Homeಕರ್ನಾಟಕರೋಷನ್ ಬೇಗ್ ಉಚ್ಛಾಟನೆ: ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದ ಕಾಂಗ್ರೆಸ್

ರೋಷನ್ ಬೇಗ್ ಉಚ್ಛಾಟನೆ: ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದ ಕಾಂಗ್ರೆಸ್

- Advertisement -
- Advertisement -

| ನಾನು ಗೌರಿ ಡೆಸ್ಕ್ |

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಮತ್ತು ಹಾಲಿ ಶಾಸಕ ಹಾಗೂ ಭಿನ್ನಮತೀಯ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಆ ಮೂಲಕ ಪಕ್ಷದ ರಾಜ್ಯ ಚುಕ್ಕಾಣಿ ಹಿಡಿದಿರುವ ನಾಯಕರು ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದಂತಾಗಿದೆ. ಆದರೆ, ಈ ಏಟು ಹೊಡೆಯುವ ಮುನ್ನವೇ, ರೋಷನ್ ಬೇಗ್‍ರನ್ನು ಸಂಪೂರ್ಣ ಮಕಾಡೆ ಮಲಗಿಸಲಾಗಿತ್ತು ಎಂಬುದು ಅಸಲೀ ವಿಚಾರ.

ಐಎಂಎ ಎಂಬ ನಕಲಿ ಕಂಪೆನಿಯೊಂದರ ಜೊತೆ ಸಖ್ಯ ಹೊಂದಿದ್ದ ರೋಷನ್ ಬೇಗ್‍ರನ್ನು ಹಣಿಯಲೆಂದೇ, ಸದರಿ ಹಗರಣವನ್ನು ವ್ಯವಸ್ಥಿತವಾಗಿ ಹೊರತೆಗೆಯಲಾಯಿತು. ಅದರ ಮೂಲಕ ಯಾವ ರೀತಿ ಸನ್ನಿವೇಶ ಸೃಷ್ಟಿಯಾಯಿತೆಂದರೆ, ರೋಷನ್ ಬೇಗ್‍ರಂತಹ ನಾಯಕ ಬರುತ್ತೇನೆಂದರೂ ಇತರ ಪಕ್ಷಗಳು ಬೇಡ ಎಂದು ಹೇಳಬೇಕು, ಆ ರೀತಿಯಲ್ಲಿ. ಸಿದ್ದರಾಮಯ್ಯನವರನ್ನು ಅಹಂಕಾರಿ, ದಿನೇಶ್ ಗುಂಡೂರಾವ್ ನಾಲಾಯಕ್ ಮತ್ತು ಕೆ.ಸಿ.ವೇಣುಗೋಪಾಲ್‍ರನ್ನು ಬಫೂನ್ ಎಂದು ಕರೆದ ವ್ಯಕ್ತಿಯೊಬ್ಬರನ್ನು ಪಕ್ಷದಲ್ಲಿ ಮುಂದುವರೆಸಿದ್ದರೆ, ಪಕ್ಷವೇ ನಾಲಾಯಕ್ ಆಗಿರುತ್ತಿತ್ತು.

ಆದರೆ, ಮೋದಿಯನ್ನು ಹೊಗಳಲು ಶುರು ಮಾಡಿದ್ದ ಬೇಗ್‍ರನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲವೆಂಬ ಗ್ಯಾರಂಟಿ ಇರಲಿಲ್ಲ. ಹಾಗೇನಾದರೂ ಆಗಿದ್ದರೆ ಕಾಂಗ್ರೆಸ್‍ಗೆ ಕಷ್ಟವಾಗುತ್ತಿತ್ತು. ಆದರೆ, ಯಾವಾಗ ಲೋಕಸಭಾ ಚುನಾವಣೆಯಲ್ಲಿ ಬೇಗ್‍ರ ಅಸಹಕಾರದ ನಡುವೆಯೂ, ಶಿವಾಜಿನಗರದಲ್ಲಿ ರಿಜ್ವಾನ್ ಅರ್ಷದ್‍ಗೆ ಲೀಡ್ ಬಂದಿತ್ತೋ ಆಗಲೇ ಬೇಗ್ ಮತ್ತೆ ಕಾಂಗ್ರೆಸ್ಸೇತರ ಅಭ್ಯರ್ಥಿಯಾಗಿ ಶಿವಾಜಿನಗರದಲ್ಲಿ ಗೆಲ್ಲಲಾರರು ಎಂದು ಎಲ್ಲರಿಗೂ ಗೊತ್ತಿತ್ತು. ಆದರೂ ಏಕಾಏಕಿ ಅವರನ್ನು ಹೊರಹಾಕುವುದು ಅಷ್ಟು ಸುಲಭವಿರಲಿಲ್ಲ. ಆದರೆ, ಐಎಂಎ ಹಗರಣದ ನಂತರ, ಬೇಗ್ ಕಥೆ ಮುಗಿದಂತೆ ಎಂದಾಗಿಬಿಟ್ಟಿತ್ತು.

ಇದೀಗ ಅವರನ್ನು ಉಚ್ಛಾಟಿಸುವ ಮೂಲಕ ಕಾಂಗ್ರೆಸ್ ಹಲವು ಸಂದೇಶಗಳನ್ನು ಕೊಟ್ಟಿದೆ. ಕಾಂಗ್ರೆಸ್‍ನ ಮುಸ್ಲಿಂ ನಾಯಕರು ಜಮೀರ್, ರಿಜ್ವಾನ್‍ರೇ ಹೊರತು ಬೇಗ್ ಅಲ್ಲ ಎಂಬುದು ಒಂದು ಸಂದೇಶ. ಭಿನ್ನಮತೀಯರ ಜೊತೆ ಸಾಫ್ಟ್ ಆಗಿರುವುದಿಲ್ಲವೆಂಬ ಸಂದೇಶ. ಅದರಲ್ಲೂ ಸಿದ್ದರಾಮಯ್ಯನವರನ್ನು ಬೈದು ಪಕ್ಷದಲ್ಲಿ ಉಳಿಯುವುದು ಸಾಧ್ಯವಿಲ್ಲ ಎಂಬ ಮೆಸೇಜ್. ನಾವೂ ಯಾರ್ಯಾರನ್ನು ಹೇಗ್ಹೇಗೆ ಬಲಿ ಹಾಕಬೇಕೆಂಬುದರಲ್ಲಿ ಪಟ್ಟು ಸಾಧಿಸಿದ್ದೀವಿ ಎಂಬುದನ್ನೂ ಈ ಮೂಲಕ ಹೇಳಿದಂತಾಗಿದೆ.

ರೋಷನ್ ಬೇಗ್ ಅಮಾನತಿನಿಂದ ಅವರು ಶಾಸಕ ಸ್ಥಾನವನ್ನೇನೂ ಕಳೆದುಕೊಳ್ಳುವುದಿಲ್ಲ. ಅದರ ಅರ್ಥ ಬೇರೆ ಪಕ್ಷಕ್ಕೆ ಹೋಗುವಂತೆಯೂ ಇಲ್ಲ. ಒಂಥರಾ ತ್ರಿಶಂಕು ಸ್ಥಿತಿ. ಬೆಂಗಳೂರಿನ ಮತ್ತು ರಾಜ್ಯದ ಇತರ ಭಿನ್ನಮತೀಯರೂ ಒಂದು ಸಾರಿ ಬೆಚ್ಚಿಬೀಳುವ ಸ್ಥಿತಿ ಇದರಿಂದ ನಿರ್ಮಾಣವಾಗಿದೆ.

ಹಗರಣದಲ್ಲಿ ಭಾಗಿಯಾದವರಿಗೆ ಕಾಂಗ್ರೆಸ್‍ನಲ್ಲಿ ಸ್ಥಾನವಿಲ್ಲ ಎಂದೂ ಇದರಿಂದ ಹೇಳಿದಂತಾಗಿದೆ. ಹಾಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ಹೋಗಿ ಬಂದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬೇಗ್‍ರಿಗೆ ಇದ್ದದ್ದು ರಾಜ್ಯ ನಾಯಕರ ಬಲವಲ್ಲ, ಹೈಕಮ್ಯಾಂಡ್‍ನಲ್ಲಿ ಪ್ರಬಲವಾಗಿರುವ ನಾಯಕರ ಬಲ. ಅದನ್ನು ಸೂಕ್ತವಾಗಿ ನ್ಯೂಟ್ರಲೈಸ್ ಮಾಡಿಯೇ ಈ ತೀರ್ಮಾನವನ್ನು ಘೋಷಿಸಲಾಗಿದೆ.

ಇನ್ನು ರೋಷನ್‍ಬೇಗ್‍ರ ಮುಂದಿನ ನಡೆ ಏನಾಗಿರುತ್ತದೆಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. People like Roshan baig, should be shown place. So far he has enjoyed powers as Congress MLA, minister and so on. Now he is barking against his own party superiors. If he doesn’t like to stay in Congress, let him have a graceful exit. Who cares for such an idiotic leader.Even without blaming siddaramaiah, Dinesh gundurao and venugopal he can join BJP or any other party he likes. Praising Modi shows his boot licking nature just to enjoy power under Muslim quota. Even BJP doesn’t need a boot licker and back staber. People of Karnataka should call it a day for such selfish people.

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...