Homeಅಂಕಣಗಳುಕ್ವಿಟ್ ಎನ್‍ಡಿಎ 2 0 1 9

ಕ್ವಿಟ್ ಎನ್‍ಡಿಎ 2 0 1 9

- Advertisement -
- Advertisement -

ಭಾರತೀಯ ಸಂವಿಧಾನ, ಪ್ರಜಾಸತ್ತೆ ಮತ್ತು ನಾಗರೀಕ ಸಮಾಜಗಳ ರಕ್ಷಣೆಗಾಗಿ ಸೆಪ್ಟೆಂಬರ್ 10ರಂದು ಜರುಗಿದ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿದೆ. ಪ್ರಜಾಪ್ರಭುತ್ವವು ಜಗತ್ತಿನಲ್ಲಿ ಹೊಸ ಜೀವನ ವಿಧಾನವಾಗಿ ಪ್ರಜೆಗಳ ಸಾರ್ವಭೌಮತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶ್ವದೆಲ್ಲೆಡೆ ಉಪಯುಕ್ತವಾಗಿದೆ. ಶ್ರೇಷ್ಠ ಇತಿಹಾಸಕಾರ ಅರ್ನಾಲ್ಡ್ ಟೋಯ್ನ್‍ಬಿ ‘ಬೆದರಿಕೆಯೆಂಬುದು ಮಾನವ ಇತಿಹಾಸದಲ್ಲಿ ಹೊಸದೇನಲ್ಲ. ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸಿ ನಿಂತ ಸಮಾಜ ಮತ್ತು ಸಂಸ್ಕøತಿ ಅತಿಜಯಿಸಿದೆ. ಎದುರಿಸುವಲ್ಲಿ ವಿಫಲವಾದ ಸಮಾಜ ನಾಮಾವಶೇಷವಾಗಿದೆ. ಅಂತಹ ಬೆದರಿಕೆಗಳನ್ನು ಯಶಸ್ವಿಯಾಗಿ ಎದುರಿಸುವುದರ ಹಿಂದಿರುವುದು ಆ ಸಮಾಜದ ಸೃಜನಶೀಲರಾದ ಪ್ರಬುದ್ಧ ವ್ಯಕ್ತಿಗಳಾಗಿರುತ್ತಾರೆ. ಅವರು ತಮ್ಮ ಸಹಜೀವಿಗಳನ್ನು ಸುರಕ್ಷಿತವಾಗಿ ಪ್ರಗತಿಯತ್ತ ಮುನ್ನಡೆಸಿದ್ದಾರೆ’ ಎಂದು ಹೇಳಿರುವುದು ಭಾರತದಲ್ಲಿ ಇಂದು ಸಮಕಾಲೀನ ಮಹತ್ವ ಹೊಂದಿದೆ.
ಜಗತ್ತಿನ ಎಲ್ಲ ಧರ್ಮಗಳೂ ಒಳ್ಳೆಯದನ್ನೇ ಬಯಸು-ಒಳ್ಳೆಯದನ್ನೇ ಮಾಡು ಎಂದು ಬೋಧಿಸುತ್ತವೆ. ಯುದ್ಧ ಮತ್ತು ವಿನಾಶದೆಡೆಗೆ ಸಾಗುತ್ತಿರುವ ಜಗತ್ತನ್ನು ಪಾರು ಮಾಡುವಲ್ಲಿ ಇಂದು ಸಂಕಷ್ಟ ಅನುಭವಿಸುವವರ ವಿಮೋಚನೆಗಾಗಿ ಸಕ್ರಿಯರಾದ ಪ್ರಜ್ಞಾವಂತರು ಮತ್ತು ಮಾನವೀಯತೆಗೆ ಬದ್ಧರಾದ ಒಂದು ಪಡೆ ಕಾರ್ಯಶೀಲರಾಗಬೇಕೆಂಬುದು ಕುರ್‍ಆನ್‍ನ ಕರೆಯೂ ಆಗಿದೆ. ಬುದ್ಧ, ಬಸವ, ಸೂಫಿ ಸಂತರು ಮತ್ತು ಎಲ್ಲ ಮಾನವತಾವಾದಿಗಳು ‘ನಿಮ್ಮ ಸ್ವಾರ್ಥವನ್ನು ಕೊಂದು ಸಮಾಜವನ್ನು ಉಳಿಸಿ ಮತ್ತು ಬೆಳೆಸಿ’ ಎಂಬ ಸಂದೇಶವನ್ನು ನೀಡಿದ್ದಾರೆ. ಸತ್ತ ಮೇಲೆ ದೇವರು ಮತ್ತು ಪ್ರಕೃತಿಯ ಮಡಿಲಲ್ಲಿ ಒಂದಾಗುವ ಮನುಷ್ಯರು ಬದುಕಿರುವಾಗಲೂ ಕೂಡ ಕೂಡಿ ಬಾಳಿದರೆ ಶ್ರೇಷ್ಠ ಸಂಸ್ಕøತಿ ಮತ್ತು ನಾಗರೀಕತೆಗಳು ರೂಪುಗೊಳ್ಳುತ್ತವೆ. ಅಲ್ಲಮಪ್ರಭುವಿನ ‘ನಾನು ನಾನಲ್ಲ, ದೇವರು-ಪ್ರಕೃತಿಯೇ ಎಲ್ಲ’ ಎಂಬ ಮಾತುಗಳು ಇಂದು ನಮ್ಮನ್ನು ಆಳುತ್ತಿರುವವರಿಗೆ ಸರಿಯಾಗಿ ಅರ್ಥವಾದರೆ ಸ್ವಾರ್ಥಪರತೆ, ಮೂಲಭೂತವಾದ, ಭ್ರಷ್ಟಾಚಾರ, ಬೆದರಿಕೆ ಮೊದಲಾದ ಅನಿಷ್ಟಗಳನ್ನು ಮೀರಿ ಮಾನವೀಯತೆಯೆಡೆಗೆ ಜಗತ್ತನ್ನು ಮುನ್ನಡೆಸಲು ಸಾಧ್ಯವಾಗುತ್ತದೆ.
ಭಾರತೀಯ ಸಂಸ್ಕøತಿ ಹಲವಾರು ಸಂಕೀರ್ಣತೆಗಳು ಮತ್ತು ಸವಾಲುಗಳ ನಡುವೆಯೂ ತನ್ನ ನೈಜತೆ ಮತ್ತು ಶ್ರೇಷ್ಠತೆಗಳನ್ನು ಉಳಿಸಿಕೊಂಡು ಹೋಗಲು ಬುದ್ಧ, ಮಹಾವೀರ, ಬಸವ, ಫುಲೆ, ರಾಮಾನುಜ, ಕಬೀರ, ದಯಾನಂದ ಸರಸ್ವತಿ, ರಾಜಾರಾಮ ಮೋಹನ್ ರಾಯ್, ಈಶ್ವರ ಚಂದ್ರ ವಿದ್ಯಾಸಾಗರ್, ಲಾಲಾ ಲಜಪತರಾಯ್, ಬಿಪಿನ್ ಚಂದ್ರಪಾಲ್, ಬಾಲಗಂಗಾಧರ ತಿಲಕ್, ಮೋತಿಲಾಲ್ ನೆಹರು, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ಪಂಡಿತ್ ನೆಹರು, ಅಂಬೇಡ್ಕರ್, ಪೆರಿಯಾರ್, ಲೋಹಿಯಾ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಶಿಕ್ಷಣ ಸಂತ ಕುವೆಂಪು ಮೊದಲಾದ ಮಹನೀಯರು ನಡೆಸಿದ ಸಾಮಾಜಿಕ ಸುಧಾರಣೆ ಕಾರ್ಯಗಳು ಪ್ರಮುಖ ಕಾರಣವಾಗಿವೆ. ಇಂತಹ ಮಹಾ ಸಂತರು ಮತ್ತು ಸಾಧಕರು ಕಟ್ಟಿ ಬೆಳೆಸಿರುವ ಭಾರತೀಯ ಸಂಸ್ಕøತಿಯನ್ನು ನಾಶಪಡಿಸಿ ಅರಾಜಕತೆ ಸೃಷ್ಟಿ ಮಾಡುವ ಕೆಲಸವನ್ನು ಜಾಗತಿಕವಾಗಿ ಮಾರುಕಟ್ಟೆ ಶಕ್ತಿಗಳು ಮತ್ತು ಸ್ಥಳೀಯವಾಗಿ ಹಿಂದುತ್ವವಾದಿಗಳು ನಡೆಸುತ್ತಿರುವುದನ್ನು ಪ್ರಜ್ಞಾವಂತರು ತಡೆಯಲೇ ಬೇಕಿದೆ. ಮೊನ್ನೆ ನಡೆದ ಭಾರತ್ ಬಂದ್ ಕೇವಲ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಲಷ್ಟೇ ಸೀಮಿತಗೊಂಡಿಲ್ಲ. ಇದು ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆಗೆ ಬದ್ಧವಾದ ವಿಶಾಲ ಕಾರ್ಯಸೂಚಿಯನ್ನು ಆಧರಿಸಿದೆ.
ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ-2 ಸರ್ಕಾರ ಕಾಂಗ್ರೆಸ್ ಪಕ್ಷದೊಳಗಿನ ಕುಟುಂಬ ರಾಜಕಾರಣ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಸ್ವಾರ್ಥಪರತೆಯಿಂದಾಗಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ನೀಡಲು ವಿಫಲವಾಯಿತು. ದೇಶದ ಜನರಿಗೆ ಬದಲಾವಣೆ ಅನಿವಾರ್ಯವಾಗಿತ್ತು. ಕುರುಡುಗಣ್ಣಿನವನಿಗಿಂತ ಮೆಳ್ಳಗಣ್ಣಿನವನು (ಸುಮಾರಾಗಿ ನೋಡುವವನು) ಎಷ್ಟೋ ವಾಸಿಯೆಂಬ ಅರಿವಿಗೆ ಜನರು ಶರಣಾಗಿದ್ದರು. ಇಂತಹ ಮೆಳ್ಳಗಣ್ಣಿನವರ ನಾಯಕನಾಗಿ ನರೇಂದ್ರ ಮೋದಿ 2014ರಲ್ಲಿ ಹಲವಾರು ಹುಸಿ ಭರವಸೆಗಳನ್ನು ಜನರಿಗೆ ನೀಡಿ ಅಧಿಕಾರ ಚುಕ್ಕಾಣಿಯನ್ನು ಹಿಡಿದರು.
ಅಂದು ಪಂಡಿತ್ ಜವಾಹರಲಾಲ್ ನೆಹರು ಸಾರ್ವಜನಿಕ ಸಂಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭೂಮಿ, ಬಂಡವಾಳ, ಉದ್ಯೋಗ, ಲಾಭ ಎಲ್ಲವೂ ದೇಶದ ಸ್ವತ್ತಾಗಿ ಉಳಿಯುವಂತೆ ನೋಡಿಕೊಂಡಿದ್ದರು. ಇಂದು ಮೋದಿಜಿ ಖಾಸಗೀಕರಣವನ್ನು ಉತ್ತೇಜಿಸಿ ಶ್ರೀಮಂತರು ಮಾತ್ರ ಪ್ರಕಾಶಿಸುವಂತೆ ನೋಡಿಕೊಂಡರು. ಕೋಟ್ಯಾಂತರ ವಿದ್ಯಾವಂತ ಯುವಜನರು ಆತ್ಮಹತ್ಯೆಯೆಡೆಗೆ ಮುಖ ಮಾಡುವಂತಹ ದುಸ್ಥಿತಿಯನ್ನು ಇವರು ಸೃಷ್ಟಿಸಿದರು. ನೆಹರೂರವರ ಮಗಳು ಇಂದಿರಾಜಿ ಬ್ಯಾಂಕುಗಳ ರಾಷ್ಟ್ರೀಕರಣ, ಭೂಸುಧಾರಣೆ, 20 ಅಂಶಗಳ ಕಾರ್ಯಕ್ರಮ, ಕನಿಷ್ಟ ಅಗತ್ಯಗಳ ಪೂರೈಕೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮೊದಲಾದವುಗಳ ಮೂಲಕ ದೇಶದ ಜನರಿಗೆ ಒಳ್ಳೆಯದನ್ನು ಮಾಡಿ ‘ಗರೀಬಿ ಹಟಾವೋ’ (ಬಡತನ ನಿರ್ಮೂಲನೆ) ದಿಕ್ಕಿನಲ್ಲಿ ದಿಟ್ಟತನದಿಂದ ಸಾಗಿದರೆ ಮೋದಿಜಿ ಖಾಸಗೀಕರಣದ ಮೂಲಕ ಮೀಸಲಾತಿ ಮತ್ತು ಉದ್ಯೋಗ ಸೌಲಭ್ಯಗಳನ್ನು ಕಿತ್ತುಕೊಂಡು ‘ಗರೀಭೋಂಕೊ ಹಟಾವೋ’ (ಬಡವರ ನಿರ್ಮೂಲನೆ) ಮಾಡುತ್ತಿರುವುದು ಸರಿಯಲ್ಲ.
ಹೆಸರಾಂತ ಇತಿಹಾಸಕಾರರಾದ ರೊಮಿಲಾ ಥಾಪರ್ ‘ಒಂದು ದೇಶದ ಅಭಿವೃದ್ಧಿ ಪ್ರಧಾನಿಯಾದವರ ವಿಶಾಲ ಎದೆ ಅಳತೆಯನ್ನು ಅವಲಂಬಿಸಿಲ್ಲ, ವಿಶಾಲ ಹೃದಯ ಮತ್ತು ಸಮಷ್ಟಿ ಪ್ರಜ್ಞೆಗಳನ್ನು ಆಧರಿಸಿದ ದೇಶ ಸೇವೆಯನ್ನು ಅವಲಂಬಿಸಿದೆ’ ಎಂದು ಹೇಳಿರುವ ಮಾತುಗಳು ಮೋದಿಯವರಿಗೆ ಆತ್ಮಾವಲೋಕನಕ್ಕೆ ಎಡೆಮಾಡಿಕೊಡಬೇಕು.
ದೇಶದ ಜನರನ್ನು ಅವನತಿಯೆಡೆಗೆ ಕೊಂಡೊಯ್ಯುತ್ತಿರುವ ‘ರಾಷ್ಟ್ರೀಯ ವಿದ್ವಂಸಕರ ಕೂಟ’ ಮೋದಿ ನೇತೃತ್ವದಲ್ಲಿ ಇಂದು ವಿಜೃಂಭಿಸುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಸಂವಿಧಾನದ ಹೆಸರಿನಲ್ಲಿ ಮಂತ್ರಿಯಾದ ಮತ್ತೊಬ್ಬ ಹುಂಬ ‘ಸಂವಿಧಾನವನ್ನು ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ’ ಎಂದು ಹೇಳಿ ಜನರಿಂದ ಉಗಿಸಿಕೊಂಡಿರುವ ಸಂಗತಿ ಇನ್ನೂ ನೆನಪಿನಲ್ಲಿದೆ. ಗೋಡ್ಸೆಗಿಂತ ಮೊದಲೇ ಹುಟ್ಟಿದ್ದರೆ ನಾನೇ ಗಾಂಧಿಯನ್ನು ಕೊಲ್ಲುತ್ತಿದ್ದೆ’ ಎಂದು ಇನ್ನೊಬ್ಬ ಹಿಂದುತ್ವವಾದಿ ಪುಂಡ ಹೆಂಗಸು ಹೇಳಿರುವುದನ್ನು ಖಂಡಿಸಿ ಜೈಲಿಗೆ ಹಾಕುವುದರ ಬದಲು ಮೋದಿ ಮತ್ತು ಬಳಗ ಮೌನವಾಗಿ ರಕ್ಷಿಸುತ್ತಿರುವುದು ದೇಶದ್ರೋಹಿಗಳ ಪಡೆ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಮ್ಮನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿರುವ ಸಂಕೇತವಾಗಿದೆ.
ಮೊನ್ನೆ ನಡೆದ ಭಾರತ್ ಬಂದ್ ‘ಸರ್ಕಾರಿ ಪ್ರಾಯೋಜಿತ ಬಂದ್’ ಎಂದು ಹೇಳಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿ ಕೊಡಗಿನ ನೊಂದವರಿಗೆ ಆರ್ಥಿಕ ನೆರವು ಕೇಳಲು ಹೋದಾಗ ಬೇಕಂತಲೇ ತಪ್ಪಿಸಿಕೊಂಡ ಈ ಭಾಗದ ಸಂಸದನಿಗೆ ಹೃದಯವಂತಿಕೆಯೂ ಇಲ್ಲ, ಎದೆಗಾರಿಕೆ ಇಲ್ಲವೇ ಇಲ್ಲ ಎಂಬ ಸತ್ಯ ನಮಗೆ ಮನವರಿಕೆಯಾಗಿದೆ. ಈತನಿಗೆ ಮುಂದಿನ ಮಹಾಚುನಾವಣೆಯಲ್ಲಿ ಮತದಾರ ಬಂಧುಗಳು ಗೇಟ್ ಪಾಸ್ ನೀಡುವುದು ಅನಿವಾರ್ಯವಾಗಿದೆ. ‘ಕೋಮುವಾದಿ ಬಿಜೆಪಿಯಿಂದ ದೇಶವನ್ನು ರಕ್ಷಿಸಬೇಕೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೇಳಿರುವ ಮಾತುಗಳು ಇಂದು ಪ್ರಗತಿಪರರು ಮತ್ತು ಜಾತ್ಯಾತೀತರಿಗೆ ಅರ್ಥವಾಗಬೇಕಿದೆ. ತುರ್ತು ಪರಿಸ್ಥಿತಿ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ರಾಜನೀತಿಯನ್ನು ಉಗ್ರವಾಗಿ ವಿರೋಧಿಸಿದ ಶೋಷಿತರ ಧ್ವನಿ ದೇವನೂರು ಮಹಾದೇವ ‘ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು, ಕಮ್ಯುನಿಷ್ಟ್‍ರು, ರೈತ ಸಂಘಟನೆಗಳು, ದಲಿತ ಸಂಘಟನೆಗಳು ಮೊದಲಾದ ಬಿಜೆಪಿಯೇತರ ಬಣಗಳನ್ನು ಬೆಂಬಲಿಸುವುದು ಬಹುಸಂಸ್ಕøತಿ ಮತ್ತು ಬಹುಜನರ ರಕ್ಷಣೆಗೆ ಅನಿವಾರ್ಯ’ ಎಂದು ಹೇಳಿರುವ ಮಾತುಗಳನ್ನು ನಾವು ಒಪ್ಪಲೇಬೇಕು.
ಇತ್ತೀಚೆಗೆ ಮೋದಿ ಬಳಗ ‘ನಯಿ ಭಾರತ್’ (ಹೊಸ ಭಾರತ) ನಿರ್ಮಿಸುವುದು ನಮ್ಮ ಗುರಿ ಎಂದು ಹೇಳುತ್ತಿದೆ. ಪ್ರಕೃತಿ ಮತ್ತು ಮಾನವೀಯತೆಗಳನ್ನು ನಿರ್ಲಕ್ಷಿಸಿದ ಫಲವಾಗಿ ಕೊಡಗು, ಕೇರಳ, ಉತ್ತರ ಭಾರತ, ಈಶಾನ್ಯ ಭಾರತ ಮೊದಲಾದೆಡೆ ಪ್ರವಾಹ ಉಂಟಾಗಿ ಭಾರತವೇ ಮುಳುಗುವ ಸ್ಥಿತಿ ನಿರ್ಮಾಣವಾಗಿದೆ. ಮೋದಿ ಬಳಗ ತನ್ನ ಸಂವಿಧಾನ ವಿರೋಧಿ, ಪ್ರಜಾಸತ್ತೆ ವಿರೋಧಿ, ಮಾನವ ವಿರೋಧಿ, ಪ್ರಕೃತಿ ವಿರೋಧಿ ಹಾಗೂ ಸಾಮಾಜಿಕ ನ್ಯಾಯ ವಿರೋಧಿ ಧೋರಣೆಗಳು ಮತ್ತು ನಡವಳಿಕೆಗಳಿಂದ ‘ನೋ ಭಾರತ್’ ದಿಕ್ಕಿನತ್ತ ದೇಶವನ್ನು ಕೊಂಡೊಯ್ಯುತ್ತಿದೆ. ಅಂದು ಗಾಂಧಿ ಬ್ರಿಟೀಷರನ್ನು ದೇಶದಿಂದ ತೊಲಗಿಸಲು ‘ಕ್ವಿಟ್ ಇಂಡಿಯಾ ಚಳುವಳಿ’ಯನ್ನು 1942ರಲ್ಲಿ ನಡೆಸಿದ ರೀತಿಯಲ್ಲೇ 2019ರಲ್ಲಿ ‘ಕ್ವಿಟ್ ಎನ್‍ಡಿಎ’ ಚಳುವಳಿಯನ್ನು ನಡೆಸಿ ಭಾರತ ಮುಳುಗುವುದನ್ನು ತಪ್ಪಿಸಬೇಕಾದ ಸಾಮಾಜಿಕ ಜವಾಬ್ದಾರಿಯನ್ನು ಪ್ರಗತಿಪರರು, ಜಾತ್ಯಾತೀತರು, ಮಾನವತಾವಾದಿಗಳು ಮತ್ತು ಪ್ರಜಾಪ್ರಭುತ್ವವಾದಿಗಳು ನಿರ್ವಹಿಸಲೇಬೇಕಿದೆ.

– ಡಾ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...