Homeಕರ್ನಾಟಕವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ಪಠ್ಯಪುಸ್ತಕ ಹಗರಣ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನಾ ಪಾದಯಾತ್ರೆ

- Advertisement -
- Advertisement -

ಬಿಜೆಪಿಯ ಪಠ್ಯ ಪುಸ್ತಕ ಹಗರಣ ವಿರೋಧಿಸಿ ಚಿಕ್ಕಮಗಳೂರಿನ ದೇವನೂರುನಿಂದ ಪ್ರಾರಂಭವಾದ ಜನ ಜಾಗೃತಿ ಪಾದಯಾತ್ರೆ ನಿಡಘಟ್ಟ ಗ್ರಾಮದ ಗಾಂಧಿ ಗುಡಿಯಲ್ಲಿ ಶುಕ್ರವಾರ ಸಮಾರೋಪಗೊಂಡಿತು. ವಿವಿಧ ಸಂಘಟನೆಗಳು ಆಯೋಜಿಸಿದ್ದ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ, “ಶಿಕ್ಷಣ ಜ್ಞಾನೆವೇ ಇಲ್ಲದವನಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಿರುವುದು ದೊಡ್ಡ ದುರಂತ. ವಕ್ರಬುದ್ಧಿಯ ರೋಹಿತ್ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಬೇಕು” ಎಂದು ಕರೆ ನೀಡಿದ್ದಾರೆ.

“ಬಡತನ, ಅಸೂಯೆ ನಿವಾರಣೆಗೆ ಹೋರಾಡಿದಂತಹ ಬಸವಣ್ಣ, ಬುದ್ಧ, ಅಂಬೇಡ್ಕರ್‌ ಅಂತಹ ಮಹನೀಯರ ಸಾಧನೆಯನ್ನು ಪಠ್ಯದಿಂದ ತೆಗೆದು ಅವರಿಗೆ ಅವಮಾನ ಮಾಡುವಂತಹ ಕೆಲಸ ಪ್ರಸ್ತುತ ನಡೆಯುತ್ತಿದೆ. ಇದರ ವಿರುದ್ಧ ಸಮಾಜದ ಎಲ್ಲಾ ನಾಗರೀಕರು ಒಗ್ಗಟ್ಟಾಗಿ ಹೋರಾಟ ನಡೆಬೇಕು. ಅಂಹತ ಮಹನೀಯರಿಂದಲೇ ಪ್ರಸ್ತುತ ಹಿಂದೂ ಧರ್ಮ ಉಳಿದಿರುವುದಕ್ಕೆ ಸಾಕ್ಷಿ. ಇಲ್ಲದಿದ್ದರೆ ನಮ್ಮನ್ನು ಗರ್‌ ವಾಪಸ್ಸಿ ಎಂದು ಕರೆದುಕೊಂಡು ಬರಬೇಕಿತ್ತು. ಇದನ್ನು ಅರಿಯದ ಸರ್ಕಾರ, ಶಿಕ್ಷಣ ಜ್ಞಾನೆವೇ ಇಲ್ಲದವನಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಿದರುವುದು ದೊಡ್ಡ ದುರಂತ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರ ಮಕ್ಕಳ ಪಠ್ಯದಲ್ಲಿ ಹಸಿ ಸಳ್ಳನ್ನು ಸೇರಿಸುವ ಕೆಲಸ ಮಾಡುತ್ತಿದೆ. ಇದರಿಂದ ನಾಡಿನ ಮಹಾನೀಯರ ಇತಿಹಾಸಗಳು ಕಣ್ಮರೆಯಾಗುವ ಸಂಭವವಿರುವುದರಿಂದ ಅದನ್ನು ಪ್ರತಿಯೊಬ್ಬರು ವಿರೋಧಿಸುವ ಮೂಲಕ ಹೋರಾಟಗಳಲ್ಲಿ ಭಾಗವಹಿಸಬೇಕು. ವಕ್ರಬುದ್ಧಿಯ ರೋಹಿತ್ ಚಕ್ರತೀರ್ಥ ಪರಿಷ್ಕರಿಸುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ – ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

ಹಿರಿಯ ಲೇಖಕ ಎಸ್‌.ಜಿ. ಸಿದ್ದರಾಮಯ್ಯ ಅವರು ಮಾತನಾಡಿ,“ಯಾವುದೇ ಶಿಕ್ಷಣ ಹಿನ್ನೆಲೆ ಹೊಂದಿರದೇ ಟ್ಯುಟೋರಿಯಲ್ ನಡೆಸಿಕೊಂಡು ಜೀವನ ಮಾಡುತ್ತಿದ್ದ ರೋಹಿತ್ ಚಕ್ರತೀರ್ಥನಿಗೆ ರಾಜ್ಯದ ಪಠ್ಯಪುಸ್ತಕ ಪರಿಷ್ಕರಣೆಯ ದೊಡ್ಡ ಜವಾಬ್ದಾರಿ ನೀಡಿರುವುದು ವಿಪರ್ಯಾಸ. ಮುಂದಿನ ಮಕ್ಕಳ ಭವಿಷ್ಯದ ದೃಷ್ಟಿಯಲ್ಲಿ ಅವರ ಕಲಿಕೆಯ ಜೀವನ ಎಂದಿಗೂ ವ್ಯರ್ಥವಾಗಬಾರದೆಂಬುದರಿಂದ ಈ ಪರಿಷ್ಕರಣೆ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ” ಎಂದು ಹೇಳಿದ್ದಾರೆ.

“ರಾಜ್ಯದ ಯಾವ ಪಕ್ಷವು ಮಕ್ಕಳ ಪಠ್ಯ ವಿಷಯದಲ್ಲಿ ಈ ರೀತಿಯ ದ್ವಂದ್ವ ನಿಲುವುಗಳನ್ನು ಮಾಡಿರಲಿಲ್ಲ. ಪ್ರಜಾಪ್ರಭುತ್ವವಾಗಿ ಪಠ್ಯ ರಚನೆ ಮಾಡಿದ್ದರು. ಅದರೆ ಇಂದಿನ ಸರ್ಕಾರ ಬಂದಾಗಿನಿಂದ ಹಿಂದುತ್ವದ ಹೆಸರನ್ನು ಹೇಳಿಕೊಂಡು ಮಕ್ಕಳ ಪಠ್ಯದಲ್ಲೂ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿರುವುದು ದುರ್ದೈವ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಡೂರು ತಾಲೂಕಿನ ಎಸ್. ಕೊಪ್ಪಲಿನಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಸ್ವಾಮೀಜಿ, “ಮನುಷ್ಯರ ನಡುವೆ ಬೇಲಿ ಕಟ್ಟಲಾಗುತ್ತಿದೆ. ಸಮಾಜದಲ್ಲಿ ವಿಷಬೀಜ ಬಿತ್ತುವವರ ಎದುರು ಜಾಗೃತಿ ಅವಶ್ಯಕವಾಗಿದೆ. ಪಠ್ಯ ಪುಸ್ತಕದಲ್ಲಿ ಸಾಕಷ್ಟು ಗೊಂದಲ ನಿರ್ಮಾಣವಾಗಿದೆ”

“ನಾಡಿನ ಅನೇಕ ಪ್ರಜ್ಞಾವಂತರು ಧ್ವನಿ ಎತ್ತಿದ ಬಳಿಕ ಮತ್ತೆ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದರೂ, ಇನ್ನೂ ಅನೇಕ ಅವಾಂತಾರಗಳಿವೆ. ಮಕ್ಕಳಿಗೆ ಸರಿಯಾದ ಇತಿಹಾಸ, ಚಾರಿತ್ಯ್ರ ಕೊಡದಿದ್ದರೆ ಅವರ ಭವಿಷ್ಯವೇನು ಎಂಬುವುದರ ಬಗ್ಗೆ ಶಿಕ್ಷಣ ತಜ್ಞರು, ರಾಜಕೀಯ ನೇತಾರರು ಗಂಭೀರವಾಗಿ ಯೋಚಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಬೆಂಗಳೂರಿನ ಶ್ರೀ ಬಸವಕುಮಾರ ಸ್ವಾಮೀಜಿ, ಕ್ಯಾತನಬೀಡು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ರವೀಶ್ ಕ್ಯಾತನಬೀಡು, ನಟರಾಜ್ ಎಸ್. ಕೊಪ್ಪಲು, ಸಾಹಿತಿ ಶ್ರೀಪಾದ ಭಟ್, ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ನಿವೃತ್ತ ಅಧಿಕಾರಿ ರುದ್ರಪ್ಪ, ಸಾಹಿತಿ ಬಿ. ಚಂದ್ರೇಗೌಡ, ರೇಣುಕಾ ಆರಾಧ್ಯ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...