅದರೊಂದಿಗೆ ಜನಪರ ಹೋರಾಟಗಳನ್ನು, ಚಳವಳಿಗಳನ್ನು ದಮನ ಮಾಡಲೆಂದೇ ಕರಾಳ ಕಾನೂನುಗಳನ್ನು ಜಾರಿಗೆ ತಂದಿದೆ. ತುರ್ತುಪರಿಸ್ಥಿತಿಯ ಕಾಲದಲ್ಲಿ ಎಂಐಎಸ್‍ಎ(ಮಿಸಾ) ಗಿಂತಲೂ ಟಿಎಡಿಎ(ಟಾಡಾ) ಕರಾಳವಾಗಿದ್ದರೆ, 90ರ ದಶಕದಲ್ಲಿ ಟಿಎಡಿಎ(ಟಾಡಾ) ಜಾಗಕ್ಕೆ ಬಂದಿದ್ದೆ ಪೊಟಾ(ಪಿಓಟಿಎ) ಮತ್ತು ಈಗ ಅದರ ಬದಲಿಗೆ ಯುಪಿಎ ಸರ್ಕಾರ ತಂದಿರುವ ಯುಎಲ್‍ಪಿಎ ಮಾನವ ಹಕ್ಕುಗಳನ್ನೇ ನಿರಾಕರಿಸುತ್ತಿದೆ.
ಇಂತಹ ಪರಿಸ್ಥಿತಿಯಲ್ಲಿ ಕಪಟ ಶಾಸಕ, ಭ್ರಷ್ಟ ಅಧಿಕಾರಿ, ಲಂಪಟ ಪೊಲೀಸ್ ಮತ್ತು ಹಿಂದೂತ್ವವಾದಿ ಪುಡಾರಿ ಜೊತೆಗೂಡಿದರೆ ಯಾರನ್ನು ಬೇಕಾದರೂ ಕೊಲ್ಲಬಹುದು, ಯಾರನ್ನು ಬೇಕಾದರೂ ಜೈಲಿಗೆ ದೂಡಬಹುದು, ಯಾರ ಚಳವಳಿಯನ್ನಾದರೂ ಮುರಿದುಹಾಕಬಹುದು.
ಕರ್ನಾಟಕ ಇವತ್ತು ಎಲ್ಲ ರೀತಿಯಲ್ಲೂ ಸಂಕ್ರಮಣ ಕಾಲದಲ್ಲಿದೆ. ಆದ್ದರಿಂದ ಈಗ ನಮ್ಮೆಲ್ಲರ ಶತ್ರಯ ಯಾರೆಂಬುದನ್ನು ಸ್ಪಷ್ಟವಾಗಿ ಗುರುತಿಸಬೇಕಾಗಿದೆಯಲ್ಲದೆ, ನಮ್ಮೊಳಗಿನ ಶತ್ರುವನ್ನೂ ಗುರುತಿಸಿ ಹೋರಾಟಗಳು ವಿಫಲವಾಗದಂತೆ ನೋಡಿಕೊಳ್ಳಬೇಕಿದೆ. ಹಾಗೆಯೇ ಎಲ್ಲಾ ಸಮಾನ ಮನಸ್ಕರು ತಮ್ಮ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಂದುಗೂಡಬೇಕಿದೆ. ನಮ್ಮೆಲ್ಲರ ಶತ್ರುಗಳು ಒಂದಾಗಿರುವ ಈ ಕಾಲದಲ್ಲಿ ನಾವೆಲ್ಲರೂ ದಾಯಾದಿಗಳಂತೆ ಕಚ್ಚಾಡುವುದರಲ್ಲಿ ಅರ್ಥವಿಲ್ಲ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕಿದೆ.
ರೈತ ಸಂಘಗಳ ವಿಲೀನ, ಕೋಮುವಾದದ ವಿರುದ್ಧದ ಪ್ರಗತಿಪರರ ಹೊಸ ಯತ್ನ ಹಳೇ ಅನುಭವಗಳಿಂದ ಪಾಠಗಳನ್ನು ಕಲಿತು, ಸಂಘಟನಾತ್ಮಕ ಚಳವಳಿಯನ್ನು ಮಾಡುತ್ತವೆ ಎಂದು ಆಶಿಸುತ್ತೇನೆ. ಅವರ ಅಂತಹ ಎಲ್ಲಾ ಪ್ರಯತ್ನಗಳಿಗೆ ನಿಮ್ಮ ಮತ್ತು ನಮ್ಮ ಬೆಂಬಲ ಇದ್ದೇ ಇರುತ್ತದೆ ಎಂದೂ ಹೇಳಲು ಇಚ್ಛಿಸುತ್ತೇನೆ…….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...