Homeಕರ್ನಾಟಕವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ಅನರ್ಹರಾಗಲಿ, ಸರ್ಕಾರ ಉಳಿಯೋದು ಬೇಡ ಎಂಬುದು ಸ್ಪೀಕರ್ ಅಪೇಕ್ಷೆಯಾಗಿತ್ತು

- Advertisement -
- Advertisement -

ಶಾಸಕರ ಅನರ್ಹತೆ ಕುರಿತ ಅಂತಿಮ ತೀರ್ಮಾನ ತೆಗೆದುಕೊಂಡಿದ್ದ ಸ್ಪೀಕರ್ ಮೇಲೆ ಬಂದ ಒತ್ತಡವು ವಿಶ್ವಾಸಮತ ಯಾಚನೆಯನ್ನು ಮಂಗಳವಾರಕ್ಕೆ ಮುಂದೂಡುವಂತೆ ಮಾಡುವ ಸಾಧ್ಯತೆ ಇದೆ. ಸೋಮವಾರ ಬೆಳಿಗ್ಗೆಯವರೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರ ಒತ್ತಡಕ್ಕೆ ಸ್ಪೀಕರ್ ಒಂದಿಂಚೂ ಬಗ್ಗಿರಲಿಲ್ಲ. ‘ನಿಮಗೆ ಇಷ್ಟು ಸಮಯ ಸಿಕ್ಕಿದ್ದರೂ ಒಬ್ಬರೂ ಬಂದಿಲ್ಲ. ಸದನದಲ್ಲಿ ನಡೆದ ಚರ್ಚೆಯು ಈಗಾಗಲೇ ಬಿಜೆಪಿಯವರು ಮಾಡಿದ್ದು ತಪ್ಪು ಎಂಬ ಭಾವನೆಯು ಬರುವಂತೆ ಆಗಿದೆ. ಆದರೆ, ಇದನ್ನು ಮತ್ತಷ್ಟು ಎಳೆಯುವುದು ಒಳ್ಳೆಯದಲ್ಲ. ನಾನೂ ಸಹಾ ಶುಕ್ರವಾರ ಸದನದಲ್ಲಿ ಸೋಮವಾರ ಮುಗಿಸುವ ವಿಚಾರ ಹೇಳಿದ್ದೇನೆ. ಒಂದು ವೇಳೆ ನೀವು ನನ್ನ ಮೇಲೆ ಒತ್ತಡ ತರುವುದಾದಲ್ಲಿ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಸ್ಪೀಕರ್ ಹೇಳಿದರೆಂದು ಅವರ ಸಮೀಪವರ್ತಿಗಳು ಹೇಳುತ್ತಾರೆ.

ಇಡೀ ಪ್ರಕರಣದ ಕೇಂದ್ರಬಿಂದುವಾಗಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರದ ಮೇಲೆ ವಿಶ್ವಾಸಮತ ಯಾಚನೆ ಯಾವಾಗ ಆಗುತ್ತದೆಂಬುದು ತೀರ್ಮಾನವಾಗಲಿದೆ. ಇಂದು ಸಂಜೆಯವರೆಗೂ ಅವರ ಕಟು ನಿರ್ಧಾರ ‘ಆಪರೇಷನ್ ಕಮಲದ ಆಮಿಷಕ್ಕೆ ಪಕ್ಷಾಂತರ ಮಾಡಿರುವ ಶಾಸಕರನ್ನು ಅನರ್ಹಗೊಳಿಸಲೇಬೇಕು. ಅವರಿಗಾಗಿ ಕಾಯುತ್ತಾ ವಿಶ್ವಾಸಮತವನ್ನು ಎಳೆಯುವ ಸಮ್ಮಿಶ್ರ ಪಕ್ಷಗಳ ಉದ್ದೇಶವನ್ನು ತಾನು ಒಪ್ಪುವುದಿಲ್ಲ’ ಎಂದೇ ಆಗಿತ್ತು. ಆದರೆ, ‘ಗುರುವಾರದವರೆಗೆ ಕಾದರೆ ಗ್ರಹಗತಿಗಳು ಸರಿ ಹೋಗುತ್ತವೆ, ಸರ್ಕಾರ ಉಳಿಯುತ್ತದೆ’ ಎಂಬ ಮೌಢ್ಯಕ್ಕೆ ಬಲಿ ಬಿದ್ದಿರುವ ಗೌಡರ ಕುಟುಂಬವು ಅವರನ್ನು ಒಲಿಸುವ ಪ್ರಯತ್ನಕ್ಕೆ ಕೈ ಹಾಕಿ ಸಫಲವಾಗಿರಲಿಲ್ಲ. ಕನಿಷ್ಠ ಪಕ್ಷ ನಾಳೆ ಒಂದು ದಿನದ ಮಟ್ಟಿಗಾದರೂ ಮುಂದೂಡಿ ಎಂಬುದು ಅವರ ಆಗ್ರಹವಾಗಿತ್ತು. ಮೊದಮೊದಲು ಅವರ ದನಿಗೆ ಹ್ಞೂಂಗುಡದಿದ್ದ ಸಿದ್ದರಾಮಯ್ಯನವರೂ ನಂತರ ಸ್ಪೀಕರ್ ಅವರಿಗೆ ‘ಒಂದು ದಿನ ನೋಡೋಣ’ ಎಂಬ ಸಂದೇಶ ಕಳಿಸಿದ್ದಾರೆ.

ಅಂತಿಮವಾಗಿ ಕೆ.ಸಿ.ವೇಣುಗೋಪಾಲ್ ಅವರ ಮೂಲಕ ಫೋನ್ ಮಾಡಿಸಿ, ಸ್ಪೀಕರ್ ಮೇಲೆ ಇನ್ನಿಲ್ಲದ ಒತ್ತಡ ತಂದರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ‘ರೆಬೆಲ್ ಶಾಸಕರು ಬೇಗ ತೀರ್ಮಾನ ತೆಗೆದುಕೊಂಡು ಬೆಳಿಗ್ಗೆ 11 ಗಂಟೆ ಒಳಗೆ ವಾಪಸ್ ಬರಲಿ. ಇಲ್ಲವಾದರೆ ಅನರ್ಹತೆ ಖಚಿತ. ಬಿಜೆಪಿಯವರು ನಿಮ್ಮ ತಲೆಗೆ ಮಂಗನ ಟೋಪಿ ತೊಡಿಸುತ್ತಾರೆ ಅಷ್ಟೇ’ ಎಂದು ಹೇಳಿದರು.

ಇವೆಲ್ಲದರ ಕಾರಣದಿಂದ ಒತ್ತಡಕ್ಕೆ ಒಳಗಾದ ಸ್ಪೀಕರ್ ಯಾವ ತೀರ್ಮಾನ ತೆಗೆದುಕೊಳ್ಳುವುದು ಎಂಬ ತೂಗುಯ್ಯಾಲೆಯಲ್ಲಿ ಬಿದ್ದಿರುವುದರಿಂದಲೇ ಯಾವ ನಿರ್ಧಾರವನ್ನೂ ಘೋಷಿಸದೇ ಮ್ಲಾನವದನರಾಗಿ ಕುಳಿತಿದ್ದಾರೆ. ಯಾರಿಗೂ ಚೈತನ್ಯದಿಂದ ಮಾತನಾಡುವ ಉಮೇದೂ ಇಲ್ಲದೇ, ಎಳೆಯುವ ಉದ್ದೇಶದಿಂದ ಮಾತ್ರ ಮಾತನಾಡುತ್ತಿರುವಾಗ ಅನಗತ್ಯವಾಗಿ ಮುಂದೂಡುವ ಮೂಲಕ ಮೈತ್ರಿ ಪಕ್ಷಗಳ ಒತ್ತಡಕ್ಕೆ ಗುರಿಯಾಗುತ್ತಾರಾ, ಇಲ್ಲವೇ ಅವರ ಮೂಲ ನಿಲುವಿಗೆ ಬದ್ಧರಾಗಿ ವಿಶ್ವಾಸಮತಯಾಚನೆಗೆ ಹಾಕುತ್ತಾರಾ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...