Homeನ್ಯಾಯ ಪಥಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ : 2026ಕ್ಕೆ ದಕ್ಷಿಣ ಭಾರತ ರಾಜ್ಯಗಳಿಗೆ ಕಾದಿದೆಯಾ ಆಘಾತ?

ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ : 2026ಕ್ಕೆ ದಕ್ಷಿಣ ಭಾರತ ರಾಜ್ಯಗಳಿಗೆ ಕಾದಿದೆಯಾ ಆಘಾತ?

- Advertisement -
- Advertisement -

| ರಾಜಶೇಖರ್ ಅಕ್ಕಿ|

2026, ದಕ್ಷಿಣ ಭಾರತದ ರಾಜ್ಯಗಳ ಪಾಲಿಗೆ ಇದು ದೊಡ್ಡ ಆಘಾತ ತಂದೊಡ್ಡಲಿದೆಯಾ? ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆಯ ರೀತಿರಿವಾಜುಗಳನ್ನು ಅಧ್ಯಯನ ಮಾಡಿದವರು 2026 ದಕ್ಷಿಣ ಭಾರತದ ರಾಜ್ಯಗಳಿಗೆ ತಂದೊಡ್ಡಲಿರುವ ಆಘಾತದ ಸುಳಿವು ನೀಡುತ್ತಿದ್ದಾರೆ.

ಹೌದು, 2026ಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆ ನಡೆಯಲಿದೆ. ಹಾಗೇನಾದರು ಅದು ನಡೆದರೆ, ಜನಸಂಖ್ಯೆಯ ಆಧಾರದಲ್ಲಿ ದಕ್ಷಿಣ ರಾಜ್ಯಗಳು ಈಗಿರುವ ತಮ್ಮ ಸಂಸತ್ ಕ್ಷೇತ್ರಗಳ ಸ್ಥಾನಗಳಲ್ಲಿ ಕೆಲವನ್ನು ಕಳೆದುಕೊಂಡರೆ, ಉತ್ತರದ ರಾಜ್ಯಗಳು ಈಗಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ದಕ್ಕಿಸಿಕೊಳ್ಳಲಿವೆ. ಆಗ ಸಹಜವಾಗಿಯೇ ಸಂಸತ್ ಅಂಗಳದಲ್ಲಿ, ಅರ್ಥಾತ್ ರಾಷ್ಟ್ರ ರಾಜಕಾರಣದಲ್ಲಿ ದಕ್ಷಿಣ ರಾಜ್ಯಗಳ ದನಿ ಮತ್ತಷ್ಟು ಕ್ಷೀಣಿಸಲಿದೆ. ಈಗಲೇ ಹಿಂದಿ ಹಾರ್ಟ್‍ಲ್ಯಾಂಡ್ ರಾಜ್ಯಗಳೇ ದಿಲ್ಲಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಅಂತದ್ದರಲ್ಲಿ ದಕ್ಷಿಣ ಭಾರತೀಯರ ಸಂಸದರ ಸಂಖ್ಯೆ ಮತ್ತಷ್ಟು ಕುಸಿದರೆ, ಮುಗಿದೇಹೋಯ್ತು! ಅಂದಹಾಗೆ, ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಜನಸಂಖ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ್ದಕ್ಕೆ, ಆ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ ಮೊದಲಾದ ಕ್ಷೇತ್ರಗಳಲ್ಲಿ ತುಲನಾತ್ಮಕವಾಗಿ ಅಭಿವೃದ್ಧಿ ಸಾಧಿಸಿರೋದಕ್ಕೆ ದಕ್ಷಿಣ ರಾಜ್ಯಗಳಿಗೆ ಸಿಗಲಿರುವ ಬಹುಮಾನ ಇದು!!

ಅದು ಹೇಗೆ? ಬನ್ನಿ ಈ ಕುರಿತು ತಿಳಿದುಕೊಳ್ಳೋಣ….

ಭಾರತ 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ ಎದುರಿಸಿದಾಗ 489 ಲೋಕಸಭೆ ಕ್ಷೇತ್ರಗಳಿದ್ದವು. ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ಆಗುವುದು ಎಲ್ಲರಿಗೂ ಗೊತ್ತೇ ಇದೆ. ಅದೇ ಜನಗಣತಿಯ ಆಧಾರದ ಮೇಲೆ ಹತ್ತು ವರ್ಷಕ್ಕೊಮ್ಮೆ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಮರುವಿಂಗಡಣೆ ಆಗುತ್ತಿತ್ತು. ಅದರನುಗುಣವಾಗಿ 1966ರಲ್ಲಿ (1961ರ ಜನಗಣತಿ ಪ್ರಕಾರ) 489ರಿಂದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 520ಕ್ಕೆ ಏರಿದ್ದವು. ನಂತರ 1971ರಲ್ಲಿ ಜನಗಣತಿಯ ತರುವಾಯ 1976ರಲ್ಲಿ ಅವು ಪ್ರಸ್ತುತ 543ಕ್ಕೆ ಏರಿದವು. ಆದರೆ ಆನಂತರ, ಅಂದರೆ 1976ರಲ್ಲೇ (ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದಾಗ) ಕ್ಷೇತ್ರಗಳ ಪುನರ್‍ವಿಂಗಡನೆಗೆ ಮುಂದಿನ 25 ವರ್ಷಗಳವರೆಗೆ ಫ್ರೀಜ್ ಮಾಡಿ ಸಂವಿಧಾನಾತ್ಮಕ ಕಡಿವಾಣ ಹಾಕಲಾಯಿತು. ಆಗಲೇ ಜನಸಂಖ್ಯೆ ನಿಯಂತ್ರಣದ ಯೋಜನೆಗಳು ಆರಂಭವಾದವು. ಜನಗಣತಿಯ ಆಧಾರದ ಮೇಲೆ ಕ್ಷೇತ್ರವಿಂಗಡಣೆ ಮಾಡುತ್ತಾ ಹೋದಲ್ಲಿ ಜನಸಂಖ್ಯೆ ನಿಯಂತ್ರಣ ಸರಿಯಾಗಿ ಮಾಡದ (ಅಂದರೆ ಅಭಿವೃದ್ಧಿ ಆಗದೇ ಇರುವ) ರಾಜ್ಯಗಳಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿ, ಜನಸಂಖ್ಯೆ ನಿಯಂತ್ರಿಸಿದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಇಳಿಮುಖವಾಗುವ ಸಾಧ್ಯತೆ ಇತ್ತು. ಹಾಗಾಗಿ 1976ರಲ್ಲಿ ಮುಂದಿನ 25 ವರ್ಷಗಳ ತನಕ ಕ್ಷೇತ್ರ ಪುನರ್‍ವಿಂಗಡನೆ ಮಾಡಬಾರದು ಎಂದು ನಿರ್ಣಯಿಸಲಾಯಿತು.

ಆ 25 ವರ್ಷಗಳ ಅವಧಿ 2001ರಲ್ಲಿ ಮುಗಿದು, 2006ಕ್ಕೆ ಕ್ಷೇತ್ರಗಳ ಪುನರ್‍ವಿಂಗಡನೆಯಾಗಬೇಕಿತ್ತು. ಆದರೆ ಹಾಗಾಗಲಿಲ್ಲ. ಇಪ್ಪತೈದು ವರ್ಷಗಳ ಇನ್ನೊಂದು ಅವಧಿಯವರೆಗೆ ಪುನರ್‍ವಿಂಗಡನೆ ಮಾಡಬಾರದೆಂದು 2001ರಲ್ಲಿ ಮತ್ತೆ ನಿರ್ಣಯಿಸಲಾಯಿತು. ಹಾಗೆ ಮಾಡಿದ್ದಲ್ಲಿ ಉತ್ತರಭಾರತದ ರಾಜ್ಯಗಳಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆಯಲ್ಲಿ ವೃದ್ಧಿಯಾಗಿ, ದಕ್ಷಿಣದ ರಾಜ್ಯಗಳ ಕ್ಷೇತ್ರಗಳಲ್ಲಿ ಗಣನೀಯ ಕಡಿತ ಕಾಣಿಸಿಕೊಳ್ಳಲಿತ್ತು.  2008ರಲ್ಲಿ ಮೀಸಲು ಕ್ಷೇತ್ರಗಳ ಪುನರ್‍ವಿಂಗಡನೆ ಮತ್ತು ರಾಜ್ಯದೊಳಗೆ ವಿಧಾನಸಭೆ ಕ್ಷೇತ್ರಗಳ ಪುನರ್‍ವಿಂಗಡನೆಯಾಯಿತು ಆದರೆ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಿಲ್ಲ.

ಒಂದುವೇಳೆ, ಈಗ 2019ರಲ್ಲಿ ಜನಗಣತಿಯ (2011ರ) ಆಧಾರದ ಮೇಲೆ ಕ್ಷೇತ್ರವಿಂಗಡನೆಯಾದಲ್ಲಿ ಅತ್ಯಂತ ಹೆಚ್ಚು ಕ್ಷೇತ್ರಗಳನ್ನು ಕಳೆದುಕೊಳ್ಳುವ ರಾಜ್ಯ ತಮಿಳುನಾಡು; 39 ರಿಂದ 29ಕ್ಕೆ ಇಳಿಯುವುದು. ಕರ್ನಾಟಕ ಎರಡು ಕ್ಷೇತ್ರಗಳನ್ನು ಕಳೆದುಕೊಂಡರೆ, ಆಂಧ್ರ ಮತ್ತು ತೆಲಂಗಾಣ ಸೇರಿ 5, ಕೇರಳ ಸಹ 5, ಓರಿಸ್ಸಾ 3  ಕ್ಷೇತ್ರ ಕಳೆದುಕೊಳ್ಳುತ್ತಿದ್ದವು. ಇನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಗುಜರಾತ್ 1 ಕ್ಷೇತ್ರ ಪಡೆದುಕೊಂಡರೆ, ಮಹಾರಾಷ್ಟ್ರ 3, ದೆಹಲಿ 2, ಹರಿಯಾಣ 2, ಮಧ್ಯಪ್ರದೇಶ 3, ರಾಜಸ್ಥಾನ 6, ಬಿಹಾರ 4 ಹಾಗೂ ಉತ್ತರಪ್ರದೇಶ ಅತ್ಯಂತ ಹೆಚ್ಚು 13 ಹೆಚ್ಚುವರಿ ಕ್ಷೇತ್ರಗಳನ್ನು ಪಡೆದುಕೊಳ್ಳಲಿದೆ. ಅಂದರೆ 80 ಇರುವ ಉತ್ತರ ಪ್ರದೇಶದ ಸೀಟುಗಳು 93ಕ್ಕೆ ಏರಿಕೆಯಾಗಲಿವೆ. ಸಹಜವಾಗಿಯೇ ಅದಕ್ಕೆ ರಾಜಕೀಯ ಬೇಡಿಕೆ, ಮನ್ನಣೆಗಳೂ ಹೆಚ್ಚಾಗಲಿವೆ.

ಆದರೆ ಈಗ ಎರಡನೇ 25 ವರ್ಷದ ಫ್ರೀಜ್ ಅವಧಿಯೂ ಮುಗಿಯುತ್ತ ಬಂದಿದೆ. 2021ರ ಜನಗಣತಿಯ ಆಧಾರದ ಮೇಲೆ 2026ರಲ್ಲಿ ಕ್ಷೇತ್ರಗಳ ಪುನರ್‍ವಿಂಗಡನೆಯಾಗಬೇಕಿದೆ. ಹಾಗೆ ಆದಲ್ಲಿ ದಕ್ಷಿಣದ ರಾಜ್ಯಗಳಿಗೆ ಆಘಾತ ಕಾದಿದೆ. ಹಾಗಾಗಿ ಜನಗಣತಿ ಆಧಾರದ ಮೇಲೆ ಕ್ಷೇತ್ರಗಳನ್ನು ವಿಂಗಡಿಸುವುದನ್ನು ಶಾಶ್ವತವಾಗಿ ಕೈಬಿಡಬೇಕು ಎನ್ನುವ ಬೇಡಿಕೆಯೂ ಇದೆ. ಅಮೇರಿಕದಲ್ಲಿ ಭಾರತಕ್ಕಿಂತ ಭಿನ್ನವಾಗಿ ಅಧ್ಯಕ್ಷೀಯ ಪದ್ಧತಿಯ ಚುನಾವಣೆ ಇದ್ದರೂ ಅಲ್ಲಿಯೂ ಈ ಸಮಸ್ಯೆ ಇದ್ದೇ ಇದೆ. ಕಳೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್‍ಗಿಂತ ಹಿಲರಿ ಕ್ಲಿಂಟನ್ ಹೆಚ್ಚು ಮತಗಳನ್ನು ಪಡೆದರೂ ಡೊನಾಲ್ಡ್ ಟ್ರಂಪ್ ಅಮೇರಿಕದ ಅಧ್ಯಕ್ಷರಾಗಿ ಚುನಾಯಿತರಾಗಿದ್ದನ್ನು ಗಮನಿಸಬಹುದು.

ಇನ್ನು ಆಯಾ ಪ್ರದೇಶದ ಜನಸಂಖ್ಯೆ ನಿಯಂತ್ರಣವಾಗುವದು ಆಯಾ ರಾಜ್ಯಗಳು ಕೈಗೊಂಡ ಜನಸಂಖ್ಯಾ ನಿಯಂತ್ರಣ ಕ್ರಮಗಳಿಂದ ಮಾತ್ರವೇ ಅಲ್ಲ ಎನ್ನುವುದನ್ನು ನೆನಪಲ್ಲಿಡಬೇಕಿದೆ. ಒಂದು ಪ್ರದೇಶ ಅಭಿವೃದ್ಧಿ ಹೊಂದಿದಾಗ, ಅಲ್ಲಿ ಶಿಕ್ಷಣದ, ಉದ್ಯೋಗದ ಮತ್ತು ಜೀವನಸ್ತರದಲ್ಲಿ ಅಭಿವೃದ್ಧಿ ಕಂಡುಬಂದಾಗ ಜನಸಂಖ್ಯೆ ನಿಯಂತ್ರಣ ತಾನಾಗಿಯೇ ಆಗುತ್ತದೆ.  ಅಭಿವೃದ್ಧಿ ಪಡೆದುಕೊಂಡ ತಪ್ಪಿಗೆ ಲೋಕಸಭೆಯಲ್ಲಿ ಕ್ಷೇತ್ರಗಳನ್ನು ಕಳೆದುಕೊಳ್ಳುವ ಶಿಕ್ಷೆ ಅನುಭವಿಸಬೇಕಾಗುತ್ತೆ ಎನ್ನುವ ಕಾರಣಕ್ಕಾಗಿ ಈ ಕ್ಷೇತ್ರವಿಂಗಡನೆಯ ಯೋಜನೆಯನ್ನು ಶಾಶ್ವತವಾಗಿ ಕೈಬಿಡಬೇಕೆನ್ನುವುದು ಹಲವರ ವಾದ. ಇನ್ನೊಂದು ವಾದವೇನೆಂದರೆ, ಲಕ್ಷದ್ವೀಪ ಕ್ಷೇತ್ರದಲ್ಲಿ ಕೇವಲ 47 ಸಾವಿರ ಮತದಾರರಿದ್ದರೆ ಉತ್ತರ ಭಾರತದ ಕೆಲವು ಕ್ಷೇತ್ರಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಅಂದರೆ ಪ್ರತಿ ಸಂಸದ ಪ್ರತಿನಿಧಿಸುವ ಜನರ ಸಂಖ್ಯೆಯಲ್ಲಿ ಏರಿಳಿತವಾಗುತ್ತದೆ. ಹಾಗಿರುವಾಗ ದೇಶದ ಅಧಿಕಾರದ ಚುಕ್ಕಾಣಿ ಯಾರು ಹಿಡಿಯುವರು ಎನ್ನುವ ನಿರ್ಧಾರದಲ್ಲಿ ಲಕ್ಷದ್ವೀಪದ ಒಬ್ಬ ಮತದಾರನ ತೂಕ ಉತ್ತರದ ಒಬ್ಬ ಮತದಾರನ ತೂಕಕ್ಕಿಂತ ಹೆಚ್ಚಾಗುತ್ತದೆ. ಹಾಗಾಗಿ ಕ್ಷೇತ್ರಗಳ ಪುನರ್‍ವಿಂಗಡನೆ ಆಗಲೇಬೇಕು ಎನ್ನುವುದು ಮತ್ತಿತರರ ವಾದ.

ಆದರೆ 2026 ಬಹಳ ದೂರವಿಲ್ಲ; ಈಗಿಂದಲೇ ಇದರ ಬಗ್ಗೆ ಚರ್ಚೆ ಪ್ರಾರಂಭವಾದರೆ ಮಾತ್ರ 2026 ತನಕ ಪರಿಹಾರ ಸಿಗಬಹುದು. ಅಥವಾ 2001ರಂತೆ ಇನ್ನೊಮ್ಮೆ ಕ್ಷೇತ್ರವಿಂಗಡನೆಯನ್ನು ಮುಂದೂಡಬಹುದು. ಆದರೆ ಸಾರ್ವಜನಿಕ ಚರ್ಚೆಯಾಗದೇ ಜನಗಣತಿಯ ಆಧಾರದ ಮೇಲೆ ಕ್ರಮ ತೆಗೆದುಕೊಂಡಲ್ಲಿ ದೇಶದಲ್ಲಿ ಬಿಕ್ಕಟ್ಟು ತಪ್ಪಿದ್ದಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...