Homeಸತ್ಯ ಮಿಥ್ಯವಾಯುಸೇನೆ ದಾಳಿಯ ವಿಡಿಯೋ ಅಲ್ಲ, ಅದು ವಿಡಿಯೋ ಗೇಮ್ ಕ್ಲಿಪ್!

ವಾಯುಸೇನೆ ದಾಳಿಯ ವಿಡಿಯೋ ಅಲ್ಲ, ಅದು ವಿಡಿಯೋ ಗೇಮ್ ಕ್ಲಿಪ್!

- Advertisement -
- Advertisement -

ಮಿಥ್ಯ: ಭಾರತೀಯ ವಾಯುಪಡೆ ಫೆಬ್ರವರಿ 26ರಂದು ಪಾಕಿಸ್ತಾನದ ಬಲಾಕೊಟ್ ಮೇಲೆ ನಡೆಸಿದ ದಾಳಿಯ ವಿಡಿಯೋ ಇದು ಎಂದು ಒಂದು ವಿಡಿಯೋವನ್ನು ಹರಿಬಿಡಲಾಗಿದೆ.

ಸತ್ಯ: ಈ ದಾಳಿ ಯಾವ ಬಲಾಕೋಟ್‌ನಲ್ಲಿ (ಈ ಹೆಸರಿನ ಎರಡು ಗ್ರಾಮಗಳಿವೆ. ಒಂದು ನಿಯಂತ್ರಣ ರೇಖೆಗೆ ಹೊಂದಿಕೊಂಡಿದ್ದರೆ, ಇನ್ನೊಂದು ಪಾಕಿಸ್ತಾನ ಪ್ರದೇಶದಲ್ಲಿದೆ) ಆಯಿತು? ನಿಜಕ್ಕೂ ಆ ವೇಳೆಯಲ್ಲಿ ಅಲ್ಲಿ ಭಯೋತ್ಪಾದಕರು ಇದ್ದರೆ? ಪಾಕ್ ಹೇಳಿದಂತೆ ಅವರ ವಾಯುಸೇನೆ ನಮ್ಮ ವಿಮಾನಗಳನ್ನು ಹಿಮ್ಮೆಟ್ಟಿಸಿತೇ? ನಮ್ಮ ಸೇನೆ ಬಾಂಬ್ ಎಸಿದಿದ್ದು ಭಯೋತ್ಪಾದಕರ ಕ್ಯಾಂಪ್ ಮೇಲೋ ಅಥವಾ ಖಾಲಿ ಜಾಗದಲ್ಲೋ?- ಈ ಎಲ್ಲ ಪ್ರಶ್ನೆಗಳಿಗೆ ಇನ್ನೂ ಸ್ಪಷ್ಟವಾದ, ಅಧಿಕೃತ ಉತ್ತರಗಳಿಲ್ಲ. ಎರಡೂ ದೇಶಗಳ ಅಧಿಕೃತ ಹೇಳಿಕೆಗಳು ಅಸ್ಪಷ್ಟತಿಯಿಂದ ಕೂಡಿದ್ದು, ಗೊದಲ ಹುಟ್ಟಿಸು ರೀತಿಯಲ್ಲಿವೆ, ಆದರೆ ಚಾನೆಲ್‌ಗಳು ಅಲ್ಲಿ 300-400 ಉಗ್ರರ ಹತ್ಯೆಯಾಗಿದೆ ಎನ್ನುತ್ತಿವೆ. ಯಾವುದಕ್ಕೂ ದಾಖಲೆಯಿಲ್ಲ.

ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಸೇನೆಯ ದಾಳಿ ಎಂದು ಸುಳ್ಳನ್ನು ಹರಡಲಾಗುತ್ತಿದೆ. ವಿಡಿಯೊ ವಿಳಾಸ:

https://www.facebook.com/NaMoFansKarunadu/videos/424845351597546/?t=4

‘ನಮೋ ಫ್ಯಾನ್ಸ್ ಕರುನಾಡು’ ಎಂಬ ’ಬಲಪಂಥಿಯ’ ಗುಂಪು ಕೂಡ ಈ ಫೇಕ್ ವಿಡಿಯೋವನ್ನು ಪ್ರಸಾರ ಮಾಡಿದೆ. ಆದರೆ, ಮೇಲುನೋಟಕ್ಕೇ ಈ ವಿಡಿಯೋ ಸಂಶಯಾತ್ಮಕವಾಗಿದೆ. ಇದರ ಜಾಡು ಹಿಡಿದು ಬೆನ್ನು ಹತ್ತಿದ ಅಲ್ಟ್‌ನ್ಯೂಸ್, ಇದೊಂದು ವಿಡಿಯೋ ಗೇಮ್‌ನ ಕ್ಲಿಪ್ಪಿಂಗ್ ಎಂಬುದನ್ನು ಸಾಬೀತು ಮಾಡಿದೆ. ಇದು 2015ರಲ್ಲಿ ಯುಟ್ಯೂಬ್‌ನಲ್ಲಿ ಅಪ್‌ಲೋಡ್ ಆದ ’ಅರ್ಮಾ 2’ ಎಂಬ ವಿಡಿಯೋ ಕ್ಲಿಪ್‌ನ ಒಂದು ತುಣುಕು ಅಷ್ಟೇ! ಮೂಲ ವಿಡಿಯೊದಲ್ಲಿ 20 ಸೆಕೆಂಡುಗಳ ನಂತರ ಬರುವ ದೃಶ್ಯಾವಳಿಯನ್ನು ಕಾಪಿ ಮಾಡಿ, ಸೇನಾ ದಾಳಿಯ ವಿಡಿಯೋ ಎಂದು ದಾರಿ ತಪ್ಪಿಸಲಾಗುತ್ತಿದೆ.

ಮೂಲ ವಿಡಿಯೋ ಗೇಮ್ ವಿಳಾಸ: https://youtu.be/E7CnMEhF54o

ನಮಮ ಸೇನೆ ನಿಜಕ್ಕೂ ಭಯೋತ್ಪಾದಕರನ್ನು ಹೊಡೆದು ಹಾಕಿದ್ದರೆ, ಅದಕ್ಕಿಂತ ಹೆಮ್ಮೆಯ ವಿಷಯ ಯಾವುದಿದೆ? ಆದರೆ ಇಡೀ ಘಟನೆಯ ಸುತ್ತದ ವಿವರಗಳೇ ಅಸ್ಪಷ್ಟವಾಗಿವೆ. ಅಂಥದ್ದರಲ್ಲಿ ’ಭಕ್ತರು’ ಫೇಕ್ ವಿಡಿಯೋ ಹಾಕುತ್ತ ಇನ್ನಷ್ಟು ಗೊಂದಲ ಮೂಡಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...