Homeಕರ್ನಾಟಕರೋಷನ್ ಬೇಗ್ ಉಚ್ಛಾಟನೆ: ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದ ಕಾಂಗ್ರೆಸ್

ರೋಷನ್ ಬೇಗ್ ಉಚ್ಛಾಟನೆ: ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದ ಕಾಂಗ್ರೆಸ್

- Advertisement -
- Advertisement -

| ನಾನು ಗೌರಿ ಡೆಸ್ಕ್ |

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಮತ್ತು ಹಾಲಿ ಶಾಸಕ ಹಾಗೂ ಭಿನ್ನಮತೀಯ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಆ ಮೂಲಕ ಪಕ್ಷದ ರಾಜ್ಯ ಚುಕ್ಕಾಣಿ ಹಿಡಿದಿರುವ ನಾಯಕರು ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದಂತಾಗಿದೆ. ಆದರೆ, ಈ ಏಟು ಹೊಡೆಯುವ ಮುನ್ನವೇ, ರೋಷನ್ ಬೇಗ್‍ರನ್ನು ಸಂಪೂರ್ಣ ಮಕಾಡೆ ಮಲಗಿಸಲಾಗಿತ್ತು ಎಂಬುದು ಅಸಲೀ ವಿಚಾರ.

ಐಎಂಎ ಎಂಬ ನಕಲಿ ಕಂಪೆನಿಯೊಂದರ ಜೊತೆ ಸಖ್ಯ ಹೊಂದಿದ್ದ ರೋಷನ್ ಬೇಗ್‍ರನ್ನು ಹಣಿಯಲೆಂದೇ, ಸದರಿ ಹಗರಣವನ್ನು ವ್ಯವಸ್ಥಿತವಾಗಿ ಹೊರತೆಗೆಯಲಾಯಿತು. ಅದರ ಮೂಲಕ ಯಾವ ರೀತಿ ಸನ್ನಿವೇಶ ಸೃಷ್ಟಿಯಾಯಿತೆಂದರೆ, ರೋಷನ್ ಬೇಗ್‍ರಂತಹ ನಾಯಕ ಬರುತ್ತೇನೆಂದರೂ ಇತರ ಪಕ್ಷಗಳು ಬೇಡ ಎಂದು ಹೇಳಬೇಕು, ಆ ರೀತಿಯಲ್ಲಿ. ಸಿದ್ದರಾಮಯ್ಯನವರನ್ನು ಅಹಂಕಾರಿ, ದಿನೇಶ್ ಗುಂಡೂರಾವ್ ನಾಲಾಯಕ್ ಮತ್ತು ಕೆ.ಸಿ.ವೇಣುಗೋಪಾಲ್‍ರನ್ನು ಬಫೂನ್ ಎಂದು ಕರೆದ ವ್ಯಕ್ತಿಯೊಬ್ಬರನ್ನು ಪಕ್ಷದಲ್ಲಿ ಮುಂದುವರೆಸಿದ್ದರೆ, ಪಕ್ಷವೇ ನಾಲಾಯಕ್ ಆಗಿರುತ್ತಿತ್ತು.

ಆದರೆ, ಮೋದಿಯನ್ನು ಹೊಗಳಲು ಶುರು ಮಾಡಿದ್ದ ಬೇಗ್‍ರನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲವೆಂಬ ಗ್ಯಾರಂಟಿ ಇರಲಿಲ್ಲ. ಹಾಗೇನಾದರೂ ಆಗಿದ್ದರೆ ಕಾಂಗ್ರೆಸ್‍ಗೆ ಕಷ್ಟವಾಗುತ್ತಿತ್ತು. ಆದರೆ, ಯಾವಾಗ ಲೋಕಸಭಾ ಚುನಾವಣೆಯಲ್ಲಿ ಬೇಗ್‍ರ ಅಸಹಕಾರದ ನಡುವೆಯೂ, ಶಿವಾಜಿನಗರದಲ್ಲಿ ರಿಜ್ವಾನ್ ಅರ್ಷದ್‍ಗೆ ಲೀಡ್ ಬಂದಿತ್ತೋ ಆಗಲೇ ಬೇಗ್ ಮತ್ತೆ ಕಾಂಗ್ರೆಸ್ಸೇತರ ಅಭ್ಯರ್ಥಿಯಾಗಿ ಶಿವಾಜಿನಗರದಲ್ಲಿ ಗೆಲ್ಲಲಾರರು ಎಂದು ಎಲ್ಲರಿಗೂ ಗೊತ್ತಿತ್ತು. ಆದರೂ ಏಕಾಏಕಿ ಅವರನ್ನು ಹೊರಹಾಕುವುದು ಅಷ್ಟು ಸುಲಭವಿರಲಿಲ್ಲ. ಆದರೆ, ಐಎಂಎ ಹಗರಣದ ನಂತರ, ಬೇಗ್ ಕಥೆ ಮುಗಿದಂತೆ ಎಂದಾಗಿಬಿಟ್ಟಿತ್ತು.

ಇದೀಗ ಅವರನ್ನು ಉಚ್ಛಾಟಿಸುವ ಮೂಲಕ ಕಾಂಗ್ರೆಸ್ ಹಲವು ಸಂದೇಶಗಳನ್ನು ಕೊಟ್ಟಿದೆ. ಕಾಂಗ್ರೆಸ್‍ನ ಮುಸ್ಲಿಂ ನಾಯಕರು ಜಮೀರ್, ರಿಜ್ವಾನ್‍ರೇ ಹೊರತು ಬೇಗ್ ಅಲ್ಲ ಎಂಬುದು ಒಂದು ಸಂದೇಶ. ಭಿನ್ನಮತೀಯರ ಜೊತೆ ಸಾಫ್ಟ್ ಆಗಿರುವುದಿಲ್ಲವೆಂಬ ಸಂದೇಶ. ಅದರಲ್ಲೂ ಸಿದ್ದರಾಮಯ್ಯನವರನ್ನು ಬೈದು ಪಕ್ಷದಲ್ಲಿ ಉಳಿಯುವುದು ಸಾಧ್ಯವಿಲ್ಲ ಎಂಬ ಮೆಸೇಜ್. ನಾವೂ ಯಾರ್ಯಾರನ್ನು ಹೇಗ್ಹೇಗೆ ಬಲಿ ಹಾಕಬೇಕೆಂಬುದರಲ್ಲಿ ಪಟ್ಟು ಸಾಧಿಸಿದ್ದೀವಿ ಎಂಬುದನ್ನೂ ಈ ಮೂಲಕ ಹೇಳಿದಂತಾಗಿದೆ.

ರೋಷನ್ ಬೇಗ್ ಅಮಾನತಿನಿಂದ ಅವರು ಶಾಸಕ ಸ್ಥಾನವನ್ನೇನೂ ಕಳೆದುಕೊಳ್ಳುವುದಿಲ್ಲ. ಅದರ ಅರ್ಥ ಬೇರೆ ಪಕ್ಷಕ್ಕೆ ಹೋಗುವಂತೆಯೂ ಇಲ್ಲ. ಒಂಥರಾ ತ್ರಿಶಂಕು ಸ್ಥಿತಿ. ಬೆಂಗಳೂರಿನ ಮತ್ತು ರಾಜ್ಯದ ಇತರ ಭಿನ್ನಮತೀಯರೂ ಒಂದು ಸಾರಿ ಬೆಚ್ಚಿಬೀಳುವ ಸ್ಥಿತಿ ಇದರಿಂದ ನಿರ್ಮಾಣವಾಗಿದೆ.

ಹಗರಣದಲ್ಲಿ ಭಾಗಿಯಾದವರಿಗೆ ಕಾಂಗ್ರೆಸ್‍ನಲ್ಲಿ ಸ್ಥಾನವಿಲ್ಲ ಎಂದೂ ಇದರಿಂದ ಹೇಳಿದಂತಾಗಿದೆ. ಹಾಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ಹೋಗಿ ಬಂದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬೇಗ್‍ರಿಗೆ ಇದ್ದದ್ದು ರಾಜ್ಯ ನಾಯಕರ ಬಲವಲ್ಲ, ಹೈಕಮ್ಯಾಂಡ್‍ನಲ್ಲಿ ಪ್ರಬಲವಾಗಿರುವ ನಾಯಕರ ಬಲ. ಅದನ್ನು ಸೂಕ್ತವಾಗಿ ನ್ಯೂಟ್ರಲೈಸ್ ಮಾಡಿಯೇ ಈ ತೀರ್ಮಾನವನ್ನು ಘೋಷಿಸಲಾಗಿದೆ.

ಇನ್ನು ರೋಷನ್‍ಬೇಗ್‍ರ ಮುಂದಿನ ನಡೆ ಏನಾಗಿರುತ್ತದೆಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. People like Roshan baig, should be shown place. So far he has enjoyed powers as Congress MLA, minister and so on. Now he is barking against his own party superiors. If he doesn’t like to stay in Congress, let him have a graceful exit. Who cares for such an idiotic leader.Even without blaming siddaramaiah, Dinesh gundurao and venugopal he can join BJP or any other party he likes. Praising Modi shows his boot licking nature just to enjoy power under Muslim quota. Even BJP doesn’t need a boot licker and back staber. People of Karnataka should call it a day for such selfish people.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...