Homeಕರ್ನಾಟಕವಕೀಲರ ಸಂಘದ ‘ಜಾತ್ಯಾತೀತತೆ’ – ಅಂಬೇಡ್ಕರ್ ಜಯಂತಿಗೆ ನಿರಾಕರಣೆ

ವಕೀಲರ ಸಂಘದ ‘ಜಾತ್ಯಾತೀತತೆ’ – ಅಂಬೇಡ್ಕರ್ ಜಯಂತಿಗೆ ನಿರಾಕರಣೆ

- Advertisement -
- Advertisement -

ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‍ರವರು ಪ್ರತಿನಿಧಿಸುವ ರಾಮನಗರ ಜಿಲ್ಲಾ ವಕೀಲರ ಸಂಘದಲ್ಲಿ ‘ಅಂಬೇಡ್ಕರ್ ಜಯಂತಿ’ ಆಚರಿಸುವ ಹಾಗಿಲ್ಲ. ವಿಚಿತ್ರ ಎನಿಸಿದರೂ ಇದು ನಿಜ.

ರಾಮನಗರದ ಜಿಲ್ಲಾ ವಕೀಲರ ಸಂಘದ ಕೆಲ ಜನಪರ ವಕೀಲರು ಅಂಬೇಡ್ಕರ್ ಜಯಂತಿ ಹಾಗೂ ಪರಿನಿರ್ವಾಣ ದಿನವನ್ನು ಆಚರಣೆ ಮಾಡಲು ಕಳೆದ ಒಂದು ವರ್ಷದಿಂದ ಪ್ರಯತ್ನ ಪಡುತ್ತಿದ್ದರೂ ಸಂಘದ ಚುನಾಯಿತ ಪ್ರತಿನಿಧಿಗಳ ಕಾರ್ಯಕಾರಿ ಸಮಿತಿಯು ಅನುಮತಿ ನಿರಾಕರಿಸುತ್ತಿದ್ದರು. ಈ ವರ್ಷದ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ನಡೆಸಲು ಅನುಮತಿ ಕೋರಿ ಏಪ್ರಿಲ್ 11ರಂದು ಸಮಾನ ಮನಸ್ಕ ಸದಸ್ಯರು ಮನವಿ ಸಲ್ಲಿಸಿದ್ದು ಏಪ್ರಿಲ್ 12ರಂದು ಅನುಮತಿಯನ್ನು ಲಿಖಿತವಾಗಿ ನಿರಾಕರಿಸಲಾಗಿದೆ! ಅನುಮತಿಯನ್ನು ವಜಾಗೊಳಿಸಿರುವ ಪತ್ರದಲ್ಲಿ “ರಾಮನಗರ ವಕೀಲ ಸಂಘವು 1927ರಲ್ಲಿ ಸ್ಥಾಪನೆಗೊಂಡಿದ್ದು, ಅಂದಿನಿಂದ ಇಂದಿನವರೆಗು ಎಲ್ಲಾ ಜನಾಂಗದ ಸದಸ್ಯರು ಸೋದರ ಭಾವನೆಯಿಂದ ಯಾವುದೇ ಜಾತಿಬೇಧವಿಲ್ಲದೇ ವಕೀಲ ವೃತ್ತಿಯನ್ನು ನಡೆಸುತ್ತಾ ಬಂದಿರುತ್ತಾರೆ. ಸದರಿ ಸಂಘದಲ್ಲಿ ಹಿಂದಿನ ದಿನದಿಂದಲೂ ಈ ರೀತಿಯ ಯಾವ ಆಚರಣೆಯನ್ನು ನಮ್ಮ ಸಂಘದಲ್ಲಿ ಆಚರಿಸುತ್ತಾ ಬಂದಿರುವುದಿಲ್ಲ… ಸದರಿ ತಮ್ಮ ಮನವಿಯನ್ನು ವಜಾಗೊಳಿಸಿರುವುದಾಗಿ ತಿಳಿಯಪಡಿಸಲಾಗಿದೆ. ಸಂಘದ ಆವರಣದಲ್ಲಿ ಈ ರೀತಿ ಯಾವುದೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬಾರದಾಗಿ ಈ ಮೂಲಕ ತಿಳಿಯಪಡಿಸಲಾಗಿದೆ.” ಎಂದು ಬರೆಯಲಾಗಿದೆ.

ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸುವುದು ಎಂದರೆ ಜಾತಿಬೇಧ ಮಾಡಿದಂತಾಗುತ್ತದೆ ಎನ್ನುವುದು ಕಾರ್ಯಕಾರಿ ಸಮಿತಿಯ ಅಭಿಪ್ರಾಯವಾಗಿದೆ! ಅಂಬೇಡ್ಕರ್ ಜಯಂತಿ ಅಧಿಕೃತವಾಗಿ ದೇಶದಾದ್ಯಂತ ರಜೆಯನ್ನು ನೀಡಿ ಸರ್ಕಾರದ ಭಾಗವಾಗಿ ನಡೆಯುವ ಕಾರ್ಯಕ್ರಮವಾಗಿದೆ. ಹೀಗಿದ್ದು ರಾಮನಗರದ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಆಚರಣೆಯ ಅನುಮತಿಯನ್ನು ವಜಾ ಮಾಡಿದೆ.

ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಸದಸ್ಯರ ಪ್ರತಿನಿಧಿ ಚಾಂದ್‍ಪಾಷ ಅವರನ್ನು ಮಾತನಾಡಿಸಿದಾಗ “ನಾವು ಕಳೆದ ವರ್ಷದಿಂದ ನಿರಂತರ ಪ್ರಯತ್ನ ಮಾಡುತ್ತಿದ್ದೇವೆ, ಅಂಬೇಡ್ಕರ್ ಜಯಂತಿಯಾಗಲಿ ಪರಿನಿರ್ವಾಣ ದಿನಕ್ಕಾಗಲಿ ನಮಗೆ ಅನುಮತಿ ನೀಡುತ್ತಲೇ ಇಲ್ಲ. ಅಂಬೇಡ್ಕರ್ ಜಯಂತಿಯಿಂದ ಜಾತಿಭೇದ ಉಂಟಾಗುತ್ತದೆ ಹಾಗಾಗಿ ಮನವಿಯನ್ನು ವಜಾ ಮಾಡಲಾಗಿದೆ ಎಂದು ಲಿಖಿತ ಪತ್ರವನ್ನು ಉನ್ನತ ಸಮಿತಿ ನೀಡಿದೆ. ಇದನ್ನು ವಿರೋಧಿಸಿ ನಾವು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ದೂರನ್ನು ನೀಡಿದ್ದೇವೆ. ಅನುಮತಿ ನೀಡದೇ ಇದ್ದರೆ ಸಮಾನ ಮನಸ್ಕರ ಸಂಘಟನೆಗಳು ಎಲ್ಲರು ಒಂದಾಗಿ ಸೋಮವಾರದಂದು ಪ್ರತಿಭಟನೆ ನಡೆಸುತ್ತೇವೆ” ಎಂದರು.

ಕಾರ್ಯಕಾರಿ ಸಮಿತಿಯ ಅಧ್ಯಕ್ಷ ದೇವರಾಜ್ ಅವರನ್ನು ಮಾತನಾಡಿಸಿದಾಗ “ಇದೆಲ್ಲಾ ಏನು ಇಲ್ಲ, ಕೋಮುದ್ವೇಷ ಬಿತ್ತಲು ಸಂಚು ಹೂಡುತ್ತಿರುವವರು ಇದನ್ನು ದೊಡ್ಡದು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬಹಿಷ್ಕಾರ ಎಂಬ ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾರೆ. ನಾವು ಎಲ್ಲಿಯೂ ಬಹಿಷ್ಕಾರ ಎಂಬ ಪದವನ್ನು ಬಳಸಿಯೇ ಇಲ್ಲ. 1927ರಿಂದ ನಮ್ಮ ಸಂಘ ಅಸ್ತಿತ್ವದಲ್ಲಿದೆ. ಅಂದಿನಿಂದ ಇಂತಹ ಕಾರ್ಯಕ್ರಮಗಳು ನಡೆದುಕೊಂಡು ಬಂದಿಲ್ಲ. ಅಂಬೇಡ್ಕರ್ ಅವರ ಮೇಲೆ ನಮಗೆ ಗೌರವ ಇದೆ, ಭಾರತದಲ್ಲಿ ಯಾರೂ ಸಹ ಅಂಬೇಡ್ಕರ್ ಅವರನ್ನು ಕೀಳಾಗಿ ಕಾಣಲು ಸಾಧ್ಯವಿಲ್ಲ. ಜಯಂತಿ ಆಚರಣೆ ಮಾಡಬಾರದು ಎಂದು ನನ್ನ ಅಭಿಪ್ರಾಯವಲ್ಲ ಆದರೆ ನಾನೂ ಸಂಘದ ಇತರ ಸದಸ್ಯರ ಅಭಿಪ್ರಾಯಕ್ಕೆ ಬದ್ಧನಾಗಿರಬೇಕಾಗುತ್ತದೆ. ಆಚರಣೆಗೆ ಅನುಮತಿ ನೀಡಿದರೆ ನಾಳೆ ಟಿಪ್ಪು, ವಾಲ್ಮೀಕಿ, ಕನಕದಾಸ ಹೀಗೆ ಎಲ್ಲರೂ ಅನುಮತಿ ಕೇಳುತ್ತಾರೆ ಇದರಿಂದ ಕೋಮುದ್ವೇಷ ಹೆಚ್ಚಾಗಬಹುದು. ರಾಮನಗರ ಸೂಕ್ಷ್ಮ ಪ್ರದೇಶವಾಗಿದೆ. ಹಾಗಾಗಿ ಅಪಾಯ ತಪ್ಪಿಸಲು ನಮ್ಮ ಸಮಿತಿ ಈ ತೀರ್ಮಾನಕ್ಕೆ ಬರಬೇಕಾಯಿತು” ಎಂದರು.

ಆದರೆ ವಕೀಲರ ಪರಿಷತ್ತಿಗೆ ದೂರು ನೀಡಿರುವ ಪತ್ರದ ಪ್ರಕಾರ ಜಿಲ್ಲಾ ಸಂಘದ ಆವರಣದಲ್ಲಿ ಹಿಂದಿನಿಂದಲೂ ಶ್ರೀ ರಾಮನವಮಿ, ಹನುಮ ಜಯಂತಿ, ವಿವೇಕಾನಂದ ಜಯಂತಿ, ಅಂಬರೀಶ್ ಹಾಗೂ ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ, ವಕೀಲರು ಮೃತರಾದಾಗ ಶ್ರದ್ಧಾಂಜಲಿ ಕಾರ್ಯಕ್ರಮಗಳು, ವರ್ಷದಲ್ಲಿ 2 ಬಾರಿ ಪೌರಾಣಿಕ ನಾಟಕಗಳು, ಗಣೇಶ ಚತುರ್ಥಿ ಅಂತಹ ಧಾರ್ಮಿಕ ಆಚರಣೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಆದರೆ ಜಾತಿ ವಿನಾಶಕ್ಕೆ ತಮ್ಮಿಡೀ ಜೀವನವನ್ನು ಬೆಸೆದ ಇಡೀ ದೇಶಕ್ಕೆ ಸಲ್ಲಬೇಕಾದ ಮಾನವತಾವಾದಿ ಅಂಬೇಡ್ಕರ್ ಅವರನ್ನು ಒಂದು ಸಮುದಾಯಕ್ಕೆ ಸೀಮಿತವಾಗಿ ನೋಡುವುದು ಹೇಗೆ ಸಾಧ್ಯ ಎಂಬ ಪ್ರಶ್ನೆ ಉಳಿಯುತ್ತದೆ.

ಇದರ ಕುರಿತು ನಾವು ರಾಮನಗರದ ಸಾಮಾಜಿಕ ಕಾರ್ಯಕರ್ತೆ ರಾಣಿಯವರನ್ನು ವಕೀಲರನ್ನು ಮಾತಾಡಿಸಿದಾಗ, ‘ಸರ್, ಇದು ಮಿದುಳಿನಲ್ಲೇ ಅಸ್ಪೃಶ್ಯ ಆಚರಣೆಯ ಮನೋಭಾವ ಇಟ್ಟುಕೊಂಡಿರುವುದರ ಪರವಾಗಿದೆ. ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ ಅಷ್ಟೇ. ದೇಶದಲ್ಲಿ ಅದೇಷ್ಟೋ ಮೂಲೆಗಳಲ್ಲಿ ಈ ರೀತಿ ಅಂಬೇಡ್ಕರ್ ಜಯಂತಿ ಮಾಡಲಾಗದ ಸ್ಥಿತಿ ಇರಲು ಸಾಧ್ಯ. ಇನ್ನು ದಲಿತರ ಸ್ಥಿತಿ?! ಅಂಬೇಡ್ಕರ್ ಅವರ ಆಶಯವನ್ನು ಪಸರಿಸುವ ಜಯಂತಿಯನ್ನು ಮಾಡುತ್ತಾ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದ್ದ ವಕೀಲರೇ ಇಂದು ಜಾತಿಗೆ ಸೀಮಿತವಾಗಿ ನೋಡುವುದು ನಿಜಕ್ಕು ಮನುಷ್ಯತ್ವಕ್ಕೆ ಮಾಡಿದ ಅವಮಾನವಾಗಿದೆ. ಇಂತಹ ವೈರಸ್‍ಗಳು ಹರಡದಂತೆ ತಡೆಯಬೇಕಿದೆ. “ಮೊದಲನೆಯದಾಗಿ ಮತ್ತು ಕೊನೆಯದಾಗಿ, ನಾವು ಭಾರತೀಯರು” ಎನ್ನುವ ಅಂಬೇಡ್ಕರ್ ಅವರ ಮಾತುಗಳನ್ನು ವಕೀಲರಿಗೆ ಪಾಠ ಮಾಡುವ ಅವಶ್ಯಕತೆ ಬಂದಿರುವುದು ದುರಂತ’ ಎಂದರು.

ಇದರ ಬಗ್ಗೆ ಕಾನೂನು ವಿದ್ಯಾರ್ಥಿ ಪುಷ್ಟಾ ಅವರೊಡನೆ ನಾನುಗೌರಿ.ಕಾಂ ಮಾತಾಡಿದಾಗ ಅವರು ಸುದೀರ್ಘವಾಗಿ ತಮ್ಮ ಅನಿಸಿಕೆಗಳನ್ನು ಹೇಳಿದರು “ ‘ಪ್ರಗತಿಯ ಹಾದಿಯಲ್ಲಿ ಯಾವುದೇ ದಿಕ್ಕಿಗೆ ನೀವು ಸಾಗಿದರು ಜಾತಿ ಎಂಬ ಭೂತ ನಿಮ್ಮನ್ನು ಎದುರುಗೊಳ್ಳುತ್ತದೆ. ಈ ಭೂತವನ್ನು ನೀವು ನಾಶ ಮಾಡದೇ ಪ್ರಗತಿಯನ್ನು ಸಾಧಿಸಲು ಸಾಧ್ಯವಿಲ್ಲ. ನಾನು ಹೇಳುವ ಮಾರ್ಗದಲ್ಲಿ ಅಲ್ಲದಿದ್ದರೂ ಸರಿ ನಿಮ್ಮದೇ ಆದ ಯಾವುದಾದರೂ ಮಾರ್ಗದಲ್ಲಿ ಜಾತಿ ವಿನಾಶಕ್ಕೆ ಹೋರಾಡಿ’ ಹೀಗೆಂದು ಹೇಳಿದವರು ಮಹಾ ಮಾನವತಾವಾದಿ ಬಾಬಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು. ಭೂಮಿ ಮೇಲೆ ಎಲ್ಲೂ ಇಲ್ಲದ ಕ್ರೂರವಾದ ಭಾರತದಲ್ಲಿನ ಜಾತಿಪದ್ಧತಿಯ ವಿರುದ್ಧ ಆಳವಾದ ಅಧ್ಯಯನ ಮಾಡಿ ಜಾತಿ ವಿನಾಶಕ್ಕೆ ಹೋರಾಟಗಳನ್ನು ರೂಪಿಸಿದವರು ಅಂಬೇಡ್ಕರ್. ಶೋಷಣೆಯ ವಿರುದ್ಧದ ವಿಮೋಚನೆಯ ಹೋರಾಟಗಳಲ್ಲಿಯೂ ಸಹ ಅಂಬೇಡ್ಕರ್ ಅವರು ಕೆಲವೇ ಸಮುದಾಯಗಳಿಗೆ ಸೀಮಿತವಾಗಿರದೆ ಮೇಲ್ಜಾತಿ ಎಂದು ಕರೆಯಲ್ಪಡುವ ಬ್ರಾಹ್ಮಣ ಜಾತಿಯಲ್ಲಿನ ಮಹಿಳೆಯರ ಶಿಕ್ಷಣ, ಸ್ವಾತಂತ್ರದ ಬಗ್ಗೆ ದನಿ ಎತ್ತಿ ಹಿಂದೂ ಕೋಡ್ ಬಿಲ್ ನಂತಹ ನೀತಿಗಳನ್ನು ರೂಪಿಸಲು ಮುಂದಾಗಿದ್ದರು. ಗಣಿ ಕಾರ್ಮಿಕರ ಹಕ್ಕುಗಳು, ಭಾರತದ ರೂಪಾಯಿ ಸಮಸ್ಯೆ, ಶಿಕ್ಷಣ, ನೀರಾವರಿ ಅಣೆಕಟ್ಟು… ಹೀಗೆ ಪುಟಗಳನ್ನು ತುಂಬಿಸಬಹುದಾದಷ್ಟು ಜನಪರ ವಿಚಾರಗಳಲ್ಲಿ ಅಂಬೇಡ್ಕರ್ ಅವರು ಕೆಲಸಗಳನ್ನು ಮಾಡಿದ್ದಾರೆ.

1950ರ ದಶಕದಲ್ಲಿ ಎಲ್ಲಾ ಜಾತಿಯಲ್ಲಿನ ಶೋಷಿತ ಹೆಣ್ಣುಮಕ್ಕಳ ಹಕ್ಕಿಗಾಗಿ ಅಂಬೇಡ್ಕರ್ ಅವರು ರಚಿಸಿದ್ದ ಹಿಂದೂ ಕೋಡ್ ಬಿಲ್‍ನ ವಿರುದ್ಧ, ಅದರ ಫಲಾನುಭವಿಗಳಾಗಬೇಕಿದ್ದ ಮೇಲ್ಜಾತಿಯ ಹೆಣ್ಣು ಮಕ್ಕಳೇ ಪ್ರತಿಭಟನೆ ನಡೆಸಿದ್ದರು. ಅಂದಿನ ಮನಸ್ಥಿತಿಯ ಜನರು ಇಂದಿಗೂ ಜೀವಂತವಾಗಿರುವುದು ದುರಂತ’. ದೇಶದ ಸಮಸ್ತ ಜನರಿಗೂ ಸಿಗಬೇಕಾದ ಹಕ್ಕುಗಳಿಗಾಗಿ ಹೋರಾಡಿದವರು, ಶೋಷಿತ ಸಮುದಾಯಗಳ ವಿಮೋಚನೆಯ ಮೂಲಕ ಎಲ್ಲರ ಮನಸ್ಸಿನಲ್ಲಿರುವ ಕೊಳೆಯನ್ನೂ ಕಳೆಯಲು ಹೊರಟವರನ್ನು ಜಾತಿಗೆ ಸೀಮಿತಗೊಳಿಸುತ್ತಿರುವುದು ದುರಂತ’ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...