Homeಕರ್ನಾಟಕರೋಷನ್ ಬೇಗ್ ಉಚ್ಛಾಟನೆ: ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದ ಕಾಂಗ್ರೆಸ್

ರೋಷನ್ ಬೇಗ್ ಉಚ್ಛಾಟನೆ: ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದ ಕಾಂಗ್ರೆಸ್

- Advertisement -
- Advertisement -

| ನಾನು ಗೌರಿ ಡೆಸ್ಕ್ |

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಮತ್ತು ಹಾಲಿ ಶಾಸಕ ಹಾಗೂ ಭಿನ್ನಮತೀಯ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಆ ಮೂಲಕ ಪಕ್ಷದ ರಾಜ್ಯ ಚುಕ್ಕಾಣಿ ಹಿಡಿದಿರುವ ನಾಯಕರು ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದಂತಾಗಿದೆ. ಆದರೆ, ಈ ಏಟು ಹೊಡೆಯುವ ಮುನ್ನವೇ, ರೋಷನ್ ಬೇಗ್‍ರನ್ನು ಸಂಪೂರ್ಣ ಮಕಾಡೆ ಮಲಗಿಸಲಾಗಿತ್ತು ಎಂಬುದು ಅಸಲೀ ವಿಚಾರ.

ಐಎಂಎ ಎಂಬ ನಕಲಿ ಕಂಪೆನಿಯೊಂದರ ಜೊತೆ ಸಖ್ಯ ಹೊಂದಿದ್ದ ರೋಷನ್ ಬೇಗ್‍ರನ್ನು ಹಣಿಯಲೆಂದೇ, ಸದರಿ ಹಗರಣವನ್ನು ವ್ಯವಸ್ಥಿತವಾಗಿ ಹೊರತೆಗೆಯಲಾಯಿತು. ಅದರ ಮೂಲಕ ಯಾವ ರೀತಿ ಸನ್ನಿವೇಶ ಸೃಷ್ಟಿಯಾಯಿತೆಂದರೆ, ರೋಷನ್ ಬೇಗ್‍ರಂತಹ ನಾಯಕ ಬರುತ್ತೇನೆಂದರೂ ಇತರ ಪಕ್ಷಗಳು ಬೇಡ ಎಂದು ಹೇಳಬೇಕು, ಆ ರೀತಿಯಲ್ಲಿ. ಸಿದ್ದರಾಮಯ್ಯನವರನ್ನು ಅಹಂಕಾರಿ, ದಿನೇಶ್ ಗುಂಡೂರಾವ್ ನಾಲಾಯಕ್ ಮತ್ತು ಕೆ.ಸಿ.ವೇಣುಗೋಪಾಲ್‍ರನ್ನು ಬಫೂನ್ ಎಂದು ಕರೆದ ವ್ಯಕ್ತಿಯೊಬ್ಬರನ್ನು ಪಕ್ಷದಲ್ಲಿ ಮುಂದುವರೆಸಿದ್ದರೆ, ಪಕ್ಷವೇ ನಾಲಾಯಕ್ ಆಗಿರುತ್ತಿತ್ತು.

ಆದರೆ, ಮೋದಿಯನ್ನು ಹೊಗಳಲು ಶುರು ಮಾಡಿದ್ದ ಬೇಗ್‍ರನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲವೆಂಬ ಗ್ಯಾರಂಟಿ ಇರಲಿಲ್ಲ. ಹಾಗೇನಾದರೂ ಆಗಿದ್ದರೆ ಕಾಂಗ್ರೆಸ್‍ಗೆ ಕಷ್ಟವಾಗುತ್ತಿತ್ತು. ಆದರೆ, ಯಾವಾಗ ಲೋಕಸಭಾ ಚುನಾವಣೆಯಲ್ಲಿ ಬೇಗ್‍ರ ಅಸಹಕಾರದ ನಡುವೆಯೂ, ಶಿವಾಜಿನಗರದಲ್ಲಿ ರಿಜ್ವಾನ್ ಅರ್ಷದ್‍ಗೆ ಲೀಡ್ ಬಂದಿತ್ತೋ ಆಗಲೇ ಬೇಗ್ ಮತ್ತೆ ಕಾಂಗ್ರೆಸ್ಸೇತರ ಅಭ್ಯರ್ಥಿಯಾಗಿ ಶಿವಾಜಿನಗರದಲ್ಲಿ ಗೆಲ್ಲಲಾರರು ಎಂದು ಎಲ್ಲರಿಗೂ ಗೊತ್ತಿತ್ತು. ಆದರೂ ಏಕಾಏಕಿ ಅವರನ್ನು ಹೊರಹಾಕುವುದು ಅಷ್ಟು ಸುಲಭವಿರಲಿಲ್ಲ. ಆದರೆ, ಐಎಂಎ ಹಗರಣದ ನಂತರ, ಬೇಗ್ ಕಥೆ ಮುಗಿದಂತೆ ಎಂದಾಗಿಬಿಟ್ಟಿತ್ತು.

ಇದೀಗ ಅವರನ್ನು ಉಚ್ಛಾಟಿಸುವ ಮೂಲಕ ಕಾಂಗ್ರೆಸ್ ಹಲವು ಸಂದೇಶಗಳನ್ನು ಕೊಟ್ಟಿದೆ. ಕಾಂಗ್ರೆಸ್‍ನ ಮುಸ್ಲಿಂ ನಾಯಕರು ಜಮೀರ್, ರಿಜ್ವಾನ್‍ರೇ ಹೊರತು ಬೇಗ್ ಅಲ್ಲ ಎಂಬುದು ಒಂದು ಸಂದೇಶ. ಭಿನ್ನಮತೀಯರ ಜೊತೆ ಸಾಫ್ಟ್ ಆಗಿರುವುದಿಲ್ಲವೆಂಬ ಸಂದೇಶ. ಅದರಲ್ಲೂ ಸಿದ್ದರಾಮಯ್ಯನವರನ್ನು ಬೈದು ಪಕ್ಷದಲ್ಲಿ ಉಳಿಯುವುದು ಸಾಧ್ಯವಿಲ್ಲ ಎಂಬ ಮೆಸೇಜ್. ನಾವೂ ಯಾರ್ಯಾರನ್ನು ಹೇಗ್ಹೇಗೆ ಬಲಿ ಹಾಕಬೇಕೆಂಬುದರಲ್ಲಿ ಪಟ್ಟು ಸಾಧಿಸಿದ್ದೀವಿ ಎಂಬುದನ್ನೂ ಈ ಮೂಲಕ ಹೇಳಿದಂತಾಗಿದೆ.

ರೋಷನ್ ಬೇಗ್ ಅಮಾನತಿನಿಂದ ಅವರು ಶಾಸಕ ಸ್ಥಾನವನ್ನೇನೂ ಕಳೆದುಕೊಳ್ಳುವುದಿಲ್ಲ. ಅದರ ಅರ್ಥ ಬೇರೆ ಪಕ್ಷಕ್ಕೆ ಹೋಗುವಂತೆಯೂ ಇಲ್ಲ. ಒಂಥರಾ ತ್ರಿಶಂಕು ಸ್ಥಿತಿ. ಬೆಂಗಳೂರಿನ ಮತ್ತು ರಾಜ್ಯದ ಇತರ ಭಿನ್ನಮತೀಯರೂ ಒಂದು ಸಾರಿ ಬೆಚ್ಚಿಬೀಳುವ ಸ್ಥಿತಿ ಇದರಿಂದ ನಿರ್ಮಾಣವಾಗಿದೆ.

ಹಗರಣದಲ್ಲಿ ಭಾಗಿಯಾದವರಿಗೆ ಕಾಂಗ್ರೆಸ್‍ನಲ್ಲಿ ಸ್ಥಾನವಿಲ್ಲ ಎಂದೂ ಇದರಿಂದ ಹೇಳಿದಂತಾಗಿದೆ. ಹಾಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ಹೋಗಿ ಬಂದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬೇಗ್‍ರಿಗೆ ಇದ್ದದ್ದು ರಾಜ್ಯ ನಾಯಕರ ಬಲವಲ್ಲ, ಹೈಕಮ್ಯಾಂಡ್‍ನಲ್ಲಿ ಪ್ರಬಲವಾಗಿರುವ ನಾಯಕರ ಬಲ. ಅದನ್ನು ಸೂಕ್ತವಾಗಿ ನ್ಯೂಟ್ರಲೈಸ್ ಮಾಡಿಯೇ ಈ ತೀರ್ಮಾನವನ್ನು ಘೋಷಿಸಲಾಗಿದೆ.

ಇನ್ನು ರೋಷನ್‍ಬೇಗ್‍ರ ಮುಂದಿನ ನಡೆ ಏನಾಗಿರುತ್ತದೆಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. People like Roshan baig, should be shown place. So far he has enjoyed powers as Congress MLA, minister and so on. Now he is barking against his own party superiors. If he doesn’t like to stay in Congress, let him have a graceful exit. Who cares for such an idiotic leader.Even without blaming siddaramaiah, Dinesh gundurao and venugopal he can join BJP or any other party he likes. Praising Modi shows his boot licking nature just to enjoy power under Muslim quota. Even BJP doesn’t need a boot licker and back staber. People of Karnataka should call it a day for such selfish people.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...