Homeಅಂಕಣಗಳುಕ್ವಿಟ್ ಎನ್‍ಡಿಎ 2 0 1 9

ಕ್ವಿಟ್ ಎನ್‍ಡಿಎ 2 0 1 9

- Advertisement -
- Advertisement -

ಭಾರತೀಯ ಸಂವಿಧಾನ, ಪ್ರಜಾಸತ್ತೆ ಮತ್ತು ನಾಗರೀಕ ಸಮಾಜಗಳ ರಕ್ಷಣೆಗಾಗಿ ಸೆಪ್ಟೆಂಬರ್ 10ರಂದು ಜರುಗಿದ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿದೆ. ಪ್ರಜಾಪ್ರಭುತ್ವವು ಜಗತ್ತಿನಲ್ಲಿ ಹೊಸ ಜೀವನ ವಿಧಾನವಾಗಿ ಪ್ರಜೆಗಳ ಸಾರ್ವಭೌಮತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶ್ವದೆಲ್ಲೆಡೆ ಉಪಯುಕ್ತವಾಗಿದೆ. ಶ್ರೇಷ್ಠ ಇತಿಹಾಸಕಾರ ಅರ್ನಾಲ್ಡ್ ಟೋಯ್ನ್‍ಬಿ ‘ಬೆದರಿಕೆಯೆಂಬುದು ಮಾನವ ಇತಿಹಾಸದಲ್ಲಿ ಹೊಸದೇನಲ್ಲ. ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸಿ ನಿಂತ ಸಮಾಜ ಮತ್ತು ಸಂಸ್ಕøತಿ ಅತಿಜಯಿಸಿದೆ. ಎದುರಿಸುವಲ್ಲಿ ವಿಫಲವಾದ ಸಮಾಜ ನಾಮಾವಶೇಷವಾಗಿದೆ. ಅಂತಹ ಬೆದರಿಕೆಗಳನ್ನು ಯಶಸ್ವಿಯಾಗಿ ಎದುರಿಸುವುದರ ಹಿಂದಿರುವುದು ಆ ಸಮಾಜದ ಸೃಜನಶೀಲರಾದ ಪ್ರಬುದ್ಧ ವ್ಯಕ್ತಿಗಳಾಗಿರುತ್ತಾರೆ. ಅವರು ತಮ್ಮ ಸಹಜೀವಿಗಳನ್ನು ಸುರಕ್ಷಿತವಾಗಿ ಪ್ರಗತಿಯತ್ತ ಮುನ್ನಡೆಸಿದ್ದಾರೆ’ ಎಂದು ಹೇಳಿರುವುದು ಭಾರತದಲ್ಲಿ ಇಂದು ಸಮಕಾಲೀನ ಮಹತ್ವ ಹೊಂದಿದೆ.
ಜಗತ್ತಿನ ಎಲ್ಲ ಧರ್ಮಗಳೂ ಒಳ್ಳೆಯದನ್ನೇ ಬಯಸು-ಒಳ್ಳೆಯದನ್ನೇ ಮಾಡು ಎಂದು ಬೋಧಿಸುತ್ತವೆ. ಯುದ್ಧ ಮತ್ತು ವಿನಾಶದೆಡೆಗೆ ಸಾಗುತ್ತಿರುವ ಜಗತ್ತನ್ನು ಪಾರು ಮಾಡುವಲ್ಲಿ ಇಂದು ಸಂಕಷ್ಟ ಅನುಭವಿಸುವವರ ವಿಮೋಚನೆಗಾಗಿ ಸಕ್ರಿಯರಾದ ಪ್ರಜ್ಞಾವಂತರು ಮತ್ತು ಮಾನವೀಯತೆಗೆ ಬದ್ಧರಾದ ಒಂದು ಪಡೆ ಕಾರ್ಯಶೀಲರಾಗಬೇಕೆಂಬುದು ಕುರ್‍ಆನ್‍ನ ಕರೆಯೂ ಆಗಿದೆ. ಬುದ್ಧ, ಬಸವ, ಸೂಫಿ ಸಂತರು ಮತ್ತು ಎಲ್ಲ ಮಾನವತಾವಾದಿಗಳು ‘ನಿಮ್ಮ ಸ್ವಾರ್ಥವನ್ನು ಕೊಂದು ಸಮಾಜವನ್ನು ಉಳಿಸಿ ಮತ್ತು ಬೆಳೆಸಿ’ ಎಂಬ ಸಂದೇಶವನ್ನು ನೀಡಿದ್ದಾರೆ. ಸತ್ತ ಮೇಲೆ ದೇವರು ಮತ್ತು ಪ್ರಕೃತಿಯ ಮಡಿಲಲ್ಲಿ ಒಂದಾಗುವ ಮನುಷ್ಯರು ಬದುಕಿರುವಾಗಲೂ ಕೂಡ ಕೂಡಿ ಬಾಳಿದರೆ ಶ್ರೇಷ್ಠ ಸಂಸ್ಕøತಿ ಮತ್ತು ನಾಗರೀಕತೆಗಳು ರೂಪುಗೊಳ್ಳುತ್ತವೆ. ಅಲ್ಲಮಪ್ರಭುವಿನ ‘ನಾನು ನಾನಲ್ಲ, ದೇವರು-ಪ್ರಕೃತಿಯೇ ಎಲ್ಲ’ ಎಂಬ ಮಾತುಗಳು ಇಂದು ನಮ್ಮನ್ನು ಆಳುತ್ತಿರುವವರಿಗೆ ಸರಿಯಾಗಿ ಅರ್ಥವಾದರೆ ಸ್ವಾರ್ಥಪರತೆ, ಮೂಲಭೂತವಾದ, ಭ್ರಷ್ಟಾಚಾರ, ಬೆದರಿಕೆ ಮೊದಲಾದ ಅನಿಷ್ಟಗಳನ್ನು ಮೀರಿ ಮಾನವೀಯತೆಯೆಡೆಗೆ ಜಗತ್ತನ್ನು ಮುನ್ನಡೆಸಲು ಸಾಧ್ಯವಾಗುತ್ತದೆ.
ಭಾರತೀಯ ಸಂಸ್ಕøತಿ ಹಲವಾರು ಸಂಕೀರ್ಣತೆಗಳು ಮತ್ತು ಸವಾಲುಗಳ ನಡುವೆಯೂ ತನ್ನ ನೈಜತೆ ಮತ್ತು ಶ್ರೇಷ್ಠತೆಗಳನ್ನು ಉಳಿಸಿಕೊಂಡು ಹೋಗಲು ಬುದ್ಧ, ಮಹಾವೀರ, ಬಸವ, ಫುಲೆ, ರಾಮಾನುಜ, ಕಬೀರ, ದಯಾನಂದ ಸರಸ್ವತಿ, ರಾಜಾರಾಮ ಮೋಹನ್ ರಾಯ್, ಈಶ್ವರ ಚಂದ್ರ ವಿದ್ಯಾಸಾಗರ್, ಲಾಲಾ ಲಜಪತರಾಯ್, ಬಿಪಿನ್ ಚಂದ್ರಪಾಲ್, ಬಾಲಗಂಗಾಧರ ತಿಲಕ್, ಮೋತಿಲಾಲ್ ನೆಹರು, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ಪಂಡಿತ್ ನೆಹರು, ಅಂಬೇಡ್ಕರ್, ಪೆರಿಯಾರ್, ಲೋಹಿಯಾ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಶಿಕ್ಷಣ ಸಂತ ಕುವೆಂಪು ಮೊದಲಾದ ಮಹನೀಯರು ನಡೆಸಿದ ಸಾಮಾಜಿಕ ಸುಧಾರಣೆ ಕಾರ್ಯಗಳು ಪ್ರಮುಖ ಕಾರಣವಾಗಿವೆ. ಇಂತಹ ಮಹಾ ಸಂತರು ಮತ್ತು ಸಾಧಕರು ಕಟ್ಟಿ ಬೆಳೆಸಿರುವ ಭಾರತೀಯ ಸಂಸ್ಕøತಿಯನ್ನು ನಾಶಪಡಿಸಿ ಅರಾಜಕತೆ ಸೃಷ್ಟಿ ಮಾಡುವ ಕೆಲಸವನ್ನು ಜಾಗತಿಕವಾಗಿ ಮಾರುಕಟ್ಟೆ ಶಕ್ತಿಗಳು ಮತ್ತು ಸ್ಥಳೀಯವಾಗಿ ಹಿಂದುತ್ವವಾದಿಗಳು ನಡೆಸುತ್ತಿರುವುದನ್ನು ಪ್ರಜ್ಞಾವಂತರು ತಡೆಯಲೇ ಬೇಕಿದೆ. ಮೊನ್ನೆ ನಡೆದ ಭಾರತ್ ಬಂದ್ ಕೇವಲ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಲಷ್ಟೇ ಸೀಮಿತಗೊಂಡಿಲ್ಲ. ಇದು ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆಗೆ ಬದ್ಧವಾದ ವಿಶಾಲ ಕಾರ್ಯಸೂಚಿಯನ್ನು ಆಧರಿಸಿದೆ.
ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ-2 ಸರ್ಕಾರ ಕಾಂಗ್ರೆಸ್ ಪಕ್ಷದೊಳಗಿನ ಕುಟುಂಬ ರಾಜಕಾರಣ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಸ್ವಾರ್ಥಪರತೆಯಿಂದಾಗಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ನೀಡಲು ವಿಫಲವಾಯಿತು. ದೇಶದ ಜನರಿಗೆ ಬದಲಾವಣೆ ಅನಿವಾರ್ಯವಾಗಿತ್ತು. ಕುರುಡುಗಣ್ಣಿನವನಿಗಿಂತ ಮೆಳ್ಳಗಣ್ಣಿನವನು (ಸುಮಾರಾಗಿ ನೋಡುವವನು) ಎಷ್ಟೋ ವಾಸಿಯೆಂಬ ಅರಿವಿಗೆ ಜನರು ಶರಣಾಗಿದ್ದರು. ಇಂತಹ ಮೆಳ್ಳಗಣ್ಣಿನವರ ನಾಯಕನಾಗಿ ನರೇಂದ್ರ ಮೋದಿ 2014ರಲ್ಲಿ ಹಲವಾರು ಹುಸಿ ಭರವಸೆಗಳನ್ನು ಜನರಿಗೆ ನೀಡಿ ಅಧಿಕಾರ ಚುಕ್ಕಾಣಿಯನ್ನು ಹಿಡಿದರು.
ಅಂದು ಪಂಡಿತ್ ಜವಾಹರಲಾಲ್ ನೆಹರು ಸಾರ್ವಜನಿಕ ಸಂಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭೂಮಿ, ಬಂಡವಾಳ, ಉದ್ಯೋಗ, ಲಾಭ ಎಲ್ಲವೂ ದೇಶದ ಸ್ವತ್ತಾಗಿ ಉಳಿಯುವಂತೆ ನೋಡಿಕೊಂಡಿದ್ದರು. ಇಂದು ಮೋದಿಜಿ ಖಾಸಗೀಕರಣವನ್ನು ಉತ್ತೇಜಿಸಿ ಶ್ರೀಮಂತರು ಮಾತ್ರ ಪ್ರಕಾಶಿಸುವಂತೆ ನೋಡಿಕೊಂಡರು. ಕೋಟ್ಯಾಂತರ ವಿದ್ಯಾವಂತ ಯುವಜನರು ಆತ್ಮಹತ್ಯೆಯೆಡೆಗೆ ಮುಖ ಮಾಡುವಂತಹ ದುಸ್ಥಿತಿಯನ್ನು ಇವರು ಸೃಷ್ಟಿಸಿದರು. ನೆಹರೂರವರ ಮಗಳು ಇಂದಿರಾಜಿ ಬ್ಯಾಂಕುಗಳ ರಾಷ್ಟ್ರೀಕರಣ, ಭೂಸುಧಾರಣೆ, 20 ಅಂಶಗಳ ಕಾರ್ಯಕ್ರಮ, ಕನಿಷ್ಟ ಅಗತ್ಯಗಳ ಪೂರೈಕೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮೊದಲಾದವುಗಳ ಮೂಲಕ ದೇಶದ ಜನರಿಗೆ ಒಳ್ಳೆಯದನ್ನು ಮಾಡಿ ‘ಗರೀಬಿ ಹಟಾವೋ’ (ಬಡತನ ನಿರ್ಮೂಲನೆ) ದಿಕ್ಕಿನಲ್ಲಿ ದಿಟ್ಟತನದಿಂದ ಸಾಗಿದರೆ ಮೋದಿಜಿ ಖಾಸಗೀಕರಣದ ಮೂಲಕ ಮೀಸಲಾತಿ ಮತ್ತು ಉದ್ಯೋಗ ಸೌಲಭ್ಯಗಳನ್ನು ಕಿತ್ತುಕೊಂಡು ‘ಗರೀಭೋಂಕೊ ಹಟಾವೋ’ (ಬಡವರ ನಿರ್ಮೂಲನೆ) ಮಾಡುತ್ತಿರುವುದು ಸರಿಯಲ್ಲ.
ಹೆಸರಾಂತ ಇತಿಹಾಸಕಾರರಾದ ರೊಮಿಲಾ ಥಾಪರ್ ‘ಒಂದು ದೇಶದ ಅಭಿವೃದ್ಧಿ ಪ್ರಧಾನಿಯಾದವರ ವಿಶಾಲ ಎದೆ ಅಳತೆಯನ್ನು ಅವಲಂಬಿಸಿಲ್ಲ, ವಿಶಾಲ ಹೃದಯ ಮತ್ತು ಸಮಷ್ಟಿ ಪ್ರಜ್ಞೆಗಳನ್ನು ಆಧರಿಸಿದ ದೇಶ ಸೇವೆಯನ್ನು ಅವಲಂಬಿಸಿದೆ’ ಎಂದು ಹೇಳಿರುವ ಮಾತುಗಳು ಮೋದಿಯವರಿಗೆ ಆತ್ಮಾವಲೋಕನಕ್ಕೆ ಎಡೆಮಾಡಿಕೊಡಬೇಕು.
ದೇಶದ ಜನರನ್ನು ಅವನತಿಯೆಡೆಗೆ ಕೊಂಡೊಯ್ಯುತ್ತಿರುವ ‘ರಾಷ್ಟ್ರೀಯ ವಿದ್ವಂಸಕರ ಕೂಟ’ ಮೋದಿ ನೇತೃತ್ವದಲ್ಲಿ ಇಂದು ವಿಜೃಂಭಿಸುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಸಂವಿಧಾನದ ಹೆಸರಿನಲ್ಲಿ ಮಂತ್ರಿಯಾದ ಮತ್ತೊಬ್ಬ ಹುಂಬ ‘ಸಂವಿಧಾನವನ್ನು ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ’ ಎಂದು ಹೇಳಿ ಜನರಿಂದ ಉಗಿಸಿಕೊಂಡಿರುವ ಸಂಗತಿ ಇನ್ನೂ ನೆನಪಿನಲ್ಲಿದೆ. ಗೋಡ್ಸೆಗಿಂತ ಮೊದಲೇ ಹುಟ್ಟಿದ್ದರೆ ನಾನೇ ಗಾಂಧಿಯನ್ನು ಕೊಲ್ಲುತ್ತಿದ್ದೆ’ ಎಂದು ಇನ್ನೊಬ್ಬ ಹಿಂದುತ್ವವಾದಿ ಪುಂಡ ಹೆಂಗಸು ಹೇಳಿರುವುದನ್ನು ಖಂಡಿಸಿ ಜೈಲಿಗೆ ಹಾಕುವುದರ ಬದಲು ಮೋದಿ ಮತ್ತು ಬಳಗ ಮೌನವಾಗಿ ರಕ್ಷಿಸುತ್ತಿರುವುದು ದೇಶದ್ರೋಹಿಗಳ ಪಡೆ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಮ್ಮನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿರುವ ಸಂಕೇತವಾಗಿದೆ.
ಮೊನ್ನೆ ನಡೆದ ಭಾರತ್ ಬಂದ್ ‘ಸರ್ಕಾರಿ ಪ್ರಾಯೋಜಿತ ಬಂದ್’ ಎಂದು ಹೇಳಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿ ಕೊಡಗಿನ ನೊಂದವರಿಗೆ ಆರ್ಥಿಕ ನೆರವು ಕೇಳಲು ಹೋದಾಗ ಬೇಕಂತಲೇ ತಪ್ಪಿಸಿಕೊಂಡ ಈ ಭಾಗದ ಸಂಸದನಿಗೆ ಹೃದಯವಂತಿಕೆಯೂ ಇಲ್ಲ, ಎದೆಗಾರಿಕೆ ಇಲ್ಲವೇ ಇಲ್ಲ ಎಂಬ ಸತ್ಯ ನಮಗೆ ಮನವರಿಕೆಯಾಗಿದೆ. ಈತನಿಗೆ ಮುಂದಿನ ಮಹಾಚುನಾವಣೆಯಲ್ಲಿ ಮತದಾರ ಬಂಧುಗಳು ಗೇಟ್ ಪಾಸ್ ನೀಡುವುದು ಅನಿವಾರ್ಯವಾಗಿದೆ. ‘ಕೋಮುವಾದಿ ಬಿಜೆಪಿಯಿಂದ ದೇಶವನ್ನು ರಕ್ಷಿಸಬೇಕೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೇಳಿರುವ ಮಾತುಗಳು ಇಂದು ಪ್ರಗತಿಪರರು ಮತ್ತು ಜಾತ್ಯಾತೀತರಿಗೆ ಅರ್ಥವಾಗಬೇಕಿದೆ. ತುರ್ತು ಪರಿಸ್ಥಿತಿ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ರಾಜನೀತಿಯನ್ನು ಉಗ್ರವಾಗಿ ವಿರೋಧಿಸಿದ ಶೋಷಿತರ ಧ್ವನಿ ದೇವನೂರು ಮಹಾದೇವ ‘ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು, ಕಮ್ಯುನಿಷ್ಟ್‍ರು, ರೈತ ಸಂಘಟನೆಗಳು, ದಲಿತ ಸಂಘಟನೆಗಳು ಮೊದಲಾದ ಬಿಜೆಪಿಯೇತರ ಬಣಗಳನ್ನು ಬೆಂಬಲಿಸುವುದು ಬಹುಸಂಸ್ಕøತಿ ಮತ್ತು ಬಹುಜನರ ರಕ್ಷಣೆಗೆ ಅನಿವಾರ್ಯ’ ಎಂದು ಹೇಳಿರುವ ಮಾತುಗಳನ್ನು ನಾವು ಒಪ್ಪಲೇಬೇಕು.
ಇತ್ತೀಚೆಗೆ ಮೋದಿ ಬಳಗ ‘ನಯಿ ಭಾರತ್’ (ಹೊಸ ಭಾರತ) ನಿರ್ಮಿಸುವುದು ನಮ್ಮ ಗುರಿ ಎಂದು ಹೇಳುತ್ತಿದೆ. ಪ್ರಕೃತಿ ಮತ್ತು ಮಾನವೀಯತೆಗಳನ್ನು ನಿರ್ಲಕ್ಷಿಸಿದ ಫಲವಾಗಿ ಕೊಡಗು, ಕೇರಳ, ಉತ್ತರ ಭಾರತ, ಈಶಾನ್ಯ ಭಾರತ ಮೊದಲಾದೆಡೆ ಪ್ರವಾಹ ಉಂಟಾಗಿ ಭಾರತವೇ ಮುಳುಗುವ ಸ್ಥಿತಿ ನಿರ್ಮಾಣವಾಗಿದೆ. ಮೋದಿ ಬಳಗ ತನ್ನ ಸಂವಿಧಾನ ವಿರೋಧಿ, ಪ್ರಜಾಸತ್ತೆ ವಿರೋಧಿ, ಮಾನವ ವಿರೋಧಿ, ಪ್ರಕೃತಿ ವಿರೋಧಿ ಹಾಗೂ ಸಾಮಾಜಿಕ ನ್ಯಾಯ ವಿರೋಧಿ ಧೋರಣೆಗಳು ಮತ್ತು ನಡವಳಿಕೆಗಳಿಂದ ‘ನೋ ಭಾರತ್’ ದಿಕ್ಕಿನತ್ತ ದೇಶವನ್ನು ಕೊಂಡೊಯ್ಯುತ್ತಿದೆ. ಅಂದು ಗಾಂಧಿ ಬ್ರಿಟೀಷರನ್ನು ದೇಶದಿಂದ ತೊಲಗಿಸಲು ‘ಕ್ವಿಟ್ ಇಂಡಿಯಾ ಚಳುವಳಿ’ಯನ್ನು 1942ರಲ್ಲಿ ನಡೆಸಿದ ರೀತಿಯಲ್ಲೇ 2019ರಲ್ಲಿ ‘ಕ್ವಿಟ್ ಎನ್‍ಡಿಎ’ ಚಳುವಳಿಯನ್ನು ನಡೆಸಿ ಭಾರತ ಮುಳುಗುವುದನ್ನು ತಪ್ಪಿಸಬೇಕಾದ ಸಾಮಾಜಿಕ ಜವಾಬ್ದಾರಿಯನ್ನು ಪ್ರಗತಿಪರರು, ಜಾತ್ಯಾತೀತರು, ಮಾನವತಾವಾದಿಗಳು ಮತ್ತು ಪ್ರಜಾಪ್ರಭುತ್ವವಾದಿಗಳು ನಿರ್ವಹಿಸಲೇಬೇಕಿದೆ.

– ಡಾ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...