Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್: ಭಾರತ ನ್ಯೂಝಿಲೆಂಡ್ ಆಟಕ್ಕೆ ಮಳೆ ಅಡ್ಡಿ: ಮುಂದೇನಾಗುತ್ತೇ ಗೊತ್ತೆ?

ವಿಶ್ವಕಪ್ ಕ್ರಿಕೆಟ್: ಭಾರತ ನ್ಯೂಝಿಲೆಂಡ್ ಆಟಕ್ಕೆ ಮಳೆ ಅಡ್ಡಿ: ಮುಂದೇನಾಗುತ್ತೇ ಗೊತ್ತೆ?

- Advertisement -
- Advertisement -

ಬಹುನಿರೀಕ್ಷಿತ ಸೆಮಿಫೈನಲ್ ಪಂದ್ಯದಲ್ಲಿ ಮಳೆಯದ್ದೇ ಆಟ!

4 ವರ್ಷಕ್ಕೊಮ್ಮೆ ನಡೆಯುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಹುನಿರೀಕ್ಷಿತ ಘಟ್ಟವಾಗಿದ್ದ ಸೆಮಿಫೈನಲ್ ಪಂದ್ಯ ಇಂದು ಭಾರತ ಮತ್ತು ನ್ಯೂಝಿಲೆಂಡ್ ತಂಡದ ನಡುವೆ ನಡೆಯುತ್ತಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಝಿಲೆಂಡ್ ತಂಡದ ವಿರುದ್ಧ ಭಾರತದ ಬೌಲರ್ ಗಳು ಆರಂಭದಿಂದಲೂ ಕಟ್ಟುನಿಟ್ಟಾದ ಬೌಲಿಂಗ್ ದಾಳಿಯಿಂದಾಗಿ ಅಲ್ಪ ಮೊತ್ತೊಕ್ಕೆ ಕಟ್ಟಿಹಾಕಲು ಸಫಲವಾಗಿತ್ತು. ಆರಂಭದ ಎರಡೂ ಓವರ್ ಅನ್ನು ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಭುಮ್ರಾ ಮೇಡೆನ್ ಸಾಧನೆ ಮಾಡಿದ್ದರು. ನಾಲ್ಕನೇ ಓವರ್ ನ ಹೊತ್ತಿಗೆ 1 ರನ್ ಗೆ ಒಂದು ವಿಕೆಟ್ ಉರುಳಿಸಿ 46.1 ಓವರ್ ಗೆ 5 ವಿಕೆಟ್ ಫತನಕ್ಕೆ ಕೇವಲ 211 ರನ್ ಗೆ ನ್ಯೂಝಿಲೆಂಡ್ ಅನ್ನು ಕಟ್ಟಿಹಾಕಿತ್ತು.

ಈ ಮಧ್ಯೆ ಭಾರಿ ಮಳೆ ಶುರುವಾಗಿದ್ದು ಪಂದ್ಯವನ್ನು ಸ್ಥಗಿತ ಗೊಳಿಸಲಾಗಿದೆ. ಮುಂದಿನ ಎರಡು ಗಂಟೆಗಳ ಕಾಲ ಕಾದು ಹವಮಾನವನ್ನು ಮತ್ತೊಮ್ಮೆ ವೀಕ್ಷಣೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಪಂದ್ಯದ ಅಂಪೈರ್ ಗಳು ತಿಳಿಸಿದ್ದಾರೆ. ಒಂದು ವೇಳೆ ಮಳೆ ನಿಂತು ಆಟವನ್ನು ಡೆಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಆಟವನ್ನು 20 ಓವರ್ ಗೆ ಇಳಿಸಿ ಪಂದ್ಯವನ್ನು ಮುಂದುವರೆಸಿದರೆ ಸಧ್ಯ ಪಂದ್ಯವನ್ನು ಸಂಪೂರ್ಣ ಹಿಡಿತದಲ್ಲಿ ಇಟ್ಟುಕೊಂಡಿರುವ ಭಾರತಕ್ಕೆ ಕಷ್ಟದ ಗುರಿ ನೀಡಬಹುದೆಂಬ ಅಸಮಧಾನ ಭಾರತೀಯ ಅಭಿಮಾನಿಗಳಲ್ಲಿ ಮೂಡಿದೆ. ಅಥವಾ ಪಂದ್ಯವನ್ನು 46 ಓವರ್ ಗೆ ಇಳಿಸಿ, 237 ರನ್ ನ ಗುರಿಯನ್ನು ಭಾರತಕ್ಕೆ ನೀಡಬಹುದಾಗಿದೆ.

ಮಳೆ ಇನ್ನೂ ನಿಲ್ಲುವ ಸೂಚನೆ ನೀಡದೇ ಇದ್ದರೆ ಇದೇ ಪಂದ್ಯವನ್ನು (211/5, 46.1ಓವರ್) ನಾಳೆಗೆ ಮುಂದುವರೆಸುವ ನಿಯಮಗಳಿವೆ ಎಂಬ ಅಭಿಪ್ರಾಯವನ್ನು ವೀಕ್ಷಕ ವಿವವರಣೆಯವರು ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ 1999 ರ ಟೂರ್ನಿಯಲ್ಲಿ ಹಾಗೂ 2002 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿಯೂ ಹೀಗೆ ಮುಂದೂಡಲಾಗಿತ್ತು. ಒಟ್ಟಾರೆ ಇನ್ನೂ ಕಲವು ಹೊತ್ತು ಕಾದು ನೋಡಬೇಕಿದೆ. ಮುಂದಿನ ಮಾಹಿತಿಗಾಗಿ ನಮ್ಮ ವೆಬ್ ಹಾಗೂ Naanu Gauri ಫೇಸ್ಬುಕ್ ಪೇಜ್ ನಲ್ಲಿ ನಿರೀಕ್ಷಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...