Homeಕರ್ನಾಟಕವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ಅನರ್ಹರಾಗಲಿ, ಸರ್ಕಾರ ಉಳಿಯೋದು ಬೇಡ ಎಂಬುದು ಸ್ಪೀಕರ್ ಅಪೇಕ್ಷೆಯಾಗಿತ್ತು

- Advertisement -
- Advertisement -

ಶಾಸಕರ ಅನರ್ಹತೆ ಕುರಿತ ಅಂತಿಮ ತೀರ್ಮಾನ ತೆಗೆದುಕೊಂಡಿದ್ದ ಸ್ಪೀಕರ್ ಮೇಲೆ ಬಂದ ಒತ್ತಡವು ವಿಶ್ವಾಸಮತ ಯಾಚನೆಯನ್ನು ಮಂಗಳವಾರಕ್ಕೆ ಮುಂದೂಡುವಂತೆ ಮಾಡುವ ಸಾಧ್ಯತೆ ಇದೆ. ಸೋಮವಾರ ಬೆಳಿಗ್ಗೆಯವರೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರ ಒತ್ತಡಕ್ಕೆ ಸ್ಪೀಕರ್ ಒಂದಿಂಚೂ ಬಗ್ಗಿರಲಿಲ್ಲ. ‘ನಿಮಗೆ ಇಷ್ಟು ಸಮಯ ಸಿಕ್ಕಿದ್ದರೂ ಒಬ್ಬರೂ ಬಂದಿಲ್ಲ. ಸದನದಲ್ಲಿ ನಡೆದ ಚರ್ಚೆಯು ಈಗಾಗಲೇ ಬಿಜೆಪಿಯವರು ಮಾಡಿದ್ದು ತಪ್ಪು ಎಂಬ ಭಾವನೆಯು ಬರುವಂತೆ ಆಗಿದೆ. ಆದರೆ, ಇದನ್ನು ಮತ್ತಷ್ಟು ಎಳೆಯುವುದು ಒಳ್ಳೆಯದಲ್ಲ. ನಾನೂ ಸಹಾ ಶುಕ್ರವಾರ ಸದನದಲ್ಲಿ ಸೋಮವಾರ ಮುಗಿಸುವ ವಿಚಾರ ಹೇಳಿದ್ದೇನೆ. ಒಂದು ವೇಳೆ ನೀವು ನನ್ನ ಮೇಲೆ ಒತ್ತಡ ತರುವುದಾದಲ್ಲಿ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಸ್ಪೀಕರ್ ಹೇಳಿದರೆಂದು ಅವರ ಸಮೀಪವರ್ತಿಗಳು ಹೇಳುತ್ತಾರೆ.

ಇಡೀ ಪ್ರಕರಣದ ಕೇಂದ್ರಬಿಂದುವಾಗಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರದ ಮೇಲೆ ವಿಶ್ವಾಸಮತ ಯಾಚನೆ ಯಾವಾಗ ಆಗುತ್ತದೆಂಬುದು ತೀರ್ಮಾನವಾಗಲಿದೆ. ಇಂದು ಸಂಜೆಯವರೆಗೂ ಅವರ ಕಟು ನಿರ್ಧಾರ ‘ಆಪರೇಷನ್ ಕಮಲದ ಆಮಿಷಕ್ಕೆ ಪಕ್ಷಾಂತರ ಮಾಡಿರುವ ಶಾಸಕರನ್ನು ಅನರ್ಹಗೊಳಿಸಲೇಬೇಕು. ಅವರಿಗಾಗಿ ಕಾಯುತ್ತಾ ವಿಶ್ವಾಸಮತವನ್ನು ಎಳೆಯುವ ಸಮ್ಮಿಶ್ರ ಪಕ್ಷಗಳ ಉದ್ದೇಶವನ್ನು ತಾನು ಒಪ್ಪುವುದಿಲ್ಲ’ ಎಂದೇ ಆಗಿತ್ತು. ಆದರೆ, ‘ಗುರುವಾರದವರೆಗೆ ಕಾದರೆ ಗ್ರಹಗತಿಗಳು ಸರಿ ಹೋಗುತ್ತವೆ, ಸರ್ಕಾರ ಉಳಿಯುತ್ತದೆ’ ಎಂಬ ಮೌಢ್ಯಕ್ಕೆ ಬಲಿ ಬಿದ್ದಿರುವ ಗೌಡರ ಕುಟುಂಬವು ಅವರನ್ನು ಒಲಿಸುವ ಪ್ರಯತ್ನಕ್ಕೆ ಕೈ ಹಾಕಿ ಸಫಲವಾಗಿರಲಿಲ್ಲ. ಕನಿಷ್ಠ ಪಕ್ಷ ನಾಳೆ ಒಂದು ದಿನದ ಮಟ್ಟಿಗಾದರೂ ಮುಂದೂಡಿ ಎಂಬುದು ಅವರ ಆಗ್ರಹವಾಗಿತ್ತು. ಮೊದಮೊದಲು ಅವರ ದನಿಗೆ ಹ್ಞೂಂಗುಡದಿದ್ದ ಸಿದ್ದರಾಮಯ್ಯನವರೂ ನಂತರ ಸ್ಪೀಕರ್ ಅವರಿಗೆ ‘ಒಂದು ದಿನ ನೋಡೋಣ’ ಎಂಬ ಸಂದೇಶ ಕಳಿಸಿದ್ದಾರೆ.

ಅಂತಿಮವಾಗಿ ಕೆ.ಸಿ.ವೇಣುಗೋಪಾಲ್ ಅವರ ಮೂಲಕ ಫೋನ್ ಮಾಡಿಸಿ, ಸ್ಪೀಕರ್ ಮೇಲೆ ಇನ್ನಿಲ್ಲದ ಒತ್ತಡ ತಂದರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ‘ರೆಬೆಲ್ ಶಾಸಕರು ಬೇಗ ತೀರ್ಮಾನ ತೆಗೆದುಕೊಂಡು ಬೆಳಿಗ್ಗೆ 11 ಗಂಟೆ ಒಳಗೆ ವಾಪಸ್ ಬರಲಿ. ಇಲ್ಲವಾದರೆ ಅನರ್ಹತೆ ಖಚಿತ. ಬಿಜೆಪಿಯವರು ನಿಮ್ಮ ತಲೆಗೆ ಮಂಗನ ಟೋಪಿ ತೊಡಿಸುತ್ತಾರೆ ಅಷ್ಟೇ’ ಎಂದು ಹೇಳಿದರು.

ಇವೆಲ್ಲದರ ಕಾರಣದಿಂದ ಒತ್ತಡಕ್ಕೆ ಒಳಗಾದ ಸ್ಪೀಕರ್ ಯಾವ ತೀರ್ಮಾನ ತೆಗೆದುಕೊಳ್ಳುವುದು ಎಂಬ ತೂಗುಯ್ಯಾಲೆಯಲ್ಲಿ ಬಿದ್ದಿರುವುದರಿಂದಲೇ ಯಾವ ನಿರ್ಧಾರವನ್ನೂ ಘೋಷಿಸದೇ ಮ್ಲಾನವದನರಾಗಿ ಕುಳಿತಿದ್ದಾರೆ. ಯಾರಿಗೂ ಚೈತನ್ಯದಿಂದ ಮಾತನಾಡುವ ಉಮೇದೂ ಇಲ್ಲದೇ, ಎಳೆಯುವ ಉದ್ದೇಶದಿಂದ ಮಾತ್ರ ಮಾತನಾಡುತ್ತಿರುವಾಗ ಅನಗತ್ಯವಾಗಿ ಮುಂದೂಡುವ ಮೂಲಕ ಮೈತ್ರಿ ಪಕ್ಷಗಳ ಒತ್ತಡಕ್ಕೆ ಗುರಿಯಾಗುತ್ತಾರಾ, ಇಲ್ಲವೇ ಅವರ ಮೂಲ ನಿಲುವಿಗೆ ಬದ್ಧರಾಗಿ ವಿಶ್ವಾಸಮತಯಾಚನೆಗೆ ಹಾಕುತ್ತಾರಾ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...