Homeಅಂಕಣಗಳುಕ್ವಿಟ್ ಎನ್‍ಡಿಎ 2 0 1 9

ಕ್ವಿಟ್ ಎನ್‍ಡಿಎ 2 0 1 9

- Advertisement -
- Advertisement -

ಭಾರತೀಯ ಸಂವಿಧಾನ, ಪ್ರಜಾಸತ್ತೆ ಮತ್ತು ನಾಗರೀಕ ಸಮಾಜಗಳ ರಕ್ಷಣೆಗಾಗಿ ಸೆಪ್ಟೆಂಬರ್ 10ರಂದು ಜರುಗಿದ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿದೆ. ಪ್ರಜಾಪ್ರಭುತ್ವವು ಜಗತ್ತಿನಲ್ಲಿ ಹೊಸ ಜೀವನ ವಿಧಾನವಾಗಿ ಪ್ರಜೆಗಳ ಸಾರ್ವಭೌಮತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶ್ವದೆಲ್ಲೆಡೆ ಉಪಯುಕ್ತವಾಗಿದೆ. ಶ್ರೇಷ್ಠ ಇತಿಹಾಸಕಾರ ಅರ್ನಾಲ್ಡ್ ಟೋಯ್ನ್‍ಬಿ ‘ಬೆದರಿಕೆಯೆಂಬುದು ಮಾನವ ಇತಿಹಾಸದಲ್ಲಿ ಹೊಸದೇನಲ್ಲ. ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸಿ ನಿಂತ ಸಮಾಜ ಮತ್ತು ಸಂಸ್ಕøತಿ ಅತಿಜಯಿಸಿದೆ. ಎದುರಿಸುವಲ್ಲಿ ವಿಫಲವಾದ ಸಮಾಜ ನಾಮಾವಶೇಷವಾಗಿದೆ. ಅಂತಹ ಬೆದರಿಕೆಗಳನ್ನು ಯಶಸ್ವಿಯಾಗಿ ಎದುರಿಸುವುದರ ಹಿಂದಿರುವುದು ಆ ಸಮಾಜದ ಸೃಜನಶೀಲರಾದ ಪ್ರಬುದ್ಧ ವ್ಯಕ್ತಿಗಳಾಗಿರುತ್ತಾರೆ. ಅವರು ತಮ್ಮ ಸಹಜೀವಿಗಳನ್ನು ಸುರಕ್ಷಿತವಾಗಿ ಪ್ರಗತಿಯತ್ತ ಮುನ್ನಡೆಸಿದ್ದಾರೆ’ ಎಂದು ಹೇಳಿರುವುದು ಭಾರತದಲ್ಲಿ ಇಂದು ಸಮಕಾಲೀನ ಮಹತ್ವ ಹೊಂದಿದೆ.
ಜಗತ್ತಿನ ಎಲ್ಲ ಧರ್ಮಗಳೂ ಒಳ್ಳೆಯದನ್ನೇ ಬಯಸು-ಒಳ್ಳೆಯದನ್ನೇ ಮಾಡು ಎಂದು ಬೋಧಿಸುತ್ತವೆ. ಯುದ್ಧ ಮತ್ತು ವಿನಾಶದೆಡೆಗೆ ಸಾಗುತ್ತಿರುವ ಜಗತ್ತನ್ನು ಪಾರು ಮಾಡುವಲ್ಲಿ ಇಂದು ಸಂಕಷ್ಟ ಅನುಭವಿಸುವವರ ವಿಮೋಚನೆಗಾಗಿ ಸಕ್ರಿಯರಾದ ಪ್ರಜ್ಞಾವಂತರು ಮತ್ತು ಮಾನವೀಯತೆಗೆ ಬದ್ಧರಾದ ಒಂದು ಪಡೆ ಕಾರ್ಯಶೀಲರಾಗಬೇಕೆಂಬುದು ಕುರ್‍ಆನ್‍ನ ಕರೆಯೂ ಆಗಿದೆ. ಬುದ್ಧ, ಬಸವ, ಸೂಫಿ ಸಂತರು ಮತ್ತು ಎಲ್ಲ ಮಾನವತಾವಾದಿಗಳು ‘ನಿಮ್ಮ ಸ್ವಾರ್ಥವನ್ನು ಕೊಂದು ಸಮಾಜವನ್ನು ಉಳಿಸಿ ಮತ್ತು ಬೆಳೆಸಿ’ ಎಂಬ ಸಂದೇಶವನ್ನು ನೀಡಿದ್ದಾರೆ. ಸತ್ತ ಮೇಲೆ ದೇವರು ಮತ್ತು ಪ್ರಕೃತಿಯ ಮಡಿಲಲ್ಲಿ ಒಂದಾಗುವ ಮನುಷ್ಯರು ಬದುಕಿರುವಾಗಲೂ ಕೂಡ ಕೂಡಿ ಬಾಳಿದರೆ ಶ್ರೇಷ್ಠ ಸಂಸ್ಕøತಿ ಮತ್ತು ನಾಗರೀಕತೆಗಳು ರೂಪುಗೊಳ್ಳುತ್ತವೆ. ಅಲ್ಲಮಪ್ರಭುವಿನ ‘ನಾನು ನಾನಲ್ಲ, ದೇವರು-ಪ್ರಕೃತಿಯೇ ಎಲ್ಲ’ ಎಂಬ ಮಾತುಗಳು ಇಂದು ನಮ್ಮನ್ನು ಆಳುತ್ತಿರುವವರಿಗೆ ಸರಿಯಾಗಿ ಅರ್ಥವಾದರೆ ಸ್ವಾರ್ಥಪರತೆ, ಮೂಲಭೂತವಾದ, ಭ್ರಷ್ಟಾಚಾರ, ಬೆದರಿಕೆ ಮೊದಲಾದ ಅನಿಷ್ಟಗಳನ್ನು ಮೀರಿ ಮಾನವೀಯತೆಯೆಡೆಗೆ ಜಗತ್ತನ್ನು ಮುನ್ನಡೆಸಲು ಸಾಧ್ಯವಾಗುತ್ತದೆ.
ಭಾರತೀಯ ಸಂಸ್ಕøತಿ ಹಲವಾರು ಸಂಕೀರ್ಣತೆಗಳು ಮತ್ತು ಸವಾಲುಗಳ ನಡುವೆಯೂ ತನ್ನ ನೈಜತೆ ಮತ್ತು ಶ್ರೇಷ್ಠತೆಗಳನ್ನು ಉಳಿಸಿಕೊಂಡು ಹೋಗಲು ಬುದ್ಧ, ಮಹಾವೀರ, ಬಸವ, ಫುಲೆ, ರಾಮಾನುಜ, ಕಬೀರ, ದಯಾನಂದ ಸರಸ್ವತಿ, ರಾಜಾರಾಮ ಮೋಹನ್ ರಾಯ್, ಈಶ್ವರ ಚಂದ್ರ ವಿದ್ಯಾಸಾಗರ್, ಲಾಲಾ ಲಜಪತರಾಯ್, ಬಿಪಿನ್ ಚಂದ್ರಪಾಲ್, ಬಾಲಗಂಗಾಧರ ತಿಲಕ್, ಮೋತಿಲಾಲ್ ನೆಹರು, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ಪಂಡಿತ್ ನೆಹರು, ಅಂಬೇಡ್ಕರ್, ಪೆರಿಯಾರ್, ಲೋಹಿಯಾ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಶಿಕ್ಷಣ ಸಂತ ಕುವೆಂಪು ಮೊದಲಾದ ಮಹನೀಯರು ನಡೆಸಿದ ಸಾಮಾಜಿಕ ಸುಧಾರಣೆ ಕಾರ್ಯಗಳು ಪ್ರಮುಖ ಕಾರಣವಾಗಿವೆ. ಇಂತಹ ಮಹಾ ಸಂತರು ಮತ್ತು ಸಾಧಕರು ಕಟ್ಟಿ ಬೆಳೆಸಿರುವ ಭಾರತೀಯ ಸಂಸ್ಕøತಿಯನ್ನು ನಾಶಪಡಿಸಿ ಅರಾಜಕತೆ ಸೃಷ್ಟಿ ಮಾಡುವ ಕೆಲಸವನ್ನು ಜಾಗತಿಕವಾಗಿ ಮಾರುಕಟ್ಟೆ ಶಕ್ತಿಗಳು ಮತ್ತು ಸ್ಥಳೀಯವಾಗಿ ಹಿಂದುತ್ವವಾದಿಗಳು ನಡೆಸುತ್ತಿರುವುದನ್ನು ಪ್ರಜ್ಞಾವಂತರು ತಡೆಯಲೇ ಬೇಕಿದೆ. ಮೊನ್ನೆ ನಡೆದ ಭಾರತ್ ಬಂದ್ ಕೇವಲ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಲಷ್ಟೇ ಸೀಮಿತಗೊಂಡಿಲ್ಲ. ಇದು ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆಗೆ ಬದ್ಧವಾದ ವಿಶಾಲ ಕಾರ್ಯಸೂಚಿಯನ್ನು ಆಧರಿಸಿದೆ.
ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ-2 ಸರ್ಕಾರ ಕಾಂಗ್ರೆಸ್ ಪಕ್ಷದೊಳಗಿನ ಕುಟುಂಬ ರಾಜಕಾರಣ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಸ್ವಾರ್ಥಪರತೆಯಿಂದಾಗಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ನೀಡಲು ವಿಫಲವಾಯಿತು. ದೇಶದ ಜನರಿಗೆ ಬದಲಾವಣೆ ಅನಿವಾರ್ಯವಾಗಿತ್ತು. ಕುರುಡುಗಣ್ಣಿನವನಿಗಿಂತ ಮೆಳ್ಳಗಣ್ಣಿನವನು (ಸುಮಾರಾಗಿ ನೋಡುವವನು) ಎಷ್ಟೋ ವಾಸಿಯೆಂಬ ಅರಿವಿಗೆ ಜನರು ಶರಣಾಗಿದ್ದರು. ಇಂತಹ ಮೆಳ್ಳಗಣ್ಣಿನವರ ನಾಯಕನಾಗಿ ನರೇಂದ್ರ ಮೋದಿ 2014ರಲ್ಲಿ ಹಲವಾರು ಹುಸಿ ಭರವಸೆಗಳನ್ನು ಜನರಿಗೆ ನೀಡಿ ಅಧಿಕಾರ ಚುಕ್ಕಾಣಿಯನ್ನು ಹಿಡಿದರು.
ಅಂದು ಪಂಡಿತ್ ಜವಾಹರಲಾಲ್ ನೆಹರು ಸಾರ್ವಜನಿಕ ಸಂಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭೂಮಿ, ಬಂಡವಾಳ, ಉದ್ಯೋಗ, ಲಾಭ ಎಲ್ಲವೂ ದೇಶದ ಸ್ವತ್ತಾಗಿ ಉಳಿಯುವಂತೆ ನೋಡಿಕೊಂಡಿದ್ದರು. ಇಂದು ಮೋದಿಜಿ ಖಾಸಗೀಕರಣವನ್ನು ಉತ್ತೇಜಿಸಿ ಶ್ರೀಮಂತರು ಮಾತ್ರ ಪ್ರಕಾಶಿಸುವಂತೆ ನೋಡಿಕೊಂಡರು. ಕೋಟ್ಯಾಂತರ ವಿದ್ಯಾವಂತ ಯುವಜನರು ಆತ್ಮಹತ್ಯೆಯೆಡೆಗೆ ಮುಖ ಮಾಡುವಂತಹ ದುಸ್ಥಿತಿಯನ್ನು ಇವರು ಸೃಷ್ಟಿಸಿದರು. ನೆಹರೂರವರ ಮಗಳು ಇಂದಿರಾಜಿ ಬ್ಯಾಂಕುಗಳ ರಾಷ್ಟ್ರೀಕರಣ, ಭೂಸುಧಾರಣೆ, 20 ಅಂಶಗಳ ಕಾರ್ಯಕ್ರಮ, ಕನಿಷ್ಟ ಅಗತ್ಯಗಳ ಪೂರೈಕೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮೊದಲಾದವುಗಳ ಮೂಲಕ ದೇಶದ ಜನರಿಗೆ ಒಳ್ಳೆಯದನ್ನು ಮಾಡಿ ‘ಗರೀಬಿ ಹಟಾವೋ’ (ಬಡತನ ನಿರ್ಮೂಲನೆ) ದಿಕ್ಕಿನಲ್ಲಿ ದಿಟ್ಟತನದಿಂದ ಸಾಗಿದರೆ ಮೋದಿಜಿ ಖಾಸಗೀಕರಣದ ಮೂಲಕ ಮೀಸಲಾತಿ ಮತ್ತು ಉದ್ಯೋಗ ಸೌಲಭ್ಯಗಳನ್ನು ಕಿತ್ತುಕೊಂಡು ‘ಗರೀಭೋಂಕೊ ಹಟಾವೋ’ (ಬಡವರ ನಿರ್ಮೂಲನೆ) ಮಾಡುತ್ತಿರುವುದು ಸರಿಯಲ್ಲ.
ಹೆಸರಾಂತ ಇತಿಹಾಸಕಾರರಾದ ರೊಮಿಲಾ ಥಾಪರ್ ‘ಒಂದು ದೇಶದ ಅಭಿವೃದ್ಧಿ ಪ್ರಧಾನಿಯಾದವರ ವಿಶಾಲ ಎದೆ ಅಳತೆಯನ್ನು ಅವಲಂಬಿಸಿಲ್ಲ, ವಿಶಾಲ ಹೃದಯ ಮತ್ತು ಸಮಷ್ಟಿ ಪ್ರಜ್ಞೆಗಳನ್ನು ಆಧರಿಸಿದ ದೇಶ ಸೇವೆಯನ್ನು ಅವಲಂಬಿಸಿದೆ’ ಎಂದು ಹೇಳಿರುವ ಮಾತುಗಳು ಮೋದಿಯವರಿಗೆ ಆತ್ಮಾವಲೋಕನಕ್ಕೆ ಎಡೆಮಾಡಿಕೊಡಬೇಕು.
ದೇಶದ ಜನರನ್ನು ಅವನತಿಯೆಡೆಗೆ ಕೊಂಡೊಯ್ಯುತ್ತಿರುವ ‘ರಾಷ್ಟ್ರೀಯ ವಿದ್ವಂಸಕರ ಕೂಟ’ ಮೋದಿ ನೇತೃತ್ವದಲ್ಲಿ ಇಂದು ವಿಜೃಂಭಿಸುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಸಂವಿಧಾನದ ಹೆಸರಿನಲ್ಲಿ ಮಂತ್ರಿಯಾದ ಮತ್ತೊಬ್ಬ ಹುಂಬ ‘ಸಂವಿಧಾನವನ್ನು ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ’ ಎಂದು ಹೇಳಿ ಜನರಿಂದ ಉಗಿಸಿಕೊಂಡಿರುವ ಸಂಗತಿ ಇನ್ನೂ ನೆನಪಿನಲ್ಲಿದೆ. ಗೋಡ್ಸೆಗಿಂತ ಮೊದಲೇ ಹುಟ್ಟಿದ್ದರೆ ನಾನೇ ಗಾಂಧಿಯನ್ನು ಕೊಲ್ಲುತ್ತಿದ್ದೆ’ ಎಂದು ಇನ್ನೊಬ್ಬ ಹಿಂದುತ್ವವಾದಿ ಪುಂಡ ಹೆಂಗಸು ಹೇಳಿರುವುದನ್ನು ಖಂಡಿಸಿ ಜೈಲಿಗೆ ಹಾಕುವುದರ ಬದಲು ಮೋದಿ ಮತ್ತು ಬಳಗ ಮೌನವಾಗಿ ರಕ್ಷಿಸುತ್ತಿರುವುದು ದೇಶದ್ರೋಹಿಗಳ ಪಡೆ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಮ್ಮನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿರುವ ಸಂಕೇತವಾಗಿದೆ.
ಮೊನ್ನೆ ನಡೆದ ಭಾರತ್ ಬಂದ್ ‘ಸರ್ಕಾರಿ ಪ್ರಾಯೋಜಿತ ಬಂದ್’ ಎಂದು ಹೇಳಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿ ಕೊಡಗಿನ ನೊಂದವರಿಗೆ ಆರ್ಥಿಕ ನೆರವು ಕೇಳಲು ಹೋದಾಗ ಬೇಕಂತಲೇ ತಪ್ಪಿಸಿಕೊಂಡ ಈ ಭಾಗದ ಸಂಸದನಿಗೆ ಹೃದಯವಂತಿಕೆಯೂ ಇಲ್ಲ, ಎದೆಗಾರಿಕೆ ಇಲ್ಲವೇ ಇಲ್ಲ ಎಂಬ ಸತ್ಯ ನಮಗೆ ಮನವರಿಕೆಯಾಗಿದೆ. ಈತನಿಗೆ ಮುಂದಿನ ಮಹಾಚುನಾವಣೆಯಲ್ಲಿ ಮತದಾರ ಬಂಧುಗಳು ಗೇಟ್ ಪಾಸ್ ನೀಡುವುದು ಅನಿವಾರ್ಯವಾಗಿದೆ. ‘ಕೋಮುವಾದಿ ಬಿಜೆಪಿಯಿಂದ ದೇಶವನ್ನು ರಕ್ಷಿಸಬೇಕೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೇಳಿರುವ ಮಾತುಗಳು ಇಂದು ಪ್ರಗತಿಪರರು ಮತ್ತು ಜಾತ್ಯಾತೀತರಿಗೆ ಅರ್ಥವಾಗಬೇಕಿದೆ. ತುರ್ತು ಪರಿಸ್ಥಿತಿ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ರಾಜನೀತಿಯನ್ನು ಉಗ್ರವಾಗಿ ವಿರೋಧಿಸಿದ ಶೋಷಿತರ ಧ್ವನಿ ದೇವನೂರು ಮಹಾದೇವ ‘ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು, ಕಮ್ಯುನಿಷ್ಟ್‍ರು, ರೈತ ಸಂಘಟನೆಗಳು, ದಲಿತ ಸಂಘಟನೆಗಳು ಮೊದಲಾದ ಬಿಜೆಪಿಯೇತರ ಬಣಗಳನ್ನು ಬೆಂಬಲಿಸುವುದು ಬಹುಸಂಸ್ಕøತಿ ಮತ್ತು ಬಹುಜನರ ರಕ್ಷಣೆಗೆ ಅನಿವಾರ್ಯ’ ಎಂದು ಹೇಳಿರುವ ಮಾತುಗಳನ್ನು ನಾವು ಒಪ್ಪಲೇಬೇಕು.
ಇತ್ತೀಚೆಗೆ ಮೋದಿ ಬಳಗ ‘ನಯಿ ಭಾರತ್’ (ಹೊಸ ಭಾರತ) ನಿರ್ಮಿಸುವುದು ನಮ್ಮ ಗುರಿ ಎಂದು ಹೇಳುತ್ತಿದೆ. ಪ್ರಕೃತಿ ಮತ್ತು ಮಾನವೀಯತೆಗಳನ್ನು ನಿರ್ಲಕ್ಷಿಸಿದ ಫಲವಾಗಿ ಕೊಡಗು, ಕೇರಳ, ಉತ್ತರ ಭಾರತ, ಈಶಾನ್ಯ ಭಾರತ ಮೊದಲಾದೆಡೆ ಪ್ರವಾಹ ಉಂಟಾಗಿ ಭಾರತವೇ ಮುಳುಗುವ ಸ್ಥಿತಿ ನಿರ್ಮಾಣವಾಗಿದೆ. ಮೋದಿ ಬಳಗ ತನ್ನ ಸಂವಿಧಾನ ವಿರೋಧಿ, ಪ್ರಜಾಸತ್ತೆ ವಿರೋಧಿ, ಮಾನವ ವಿರೋಧಿ, ಪ್ರಕೃತಿ ವಿರೋಧಿ ಹಾಗೂ ಸಾಮಾಜಿಕ ನ್ಯಾಯ ವಿರೋಧಿ ಧೋರಣೆಗಳು ಮತ್ತು ನಡವಳಿಕೆಗಳಿಂದ ‘ನೋ ಭಾರತ್’ ದಿಕ್ಕಿನತ್ತ ದೇಶವನ್ನು ಕೊಂಡೊಯ್ಯುತ್ತಿದೆ. ಅಂದು ಗಾಂಧಿ ಬ್ರಿಟೀಷರನ್ನು ದೇಶದಿಂದ ತೊಲಗಿಸಲು ‘ಕ್ವಿಟ್ ಇಂಡಿಯಾ ಚಳುವಳಿ’ಯನ್ನು 1942ರಲ್ಲಿ ನಡೆಸಿದ ರೀತಿಯಲ್ಲೇ 2019ರಲ್ಲಿ ‘ಕ್ವಿಟ್ ಎನ್‍ಡಿಎ’ ಚಳುವಳಿಯನ್ನು ನಡೆಸಿ ಭಾರತ ಮುಳುಗುವುದನ್ನು ತಪ್ಪಿಸಬೇಕಾದ ಸಾಮಾಜಿಕ ಜವಾಬ್ದಾರಿಯನ್ನು ಪ್ರಗತಿಪರರು, ಜಾತ್ಯಾತೀತರು, ಮಾನವತಾವಾದಿಗಳು ಮತ್ತು ಪ್ರಜಾಪ್ರಭುತ್ವವಾದಿಗಳು ನಿರ್ವಹಿಸಲೇಬೇಕಿದೆ.

– ಡಾ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...